AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪತ್ನಿ ಜತೆ 5 ನಿಮಿಷಕ್ಕಿಂತ ಹೆಚ್ಚು ಮಾತನಾಡಲು ಸಾಧ್ಯವಾಗದೇ ದರ್ಶನ್​ ಪರದಾಟ

ಬಳ್ಳಾರಿ ಜೈಲಿನ ಕಠಿಣ ನಿಮಯಗಳಿಂದಾಗಿ ದರ್ಶನ್​ಗೆ ಕಾರಾಗೃಹ ವಾಸ ಕಷ್ಟವಾಗಿದೆ. ಜಾರ್ಜ್​ಶೀಟ್​ ಸಲ್ಲಿಕೆಯ ಬಗ್ಗೆ ಪತ್ನಿ ಹಾಗೂ ಲಾಯರ್​ ಜೊತೆ ಮಾತನಾಡಲು ಕೂಡ ದರ್ಶನ್​ಗೆ ಕೇವಲ 5 ನಿಮಿಷ ಅವಕಾಶ ನೀಡಲಾಗಿದೆ. ಅಷ್ಟು ಕಡಿಮೆ ಸಮಯದಲ್ಲಿ ಎಲ್ಲವನ್ನೂ ಮಾತನಾಡಲು ಸಾಧ್ಯವಾಗದೇ ದರ್ಶನ್​ ಪರದಾಡಿದ್ದಾರೆ ಎಂಬ ಮಾಹಿತಿ ಕೇಳಿಬಂದಿದೆ.

ಪತ್ನಿ ಜತೆ 5 ನಿಮಿಷಕ್ಕಿಂತ ಹೆಚ್ಚು ಮಾತನಾಡಲು ಸಾಧ್ಯವಾಗದೇ ದರ್ಶನ್​ ಪರದಾಟ
ವಿಜಯಲಕ್ಷ್ಮಿ, ದರ್ಶನ್​
ವಿನಾಯಕ ಬಡಿಗೇರ್​
| Edited By: |

Updated on: Sep 04, 2024 | 4:40 PM

Share

ನಟ ದರ್ಶನ್​ ಪ್ರಮುಖ ಆರೋಪಿ ಆಗಿರುವ ರೇಣುಕಾಸ್ವಾಮಿ ಕೊಲೆ ಕೇಸ್​ನ ಜಾರ್ಜ್​ಶೀಟ್​ ಇಂದು (ಸೆ.4) ಸಲ್ಲಿಕೆ ಆಗಿದೆ. ಈ ಹಿನ್ನೆಲೆಯಲ್ಲಿ ದರ್ಶನ್​ಗೆ ಸಂಕಷ್ಟ ಹೆಚ್ಚಾಗಿದೆ. ಚಾರ್ಜ್​ಶೀಟ್​ನಲ್ಲಿ ಇರುವ ವಿಚಾರಗಳನ್ನು ತಿಳಿದುಕೊಳ್ಳಲು ದರ್ಶನ್​ ಹಾತೊರೆಯುತ್ತಿದ್ದಾರೆ. ಆದರೆ ಕುಟುಂಬದವರ ಜೊತೆ ಮಾತನಾಡುವುದು ಅಷ್ಟು ಸುಲಭವಲ್ಲ. ಬಳ್ಳಾರಿ ಜೈಲಿನಲ್ಲಿ ಇರುವ ಅವರು ಕೇವಲ 5 ನಿಮಿಷಗಳ ಕಾಲ ಪತ್ನಿ ವಿಜಯಲಕ್ಷ್ಮಿ ಜೊತೆ ಮಾತನಾಡಿದ್ದಾರೆ. ಆದರೆ ಪೂರ್ತಿ ವಿಷಯ ತಿಳಿದುಕೊಳ್ಳುವುದಕ್ಕೂ ಮುನ್ನವೇ ಅವಧಿ ಮುಕ್ತಾಯ ಆಗಿದ್ದರಿಂದ ದರ್ಶನ್​ ಪರದಾಡಿದ್ದಾರೆ.

ಬಳ್ಳಾರಿ ಸೆಂಟ್ರಲ್ ಜೈಲ್‌ನ ಲ್ಯಾಂಡ್ ಲೈನ್​ನಿಂದ ಪತ್ನಿ ವಿಜಯಲಕ್ಷ್ಮಿ ನಂಬರ್‌ಗೆ ದರ್ಶನ್​ ಕರೆ ಮಾಡಿದ್ದಾರೆ. ಅತ್ತ ಕಡೆಯಿಂದ ವಿಜಯಲಕ್ಷ್ಮಿ ಫೋನ್ ರಿಸೀವ್ ಮಾಡುತ್ತಿದ್ದಂತೆಯೇ ದರ್ಶನ್ ಭಾವುಕರಾಗಿದ್ದಾರೆ. 5 ನಿಮಿಷಗಳ ಕಾಲ ಅವರು ಎಮೋಷನಲ್​ ಆಗಿಯೇ ಮಾತನಾಡಿದ್ದಾರೆ. ಕುಟುಂಬಸ್ಥರ ಆರೋಗ್ಯ ವಿಚಾರಿಸಿದ್ದಾರೆ. ಬಳಿಕ ಚಾರ್ಜ್​ಶೀಟ್​ನಲ್ಲಿ ಇರುವ ವಿಚಾರಗಳನ್ನು ತಿಳಿಯಲು ಪ್ರಯತ್ನಿಸಿದ್ದಾರೆ.

ಇದನ್ನೂ ಓದಿ: ರೇಣುಕಾ ಸ್ವಾಮಿ ಕೊಲೆ ಕೇಸ್; ದರ್ಶನ್ ವಿರುದ್ಧ ಇರೋ ಸಾಕ್ಷಿದಾರರು ಯಾರ್ಯಾರು?

ಈ ಕೇಸ್​ನಲ್ಲಿ ತಮಗೆ ಜಾಮೀನು ಸಿಗುತ್ತಾ ಅಥವಾ ಎಲ್ಲವಾ ಎಂಬ ಆತಂಕದಲ್ಲೇ ದರ್ಶನ್ ಅವರು ಪತ್ನಿಯೊಂದಿಗೆ ಚರ್ಚೆ ಮಾಡಿದ್ದಾರೆ. ಮಾತನಾಡಲು ಸಿಕ್ಕ 5 ನಿಮಿಷ ಅವಧಿಯಲ್ಲಿ ಎಲ್ಲವೂ ಕೇಳಲಾಗಲಿಲ್ಲ ಎಂಬ ಟೆನ್ಷನ್​ನಲ್ಲಿ ದರ್ಶನ್​ ಪರಿತಪಿಸಿದ್ದಾರೆ. ಚಾರ್ಜ್​ಶೀಟ್​ ಹಾಗೂ ಮುಂದಿನ ಕಾನೂನು ಪ್ರಕ್ರಿಯೆ ಬಗ್ಗೆ ಸರಿಯಾಗಿ ಮಾಹಿತಿ ಪಡೆಯಲು 5 ನಿಮಿಷದಲ್ಲಿ ಸಾಧ್ಯವಾಗಲಿಲ್ಲ. ಆದ್ದರಿಂದ ದರ್ಶನ್​ಗೆ ಟೆನ್ಷನ್​ ಹೆಚ್ಚಾಗಿದೆ.

ಇದನ್ನೂ ಓದಿ: ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಚಾರ್ಜ್​ಶೀಟ್ ಸಲ್ಲಿಕೆ; ದರ್ಶನ್ ಎ2 ಆರೋಪಿ ಆಗಿ ಮುಂದುವರಿಕೆ

ಇಂಥ ತುರ್ತು ಪರಿಸ್ಥಿತಿಯಲ್ಲಿ ಕೂಡ ಪತ್ನಿ ಮತ್ತು ವಕೀಲರ ಜೊತೆ ಸೂಕ್ತವಾಗಿ ಮಾತನಾಡಲು ದರ್ಶನ್​ಗೆ ಸಾಧ್ಯವಾಗಿಲ್ಲ. ಅವರ ಸಂಪೂರ್ಣ ಮಾತುಕತೆಯನ್ನು ರೆಕಾರ್ಡ್​ ಮಾಡಲಾಗಿದೆ. ಪತ್ನಿಯ ದೂರವಾಣಿ ಕರೆ ಕಟ್​ ಆಗುತ್ತಿದ್ದಂತೆಯೇ ದರ್ಶನ್​ ಅವರು ಸೆಲ್​ನತ್ತ ತೆರಳಿದ್ದಾರೆ. ಜೈಲಿನಲ್ಲಿರುವ ದರ್ಶನ್​ಗೆ ಈಗ ನೆನಪಿರುವುದು ಪತ್ನಿಯ ಫೋನ್​ ನಂಬರ್​ ಮಾತ್ರ. ಹಾಗಾಗಿ ಆ ನಂಬರ್​ ಮೂಲಕವೇ ಲಾಯರ್ ಜತೆ ಮಾತನಾಡಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ