AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕುದುರೆ ಓಡಿಸೋದ್ರಲ್ಲಿ ತಂದೆಯನ್ನೂ ಮೀರಿಸ್ತಾರೆ ವಿನೀಶ್ ದರ್ಶನ್; ಇಲ್ಲಿದೆ ವಿಡಿಯೋ

ವಿನೀಶ್ ಕೂಡ ಸೋಶಿಯಲ್ ಮೀಡಿಯಾದಲ್ಲಿ ಕುದುರೆ ಮೇಲಿರೋ ಫೋಟೋ ಹಂಚಿಕೊಂಡಿದ್ದಾರೆ. ‘ಕುದುರೆ ಇರೋವಾಗ ಫ್ಯಾನ್ಸಿ ಕಾರುಗಳ ಅವಶ್ಯಕತೆ ಏನಿದೆ’ ಎಂದು ಫೋಟೋಗೆ ಕ್ಯಾಪ್ಶನ್ ನೀಡಿದ್ದಾರೆ. ಈ ಫೋಟೋಗಳನ್ನು ಫ್ಯಾನ್ಸ್ ಇಷ್ಟಪಟ್ಟಿದ್ದಾರೆ.

ಕುದುರೆ ಓಡಿಸೋದ್ರಲ್ಲಿ ತಂದೆಯನ್ನೂ ಮೀರಿಸ್ತಾರೆ ವಿನೀಶ್ ದರ್ಶನ್; ಇಲ್ಲಿದೆ ವಿಡಿಯೋ
ವಿನೀಶ್
ರಾಜೇಶ್ ದುಗ್ಗುಮನೆ
|

Updated on: Apr 01, 2024 | 8:46 AM

Share

ನಟ ದರ್ಶನ್ ಅವರಿಗೆ ಪ್ರಾಣಿಗಳನ್ನು ಕಂಡರೆ ಸಖತ್ ಪ್ರೀತಿ. ಅವರು ಮೈಸೂರಿನಲ್ಲಿ ಫಾರ್ಮ್​ಹೌಸ್ ಹೊಂದಿದ್ದಾರೆ. ಅಲ್ಲಿ ಸಾಕಷ್ಟು ಪ್ರಾಣಿಗಳನ್ನು ಸಾಕಿದ್ದಾರೆ. ಕುದುರೆ ಓಡಿಸೋದು ಅಂದರೆ ದರ್ಶನ್ (Darshan) ಅವರಿಗೆ ಸಖತ್ ಇಷ್ಟ. ಅವರ ಮಗ ವಿನೀಶ್ ಕೂಡ ಇದಕ್ಕೆ ಹೊರತಾಗಿಲ್ಲ. ಅವರಿಗೆ ಕುದುರೆ ಮೇಲೆ ಸಖತ್ ಪ್ರೀತಿ ಇದೆ. ವಿನೀಶ್ ಕೂಡ ಸಖತ್ ಆಗಿ ಕುದುರೆ ಓಡಿಸುತ್ತಾರೆ. ಈ ವಿಚಾರದಲ್ಲಿ ವಿನೀಶ್ ತಂದೆಯನ್ನು ಮೀರಿಸುತ್ತಾರೆ. ಈಗ ವೈರಲ್ ಆಗಿರೋ ವಿಡಿಯೋನೆ ಇದಕ್ಕೆ ಸಾಕ್ಷಿ.

ವಿನೀಶ್​ಗೆ ಈಗಿನ್ನೂ 15 ತುಂಬಿಲ್ಲ. ಅವರು ತಂದೆ ದರ್ಶನ್ ರೀತಿಯೇ ಕುದುರೆ ಓಡಿಸೋದ್ರಲ್ಲಿ ಎಕ್ಸ್​ಪರ್ಟ್. ಇತ್ತೀಚೆಗೆ ವಿನೀಶ್ ದುಬೈ ತೆರಳಿದ್ದರು. ಅಲ್ಲಿ ಕುದುರೆ ಓಡಿಸಿದ್ದಾರೆ. ನುರಿತ ಸವಾರನಂತೆ ವಿನೀಶ್ ವೇಗವಾಗಿ ಕುದುರೆ ಓಡಿಸಿದ್ದಾರೆ. ಈ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ಸಖತ್ ವೈರಲ್ ಆಗಿದೆ. ಇದಕ್ಕೆ ಫ್ಯಾನ್ಸ್ ಕಡೆಯಿಂದ ಭರ್ಜರಿ ಲೈಕ್ಸ್ ಸಿಕ್ಕಿದೆ.

ಇದನ್ನೂ ಓದಿ: ‘ಏಪ್ರಿಲ್ 3ಕ್ಕೆ ನಿರ್ಧಾರ ತಿಳಿಸುವೆ, ಅಂದು ದರ್ಶನ್ ನನ್ನ ಜೊತೆ ಇರ್ತಾರೆ’; ಸುಮಲತಾ

ವಿನೀಶ್ ಕೂಡ ಸೋಶಿಯಲ್ ಮೀಡಿಯಾದಲ್ಲಿ ಕುದುರೆ ಮೇಲಿರೋ ಫೋಟೋ ಹಂಚಿಕೊಂಡಿದ್ದಾರೆ. ‘ಕುದುರೆ ಇರೋವಾಗ ಫ್ಯಾನ್ಸಿ ಕಾರುಗಳ ಅವಶ್ಯಕತೆ ಏನಿದೆ’ ಎಂದು ಫೋಟೋಗೆ ಕ್ಯಾಪ್ಶನ್ ನೀಡಿದ್ದಾರೆ. ಈ ಫೋಟೋಗಳನ್ನು ಫ್ಯಾನ್ಸ್ ಇಷ್ಟಪಟ್ಟಿದ್ದಾರೆ.

View this post on Instagram

A post shared by Vinish (@vinish_darshan4)

ಈ ಮೊದಲು ದರ್ಶನ್ ಜೊತೆ ಕುದುರೆ ಓಡಿಸುತ್ತಿರುವ ಫೋಟೋನ ವಿನೀಶ್ ಅವರು ಹಂಚಿಕೊಂಡಿದ್ದರು. ಈ ಫೋಟೋಗೆ ಭರ್ಜರಿ ಲೈಕ್ಸ್ ಸಿಕ್ಕಿತ್ತು. ಈಗ ಅವರು ಗೆಳೆಯರ ಜೊತೆ ಕುದುರೆ ಓಡಿಸಿದ್ದಾರೆ. ವಿನೀಶ್ ಫೋಟೋನ ಜನರು ಸಖತ್ ಇಷ್ಟಪಟ್ಟಿದ್ದಾರೆ. ದರ್ಶನ್​ಗೆ ವಿನೀಶ್ ಮೇಲೆ ಎಲ್ಲಿಲ್ಲದ ಪ್ರೀತಿ. ದರ್ಶನ್ ಅವರು ‘ಕಾಟೇರ’ ಸಿನಿಮಾದಿಂದ ದೊಡ್ಡ ಗೆಲುವು ಪಡೆದಿದ್ದಾರೆ. ಈಗ ಅವರು ‘ಡೆವಿಲ್’ ಚಿತ್ರದ ಕೆಲಸಗಳಲ್ಲಿ ಬ್ಯುಸಿ ಇದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Follow Us
Rajesh Duggumane
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ