AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕುದುರೆ ಓಡಿಸೋದ್ರಲ್ಲಿ ತಂದೆಯನ್ನೂ ಮೀರಿಸ್ತಾರೆ ವಿನೀಶ್ ದರ್ಶನ್; ಇಲ್ಲಿದೆ ವಿಡಿಯೋ

ವಿನೀಶ್ ಕೂಡ ಸೋಶಿಯಲ್ ಮೀಡಿಯಾದಲ್ಲಿ ಕುದುರೆ ಮೇಲಿರೋ ಫೋಟೋ ಹಂಚಿಕೊಂಡಿದ್ದಾರೆ. ‘ಕುದುರೆ ಇರೋವಾಗ ಫ್ಯಾನ್ಸಿ ಕಾರುಗಳ ಅವಶ್ಯಕತೆ ಏನಿದೆ’ ಎಂದು ಫೋಟೋಗೆ ಕ್ಯಾಪ್ಶನ್ ನೀಡಿದ್ದಾರೆ. ಈ ಫೋಟೋಗಳನ್ನು ಫ್ಯಾನ್ಸ್ ಇಷ್ಟಪಟ್ಟಿದ್ದಾರೆ.

ಕುದುರೆ ಓಡಿಸೋದ್ರಲ್ಲಿ ತಂದೆಯನ್ನೂ ಮೀರಿಸ್ತಾರೆ ವಿನೀಶ್ ದರ್ಶನ್; ಇಲ್ಲಿದೆ ವಿಡಿಯೋ
ವಿನೀಶ್
ರಾಜೇಶ್ ದುಗ್ಗುಮನೆ
|

Updated on: Apr 01, 2024 | 8:46 AM

Share

ನಟ ದರ್ಶನ್ ಅವರಿಗೆ ಪ್ರಾಣಿಗಳನ್ನು ಕಂಡರೆ ಸಖತ್ ಪ್ರೀತಿ. ಅವರು ಮೈಸೂರಿನಲ್ಲಿ ಫಾರ್ಮ್​ಹೌಸ್ ಹೊಂದಿದ್ದಾರೆ. ಅಲ್ಲಿ ಸಾಕಷ್ಟು ಪ್ರಾಣಿಗಳನ್ನು ಸಾಕಿದ್ದಾರೆ. ಕುದುರೆ ಓಡಿಸೋದು ಅಂದರೆ ದರ್ಶನ್ (Darshan) ಅವರಿಗೆ ಸಖತ್ ಇಷ್ಟ. ಅವರ ಮಗ ವಿನೀಶ್ ಕೂಡ ಇದಕ್ಕೆ ಹೊರತಾಗಿಲ್ಲ. ಅವರಿಗೆ ಕುದುರೆ ಮೇಲೆ ಸಖತ್ ಪ್ರೀತಿ ಇದೆ. ವಿನೀಶ್ ಕೂಡ ಸಖತ್ ಆಗಿ ಕುದುರೆ ಓಡಿಸುತ್ತಾರೆ. ಈ ವಿಚಾರದಲ್ಲಿ ವಿನೀಶ್ ತಂದೆಯನ್ನು ಮೀರಿಸುತ್ತಾರೆ. ಈಗ ವೈರಲ್ ಆಗಿರೋ ವಿಡಿಯೋನೆ ಇದಕ್ಕೆ ಸಾಕ್ಷಿ.

ವಿನೀಶ್​ಗೆ ಈಗಿನ್ನೂ 15 ತುಂಬಿಲ್ಲ. ಅವರು ತಂದೆ ದರ್ಶನ್ ರೀತಿಯೇ ಕುದುರೆ ಓಡಿಸೋದ್ರಲ್ಲಿ ಎಕ್ಸ್​ಪರ್ಟ್. ಇತ್ತೀಚೆಗೆ ವಿನೀಶ್ ದುಬೈ ತೆರಳಿದ್ದರು. ಅಲ್ಲಿ ಕುದುರೆ ಓಡಿಸಿದ್ದಾರೆ. ನುರಿತ ಸವಾರನಂತೆ ವಿನೀಶ್ ವೇಗವಾಗಿ ಕುದುರೆ ಓಡಿಸಿದ್ದಾರೆ. ಈ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ಸಖತ್ ವೈರಲ್ ಆಗಿದೆ. ಇದಕ್ಕೆ ಫ್ಯಾನ್ಸ್ ಕಡೆಯಿಂದ ಭರ್ಜರಿ ಲೈಕ್ಸ್ ಸಿಕ್ಕಿದೆ.

ಇದನ್ನೂ ಓದಿ: ‘ಏಪ್ರಿಲ್ 3ಕ್ಕೆ ನಿರ್ಧಾರ ತಿಳಿಸುವೆ, ಅಂದು ದರ್ಶನ್ ನನ್ನ ಜೊತೆ ಇರ್ತಾರೆ’; ಸುಮಲತಾ

ವಿನೀಶ್ ಕೂಡ ಸೋಶಿಯಲ್ ಮೀಡಿಯಾದಲ್ಲಿ ಕುದುರೆ ಮೇಲಿರೋ ಫೋಟೋ ಹಂಚಿಕೊಂಡಿದ್ದಾರೆ. ‘ಕುದುರೆ ಇರೋವಾಗ ಫ್ಯಾನ್ಸಿ ಕಾರುಗಳ ಅವಶ್ಯಕತೆ ಏನಿದೆ’ ಎಂದು ಫೋಟೋಗೆ ಕ್ಯಾಪ್ಶನ್ ನೀಡಿದ್ದಾರೆ. ಈ ಫೋಟೋಗಳನ್ನು ಫ್ಯಾನ್ಸ್ ಇಷ್ಟಪಟ್ಟಿದ್ದಾರೆ.

View this post on Instagram

A post shared by Vinish (@vinish_darshan4)

ಈ ಮೊದಲು ದರ್ಶನ್ ಜೊತೆ ಕುದುರೆ ಓಡಿಸುತ್ತಿರುವ ಫೋಟೋನ ವಿನೀಶ್ ಅವರು ಹಂಚಿಕೊಂಡಿದ್ದರು. ಈ ಫೋಟೋಗೆ ಭರ್ಜರಿ ಲೈಕ್ಸ್ ಸಿಕ್ಕಿತ್ತು. ಈಗ ಅವರು ಗೆಳೆಯರ ಜೊತೆ ಕುದುರೆ ಓಡಿಸಿದ್ದಾರೆ. ವಿನೀಶ್ ಫೋಟೋನ ಜನರು ಸಖತ್ ಇಷ್ಟಪಟ್ಟಿದ್ದಾರೆ. ದರ್ಶನ್​ಗೆ ವಿನೀಶ್ ಮೇಲೆ ಎಲ್ಲಿಲ್ಲದ ಪ್ರೀತಿ. ದರ್ಶನ್ ಅವರು ‘ಕಾಟೇರ’ ಸಿನಿಮಾದಿಂದ ದೊಡ್ಡ ಗೆಲುವು ಪಡೆದಿದ್ದಾರೆ. ಈಗ ಅವರು ‘ಡೆವಿಲ್’ ಚಿತ್ರದ ಕೆಲಸಗಳಲ್ಲಿ ಬ್ಯುಸಿ ಇದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Follow Us
ಆ ಶಾಸಕರಿಂದಲೇ ಅಡ್ಡಮತದಾನ? ಸಿಟಿ ರವಿ ಏನಂದ್ರು ನೋಡಿ
ಆ ಶಾಸಕರಿಂದಲೇ ಅಡ್ಡಮತದಾನ? ಸಿಟಿ ರವಿ ಏನಂದ್ರು ನೋಡಿ
ಮರದ ಕೊಂಬೆ ಬಿದ್ದು ಖಾಸಗಿ ಬಸ್ ಜಖಂ; ಚಾಲಕ, ಕ್ಲೀನರ್ ಜಸ್ಟ್ ಮಿಸ್!
ಮರದ ಕೊಂಬೆ ಬಿದ್ದು ಖಾಸಗಿ ಬಸ್ ಜಖಂ; ಚಾಲಕ, ಕ್ಲೀನರ್ ಜಸ್ಟ್ ಮಿಸ್!
ಕನ್ನಡ ಬಾವುಟಕ್ಕೆ ಅಪಮಾನ: ನಮ್ಮ ಮೆಟ್ರೋ ಸಿಬ್ಬಂದಿ ವಿರುದ್ಧ ಆಕ್ರೋಶ
ಕನ್ನಡ ಬಾವುಟಕ್ಕೆ ಅಪಮಾನ: ನಮ್ಮ ಮೆಟ್ರೋ ಸಿಬ್ಬಂದಿ ವಿರುದ್ಧ ಆಕ್ರೋಶ
ಕೊಳ್ಳೇಗಾಲದಲ್ಲಿ ಪ್ರಿಂಟಿಂಗ್ ಪ್ರೆಸ್‌ಗೆ ನುಗ್ಗಿದ ಬೃಹತ್ ಗಾತ್ರದ ಉಡ
ಕೊಳ್ಳೇಗಾಲದಲ್ಲಿ ಪ್ರಿಂಟಿಂಗ್ ಪ್ರೆಸ್‌ಗೆ ನುಗ್ಗಿದ ಬೃಹತ್ ಗಾತ್ರದ ಉಡ
ಇಂದು ಈ ರಾಶಿಯವರಿಗೆ ಧನಯೋಗ!
ಇಂದು ಈ ರಾಶಿಯವರಿಗೆ ಧನಯೋಗ!
ಕರ್ನಾಟಕದ ಐವರು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ
ಕರ್ನಾಟಕದ ಐವರು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ
ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ
‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ