AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಾಗೆ ನೋಡಿದ್ರೆ ನನಗೆ ಡಬಲ್​ ಸಂಭಾವನೆ ಕೊಡಬೇಕು: ರಾಬರ್ಟ್​ ಸಕ್ಸಸ್​ ಮೀಟ್​ನಲ್ಲಿ ದರ್ಶನ್​ ಹೀಗೆ ಅಂದಿದ್ಯಾಕೆ?

ನನ್ನ ಮುಂದಿನ ಚಿತ್ರಗಳು ಕನ್ನಡದ ಜತೆ ಬೇರೆ ಭಾಷೆಗಳಿಗೂ ರಿಲೀಸ್​ ಆಗಲಿವೆ. ಬೇರೆ ಭಾಷೆಗಳಲ್ಲಿ ನಾನೇ ಡಬ್​ ಮಾಡಬೇಕು ಎಂದುಕೊಂಡಿದ್ದೇನೆ ಎಂದರು ದರ್ಶನ್.

ಹಾಗೆ ನೋಡಿದ್ರೆ ನನಗೆ ಡಬಲ್​ ಸಂಭಾವನೆ ಕೊಡಬೇಕು: ರಾಬರ್ಟ್​ ಸಕ್ಸಸ್​ ಮೀಟ್​ನಲ್ಲಿ ದರ್ಶನ್​ ಹೀಗೆ ಅಂದಿದ್ಯಾಕೆ?
ದರ್ಶನ್​
Follow us
ರಾಜೇಶ್ ದುಗ್ಗುಮನೆ
| Updated By: ಮದನ್​ ಕುಮಾರ್​

Updated on: Mar 17, 2021 | 5:03 PM

ದರ್ಶನ್​ ನಟನೆಯ ರಾಬರ್ಟ್​ ಸಿನಿಮಾ ಯಶಸ್ಸು ಕಂಡಿದೆ. ಸ್ಯಾಂಡಲ್​ವುಡ್​ ಇತಿಹಾಸದಲ್ಲೇ ಯಾವ ಚಿತ್ರವೂ ಮಾಡದಷ್ಟು ಗಳಿಕೆಯನ್ನು ರಾಬರ್ಟ್​ ಮಾಡಿದೆ. ಸದ್ಯದಲ್ಲೇ ಈ ಸಿನಿಮಾ 100 ಕೋಟಿ ರೂಪಾಯಿ ಗಳಿಕೆ ಮಾಡುವ ಎಲ್ಲಾ ಲಕ್ಷಣ ಕಾಣುತ್ತಿದೆ. ಈ ಮಧ್ಯೆ ದರ್ಶನ್​ ಅಚ್ಚರಿಯ ಹೇಳಿಕೆ ನೀಡಿದ್ದಾರೆ. ಅದೂ ಸಂಭಾವನೆ ಬಗ್ಗೆ ಅನ್ನೋದು ವಿಶೇಷ. ದರ್ಶನ್​ ನಟನೆಯ ರಾಬರ್ಟ್​ ಸಿನಿಮಾ ಕಂಡ ಯಶಸ್ಸನ್ನು ಸಂಭ್ರಮಿಸಲು ಚಿತ್ರತಂಡ ಖಾಸಗಿ ಹೋಟೆಲ್​ನಲ್ಲಿ ಕಾರ್ಯಕ್ರಮವೊಂದನ್ನು ಹಮ್ಮಿಕೊಂಡಿತ್ತು. ಈ ವೇಳೆ ದರ್ಶನ್​ ಮಾಧ್ಯಮದ ಜತೆ ಮಾತನಾಡಿದರು. ಸಾಮಾನ್ಯವಾಗಿ ನಟರ ಸಂಭಾವನೆ ವಿಚಾರದಲ್ಲಿ ಸಾಕಷ್ಟು ಜನರಿಗೆ ಕುತೂಹಲ ಇರುತ್ತದೆ. ಅದೇ ರೀತಿ ರಾಬರ್ಟ್​ ಯಶಸ್ಸಿನ ನಂತರ ದರ್ಶನ್​​ ಮುಂದಿನ ಚಿತ್ರಕ್ಕೆ ಸಂಭಾವನೆ ಹೈಕ್​ ಮಾಡಿಕೊಳ್ಳುತ್ತಾರಾ ಎನ್ನುವ ಪ್ರಶ್ನೆ ಮೂಡಿತ್ತು. ಈ ಪ್ರಶ್ನೆಗೆ ದರ್ಶನ್​ ಉತ್ತರ ನೀಡಿಲ್ಲ. ಆದರೆ, ಒಂದು ಅಚ್ಚರಿಯ ವಿಚಾರದ ಬಗ್ಗೆ ಹೇಳಿಕೊಂಡಿದ್ದಾರೆ.

ನನ್ನ ಮುಂದಿನ ಚಿತ್ರಗಳು ಕನ್ನಡದ ಜತೆ ಬೇರೆ ಭಾಷೆಗಳಿಗೂ ರಿಲೀಸ್​ ಆಗಲಿವೆ. ಬೇರೆ ಭಾಷೆಗಳಲ್ಲಿ ನಾನೇ ಡಬ್​ ಮಾಡಬೇಕು ಎಂದುಕೊಂಡಿದ್ದೇನೆ. ರಾಬರ್ಟ್​ಗೆ ತೆಲುಗಿನಲ್ಲಿ ನಾನೇ ಡಬ್​ ಮಾಡಬೇಕಿತ್ತು. ಆದರೆ, ಕಾರಣಾಂತರಗಳಿಂದ ಆಗಿಲ್ಲ. ಮುಂದಿನ ಸಿನಿಮಾಗಳಲ್ಲಿ ಬೇರೆ ಭಾಷೆಗೆ ನಾನೇ ಡಬ್​ ಮಾಡುತ್ತೇನೆ ಎಂದರು ದರ್ಶನ್​. ಡಬ್​ ಮಾಡೋ ಬದಲಿ ಸ್ಪಾಟ್​ನಲ್ಲೇ ಎರಡೂ ಭಾಷೆಗಳಿಗೆ ಆ್ಯಕ್ಟ್​ ಮಾಡೋ ಆಲೋಚನೆ ಏನಾದರೂ ಇದೆಯಾ ಎನ್ನುವ ಪ್ರಶ್ನೆಗೆ ದರ್ಶನ್​ ಉತ್ತರಿಸಿದ್ದು ಹೀಗೆ. ಎರಡು ಬಾರಿ ನಟಿಸೋದಾದರೆ ನಾನು ಎರಡೆರಡು ಬಾರಿ ನಟಿಸಬೇಕಾಗುತ್ತದೆ. ಹಾಗೆ ನೋಡಿದ್ರೆ ನನಗೆ ಡಬಲ್​ ಸಂಭಾವನೆ ಕೊಡಬೇಕು ಎಂದು ನಕ್ಕರು ದರ್ಶನ್​.

ಪೈರಸಿ ತಡೆಯೋಕೆ ದರ್ಶನ್​ ಹೊಸ ತಂತ್ರ

ಪೈರಸಿಯನ್ನು ಎಲ್ಲಿ ಮಾಡುತ್ತಿದ್ದಾರೆ ಎನ್ನುವುದು ಗೊತ್ತಾಗುವುದಿಲ್ಲ. ಇದನ್ನು ತಡೆಯೋಕೆ ಸಿನಿಮಾ ಪ್ರದರ್ಶಕರಾದ ಯುಎಫ್​ಒ ಹಾಗೂ ಕ್ಯೂಬ್​ನವರು ಒಂದು ತಂತ್ರ ಬಳಕೆ ಮಾಡಬಹುದು. ಮನೆಯಲ್ಲಿ ಕೇಬಲ್​ ಹಾಕಿಕೊಂಡರೆ ಟಿವಿಯಲ್ಲಿ ಒಂದು ಸಂಖ್ಯೆ ಓಡುತ್ತಿರುತ್ತದೆ. ಅದೇ ರೀತಿ ಪ್ರತಿ ಚಿತ್ರಮಂದಿರಕ್ಕೆ ಒಂದು ನಂಬರ್​ ನೀಡಬೇಕು. ಆಗ ಯಾವ ಚಿತ್ರಮಂದಿರದಲ್ಲಿ ರೆಕಾರ್ಡ್​ ಮಾಡಲಾಗಿದೆ ಎಂಬುದು ಗೊತ್ತಾಗುತ್ತದೆ. ಇದು ನನ್ನ ಆಲೋಚನೆ ಅಷ್ಟೆ. ಇದನ್ನು ಬೇಕಿದ್ದರೆ ಇಂಪ್ಲಿಮೆಂಟ್​ ಮಾಡಬಹುದು ಎಂದರು ದರ್ಶನ್​.

ಇದನ್ನೂ ಓದಿ: Darshan: ದರ್ಶನ್​ಗೆ ಆಸ್ಕರ್​ ಕೊಡಿ; ವೇದಿಕೆಯ ಮೇಲೆ ಬೇಡಿಕೆ ಇಟ್ಟ ರವಿಶಂಕರ್​!

Daily Devotional: ಪ್ರಸಾದವನ್ನ ಬಲಗೈಯಲ್ಲೇ ಯಾಕೆ ತೆಗೆದುಕೊಳ್ಳಬೇಕು?
Daily Devotional: ಪ್ರಸಾದವನ್ನ ಬಲಗೈಯಲ್ಲೇ ಯಾಕೆ ತೆಗೆದುಕೊಳ್ಳಬೇಕು?
Daily horoscope: ಸೂರ್ಯ ಭಗವಾನ್ ವೃಷಭ ರಾಶಿಗೆ ಪ್ರವೇಶ
Daily horoscope: ಸೂರ್ಯ ಭಗವಾನ್ ವೃಷಭ ರಾಶಿಗೆ ಪ್ರವೇಶ
ತಂಗಿ ಮದುವೆ ಮಾಡಿಸುತ್ತೇವೆ: ರಾಕೇಶ್ ಪೂಜಾರಿ ಕುಟುಂಬಕ್ಕೆ ಸ್ನೇಹಿತರ ಬೆಂಬಲ
ತಂಗಿ ಮದುವೆ ಮಾಡಿಸುತ್ತೇವೆ: ರಾಕೇಶ್ ಪೂಜಾರಿ ಕುಟುಂಬಕ್ಕೆ ಸ್ನೇಹಿತರ ಬೆಂಬಲ
ರಾಕೇಶ್ ಪೂಜಾರಿ ಪ್ರತಿಭೆ ಕಂಡು ದರ್ಶನ್ ಕೂಡ ಫೋಟೋ ತೆಗೆಸಿಕೊಂಡಿದ್ರು: ರಘು
ರಾಕೇಶ್ ಪೂಜಾರಿ ಪ್ರತಿಭೆ ಕಂಡು ದರ್ಶನ್ ಕೂಡ ಫೋಟೋ ತೆಗೆಸಿಕೊಂಡಿದ್ರು: ರಘು
ಗಂಗಾವತಿಯಲ್ಲಿ ಬೆಂಬಲಿಗರ ಸಭೆ ನಡೆಸಿದ ಜನಾರ್ಧನ ರೆಡ್ಡಿ ಪತ್ನಿ ಅರುಣಾ
ಗಂಗಾವತಿಯಲ್ಲಿ ಬೆಂಬಲಿಗರ ಸಭೆ ನಡೆಸಿದ ಜನಾರ್ಧನ ರೆಡ್ಡಿ ಪತ್ನಿ ಅರುಣಾ
ಲಿಫ್ಟ್​ನಲ್ಲಿದ್ದ9 ಜನರನ್ನ ಗೋಡೆ ಕೊರೆದು ರಕ್ಷಿಸಿದ ರೋಚಕ ವಿಡಿಯೋ!
ಲಿಫ್ಟ್​ನಲ್ಲಿದ್ದ9 ಜನರನ್ನ ಗೋಡೆ ಕೊರೆದು ರಕ್ಷಿಸಿದ ರೋಚಕ ವಿಡಿಯೋ!
ಪುರುಷರು ವಾಹನ ಓಡಿಸಲು ಪರದಾಡಿದ ರಸ್ತೇಲಿ ಸಲೀಸಾಗಿ ಸ್ಕೂಟರ್ ಓಡಿಸಿದ ಯುವತಿ
ಪುರುಷರು ವಾಹನ ಓಡಿಸಲು ಪರದಾಡಿದ ರಸ್ತೇಲಿ ಸಲೀಸಾಗಿ ಸ್ಕೂಟರ್ ಓಡಿಸಿದ ಯುವತಿ
ರಾಕೇಶ್ ಪೂಜಾರಿಗೆ ಆರೋಗ್ಯ ಸಮಸ್ಯೆ ಇತ್ತ: ಗೆಳೆಯ ಕೊಟ್ಟ ಉತ್ತರ
ರಾಕೇಶ್ ಪೂಜಾರಿಗೆ ಆರೋಗ್ಯ ಸಮಸ್ಯೆ ಇತ್ತ: ಗೆಳೆಯ ಕೊಟ್ಟ ಉತ್ತರ
ಪಾಕಿಸ್ತಾನ ಎಸೆದ ಜೀವಂತ ಶೆಲ್​ಗಳನ್ನು ನಿಷ್ಕ್ರಿಯಗೊಳಿಸಿದ ಭಾರತೀಯ ಸೇನೆ
ಪಾಕಿಸ್ತಾನ ಎಸೆದ ಜೀವಂತ ಶೆಲ್​ಗಳನ್ನು ನಿಷ್ಕ್ರಿಯಗೊಳಿಸಿದ ಭಾರತೀಯ ಸೇನೆ
ಮಳೆಗಾಲ ಸಮೀಪದಲ್ಲಿದೆ, ನಗರದಲ್ಲಿ ಮರ ಗಣತಿ ಶುರುಮಾಡಲು ಇದು ಸಕಾಲ
ಮಳೆಗಾಲ ಸಮೀಪದಲ್ಲಿದೆ, ನಗರದಲ್ಲಿ ಮರ ಗಣತಿ ಶುರುಮಾಡಲು ಇದು ಸಕಾಲ