AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಹೃದಯಪೂರ್ವಕ ಧನ್ಯವಾದಗಳು ಕರ್ನಾಟಕ’: ‘ಕಾಟೇರ’ ಗೆಲ್ಲಿಸಿದ ಪ್ರೇಕ್ಷಕರಿಗೆ ದರ್ಶನ್​ ಧನ್ಯವಾದ

‘ಕಾಟೇರ’ ಸಿನಿಮಾದಲ್ಲಿ ದರ್ಶನ್​ ಅವರು ಎರಡು ಶೇಡ್​ ಇರುವ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ವಯಸ್ಸಾದ ವ್ಯಕ್ತಿಯ ಗೆಟಪ್​ನಲ್ಲಿ ಅವರು ಎಂಟ್ರಿ ನೀಡುತ್ತಾರೆ. ಅದೇ ಫೋಟೋವನ್ನು ಹಂಚಿಕೊಂಡು ದರ್ಶನ್​ ಅವರು ಅಭಿಮಾನಿಗಳಿಗೆ ಧನ್ಯವಾದ ಅರ್ಪಿಸಿದ್ದಾರೆ. ಈ ಸಿನಿಮಾದಲ್ಲಿ ರೈತರ ಕಹಾನಿ ಇದೆ.

‘ಹೃದಯಪೂರ್ವಕ ಧನ್ಯವಾದಗಳು ಕರ್ನಾಟಕ’: ‘ಕಾಟೇರ’ ಗೆಲ್ಲಿಸಿದ ಪ್ರೇಕ್ಷಕರಿಗೆ ದರ್ಶನ್​ ಧನ್ಯವಾದ
ದರ್ಶನ್
ಮದನ್​ ಕುಮಾರ್​
|

Updated on: Dec 31, 2023 | 8:31 AM

Share

ನಟ ದರ್ಶನ್​ ಅಭಿನಯದ ‘ಕಾಟೇರ’ ಸಿನಿಮಾ (Kaatera Movie) ಸೂಪರ್​ ಹಿಟ್​ ಆಗಿದೆ. ಈ ಸಿನಿಮಾಗೆ ವಿಮರ್ಶಕರಿಂದ ಹಾಗೂ ಪ್ರೇಕ್ಷಕರಿಂದ ಮೆಚ್ಚುಗೆ ಸಿಕ್ಕಿದೆ. ದರ್ಶನ್​ ನಟನೆಗೆ ಫ್ಯಾನ್ಸ್​ ಫಿದಾ ಆಗಿದ್ದಾರೆ. ನಿರ್ದೇಶಕ ತರುಣ್​ ಸುಧೀರ್​ (Tharun Sudhir) ಅವರ ಕಾರ್ಯಕ್ಕೆ ಪ್ರಶಂಸೆ ವ್ಯಕ್ತವಾಗಿದೆ. ಈ ಸಿನಿಮಾದಲ್ಲಿ ಹೇಳಿದ ಸಂದೇಶವನ್ನು ಪ್ರೇಕ್ಷಕರು ಇಷ್ಟಪಟ್ಟಿದ್ದಾರೆ. ಅನೇಕ ಕಡೆಗಳಲ್ಲಿ ಹೌಸ್​ಫುಲ್​ ಪ್ರದರ್ಶನ ಕಾಣುತ್ತಿರುವ ‘ಕಾಟೇರ’ ಸಿನಿಮಾ ಭರ್ಜರಿ ಕಲೆಕ್ಷನ್​ ಮಾಡುತ್ತಿದೆ. ಈ ಗೆಲುವಿಗೆ ಕಾರಣರಾದ ಅಭಿಮಾನಿಗಳಿಗೆ ದರ್ಶನ್​ (Darshan) ಅವರು ಧನ್ಯವಾದ ಅರ್ಪಿಸಿದ್ದಾರೆ.

‘ಏನೆಂದು ನಾ ಹೇಳಲಿ.. ನಿಮ್ಮಯ ಪ್ರೀತಿ-ಆಶೀರ್ವಾದಕೆ ಕೊನೆಯೆಲ್ಲಿ? ಧನ್ಯೋಸ್ಮಿ ಸೆಲೆಬ್ರಿಟಿಸ್.. ಹೃದಯಪೂರ್ವಕ ಧನ್ಯವಾದಗಳು ಕರ್ನಾಟಕ. ಈ ಪ್ರೀತಿಯ ಚಪ್ಪಾಳೆಯಿಂದ ನಮ್ಮ ಕಾಟೇರ ಚಿತ್ರತಂಡದ ಮನ ತುಂಬಿದೆ. ಮಾತುಗಳೇ ಬರುತ್ತಿಲ್ಲ’ ಎಂದು ದರ್ಶನ್​ ಅವರು ಸೋಶಿಯಲ್ ಮೀಡಿಯಾದಲ್ಲಿ ಪೋಸ್ಟ್​ ಮಾಡಿದ್ದಾರೆ. ‘ಕಾಟೇರ’ ಮೂಲಕ ಗೆದ್ದಿರುವ ಅವರಿಗೆ ಎಲ್ಲರೂ ಅಭಿನಂದನೆ ತಿಳಿಸುತ್ತಿದ್ದಾರೆ.

‘ಕಾಟೇರ’ ಸಿನಿಮಾದಲ್ಲಿ ದರ್ಶನ್​ ಅವರು ಎರಡು ಶೇಡ್​ ಇರುವ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ವಯಸ್ಸಾದ ವ್ಯಕ್ತಿಯ ಗೆಟಪ್​ನಲ್ಲಿ ಅವರು ಎಂಟ್ರಿ ನೀಡುತ್ತಾರೆ. ಅದೇ ಫೋಟೋವನ್ನು ಹಂಚಿಕೊಂಡು ದರ್ಶನ್​ ಅವರು ಅಭಿಮಾನಿಗಳಿಗೆ ಧನ್ಯವಾದ ಅರ್ಪಿಸಿದ್ದಾರೆ. ಈ ಸಿನಿಮಾದಲ್ಲಿ ರೈತರ ಕಹಾನಿ ಇದೆ. ಮೇಲು-ಕೀಳು ಮಾಡಬಾರದು ಎಂಬ ಸಂದೇಶ ಇದೆ.

ಇದನ್ನೂ ಓದಿ: Kaatera Movie Review: ಸಂಘರ್ಷದ ಕಥೆಯೊಂದಿಗೆ ಸಮಾಜಕ್ಕೆ ಸಂದೇಶ ನೀಡುವ ‘ಕಾಟೇರ’

ದರ್ಶನ್​ ಜೊತೆ ‘ಕಾಟೇರ’ ಸಿನಿಮಾದಲ್ಲಿ ಅನೇಕ ಕಲಾವಿದರು ನಟಿಸಿದ್ದಾರೆ. ಮಾಲಾಶ್ರೀ ಅವರ ಮಗಳು ಆರಾಧನಾ ನಾಯಕಿ ಆಗಿದ್ದಾರೆ. ಹಿರಿಯ ಕಲಾವಿದರಾದ ಶ್ರುತಿ, ವೈಜನಾಥ ಬೀರಾದಾರ, ಅವಿನಾಶ್​, ವಿನೋದ್​ ಆಳ್ವಾ, ಜಗಪತಿ ಬಾಬು, ಕುಮಾರ್​ ಗೋವಿಂದ್​ ಸೇರಿದಂತೆ ಹಲವರು ಅಭಿನಯಿಸಿದ್ದಾರೆ. ವೀಕೆಂಡ್​ನಲ್ಲಿ ‘ಕಾಟೇರ’ ಅಬ್ಬರಿಸುತ್ತಿದೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಅರಣ್ಯ ಇಲಾಖೆ ಸಿಬ್ಬಂದಿಯನ್ನೇ ಅಟ್ಟಾಡಿಸಿದ ಆನೆ, ಭಯಾನಕ ವಿಡಿಯೋ ನೋಡಿ
ಅರಣ್ಯ ಇಲಾಖೆ ಸಿಬ್ಬಂದಿಯನ್ನೇ ಅಟ್ಟಾಡಿಸಿದ ಆನೆ, ಭಯಾನಕ ವಿಡಿಯೋ ನೋಡಿ