AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಹೃದಯಪೂರ್ವಕ ಧನ್ಯವಾದಗಳು ಕರ್ನಾಟಕ’: ‘ಕಾಟೇರ’ ಗೆಲ್ಲಿಸಿದ ಪ್ರೇಕ್ಷಕರಿಗೆ ದರ್ಶನ್​ ಧನ್ಯವಾದ

‘ಕಾಟೇರ’ ಸಿನಿಮಾದಲ್ಲಿ ದರ್ಶನ್​ ಅವರು ಎರಡು ಶೇಡ್​ ಇರುವ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ವಯಸ್ಸಾದ ವ್ಯಕ್ತಿಯ ಗೆಟಪ್​ನಲ್ಲಿ ಅವರು ಎಂಟ್ರಿ ನೀಡುತ್ತಾರೆ. ಅದೇ ಫೋಟೋವನ್ನು ಹಂಚಿಕೊಂಡು ದರ್ಶನ್​ ಅವರು ಅಭಿಮಾನಿಗಳಿಗೆ ಧನ್ಯವಾದ ಅರ್ಪಿಸಿದ್ದಾರೆ. ಈ ಸಿನಿಮಾದಲ್ಲಿ ರೈತರ ಕಹಾನಿ ಇದೆ.

‘ಹೃದಯಪೂರ್ವಕ ಧನ್ಯವಾದಗಳು ಕರ್ನಾಟಕ’: ‘ಕಾಟೇರ’ ಗೆಲ್ಲಿಸಿದ ಪ್ರೇಕ್ಷಕರಿಗೆ ದರ್ಶನ್​ ಧನ್ಯವಾದ
ದರ್ಶನ್
ಮದನ್​ ಕುಮಾರ್​
|

Updated on: Dec 31, 2023 | 8:31 AM

Share

ನಟ ದರ್ಶನ್​ ಅಭಿನಯದ ‘ಕಾಟೇರ’ ಸಿನಿಮಾ (Kaatera Movie) ಸೂಪರ್​ ಹಿಟ್​ ಆಗಿದೆ. ಈ ಸಿನಿಮಾಗೆ ವಿಮರ್ಶಕರಿಂದ ಹಾಗೂ ಪ್ರೇಕ್ಷಕರಿಂದ ಮೆಚ್ಚುಗೆ ಸಿಕ್ಕಿದೆ. ದರ್ಶನ್​ ನಟನೆಗೆ ಫ್ಯಾನ್ಸ್​ ಫಿದಾ ಆಗಿದ್ದಾರೆ. ನಿರ್ದೇಶಕ ತರುಣ್​ ಸುಧೀರ್​ (Tharun Sudhir) ಅವರ ಕಾರ್ಯಕ್ಕೆ ಪ್ರಶಂಸೆ ವ್ಯಕ್ತವಾಗಿದೆ. ಈ ಸಿನಿಮಾದಲ್ಲಿ ಹೇಳಿದ ಸಂದೇಶವನ್ನು ಪ್ರೇಕ್ಷಕರು ಇಷ್ಟಪಟ್ಟಿದ್ದಾರೆ. ಅನೇಕ ಕಡೆಗಳಲ್ಲಿ ಹೌಸ್​ಫುಲ್​ ಪ್ರದರ್ಶನ ಕಾಣುತ್ತಿರುವ ‘ಕಾಟೇರ’ ಸಿನಿಮಾ ಭರ್ಜರಿ ಕಲೆಕ್ಷನ್​ ಮಾಡುತ್ತಿದೆ. ಈ ಗೆಲುವಿಗೆ ಕಾರಣರಾದ ಅಭಿಮಾನಿಗಳಿಗೆ ದರ್ಶನ್​ (Darshan) ಅವರು ಧನ್ಯವಾದ ಅರ್ಪಿಸಿದ್ದಾರೆ.

‘ಏನೆಂದು ನಾ ಹೇಳಲಿ.. ನಿಮ್ಮಯ ಪ್ರೀತಿ-ಆಶೀರ್ವಾದಕೆ ಕೊನೆಯೆಲ್ಲಿ? ಧನ್ಯೋಸ್ಮಿ ಸೆಲೆಬ್ರಿಟಿಸ್.. ಹೃದಯಪೂರ್ವಕ ಧನ್ಯವಾದಗಳು ಕರ್ನಾಟಕ. ಈ ಪ್ರೀತಿಯ ಚಪ್ಪಾಳೆಯಿಂದ ನಮ್ಮ ಕಾಟೇರ ಚಿತ್ರತಂಡದ ಮನ ತುಂಬಿದೆ. ಮಾತುಗಳೇ ಬರುತ್ತಿಲ್ಲ’ ಎಂದು ದರ್ಶನ್​ ಅವರು ಸೋಶಿಯಲ್ ಮೀಡಿಯಾದಲ್ಲಿ ಪೋಸ್ಟ್​ ಮಾಡಿದ್ದಾರೆ. ‘ಕಾಟೇರ’ ಮೂಲಕ ಗೆದ್ದಿರುವ ಅವರಿಗೆ ಎಲ್ಲರೂ ಅಭಿನಂದನೆ ತಿಳಿಸುತ್ತಿದ್ದಾರೆ.

‘ಕಾಟೇರ’ ಸಿನಿಮಾದಲ್ಲಿ ದರ್ಶನ್​ ಅವರು ಎರಡು ಶೇಡ್​ ಇರುವ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ವಯಸ್ಸಾದ ವ್ಯಕ್ತಿಯ ಗೆಟಪ್​ನಲ್ಲಿ ಅವರು ಎಂಟ್ರಿ ನೀಡುತ್ತಾರೆ. ಅದೇ ಫೋಟೋವನ್ನು ಹಂಚಿಕೊಂಡು ದರ್ಶನ್​ ಅವರು ಅಭಿಮಾನಿಗಳಿಗೆ ಧನ್ಯವಾದ ಅರ್ಪಿಸಿದ್ದಾರೆ. ಈ ಸಿನಿಮಾದಲ್ಲಿ ರೈತರ ಕಹಾನಿ ಇದೆ. ಮೇಲು-ಕೀಳು ಮಾಡಬಾರದು ಎಂಬ ಸಂದೇಶ ಇದೆ.

ಇದನ್ನೂ ಓದಿ: Kaatera Movie Review: ಸಂಘರ್ಷದ ಕಥೆಯೊಂದಿಗೆ ಸಮಾಜಕ್ಕೆ ಸಂದೇಶ ನೀಡುವ ‘ಕಾಟೇರ’

ದರ್ಶನ್​ ಜೊತೆ ‘ಕಾಟೇರ’ ಸಿನಿಮಾದಲ್ಲಿ ಅನೇಕ ಕಲಾವಿದರು ನಟಿಸಿದ್ದಾರೆ. ಮಾಲಾಶ್ರೀ ಅವರ ಮಗಳು ಆರಾಧನಾ ನಾಯಕಿ ಆಗಿದ್ದಾರೆ. ಹಿರಿಯ ಕಲಾವಿದರಾದ ಶ್ರುತಿ, ವೈಜನಾಥ ಬೀರಾದಾರ, ಅವಿನಾಶ್​, ವಿನೋದ್​ ಆಳ್ವಾ, ಜಗಪತಿ ಬಾಬು, ಕುಮಾರ್​ ಗೋವಿಂದ್​ ಸೇರಿದಂತೆ ಹಲವರು ಅಭಿನಯಿಸಿದ್ದಾರೆ. ವೀಕೆಂಡ್​ನಲ್ಲಿ ‘ಕಾಟೇರ’ ಅಬ್ಬರಿಸುತ್ತಿದೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Follow Us
ರೌಡಿಶೀಟರ್ ಬರ್ತ್‌ಡೇ ಪಾರ್ಟಿಯಲ್ಲಿ ಬಿಜೆಪಿ ಶಾಸಕ ಭಾಗಿ
ರೌಡಿಶೀಟರ್ ಬರ್ತ್‌ಡೇ ಪಾರ್ಟಿಯಲ್ಲಿ ಬಿಜೆಪಿ ಶಾಸಕ ಭಾಗಿ
ಲಿಂಗನಮಕ್ಕಿ ಡ್ಯಾಮ್ ಹಿನ್ನೀರು ಇಳಿಕೆ: ನಿಂತಿದ್ದ ಲಾಂಚ್ ಮತ್ತೆ ಶುರು
ಲಿಂಗನಮಕ್ಕಿ ಡ್ಯಾಮ್ ಹಿನ್ನೀರು ಇಳಿಕೆ: ನಿಂತಿದ್ದ ಲಾಂಚ್ ಮತ್ತೆ ಶುರು
ಪೈಪ್ ಲೈನ್ ಕಾಮಗಾರಿ: ಗುಂಡಿಗೆ ಸಿಲುಕಿದ BMTC ಬಸ್, ಸಂಚಾರಕ್ಕೆ ಅಡ್ಡಿ
ಪೈಪ್ ಲೈನ್ ಕಾಮಗಾರಿ: ಗುಂಡಿಗೆ ಸಿಲುಕಿದ BMTC ಬಸ್, ಸಂಚಾರಕ್ಕೆ ಅಡ್ಡಿ
ಒಮೈದಿಯಾ ಏರ್​ಪೋರ್ಟ್​ ಮೇಲೆ ಅಮೆರಿಕ ಬಾಂಬ್ ದಾಳಿ
ಒಮೈದಿಯಾ ಏರ್​ಪೋರ್ಟ್​ ಮೇಲೆ ಅಮೆರಿಕ ಬಾಂಬ್ ದಾಳಿ
Dudhsagar Falls: ಹಾಲಿನ ಕಡಲಿನಂತೆ ಹರಿಯುತ್ತಿದೆ ದೂದ್‌ ಸಾಗರ್​!
Dudhsagar Falls: ಹಾಲಿನ ಕಡಲಿನಂತೆ ಹರಿಯುತ್ತಿದೆ ದೂದ್‌ ಸಾಗರ್​!
ಸ್ಕೂಟಿಯಲ್ಲಿ ಗಾಂಜಾ ಮಾರಲು ಬಂದು ಪೊಲೀಸರ ಕೈಗೆ ಸಿಕ್ಕಿಬಿದ್ದ ಮಹಿಳೆ
ಸ್ಕೂಟಿಯಲ್ಲಿ ಗಾಂಜಾ ಮಾರಲು ಬಂದು ಪೊಲೀಸರ ಕೈಗೆ ಸಿಕ್ಕಿಬಿದ್ದ ಮಹಿಳೆ
ಮಿಥುನ ರಾಶಿಯಲ್ಲಿ ಸೂರ್ಯ, ಚಂದ್ರ ಸಂಚಾರ: ಇಂದಿನ ರಾಶಿ ಭವಿಷ್ಯ ಹೇಗಿದೆ ನೋಡಿ
ಮಿಥುನ ರಾಶಿಯಲ್ಲಿ ಸೂರ್ಯ, ಚಂದ್ರ ಸಂಚಾರ: ಇಂದಿನ ರಾಶಿ ಭವಿಷ್ಯ ಹೇಗಿದೆ ನೋಡಿ
ಎಸ್ ಜಾನಕಿ ಅವರೊಟ್ಟಿಗಿನ ಅನುಬಂಧ ನೆನೆದ ಹಿರಿಯ ನಟ ಶ್ರೀನಾಥ್
ಎಸ್ ಜಾನಕಿ ಅವರೊಟ್ಟಿಗಿನ ಅನುಬಂಧ ನೆನೆದ ಹಿರಿಯ ನಟ ಶ್ರೀನಾಥ್
ಬೆಳೆ ಹಾನಿ ಪರಿಹಾರದ ಬಗ್ಗೆ ಸರ್ಕಾರ ನಿರ್ಧಾರ ಮಾಡುತ್ತದೆ: ಸತೀಶ್ ಜಾರಕಿಹೊಳಿ
ಬೆಳೆ ಹಾನಿ ಪರಿಹಾರದ ಬಗ್ಗೆ ಸರ್ಕಾರ ನಿರ್ಧಾರ ಮಾಡುತ್ತದೆ: ಸತೀಶ್ ಜಾರಕಿಹೊಳಿ
ಹೊಳೆ ದಾಟೋಕೆ ದೊಣ್ಣೆ‌ನಾಯಕನ ಅಪ್ಪಣೆ ಬೇಕೆ: ಖರ್ಗೆಗೆ ಜೋಶಿ ತಿರುಗೇಟು
ಹೊಳೆ ದಾಟೋಕೆ ದೊಣ್ಣೆ‌ನಾಯಕನ ಅಪ್ಪಣೆ ಬೇಕೆ: ಖರ್ಗೆಗೆ ಜೋಶಿ ತಿರುಗೇಟು