AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮತ್ತೆ ಬೆನ್ನುನೋವು ಶುರು ಆಗಿದೆ: ಜಡ್ಜ್ ಎದುರು ಸಮಸ್ಯೆ ಹೇಳಿಕೊಂಡ ದರ್ಶನ್

ಕೋರ್ಟ್ ಸೂಚನೆ ಇದ್ದರೂ ಕೂಡ ತಮಗೆ ಕಂಬಳಿ ನೀಡಿಲ್ಲ ಎಂದು ದರ್ಶನ್ ಅವರು ಹೇಳಿದ್ದಾರೆ. ಯಾಕೆ ಕಂಬಳಿ ನೀಡಿಲ್ಲ ಎಂದು ಜೈಲಾಧಿಕಾರಿಗಳನ್ನು ಪ್ರಶ್ನಿಸಿ ನ್ಯಾಯಾಲಯ ಗರಂ ಆಗಿದೆ. ಈ ವಿಚಾರಣೆ ವೇಳೆ ದರ್ಶನ್ ಅವರು ತಮ್ಮ ಬೆನ್ನು ನೋವಿನ ಸಮಸ್ಯೆಯನ್ನೂ ಹೇಳಿಕೊಂಡಿದ್ದಾರೆ.

ಮತ್ತೆ ಬೆನ್ನುನೋವು ಶುರು ಆಗಿದೆ: ಜಡ್ಜ್ ಎದುರು ಸಮಸ್ಯೆ ಹೇಳಿಕೊಂಡ ದರ್ಶನ್
Darshan Thoogudeepa
Ramesha M
| Edited By: |

Updated on: Nov 20, 2025 | 6:28 PM

Share

ರೇಣುಕಾಸ್ವಾಮಿ ಕೊಲೆ ಪ್ರಕರಣದ ಪ್ರಮುಖ ಆರೋಪಿ ಆಗಿರುವ ನಟ ದರ್ಶನ್ ಅವರು ಈಗ ಪರಪ್ಪನ ಅಗ್ರಹಾರ (Parappana Agrahara) ಜೈಲಿನಲ್ಲಿ ಇದ್ದಾರೆ. ಈ ಮೊದಲು ಬಳ್ಳಾರಿ ಜೈಲಿನಲ್ಲಿ ಇದ್ದಾಗ ಅವರಿಗೆ ತೀವ್ರ ಬೆನ್ನು ನೋವು (Backpain) ಕಾಣಿಸಿಕೊಂಡಿತ್ತು. ಹಾಗಾಗಿ ಅವರಿಗೆ ಮಧ್ಯಂತರ ಜಾಮೀನು ನೀಡಲಾಯಿತ್ತು. ಬಳಿಕ ಅವರು ಶಸ್ತ್ರ ಚಿಕಿತ್ಸೆ ಮಾಡಿಸಿಕೊಂಡಿರಲಿಲ್ಲ. ಈಗ ಪರಪ್ಪನ ಅಗ್ರಹಾರ ಜೈಲಿನಲ್ಲಿ ಇರುವ ದರ್ಶನ್ ಅವರಿಗೆ ಮತ್ತೆ ಬೆನ್ನು ನೋವು ಕಾಣಿಸಿಕೊಂಡಿದೆ. ವಿಡಿಯೋ ಕಾನ್ಫರೆನ್ಸ್ ವಿಚಾರಣೆ ವೇಳೆ ಜಡ್ಜ್ ಎದುರು ದರ್ಶನ್ (Darshan) ಅವರು ತಮ್ಮ ಸಮಸ್ಯೆ ಹೇಳಿಕೊಂಡಿದ್ದಾರೆ.

ಚಳಿಗಾಲ ಆರಂಭ ಆಗಿದ್ದು, ರಾತ್ರಿ ವೇಳೆ ವಿಪರೀತಿ ಶೀತದ ವಾತಾವರಣ ಇದೆ. ಆದರೆ ದರ್ಶನ್ ಅವರಿಗೆ ಜೈಲಿನಲ್ಲಿ ಕಂಬಳಿ ನೀಡಿಲ್ಲ. ಕಂಬಳಿ ಕೊಟ್ಟಿಲ್ಲವೆಂದು ಆರೋಪಿಗಳಾದ ದರ್ಶನ್, ನಾಗರಾಜ್ ದೂರು ಸಲ್ಲಿಸಿರುವ ಹಿನ್ನೆಲೆಯಲ್ಲಿ ಇಂದು (ನವೆಂಬರ್ 20) ವಿಡಿಯೋ ಕಾನ್ಫರೆನ್ಸ್ ಮೂಲಕ ಕೋರ್ಟ್ ವಿಚಾರಣೆ ನಡೆಸಿದೆ. ಈ ವೇಳೆ ದರ್ಶನ್ ಅವರು ಆರೋಗ್ಯ ಸಮಸ್ಯೆ ಬಗ್ಗೆ ತಿಳಿಸಿದರು.

‘ನಿನ್ನೆಯೇ ಕೋರ್ಟ್ ಸೂಚಿಸಿದ್ದರೂ ಇಂದು ಬೆಳಗ್ಗೆ ಕಂಬಳಿ ನೀಡಿದ್ದಾರೆ’ ಎಂದು ಕೋರ್ಟ್​ಗೆ ವಿಡಿಯೋ ಕಾನ್ಫರೆನ್ಸ್ ಮೂಲಕ ದರ್ಶನ್ ಮಾಹಿತಿ ನೀಡಿದರು. ‘ಈ ಹಿಂದೆ ಕೋರ್ಟ್ ಸೂಚನೆ ಬಳಿಕ 2 ಬಾರಿ ಫಿಸಿಯೋಥೆರಪಿ ಮಾಡಿದ್ದರು. ಎಲ್ 5 ಸಮಸ್ಯೆ ಇದ್ದರೂ ಈಗ ಫಿಸಿಯೋಥೆರಪಿ ನಿಲ್ಲಿಸಿದ್ದಾರೆ. ಹೀಗಾಗಿ ಮತ್ತೆ ಬೆನ್ನುನೋವಿನ ಸಮಸ್ಯೆ ಕಾಣಿಸಿಕೊಂಡಿದೆ’ ಎಂದು ದರ್ಶನ್ ಹೇಳಿದರು.

ದರ್ಶನ್ ಹೇಳಿದ್ದನ್ನು ಆಲಿಸಿದ ಬಳಿಕ ಕೋರ್ಟ್ ಗರಂ ಆಗಿದೆ. ನಿನ್ನೆಯೇ ಹೇಳಿದ್ದರೂ ಕಂಬಳಿ ಏಕೆ ನೀಡಲಿಲ್ಲವೆಂದು ಕೋರ್ಟ್ ಗರಂ ಆಗಿ ಪ್ರಶ್ನಿಸಿದೆ. ಅಲ್ಲದೇ ದರ್ಶನ್ ಅವರಿಗೆ ಫಿಸಿಯೋಥೆರಪಿ ಮುಂದುವರಿಸುವಂತೆ ಜೈಲು ಅಧಿಕಾರಿಗಳಿಗೆ ಕೋರ್ಟ್ ಸೂಚನೆ ನೀಡಿದೆ.

ಇದನ್ನೂ ಓದಿ: ದರ್ಶನ್ ರಾಜಾತಿಥ್ಯ ಕೇಸ್: ವರ್ಷ ಕಳೆದರೂ ಸಲ್ಲಿಕೆ ಆಗಿಲ್ಲ ಅಂತಿಮ ವರದಿ

ಚಿತ್ರದುರ್ಗದ ರೇಣುಕಾಸ್ವಾಮಿಯನ್ನು ಬೆಂಗಳೂರಿಗೆ ಕರೆದುಕೊಂಡು ಬಂದು ಚಿತ್ರಹಿಂಸೆ ನೀಡಿ ಹತ್ಯೆ ಮಾಡಿದ ಆರೋಪ ದರ್ಶನ್ ಮತ್ತು ಅವರ ಗ್ಯಾಂಗ್ ಮೇಲೆ ಇದೆ. ಈಗಾಗಲೇ ದೋಷಾರೋಪಣೆ ನಿಗದಿ ಆಗಿದೆ. ಪ್ರಕರಣದಲ್ಲಿನ ಯಾವ ಆರೋಪಿ ಕೂಡ ತಮ್ಮ ಮೇಲಿನ ಆರೋಪಗಳನ್ನು ಒಪ್ಪಿಕೊಂಡಿಲ್ಲ. ಹಾಗಾಗಿ ಸಾಕ್ಷಿಗಳ ವಿಚಾರಣೆ ಆರಂಭ ಆಗಬೇಕಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಹೊಸ ವರ್ಷದ ಸಂಭ್ರಮದಲ್ಲೇ ಕರಾವಳಿ ಜಿಲ್ಲೆಗಳಿಗೆ ಸಿಹಿ ಸುದ್ದಿ ನೀಡಿದ ಡಿಕೆಶಿ
ಹೊಸ ವರ್ಷದ ಸಂಭ್ರಮದಲ್ಲೇ ಕರಾವಳಿ ಜಿಲ್ಲೆಗಳಿಗೆ ಸಿಹಿ ಸುದ್ದಿ ನೀಡಿದ ಡಿಕೆಶಿ
RSS ಅನ್ನು ಅಲ್ ಖೈದಾಗೆ ಹೋಲಿಸಿ ವಿವಾದ ಸೃಷ್ಟಿಸಿದ ಕಾಂಗ್ರೆಸ್ ನಾಯಕ
RSS ಅನ್ನು ಅಲ್ ಖೈದಾಗೆ ಹೋಲಿಸಿ ವಿವಾದ ಸೃಷ್ಟಿಸಿದ ಕಾಂಗ್ರೆಸ್ ನಾಯಕ
ಒಂದೇ ಓವರ್​ನಲ್ಲಿ 22 ರನ್ ಚಚ್ಚಿದ ರಿಚಾ ಘೋಷ್
ಒಂದೇ ಓವರ್​ನಲ್ಲಿ 22 ರನ್ ಚಚ್ಚಿದ ರಿಚಾ ಘೋಷ್
ಡ್ರಗ್ಸ್ ಫ್ಯಾಕ್ಟರಿ ಪತ್ತೆ: ನಮ್ಮ ಪೊಲೀಸರ ಬಗ್ಗೆ ಗೃಹ ಸಚಿವರು ಏನಂದ್ರು?
ಡ್ರಗ್ಸ್ ಫ್ಯಾಕ್ಟರಿ ಪತ್ತೆ: ನಮ್ಮ ಪೊಲೀಸರ ಬಗ್ಗೆ ಗೃಹ ಸಚಿವರು ಏನಂದ್ರು?
ಬೆಂಕಿ ಹೊತ್ತಿಕೊಂಡ ಅಪಾರ್ಟ್​​ಮೆಂಟ್​​ನೊಳಗೆ ಸಿಲುಕಿದ್ದ ನಾಯಿಯ ರಕ್ಷಣೆ
ಬೆಂಕಿ ಹೊತ್ತಿಕೊಂಡ ಅಪಾರ್ಟ್​​ಮೆಂಟ್​​ನೊಳಗೆ ಸಿಲುಕಿದ್ದ ನಾಯಿಯ ರಕ್ಷಣೆ
ಹೊಸ ವರ್ಷಾಚರಣೆ ಮಾಡುವವರ ಅನುಕೂಲಕ್ಕೆ QR Code: ಏನಿದು? ಏನೆಲ್ಲಾ ಅನುಕೂಲ?
ಹೊಸ ವರ್ಷಾಚರಣೆ ಮಾಡುವವರ ಅನುಕೂಲಕ್ಕೆ QR Code: ಏನಿದು? ಏನೆಲ್ಲಾ ಅನುಕೂಲ?
ಶ್ರೀಲಂಕಾ ವಿರುದ್ಧ ಸತತ 3ನೇ ಅರ್ಧಶತಕ ಸಿಡಿಸಿದ ಶಫಾಲಿ
ಶ್ರೀಲಂಕಾ ವಿರುದ್ಧ ಸತತ 3ನೇ ಅರ್ಧಶತಕ ಸಿಡಿಸಿದ ಶಫಾಲಿ
ಮನ್ ಕಿ ಬಾತ್ ವೀಕ್ಷಿಸಿದವರಿಗೆ ಬರಿಯಾನಿ ಭಾಗ್ಯ
ಮನ್ ಕಿ ಬಾತ್ ವೀಕ್ಷಿಸಿದವರಿಗೆ ಬರಿಯಾನಿ ಭಾಗ್ಯ
ಸ್ಕೈ ಗೋಲ್ಡ್‌ ಅಂಡ್‌ ಡೈಮಂಡ್ಸ್ ದರೋಡೆ: ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಐಜಿಪಿ
ಸ್ಕೈ ಗೋಲ್ಡ್‌ ಅಂಡ್‌ ಡೈಮಂಡ್ಸ್ ದರೋಡೆ: ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಐಜಿಪಿ
ಮೈಸೂರಿನಲ್ಲಿ ಹಾಡಹಗಲೇ ಸಿನಿಮೀ ಸ್ಟೈಲ್‌ನಲ್ಲಿ ಚಿನ್ನದಂಗಡಿ ದರೋಡೆ
ಮೈಸೂರಿನಲ್ಲಿ ಹಾಡಹಗಲೇ ಸಿನಿಮೀ ಸ್ಟೈಲ್‌ನಲ್ಲಿ ಚಿನ್ನದಂಗಡಿ ದರೋಡೆ