‘ದಿ ಡೆವಿಲ್’ ಸಿನಿಮಾ ರಿಲೀಸ್ ಹಿಂದಿನ ದಿನವೇ ಜೈಲಿನಲ್ಲಿ ದರ್ಶನ್​ಗೆ ಟಿವಿ ಭಾಗ್ಯ

ನ್ಯಾಯಾಲಯದ ಸೂಚನೆಯ ಮೇರೆಗೆ ದರ್ಶನ್​ಗೆ ಟಿವಿ ನೀಡಲಾಗಿದೆ. ಅವರ ಬ್ಯಾರಕ್​ನಲ್ಲಿ ಜೈಲಿನ ಸಿಬ್ಬಂದಿ ಟಿವಿ ಅಳವಡಿಸಿದ್ದಾರೆ. ಟಿವಿ ಜೊತೆಗೆ ಸಿಸಿಟಿವಿ ಸಹ ಅಳವಡಿಸಲಾಗಿದೆ. ಈ ಮೂಲಕ ದರ್ಶನ್ ಅವರ ಬ್ಯಾರಕ್ ಮೇಲೆ ಹೆಚ್ಚಿನ ನಿಗಾ ಇಡಲಾಗಿದೆ. ‘ದಿ ಡೆವಿಲ್’ ಸಿನಿಮಾದ ಬಿಡುಗಡೆಗೂ ಮುನ್ನ ಟಿವಿ ನೀಡಿರುವುದರಿಂದ ದರ್ಶನ್ ಅವರಿಗೆ ಜನರ ರೆಸ್ಪಾನ್ಸ್ ತಿಳಿಯಲಿದೆ.

‘ದಿ ಡೆವಿಲ್’ ಸಿನಿಮಾ ರಿಲೀಸ್ ಹಿಂದಿನ ದಿನವೇ ಜೈಲಿನಲ್ಲಿ ದರ್ಶನ್​ಗೆ ಟಿವಿ ಭಾಗ್ಯ
Darshan Thoogudeepa

Updated on: Dec 10, 2025 | 6:16 PM

ನಟ ದರ್ಶನ್ ಅಭಿನಯದ ‘ದಿ ಡೆವಿಲ್’ ಸಿನಿಮಾ (The Devil) ಡಿಸೆಂಬರ್ 11ರಂದು ಅದ್ದೂರಿಯಾಗಿ ಬಿಡುಗಡೆ ಆಗುತ್ತಿದೆ. ಬಿಡುಗಡೆಗೂ ಮುನ್ನವೇ ಈ ಸಿನಿಮಾ ಸದ್ದು ಮಾಡುತ್ತಿದೆ. ಆದರೆ ಈ ಸಂದರ್ಭದಲ್ಲಿ ದರ್ಶನ್ (Darshan) ಅವರು ಜೈಲಿನಲ್ಲಿ ಇದ್ದಾರೆ. ರೇಣುಕಾಸ್ವಾಮಿ ಕೊಲೆ ಪ್ರಕರಣದ ಪ್ರಮುಖ ಆರೋಪಿ ಆಗಿರುವ ಅವರು ಪರಪ್ಪನ ಅಗ್ರಹಾರ ಜೈಲಿನಲ್ಲಿ ದಿನ ಕಳೆಯುತ್ತಿದ್ದಾರೆ. ತಮ್ಮ ಸೆಲ್​​ನಲ್ಲಿ ಟಿವಿ ಅಳವಡಿಸಬೇಕು ಎಂದು ಅವರು ಮನವಿ ಮಾಡಿಕೊಂಡಿದ್ದರು. ಅದಕ್ಕೆ ಕೋರ್ಟ್ ಅನುಮತಿ ನೀಡಿತ್ತು. ‘ದಿ ಡೆವಿಲ್’ ಸಿನಿಮಾ ಬಿಡುಗಡೆ ಆಗುವುದಕ್ಕೂ ಒಂದು ದಿನ ಮುನ್ನ ದರ್ಶನ್ ಸೆಲ್​​ನಲ್ಲಿ ಟಿವಿ ಅಳವಡಿಸಲಾಗಿದೆ.

ಕೋರ್ಟ್ ಸೂಚನೆಯ ಮೇರೆಗೆ ಆರೋಪಿ ದರ್ಶನ್​ಗೆ ಟಿವಿ ಭಾಗ್ಯ ಸಿಕ್ಕಿದೆ. ದರ್ಶನ್ ಬ್ಯಾರಕ್​ನಲ್ಲಿ ಜೈಲು ಸಿಬ್ಬಂದಿ ಟಿವಿ ಅಳವಡಿಸಿದ್ದಾರೆ. ‘ದಿ ಡೆವಿಲ್’ ಸಿನಿಮಾ ಬಿಡುಗಡೆಯ ಹಿಂದಿನ ದಿನವೇ ಟಿವಿ ಭಾಗ್ಯ ಸಿಕ್ಕಿರುವುದರಿಂದ ತಮ್ಮ ಸಿನಿಮಾಗೆ ಜನರ ರೆಸ್ಪಾನ್ಸ್ ಹೇಗಿದೆ ಎಂಬುದನ್ನು ತಿಳಿಯಲು ಅವರಿಗೆ ಅನುಕೂಲ ಆಗಿದೆ. ಟಿವಿ ಜೊತೆಗೆ ಸಿಸಿಟಿವಿ ಕೂಡ ಅಳವಡಿಸಲಾಗಿದೆ.

ಸಿಸಿಟಿವಿ ಅಳವಡಿಸುವ ಮೂಲಕ ದರ್ಶನ್​​ ಬ್ಯಾರಕ್​ನಲ್ಲಿ ಚಟುವಟಿಕೆಗಳ ಮೇಲೆ ನಿಗಾ ಇಡಲಾಗಿದೆ. ಡಿಸೆಂಬರ್ 3ರಂದು ಟಿವಿ ಬೇಕೆಂದು ಆರೋಪಿ ಲಕ್ಷ್ಮಣ್ ಮನವಿ ಮಾಡಿದ್ದರು. ‘ಜೈಲಿನಲ್ಲಿ ನಮಗೆ ತಲೆಕೆಡ್ತಿದೆ, ಹಾಗಾಗಿ ಟಿವಿ ಅಳವಡಿಸಬೇಕು’ ಎಂದು ಮನವಿ ಮಾಡಿದ್ದರು. ಈಗ ಕೋರ್ಟ್ ಸೂಚನೆ ಮೇರೆಗೆ ಆರೋಪಿಗಳ ಸೆಲ್​​ನಲ್ಲಿ ಟಿವಿ ವ್ಯವಸ್ಥೆ ಕಲ್ಪಿಸಲಾಗಿದೆ.

ಒಂದು ವೇಳೆ ದರ್ಶನ್ ಹೊರಗಡೆ ಇದ್ದಿದ್ದರೆ ಅವರ ಪಾಲಿಗೆ ಡಿಸೆಂಬರ್ 11ರ ದಿನ ಮಹತ್ವದ್ದಾಗಿರುತ್ತಿತ್ತು. ಎಲ್ಲ ಚಿತ್ರಮಂದಿರಗಳ ಎದುರು ದರ್ಶನ್ ಅವರ ಕಟೌಟ್ ನಿಲ್ಲಿಸಲಾಗಿದೆ. ಅಭಿಮಾನಿಗಳು ‘ದಿ ಡೆವಿಲ್’ ಸಿನಿಮಾದ ಬಿಡುಗಡೆಯನ್ನು ಸಂಭ್ರಮಿಸುತ್ತಿದ್ದಾರೆ. ದರ್ಶನ್ ಜೈಲಿನಲ್ಲಿ ಇರುವ ಕಾರಣದಿಂದ ಅಭಿಮಾನಿಗಳೇ ಮುಂದೆ ನಿಂತು ಸಿನಿಮಾದ ಪ್ರಚಾರ ಮಾಡುತ್ತಿದ್ದಾರೆ.

ಇದನ್ನೂ ಓದಿ: ಪಿವಿಆರ್ ಐನಾಕ್ಸ್​​ನಲ್ಲಿ ‘ದಿ ಡೆವಿಲ್’ ಸಿನಿಮಾ ಬುಕಿಂಗ್ ಶುರುವಾಗಲು ವಿಳಂಬ ಯಾಕೆ?

ಪ್ರಕಾಶ್ ವೀರ್ ಅವರು ‘ದಿ ಡೆವಿಲ್’ ಸಿನಿಮಾಗೆ ನಿರ್ದೇಶನ ಮಾಡಿದ್ದಾರೆ. ರಚನಾ ರೈ ಅವರು ನಾಯಕಿಯಾಗಿ ನಟಿಸಿದ್ದಾರೆ. ಶರ್ಮಿಳಾ ಮಾಂಡ್ರೆ, ಮಹೇಶ್ ಮಂಜ್ರೇಕರ್, ಗಿಲ್ಲಿ ನಟ, ಅಚ್ಯುತ್ ಕುಮಾರ್ ಮುಂತಾದವರು ಈ ಸಿನಿಮಾದಲ್ಲಿ ಬಣ್ಣ ಹಚ್ಚಿದ್ದಾರೆ. ಹಾಡುಗಳು ಹಿಟ್ ಆಗಿವೆ. ಮೊದಲ ದಿನ ಈ ಸಿನಿಮಾ ಬಹುಕೋಟಿ ರೂಪಾಯಿ ಕಲೆಕ್ಷನ್ ಮಾಡಲಿದೆ.

ವರದಿ: ಪ್ರದೀಪ್ ಚಿಕ್ಕಾಟಿ, ಟಿವಿ9

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Madan Kumar

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More
Follow Us