AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದರ್ಶನ್ ಹೆಲ್ತ್ ರಿಪೋರ್ಟ್​ನಲ್ಲೇನಿದೆ? ಅವರಿಗೆ ಬೆನ್ನು ನೋವು ಇರೋದು ನಿಜವೇ?

ದರ್ಶನ್ ಜಾಮೀನು ಪಡೆಯಲು ಈ ರೀತಿ ಬೆನ್ನು ನೋವಿನ ಕಾರಣ ಹೇಳುತ್ತಿದ್ದಾರೆ ಎಂದು ಕೆಲವರು ಅಭಿಪ್ರಾಯಪಟ್ಟಿದ್ದರು. ಇದಕ್ಕೆ ಸಂಬಂಧಿಸಿ ಬಳ್ಳಾರಿ ವಿಮ್ಸ್ ವೈದ್ಯರು ದರ್ಶನ್ ಅವರ ಆರೋಗ್ಯ ತಪಾಸಣೆ ನಡೆಸಿದ್ದರು. ಈಗ ಈ ವರದಿಯನ್ನು ಅವರು ಜೈಲಧಿಕಾರಿಗಳಿಗೆ ನೀಡಿದ್ದಾರೆ.

ದರ್ಶನ್ ಹೆಲ್ತ್ ರಿಪೋರ್ಟ್​ನಲ್ಲೇನಿದೆ? ಅವರಿಗೆ ಬೆನ್ನು ನೋವು ಇರೋದು ನಿಜವೇ?
ದರ್ಶನ್
ವಿನಾಯಕ ಬಡಿಗೇರ್​
| Edited By: |

Updated on: Oct 15, 2024 | 8:58 AM

Share

ರೇಣುಕಾಸ್ವಾಮಿ ಕೊಲೆ ಕೇಸ್​​ನಲ್ಲಿ ನಟ ದರ್ಶನ್ ಅವರಿಗೆ ಕೆಳಹಂತದ ನ್ಯಾಯಾಲಯದಲ್ಲಿ ಜಾಮೀನು ಸಿಕ್ಕಿಲ್ಲ. ಇದು ಅವರನ್ನು ಮತ್ತಷ್ಟು ಕಂಗೆಡಿಸಿದೆ. ದರ್ಶನ್ ಅವರು ಜಾಮೀನಿಗಾಗಿ ಸಾಕಷ್ಟು ಚಡಪಡಿಸಿದ್ದರು. ಈಗ ಅವರು ಮತ್ತಷ್ಟು ದಿನ ಜೈಲಿನಲ್ಲೇ ಕಳೆಯಬೇಕಿದೆ. ಈ ಮಧ್ಯೆ ದರ್ಶನ್​ಗೆ ಬೆನ್ನುನೋವು ಕಾಣಿಸಿಕೊಂಡಿದೆ. ಅವರಿಗೆ ಸರಿಯಾಗಿ ಕೂರಲೂ ಸಾಧ್ಯವಾಗುತ್ತಿಲ್ಲ. ಅವರಿಗೆ ನಿಜಕ್ಕೂ ಬೆನ್ನು ನೋವು ಇದೆಯೇ? ಹೌದು ಎನ್ನುತ್ತಿದೆ ವೈದ್ಯರ ವರದಿ.

ದರ್ಶನ್ ಜಾಮೀನು ಪಡೆಯಲು ಈ ರೀತಿ ಬೆನ್ನು ನೋವಿನ ಕಾರಣ ಹೇಳುತ್ತಿದ್ದಾರೆ ಎಂದು ಕೆಲವರು ಅಭಿಪ್ರಾಯಪಟ್ಟಿದ್ದರು. ಇದಕ್ಕೆ ಸಂಬಂಧಿಸಿ ಬಳ್ಳಾರಿ ವಿಮ್ಸ್ ವೈದ್ಯರು ದರ್ಶನ್ ಅವರ ಆರೋಗ್ಯ ತಪಾಸಣೆ ನಡೆಸಿದ್ದರು. ಈಗ ಈ ವರದಿಯನ್ನು ಅವರು ಜೈಲಧಿಕಾರಿಗಳಿಗೆ ನೀಡಿದ್ದಾರೆ. ಬೆನ್ನುನೋವು ನಿಯಂತ್ರಣಕ್ಕೆ ಫಿಜಿಯೋ ಥೆರಪಿಯ ಸಲಹೆ ನೀಡಲಾಗಿದೆ. ಎರಡು ಸ್ಕ್ಯಾನಿಂಗ್‌ಗೆ ಸಲಹೆ ನೀಡಲಾಗಿದೆ. ಕೆಲವು ಮಾತ್ರೆ, ಮೂಲಾಮುಗಳನ್ನು ಬರೆದುಕೊಡಲಾಗಿದೆ.

ನರಗಳಿಂದಲೇ ದರ್ಶನ್​ಗೆ ಬೆನ್ನುನೋವು ಬಂದಿದೆ ಎಂದು ನರರೋಗ ತಜ್ಞ ಡಾ. ವಿಶ್ವನಾಥ್ ವರದಿಯಲ್ಲಿ ಹೇಳಿದ್ದಾರೆ. ಇಂದಿನಿಂದಲೇ ಜೈಲಿನಲ್ಲಿ ದರ್ಶನ್​ಗೆ ಫಿಜಿಯೋ ಥೆರಪಿ ನೀಡಲು ಜೈಲಾಧಿಕಾರಿಗಳು ನಿರ್ಧರಿಸಿದ್ದಾರೆ. ವಿಮ್ಸ್ ವೈದ್ಯರಿಂದ ಫಿಜಿಯೋ ಥೆರಪಿ ನಡೆಯಲಿದೆ. ಮೆಡಿಕಲ್ ಬೆಡ್, ಚೇರ್ ನೀಡುವಂತೆಯೂ ವರದಿಯಲ್ಲಿ ಉಲ್ಲೇಖ ಮಾಡಲಾಗಿದೆ.

ಮೆಡಿಕಲ್ ಬೆಡ್, ಚೇರ್, ವೈದ್ಯಕೀಯ ಸಲಕರಣೆ‌ ಹಾಗೂ ಕೆಲವು ಮಾತ್ರೆಗಳ ನೀಡುವಂತೆ ಕೋರಲಾಗಿದೆ. ಜೈಲು ವಿಭಾಗದ ಹಿರಿಯ ಅಧಿಕಾರಿಗಳ ಅನುಮತಿ ಸಿಕ್ಕ ಬಳಿಕ ಇದನ್ನು ದರ್ಶನ್​ಗೆ ನೀಡುವ ಸಾಧ್ಯತೆ ಇದೆ.

ಇದನ್ನೂ ಓದಿ: ಜಾಮೀನು ಅರ್ಜಿ ವಜಾ: ಈಗ ದರ್ಶನ್​ ಮುಂದಿದೆ ಮೂರು ಪ್ರಮುಖ ಆಯ್ಕೆಗಳು

ದರ್ಶನ್ ಅವರು ಈಗ ಜಾಮೀನಿಗಾಗಿ ಹೈಕೋರ್ಟ್ ಮೊರೆ ಹೋಗುವ ಸಾಧ್ಯತೆ ಇದೆ. ಬೆನ್ನು ನೋವಿನ ಕಾರಣ ನೀಡಿ ಅವರು ಜಾಮೀನಿಗೆ ಅರ್ಜಿ ಸಲ್ಲಿಕೆ ಮಾಡೋ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಮಾಡದ ತಪ್ಪಿಗೆ ಸುಟ್ಟು ಕರಕಲಾದ ಸೀಬರ್ಡ್ ಬಸ್ಸಿನ ಕೊನೆಯ ದೃಶ್ಯ
ಮಾಡದ ತಪ್ಪಿಗೆ ಸುಟ್ಟು ಕರಕಲಾದ ಸೀಬರ್ಡ್ ಬಸ್ಸಿನ ಕೊನೆಯ ದೃಶ್ಯ
ಚಾಮರಾಜನಗರ ಬೋನಿಗೆ ಬಿದ್ದ ಹುಲಿ
ಚಾಮರಾಜನಗರ ಬೋನಿಗೆ ಬಿದ್ದ ಹುಲಿ
2026 ವೃಶ್ಚಿಕ ರಾಶಿಗೆ ಗುರು ಸಂಚಾರದಿಂದ ಆರ್ಥಿಕ ಪ್ರಗತಿಯ ವರ್ಷ
2026 ವೃಶ್ಚಿಕ ರಾಶಿಗೆ ಗುರು ಸಂಚಾರದಿಂದ ಆರ್ಥಿಕ ಪ್ರಗತಿಯ ವರ್ಷ
ಬಸ್​ ದುರಂತದಲ್ಲಿ ಸುಟ್ಟು ಕರಕಲಾದ ಮೃತದೇಹಗಳ ಗುರುತು ಪತ್ತೆ ಹೇಗಿರುತ್ತೆ?
ಬಸ್​ ದುರಂತದಲ್ಲಿ ಸುಟ್ಟು ಕರಕಲಾದ ಮೃತದೇಹಗಳ ಗುರುತು ಪತ್ತೆ ಹೇಗಿರುತ್ತೆ?