AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪತ್ನಿ ಜತೆ 5 ನಿಮಿಷಕ್ಕಿಂತ ಹೆಚ್ಚು ಮಾತನಾಡಲು ಸಾಧ್ಯವಾಗದೇ ದರ್ಶನ್​ ಪರದಾಟ

ಬಳ್ಳಾರಿ ಜೈಲಿನ ಕಠಿಣ ನಿಮಯಗಳಿಂದಾಗಿ ದರ್ಶನ್​ಗೆ ಕಾರಾಗೃಹ ವಾಸ ಕಷ್ಟವಾಗಿದೆ. ಜಾರ್ಜ್​ಶೀಟ್​ ಸಲ್ಲಿಕೆಯ ಬಗ್ಗೆ ಪತ್ನಿ ಹಾಗೂ ಲಾಯರ್​ ಜೊತೆ ಮಾತನಾಡಲು ಕೂಡ ದರ್ಶನ್​ಗೆ ಕೇವಲ 5 ನಿಮಿಷ ಅವಕಾಶ ನೀಡಲಾಗಿದೆ. ಅಷ್ಟು ಕಡಿಮೆ ಸಮಯದಲ್ಲಿ ಎಲ್ಲವನ್ನೂ ಮಾತನಾಡಲು ಸಾಧ್ಯವಾಗದೇ ದರ್ಶನ್​ ಪರದಾಡಿದ್ದಾರೆ ಎಂಬ ಮಾಹಿತಿ ಕೇಳಿಬಂದಿದೆ.

ಪತ್ನಿ ಜತೆ 5 ನಿಮಿಷಕ್ಕಿಂತ ಹೆಚ್ಚು ಮಾತನಾಡಲು ಸಾಧ್ಯವಾಗದೇ ದರ್ಶನ್​ ಪರದಾಟ
ವಿಜಯಲಕ್ಷ್ಮಿ, ದರ್ಶನ್​
ವಿನಾಯಕ ಬಡಿಗೇರ್​
| Updated By: ಮದನ್​ ಕುಮಾರ್​|

Updated on: Sep 04, 2024 | 4:40 PM

Share

ನಟ ದರ್ಶನ್​ ಪ್ರಮುಖ ಆರೋಪಿ ಆಗಿರುವ ರೇಣುಕಾಸ್ವಾಮಿ ಕೊಲೆ ಕೇಸ್​ನ ಜಾರ್ಜ್​ಶೀಟ್​ ಇಂದು (ಸೆ.4) ಸಲ್ಲಿಕೆ ಆಗಿದೆ. ಈ ಹಿನ್ನೆಲೆಯಲ್ಲಿ ದರ್ಶನ್​ಗೆ ಸಂಕಷ್ಟ ಹೆಚ್ಚಾಗಿದೆ. ಚಾರ್ಜ್​ಶೀಟ್​ನಲ್ಲಿ ಇರುವ ವಿಚಾರಗಳನ್ನು ತಿಳಿದುಕೊಳ್ಳಲು ದರ್ಶನ್​ ಹಾತೊರೆಯುತ್ತಿದ್ದಾರೆ. ಆದರೆ ಕುಟುಂಬದವರ ಜೊತೆ ಮಾತನಾಡುವುದು ಅಷ್ಟು ಸುಲಭವಲ್ಲ. ಬಳ್ಳಾರಿ ಜೈಲಿನಲ್ಲಿ ಇರುವ ಅವರು ಕೇವಲ 5 ನಿಮಿಷಗಳ ಕಾಲ ಪತ್ನಿ ವಿಜಯಲಕ್ಷ್ಮಿ ಜೊತೆ ಮಾತನಾಡಿದ್ದಾರೆ. ಆದರೆ ಪೂರ್ತಿ ವಿಷಯ ತಿಳಿದುಕೊಳ್ಳುವುದಕ್ಕೂ ಮುನ್ನವೇ ಅವಧಿ ಮುಕ್ತಾಯ ಆಗಿದ್ದರಿಂದ ದರ್ಶನ್​ ಪರದಾಡಿದ್ದಾರೆ.

ಬಳ್ಳಾರಿ ಸೆಂಟ್ರಲ್ ಜೈಲ್‌ನ ಲ್ಯಾಂಡ್ ಲೈನ್​ನಿಂದ ಪತ್ನಿ ವಿಜಯಲಕ್ಷ್ಮಿ ನಂಬರ್‌ಗೆ ದರ್ಶನ್​ ಕರೆ ಮಾಡಿದ್ದಾರೆ. ಅತ್ತ ಕಡೆಯಿಂದ ವಿಜಯಲಕ್ಷ್ಮಿ ಫೋನ್ ರಿಸೀವ್ ಮಾಡುತ್ತಿದ್ದಂತೆಯೇ ದರ್ಶನ್ ಭಾವುಕರಾಗಿದ್ದಾರೆ. 5 ನಿಮಿಷಗಳ ಕಾಲ ಅವರು ಎಮೋಷನಲ್​ ಆಗಿಯೇ ಮಾತನಾಡಿದ್ದಾರೆ. ಕುಟುಂಬಸ್ಥರ ಆರೋಗ್ಯ ವಿಚಾರಿಸಿದ್ದಾರೆ. ಬಳಿಕ ಚಾರ್ಜ್​ಶೀಟ್​ನಲ್ಲಿ ಇರುವ ವಿಚಾರಗಳನ್ನು ತಿಳಿಯಲು ಪ್ರಯತ್ನಿಸಿದ್ದಾರೆ.

ಇದನ್ನೂ ಓದಿ: ರೇಣುಕಾ ಸ್ವಾಮಿ ಕೊಲೆ ಕೇಸ್; ದರ್ಶನ್ ವಿರುದ್ಧ ಇರೋ ಸಾಕ್ಷಿದಾರರು ಯಾರ್ಯಾರು?

ಈ ಕೇಸ್​ನಲ್ಲಿ ತಮಗೆ ಜಾಮೀನು ಸಿಗುತ್ತಾ ಅಥವಾ ಎಲ್ಲವಾ ಎಂಬ ಆತಂಕದಲ್ಲೇ ದರ್ಶನ್ ಅವರು ಪತ್ನಿಯೊಂದಿಗೆ ಚರ್ಚೆ ಮಾಡಿದ್ದಾರೆ. ಮಾತನಾಡಲು ಸಿಕ್ಕ 5 ನಿಮಿಷ ಅವಧಿಯಲ್ಲಿ ಎಲ್ಲವೂ ಕೇಳಲಾಗಲಿಲ್ಲ ಎಂಬ ಟೆನ್ಷನ್​ನಲ್ಲಿ ದರ್ಶನ್​ ಪರಿತಪಿಸಿದ್ದಾರೆ. ಚಾರ್ಜ್​ಶೀಟ್​ ಹಾಗೂ ಮುಂದಿನ ಕಾನೂನು ಪ್ರಕ್ರಿಯೆ ಬಗ್ಗೆ ಸರಿಯಾಗಿ ಮಾಹಿತಿ ಪಡೆಯಲು 5 ನಿಮಿಷದಲ್ಲಿ ಸಾಧ್ಯವಾಗಲಿಲ್ಲ. ಆದ್ದರಿಂದ ದರ್ಶನ್​ಗೆ ಟೆನ್ಷನ್​ ಹೆಚ್ಚಾಗಿದೆ.

ಇದನ್ನೂ ಓದಿ: ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಚಾರ್ಜ್​ಶೀಟ್ ಸಲ್ಲಿಕೆ; ದರ್ಶನ್ ಎ2 ಆರೋಪಿ ಆಗಿ ಮುಂದುವರಿಕೆ

ಇಂಥ ತುರ್ತು ಪರಿಸ್ಥಿತಿಯಲ್ಲಿ ಕೂಡ ಪತ್ನಿ ಮತ್ತು ವಕೀಲರ ಜೊತೆ ಸೂಕ್ತವಾಗಿ ಮಾತನಾಡಲು ದರ್ಶನ್​ಗೆ ಸಾಧ್ಯವಾಗಿಲ್ಲ. ಅವರ ಸಂಪೂರ್ಣ ಮಾತುಕತೆಯನ್ನು ರೆಕಾರ್ಡ್​ ಮಾಡಲಾಗಿದೆ. ಪತ್ನಿಯ ದೂರವಾಣಿ ಕರೆ ಕಟ್​ ಆಗುತ್ತಿದ್ದಂತೆಯೇ ದರ್ಶನ್​ ಅವರು ಸೆಲ್​ನತ್ತ ತೆರಳಿದ್ದಾರೆ. ಜೈಲಿನಲ್ಲಿರುವ ದರ್ಶನ್​ಗೆ ಈಗ ನೆನಪಿರುವುದು ಪತ್ನಿಯ ಫೋನ್​ ನಂಬರ್​ ಮಾತ್ರ. ಹಾಗಾಗಿ ಆ ನಂಬರ್​ ಮೂಲಕವೇ ಲಾಯರ್ ಜತೆ ಮಾತನಾಡಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು
ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು