AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಾಗೆ ನೋಡಿದ್ರೆ ನನಗೆ ಡಬಲ್​ ಸಂಭಾವನೆ ಕೊಡಬೇಕು: ರಾಬರ್ಟ್​ ಸಕ್ಸಸ್​ ಮೀಟ್​ನಲ್ಲಿ ದರ್ಶನ್​ ಹೀಗೆ ಅಂದಿದ್ಯಾಕೆ?

ನನ್ನ ಮುಂದಿನ ಚಿತ್ರಗಳು ಕನ್ನಡದ ಜತೆ ಬೇರೆ ಭಾಷೆಗಳಿಗೂ ರಿಲೀಸ್​ ಆಗಲಿವೆ. ಬೇರೆ ಭಾಷೆಗಳಲ್ಲಿ ನಾನೇ ಡಬ್​ ಮಾಡಬೇಕು ಎಂದುಕೊಂಡಿದ್ದೇನೆ ಎಂದರು ದರ್ಶನ್.

ಹಾಗೆ ನೋಡಿದ್ರೆ ನನಗೆ ಡಬಲ್​ ಸಂಭಾವನೆ ಕೊಡಬೇಕು: ರಾಬರ್ಟ್​ ಸಕ್ಸಸ್​ ಮೀಟ್​ನಲ್ಲಿ ದರ್ಶನ್​ ಹೀಗೆ ಅಂದಿದ್ಯಾಕೆ?
ದರ್ಶನ್​
ರಾಜೇಶ್ ದುಗ್ಗುಮನೆ
| Edited By: |

Updated on: Mar 17, 2021 | 5:03 PM

Share

ದರ್ಶನ್​ ನಟನೆಯ ರಾಬರ್ಟ್​ ಸಿನಿಮಾ ಯಶಸ್ಸು ಕಂಡಿದೆ. ಸ್ಯಾಂಡಲ್​ವುಡ್​ ಇತಿಹಾಸದಲ್ಲೇ ಯಾವ ಚಿತ್ರವೂ ಮಾಡದಷ್ಟು ಗಳಿಕೆಯನ್ನು ರಾಬರ್ಟ್​ ಮಾಡಿದೆ. ಸದ್ಯದಲ್ಲೇ ಈ ಸಿನಿಮಾ 100 ಕೋಟಿ ರೂಪಾಯಿ ಗಳಿಕೆ ಮಾಡುವ ಎಲ್ಲಾ ಲಕ್ಷಣ ಕಾಣುತ್ತಿದೆ. ಈ ಮಧ್ಯೆ ದರ್ಶನ್​ ಅಚ್ಚರಿಯ ಹೇಳಿಕೆ ನೀಡಿದ್ದಾರೆ. ಅದೂ ಸಂಭಾವನೆ ಬಗ್ಗೆ ಅನ್ನೋದು ವಿಶೇಷ. ದರ್ಶನ್​ ನಟನೆಯ ರಾಬರ್ಟ್​ ಸಿನಿಮಾ ಕಂಡ ಯಶಸ್ಸನ್ನು ಸಂಭ್ರಮಿಸಲು ಚಿತ್ರತಂಡ ಖಾಸಗಿ ಹೋಟೆಲ್​ನಲ್ಲಿ ಕಾರ್ಯಕ್ರಮವೊಂದನ್ನು ಹಮ್ಮಿಕೊಂಡಿತ್ತು. ಈ ವೇಳೆ ದರ್ಶನ್​ ಮಾಧ್ಯಮದ ಜತೆ ಮಾತನಾಡಿದರು. ಸಾಮಾನ್ಯವಾಗಿ ನಟರ ಸಂಭಾವನೆ ವಿಚಾರದಲ್ಲಿ ಸಾಕಷ್ಟು ಜನರಿಗೆ ಕುತೂಹಲ ಇರುತ್ತದೆ. ಅದೇ ರೀತಿ ರಾಬರ್ಟ್​ ಯಶಸ್ಸಿನ ನಂತರ ದರ್ಶನ್​​ ಮುಂದಿನ ಚಿತ್ರಕ್ಕೆ ಸಂಭಾವನೆ ಹೈಕ್​ ಮಾಡಿಕೊಳ್ಳುತ್ತಾರಾ ಎನ್ನುವ ಪ್ರಶ್ನೆ ಮೂಡಿತ್ತು. ಈ ಪ್ರಶ್ನೆಗೆ ದರ್ಶನ್​ ಉತ್ತರ ನೀಡಿಲ್ಲ. ಆದರೆ, ಒಂದು ಅಚ್ಚರಿಯ ವಿಚಾರದ ಬಗ್ಗೆ ಹೇಳಿಕೊಂಡಿದ್ದಾರೆ.

ನನ್ನ ಮುಂದಿನ ಚಿತ್ರಗಳು ಕನ್ನಡದ ಜತೆ ಬೇರೆ ಭಾಷೆಗಳಿಗೂ ರಿಲೀಸ್​ ಆಗಲಿವೆ. ಬೇರೆ ಭಾಷೆಗಳಲ್ಲಿ ನಾನೇ ಡಬ್​ ಮಾಡಬೇಕು ಎಂದುಕೊಂಡಿದ್ದೇನೆ. ರಾಬರ್ಟ್​ಗೆ ತೆಲುಗಿನಲ್ಲಿ ನಾನೇ ಡಬ್​ ಮಾಡಬೇಕಿತ್ತು. ಆದರೆ, ಕಾರಣಾಂತರಗಳಿಂದ ಆಗಿಲ್ಲ. ಮುಂದಿನ ಸಿನಿಮಾಗಳಲ್ಲಿ ಬೇರೆ ಭಾಷೆಗೆ ನಾನೇ ಡಬ್​ ಮಾಡುತ್ತೇನೆ ಎಂದರು ದರ್ಶನ್​. ಡಬ್​ ಮಾಡೋ ಬದಲಿ ಸ್ಪಾಟ್​ನಲ್ಲೇ ಎರಡೂ ಭಾಷೆಗಳಿಗೆ ಆ್ಯಕ್ಟ್​ ಮಾಡೋ ಆಲೋಚನೆ ಏನಾದರೂ ಇದೆಯಾ ಎನ್ನುವ ಪ್ರಶ್ನೆಗೆ ದರ್ಶನ್​ ಉತ್ತರಿಸಿದ್ದು ಹೀಗೆ. ಎರಡು ಬಾರಿ ನಟಿಸೋದಾದರೆ ನಾನು ಎರಡೆರಡು ಬಾರಿ ನಟಿಸಬೇಕಾಗುತ್ತದೆ. ಹಾಗೆ ನೋಡಿದ್ರೆ ನನಗೆ ಡಬಲ್​ ಸಂಭಾವನೆ ಕೊಡಬೇಕು ಎಂದು ನಕ್ಕರು ದರ್ಶನ್​.

ಪೈರಸಿ ತಡೆಯೋಕೆ ದರ್ಶನ್​ ಹೊಸ ತಂತ್ರ

ಪೈರಸಿಯನ್ನು ಎಲ್ಲಿ ಮಾಡುತ್ತಿದ್ದಾರೆ ಎನ್ನುವುದು ಗೊತ್ತಾಗುವುದಿಲ್ಲ. ಇದನ್ನು ತಡೆಯೋಕೆ ಸಿನಿಮಾ ಪ್ರದರ್ಶಕರಾದ ಯುಎಫ್​ಒ ಹಾಗೂ ಕ್ಯೂಬ್​ನವರು ಒಂದು ತಂತ್ರ ಬಳಕೆ ಮಾಡಬಹುದು. ಮನೆಯಲ್ಲಿ ಕೇಬಲ್​ ಹಾಕಿಕೊಂಡರೆ ಟಿವಿಯಲ್ಲಿ ಒಂದು ಸಂಖ್ಯೆ ಓಡುತ್ತಿರುತ್ತದೆ. ಅದೇ ರೀತಿ ಪ್ರತಿ ಚಿತ್ರಮಂದಿರಕ್ಕೆ ಒಂದು ನಂಬರ್​ ನೀಡಬೇಕು. ಆಗ ಯಾವ ಚಿತ್ರಮಂದಿರದಲ್ಲಿ ರೆಕಾರ್ಡ್​ ಮಾಡಲಾಗಿದೆ ಎಂಬುದು ಗೊತ್ತಾಗುತ್ತದೆ. ಇದು ನನ್ನ ಆಲೋಚನೆ ಅಷ್ಟೆ. ಇದನ್ನು ಬೇಕಿದ್ದರೆ ಇಂಪ್ಲಿಮೆಂಟ್​ ಮಾಡಬಹುದು ಎಂದರು ದರ್ಶನ್​.

ಇದನ್ನೂ ಓದಿ: Darshan: ದರ್ಶನ್​ಗೆ ಆಸ್ಕರ್​ ಕೊಡಿ; ವೇದಿಕೆಯ ಮೇಲೆ ಬೇಡಿಕೆ ಇಟ್ಟ ರವಿಶಂಕರ್​!

Follow Us
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಜಿಬಿಎ ಚುನಾವಣೆಗೆ ಕೊನೆಗೂ ಮುಹೂರ್ತ: ಎಲೆಕ್ಷನ್​​ ಯಾವಾಗ ಗೊತ್ತಾ?
ಜಿಬಿಎ ಚುನಾವಣೆಗೆ ಕೊನೆಗೂ ಮುಹೂರ್ತ: ಎಲೆಕ್ಷನ್​​ ಯಾವಾಗ ಗೊತ್ತಾ?