AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಕಾಟೇರ’ ಚಿತ್ರಕ್ಕೆ 100 ದಿನ​ ಶೂಟಿಂಗ್​; 85 ಡೇಸ್​ ಕಾಲ್​ಶೀಟ್​ ನಿಯಮದ ಬಗ್ಗೆ ಮಾತಾಡಿದ ದರ್ಶನ್​

ನಿರ್ದೇಶಕ ತರುಣ್​ ಸುಧೀರ್​ ಮತ್ತು ದರ್ಶನ್​ ಅವರು ಜೊತೆಯಾಗಿ ‘ಕಾಟೇರ’ ಸಿನಿಮಾ ಮಾಡುತ್ತಿದ್ದಾರೆ. ಅವರಿಬ್ಬರ ಕಾಂಬಿನೇಷನ್​ ಬಗ್ಗೆ ಅಭಿಮಾನಿಗಳಿಗೆ ನಿರೀಕ್ಷೆ ಇದೆ. 100 ದಿನಗಳ ಕಾಲ ಶೂಟಿಂಗ್​ ಮಾಡಿರುವ ಈ ಚಿತ್ರತಂಡದವರು ಮಾಧ್ಯಮಗಳ ಮುಂದೆ ಒಂದಷ್ಟು ವಿಚಾರಗಳನ್ನು ಹಂಚಿಕೊಂಡಿದ್ದಾರೆ. ಆಗ ಕಾಲ್​ಶೀಟ್​ ಬಗ್ಗೆ ದರ್ಶನ್​ ಪ್ರಸ್ತಾಪಿಸಿದರು.

‘ಕಾಟೇರ’ ಚಿತ್ರಕ್ಕೆ 100 ದಿನ​ ಶೂಟಿಂಗ್​; 85 ಡೇಸ್​ ಕಾಲ್​ಶೀಟ್​ ನಿಯಮದ ಬಗ್ಗೆ ಮಾತಾಡಿದ ದರ್ಶನ್​
ದರ್ಶನ್, ರಾಕ್​ಲೈನ್​ ವೆಂಕಟೇಶ್​
ಮದನ್​ ಕುಮಾರ್​
|

Updated on: Sep 11, 2023 | 9:40 PM

Share

ನಟ ದರ್ಶನ್​ (Darshan) ಅವರು ಕೆಲವೊಂದು ವಿಚಾರದಲ್ಲಿ ಬಹಳ ಕಟ್ಟುನಿಟ್ಟಾಗಿದ್ದಾರೆ. ಸಿನಿಮಾಗಳಿಗೆ ಕಾಲ್​ಶೀಟ್​ ನೀಡುವ ವಿಚಾರದಲ್ಲಿ ಅವರು ತಮ್ಮದೇ ನಿಯಮ ಪಾಲಿಸುತ್ತಾರೆ. ಯಾವುದೇ ಚಿತ್ರಕ್ಕೆ ಅವರು ನೀಡುವುದು 85 ದಿನಗಳ ಕಾಲ್​ಶೀಟ್​ ಮಾತ್ರ. ಈ ಬಗ್ಗೆ ‘ಕಾಟೇರ’ (Kaatera) ಸಿನಿಮಾದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ್ದಾರೆ. ತರುಣ್​ ಸುಧೀರ್​ ಅವರು ಈ ಸಿನಿಮಾಗೆ ನಿರ್ದೇಶನ ಮಾಡುತ್ತಿದ್ದಾರೆ. ರಾಕ್​ಲೈನ್​ ವೆಂಕಟೇಶ್​ (Rockline Venkatesh) ಅವರು ನಿರ್ಮಾಣ ಮಾಡುತ್ತಿದ್ದಾರೆ. ಈಗಾಗಲೇ ‘ಕಾಟೇರ’ ಸಿನಿಮಾಗೆ 100 ದಿನಗಳ ಕಾಲ ಶೂಟಿಂಗ್​ ಮಾಡಲಾಗಿದೆ. ಅದರಲ್ಲಿ ದರ್ಶನ್​ ಅವರು ಎಷ್ಟು ದಿನ ಚಿತ್ರೀಕರಣದಲ್ಲಿ ಭಾಗಿ ಆಗಿದ್ದಾರೆ? ಇನ್ನು ಎಷ್ಟು ದಿನ ಅವರ ಕಾಲ್​ಶೀಟ್​ ಬಾಕಿ ಇದೆ? ಈ ಎಲ್ಲ ಪ್ರಶ್ನೆಗಳಿಗೆ ಇಲ್ಲಿದೆ ಉತ್ತರ..

‘ರಾಬರ್ಟ್​’ ಸಿನಿಮಾದ ಯಶಸ್ಸಿನ ಬಳಿಕ ನಿರ್ದೇಶಕ ತರುಣ್​ ಸುಧೀರ್​ ಮತ್ತು ದರ್ಶನ್​ ಅವರು ಜೊತೆಯಾಗಿ ‘ಕಾಟೇರ’ ಸಿನಿಮಾ ಮಾಡುತ್ತಿದ್ದಾರೆ. ಹಾಗಾಗಿ ಅವರಿಬ್ಬರ ಕಾಂಬಿನೇಷನ್​ ಬಗ್ಗೆ ಅಭಿಮಾನಿಗಳಿಗೆ ನಿರೀಕ್ಷೆ ಇದೆ. 100 ದಿನಗಳ ಕಾಲ ಶೂಟಿಂಗ್​ ಮಾಡಿರುವ ಈ ಚಿತ್ರತಂಡದವರು ಮಾಧ್ಯಮಗಳ ಮುಂದೆ ಒಂದಷ್ಟು ವಿಚಾರಗಳನ್ನು ಹಂಚಿಕೊಂಡಿದ್ದಾರೆ. ಆಗ ಕಾಲ್​ಶೀಟ್​ ಬಗ್ಗೆ ದರ್ಶನ್​ ಪ್ರಸ್ತಾಪಿಸಿದರು. ತಾವು ‘ಕಾಟೇರ’ ಚಿತ್ರಕ್ಕೆ ಈವರೆಗೆ 71 ದಿನಗಳ ಕಾಲ ಚಿತ್ರೀಕರಣ ಮಾಡಿರುವುದಾಗಿ ಅವರು ತಿಳಿಸಿದರು.

ಇದನ್ನೂ ಓದಿ: ದರ್ಶನ್ ನಟನೆಯ ‘ಕಾಟೇರ’ ಸಿನಿಮಾದ ನಟಿ ಆರಾಧನಾ ಫೋಟೋಗಳು

‘100 ದಿನ ಆಯ್ತು ಅಂತ ಎಲ್ಲರೂ ಕೇಳಬಹುದು. ಅಂದಿನಿಂದ ಇಂದಿನ ತನಕ ನನ್ನ ರೂಲ್ಸ್​ ಬದಲಾಗಿಲ್ಲ. ನಾನು ಡೇಟ್​ ನೀಡಿರುವುದು 85 ದಿನ ಅಷ್ಟೇ. ಇವತ್ತಿಗೆ ನನ್ನದು 71 ದಿನ ಆಗಿದೆ. ಇನ್ನು 30 ದಿನ ಟೀಮ್​ನವರು ಅವರ ಕೆಲಸ ಮಾಡಿಕೊಂಡಿದ್ದಾರೆ. ನನ್ನದು ಇನ್ನು 15 ದಿನ ಇದೆ. ಒಂದೊಂದು ಹಾಡಿಗೆ ಮೂರು ದಿನ ಬೇಕು ಅಂದುಕೊಂಡರೂ ಸರಿಯಾಗಿ 85ನೇ ದಿನಕ್ಕೆ ನನ್ನ ಕೆಲಸ ಮುಗಿಯುತ್ತದೆ. ತರುಣ್​ ಅವರಿಗೆ ಅದರ ಪ್ಲ್ಯಾನ್​ ತುಂಬ ಚೆನ್ನಾಗಿ ಗೊತ್ತು’ ಎಂದು ದರ್ಶನ್​ ಹೇಳಿದ್ದಾರೆ.

ಇದನ್ನೂ ಓದಿ: Kaatera Press Meet Live: ‘ಕಾಟೇರ’ ಸಿನಿಮಾದ ಸುದ್ದಿಗೋಷ್ಠಿಯಲ್ಲಿ ದರ್ಶನ್​ ಮಾತು; ಇಲ್ಲಿದೆ ಲೈವ್​ ವಿಡಿಯೋ

‘ಇಂದು ಕ್ಲೈಮ್ಯಾಕ್ಸ್​ ಶೂಟಿಂಗ್​ ಮಾಡಿದ್ದೇವೆ. ಇನ್ನು ಮೂರು ಸಾಂಗ್​ ಚಿತ್ರೀಕರಣ ಆಗಬೇಕು. ಡಬ್ಬಿಂಗ್​ ಕೂಡ ಆಗಿದೆ. ಶೇಕಡ 90ರಷ್ಟು ಕೆಲಸ ಮುಗಿದಿದೆ. ಆದಷ್ಟು ಬೇಗ ಸಿನಿಮಾ ರಿಲೀಸ್​ ಮಾಡಲು ನಾವು ಪ್ರಯತ್ನ ಮಾಡುತ್ತಿದ್ದೇವೆ’ ಎಂದು ಹೇಳುವ ಮೂಲಕ ದರ್ಶನ್​ ಅವರು ಶೂಟಿಂಗ್​ ಬಗ್ಗೆ ಮಾಹಿತಿ ಹಂಚಿಕೊಂಡಿದ್ದಾರೆ. ಈ ಸಿನಿಮಾದಲ್ಲಿ ಮಾಲಾಶ್ರೀ ಅವರ ಮಗಳು ಆರಾಧನಾ ನಾಯಕಿಯಾಗಿ ನಟಿಸುತ್ತಿದ್ದಾರೆ. ಅವರಿಗೆ ಇದು ಮೊದಲ ಸಿನಿಮಾ. ಚೊಚ್ಚಲ ಚಿತ್ರದಲ್ಲೇ ದರ್ಶನ್​ ಜೊತೆ ನಟಿಸುವ ಅವಕಾಶವನ್ನು ಅವರು ಪಡೆದುಕೊಂಡಿದ್ದಾರೆ. ಆ ಬಗ್ಗೆ ಮಾಲಾಶ್ರೀ ಅವರಿಗೆ ಹೆಮ್ಮೆ ಇದೆ. ಆರಾಧನಾ ಅವರ ಪ್ರತಿಭೆ ಬಗ್ಗೆ ದರ್ಶನ್​ ಅವರು ಮೆಚ್ಚುಗೆಯ ಮಾತುಗಳನ್ನು ಆಡಿದ್ದಾರೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Follow Us
Madan Kumar
Madan Kumar

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ದೆಹಲಿ: ಶಿಕ್ಷಣ ಸಚಿವಾಲಯದ ಕಚೇರಿಯಲ್ಲಿ ಅಗ್ನಿ ಅವಘಡ
ದೆಹಲಿ: ಶಿಕ್ಷಣ ಸಚಿವಾಲಯದ ಕಚೇರಿಯಲ್ಲಿ ಅಗ್ನಿ ಅವಘಡ
ವಾಣಿಜ್ಯ LPG ಸಿಲಿಂಡರ್ ಬೆಲೆ ಏರಿಕೆ: ಹೋಟೆಲ್ ಊಟ-ತಿಂಡಿ ದರ ಹೆಚ್ಚಾಗುತ್ತಾ?
ವಾಣಿಜ್ಯ LPG ಸಿಲಿಂಡರ್ ಬೆಲೆ ಏರಿಕೆ: ಹೋಟೆಲ್ ಊಟ-ತಿಂಡಿ ದರ ಹೆಚ್ಚಾಗುತ್ತಾ?