Darshan Thoogudeepa: ಬಳ್ಳಾರಿ ಜೈಲು ಸೇರಿದ ದರ್ಶನ್​ಗೆ ಹೊಸ ಕೈದಿ ಸಂಖ್ಯೆ

Darshan Thoogudeepa: ನಟ ದರ್ಶನ್​ ಪರಪ್ಪನ ಅಗ್ರಹಾರ ಜೈಲು ಸೇರಿದ್ದಾರೆ 6106 ಅನ್ನು ಆರೋಪಿ ಸಂಖ್ಯೆಯಾಗಿ ನೀಡಿದ್ದರು. ಆ ಸಂಖ್ಯೆಯನ್ನು ಅವರ ಅಭಿಮಾನಿಗಳು ಹಚ್ಚೆ ಹಾಕಿಸಿಕೊಂಡಿದ್ದರು. ಈಗ ಬಳ್ಳಾರಿ ಜೈಲಿಗೆ ಶಿಫ್ಟ್ ಆಗಿರುವ ದರ್ಶನ್​ಗೆ ಹೊಸ ಸಂಖ್ಯೆಯನ್ನು ನೀಡಲಾಗಿದೆ.

Darshan Thoogudeepa: ಬಳ್ಳಾರಿ ಜೈಲು ಸೇರಿದ ದರ್ಶನ್​ಗೆ ಹೊಸ ಕೈದಿ ಸಂಖ್ಯೆ
Follow us
|

Updated on: Aug 29, 2024 | 12:03 PM

ರೇಣುಕಾ ಸ್ವಾಮಿ ಕೊಲೆ ಆರೋಪಿ ದರ್ಶನ್​ ಇಂದು (ಆಗಸ್ಟ್ 29) ಬಳ್ಳಾರಿ ಜೈಲಿಗೆ ಸ್ಥಳಾಂತರ ಮಾಡಲಾಗಿದೆ. ಪರಪ್ಪನ ಅಗ್ರಹಾರ ಜೈಲಿನಲ್ಲಿ ದರ್ಶನ್​ಗೆ ವಿಶೇಷ ಆತಿಥ್ಯ ದೊರೆತ ಕಾರಣ ಹಾಗೂ ಜೈಲಿನ ಕೆಲ ನಿಯಮಗಳು ಸರಿಯಾಗಿ ಪಾಲಿಸದೇ ಇರುವ ಕಾರಣ ದರ್ಶನ್ ಸೇರಿದಂತೆ ರೇಣುಕಾ ಸ್ವಾಮಿ ಕೊಲೆ ಪ್ರಕರಣದ ಇತರೆ ಕೆಲವು ಆರೋಪಿಗಳನ್ನು ರಾಜ್ಯದ ಬೇರೆ ಬೇರೆ ಜೈಲುಗಳಿಗೆ ಸ್ಥಳಾಂತರ ಮಾಡಲಾಗಿದೆ. ಬಳ್ಳಾರಿ ಜೈಲು ಸೇರಿರುವ ನಟ ದರ್ಶನ್​ಗೆ ಈಗ ಹೊಸ ಕೈದಿ ಸಂಖ್ಯೆ ನೀಡಲಾಗಿದೆ.

ಪರಪ್ಪನ ಅಗ್ರಹಾರ ಜೈಲು ಸೇರಿದ್ದ ನಟ ದರ್ಶನ್​ಗೆ 6106 ಅನ್ನು ಆರೋಪಿ ಸಂಖ್ಯೆಯನ್ನಾಗಿ ನೀಡಲಾಗಿತ್ತು. ಆಗ ದರ್ಶನ್​ರ ಹಲವು ಅಭಿಮಾನಿಗಳು 6106 ಸಂಖ್ಯೆಯನ್ನು ಗಾಡಿಗಳ ಮೇಲೆ ಬರೆಸಿಕೊಂಡಿದ್ದರು. ಕೆಲವರಂತೂ ಅತಿರೇಕಕ್ಕೆ ಹೋಗಿ 6106 ಅನ್ನು ಹಚ್ಚೆಯಾಗಿ ಹಾಕಿಸಿಕೊಂಡರು. ಯಾರೋ ಒಬ್ಬರು, ಮಗುವಿಗೂ ಕೈದಿ ರೀತಿ ಬಟ್ಟೆ ತೊಡಿಸಿ, ಅದರ ಮೇಲೆ 6106 ಎಂದು ಬರೆದಿದ್ದರು. ಇದಕ್ಕೆ ಸಾಮಾಜಿಕ ಜಾಲತಾಣದಲ್ಲಿ ತೀವ್ರ ವಿರೋಧ ವ್ಯಕ್ತವಾಗಿತ್ತು. 6106 ಹೆಸರಿನ ಸಿನಿಮಾ ನೊಂದಣಿಗೆ ಅರ್ಜಿಗಳು ಬಂದಿದ್ದವು. ಆದರೆ ಈಗ ಬಳ್ಳಾರಿಯಲ್ಲಿ ದರ್ಶನ್​ಗೆ ಹೊಸ ಕೈದಿ ಸಂಖ್ಯೆ ನೀಡಲಾಗಿದೆ.

ಇದನ್ನೂ ಓದಿ:ಬ್ರ್ಯಾಂಡೆಡ್ ಬಟ್ಟೆ, ಕೂಲಿಂಗ್ ಗ್ಲಾಸ್ ಹಾಕಿ ಬಳ್ಳಾರಿ ಜೈಲಿಗೆ ದರ್ಶನ್ ಎಂಟ್ರಿ; ಆದರೆ..

ಬಳ್ಳಾರಿಯಲ್ಲಿ ನಟ ದರ್ಶನ್​ಗೆ 511 ಸಂಖ್ಯೆ ನೀಡಲಾಗಿದೆ. ಇದು ದರ್ಶನ್​ರ ಹೊಸ ಆರೋಪಿ ಸಂಖ್ಯೆ. ದರ್ಶನ್ ಈ ಹಿಂದೆ ಯಾವುದೇ ಸಿನಿಮಾದಲ್ಲಿ ಕೈದಿಯಾಗಿ ನಟಿಸಿದಾಗಲೂ ಕೈದಿ ಸಂಖ್ಯೆಯನ್ನು 171 ಅನ್ನು ಹಾಕಿಸಿಕೊಳ್ಳುವುದು ಅಭ್ಯಾಸವಾಗಿತ್ತು. ದರ್ಶನ್​ರ ಅದೃಷ್ಟ ಸಂಖ್ಯೆ ಒಂಬತ್ತು ಆಗಿದ್ದು, 171 ಅನ್ನು ಕೂಡಿದರೆ 9 ಸಂಖ್ಯೆ ಬರುವ ಕಾರಣ ಅದೇ ಸಂಖ್ಯೆಯನ್ನು ದರ್ಶನ್ ತನ್ನ ಎಲ್ಲ ಸಿನಿಮಾಗಳಲ್ಲಿಯೂ ಬಳಸುತ್ತಿದ್ದರು. ಆದರೆ ಈಗ ಬಳ್ಳಾರಿ ಜೈಲಿನಲ್ಲಿ ಅವರಿಗೆ 511 ಸಂಖ್ಯೆ ನೀಡಲಾಗಿದೆ.

ಹೊಸ ಕೈದಿಗಳು ಯಾರೇ ಬಂದರು ಅವರಿಗೆ ಹೊಸ ಸಂಖ್ಯೆ ನೀಡುವುದು ಜೈಲಿನ ನಿಯಮ ಆಗಿರುವ ಕಾರಣ ಹಾಗೂ ಕ್ರಮ ಸಂಖ್ಯೆ ಆಧಾರದಲ್ಲಿ ಕೈದಿಗಳಿಗೆ ಸಂಖ್ಯೆ ನೀಡುವ ಕಾರಣ. ಇದೀಗ ದರ್ಶನ್​ಗೆ 511 ಸಂಖ್ಯೆಯನ್ನು ನೀಡಲಾಗಿದೆ. ಬೇರೆ ಬೇರೆ ಜೈಲುಗಳಿಗೆ ತೆರಳಿರುವ ಇದೇ ಪ್ರಕರಣದ ಬೇರೆ ಆರೋಪಿಗಳಿಗೂ ಸಹ ಹೊಸ ಕೈದಿ ಸಂಖ್ಯೆಗಳನ್ನು ನೀಡಲಾಗಿದೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಮನೆಯ ಬಾಗಿಲಿಗೆ ಸ್ಪಟಿಕ ಕಟ್ಟುವುದರ ಹಿಂದಿನ ಕಾರಣ ತಿಳಿಯಿರಿ
ಮನೆಯ ಬಾಗಿಲಿಗೆ ಸ್ಪಟಿಕ ಕಟ್ಟುವುದರ ಹಿಂದಿನ ಕಾರಣ ತಿಳಿಯಿರಿ
Nithya Bhavishya: ಭಾದ್ರಪದ ಮಾಸ ಮೂರನೇ ಶುಕ್ರವಾರದ ರಾಶಿಭವಿಷ್ಯ ತಿಳಿಯಿರಿ
Nithya Bhavishya: ಭಾದ್ರಪದ ಮಾಸ ಮೂರನೇ ಶುಕ್ರವಾರದ ರಾಶಿಭವಿಷ್ಯ ತಿಳಿಯಿರಿ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ