AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದರ್ಶನ್​ಗೆ ಆ್ಯಕ್ಷನ್ ಕಟ್ ಹೇಳೋಕೆ ರೆಡಿ ಆದ ದಿನಕರ್; ಮತ್ತೆ ಒಂದಾದ ಹಿಟ್ ಕಾಂಬಿನೇಷನ್

ದಿನಕರ್ ತೂಗುದೀಪ ಮತ್ತು ದರ್ಶನ್ ಅವರ ಮುಂದಿನ ಸಿನಿಮಾ ಬಗ್ಗೆ ತೀವ್ರ ನಿರೀಕ್ಷೆ ಇದೆ. ದರ್ಶನ್ ಅವರ ಬೆನ್ನು ನೋವಿನಿಂದ ಚಿತ್ರದ ಚಿತ್ರೀಕರಣಕ್ಕೆ ತಡೆ ಉಂಟಾಗಿದೆ. ಈ ಮಧ್ಯೆ ದಿನಕರ್ ಅವರು ದರ್ಶನ್ ಜೊತೆ ಸಿನಿಮಾ ಮಾಡುವುದು ಖಚಿತ ಎಂದು ತಿಳಿಸಿದ್ದಾರೆ. ಅವರ ನಡುವಿನ ಜಗಳದ ವದಂತಿಗಳಿಗೆ ಸ್ಪಷ್ಟನೆ ನೀಡಿದ ದಿನಕರ್, ಅವರು ಒಳ್ಳೆಯ ಸಂಬಂಧ ಹೊಂದಿದ್ದಾರೆ ಎಂದಿದ್ದಾರೆ.

ದರ್ಶನ್​ಗೆ ಆ್ಯಕ್ಷನ್ ಕಟ್ ಹೇಳೋಕೆ ರೆಡಿ ಆದ ದಿನಕರ್; ಮತ್ತೆ ಒಂದಾದ ಹಿಟ್ ಕಾಂಬಿನೇಷನ್
ದರ್ಶನ್
ಮಾಲತೇಶ ಜಗ್ಗೀನ್
| Edited By: |

Updated on:Dec 28, 2024 | 11:42 AM

Share

ನಿರ್ದೇಶಕ ದಿನಕರ್ ತೂಗುದೀಪ ಅವರು ನಿರ್ದೇಶಕನಾಗಿ, ನಟನಾಗಿ, ನಿರ್ಮಾಪಕನಾಗಿ, ಬರಹಗಾರನಾಗಿ ಗುರುತಿಸಿಕೊಂಡಿದ್ದಾರೆ. ಇವರು ‘ನವಗ್ರಹ’ ಸಿನಿಮಾ ನಿರ್ದೇಶನ ಮಾಡಿ ಭರ್ಜರಿ ಯಶಸ್ಸು ಕಂಡರು. ಈ ಚಿತ್ರದಲ್ಲಿ ದರ್ಶನ್ ಅವರು ನೆಗೆಟಿವ್ ಪಾತ್ರ ಮಾಡಿದ್ದರು. ಆ ಬಳಿಕ ದರ್ಶನ್​ ನಟನೆಯ ‘ಸಾರಥಿ’ ಚಿತ್ರವನ್ನು ನಿರ್ದೇಶನ ಮಾಡಿದ್ದರು. ಈಗ ಈ ಹಿಟ್ ಕಾಂಬಿನೇಷನ್ ಮತ್ತೊಮ್ಮೆ ಒಂದಾಗೋಕೆ ರೆಡಿ ಆಗಿದೆ. ಈ ವಿಚಾರ ಕೇಳಿ ಫ್ಯಾನ್ಸ್ ಥ್ರಿಲ್ ಆಗಿದ್ದಾರೆ.

‘ರಾಯಲ್’ ಸಿನಿಮಾ ಹೆಸರಿನ ಚಿತ್ರವನ್ನು ದಿನಕರ್ ನಿರ್ದೇಶನ ಮಾಡಿದ್ದಾರೆ. ಈ ಚಿತ್ರದ ಸುದ್ದಿಗೋಷ್ಠಿ ನಡೆದಿದೆ. ಈ ವೇಳೆ ಅವರಿಗೆ ದರ್ಶನ್ ಕುರಿತು ಪ್ರಶ್ನೆ ಎದುರಾಗಿದೆ. ದಿನಕರ್ ಹಾಗೂ ದರ್ಶನ್ ಮಧ್ಯೆ ಯಾವುದೂ ಸರಿ ಇಲ್ಲ ಎನ್ನುವ ಮಾತಿದೆ. ಈ ಬಗ್ಗೆ ಮಾತನಾಡಿದ ಅವರು, ‘ಅಣ್ಣ ತಮ್ಮ ಬೇರೆ ಆಗಿದ್ದೀವಿ ಎಂದು ಯಾರು ಹೇಳಿದ್ದಾರೆ? ಗಂಡ ಹೆಂಡತಿ ಮಧ್ಯೆ ಹೇಗೆ ಜಗಳವೋ ಹಾಗೆ ಅಣ್ಣ ತಮ್ಮ ಎಂದಮೇಲೆ ಜಗಳ ಇದ್ದೇ ಇರುತ್ತದೆ’ ಎಂದಿದ್ದಾರೆ ಅವರು.

ಹಾಗಂತ ಇವರು ಯಾವಾಗಲೂ ಜಗಳ ಆಡುತ್ತಾನೇ ಇರೋದಿಲ್ಲ. ‘ನಾವು ಮಾತನಾಡುತ್ತಲೇ ಇರುತ್ತೇವೆ. ತಿಂಗಳಿಗೊಮ್ಮೆ ಆಗೊಮ್ಮೆ ಈಗೊಮ್ಮೆ ನಮ್ಮ ಮಧ್ಯೆ ಮಾತುಕತೆ ನಡೆಯುತ್ತಾ ಇರುತ್ತದೆ. ಅತ್ತಿಗೆ ವಿಜಯಲಕ್ಷ್ಮೀ ಜೊತೆ ಯಾವಾಗಲೂ ಕಾಂಟ್ಯಾಕ್ಟ್​ನಲ್ಲಿದ್ದೇನೆ. ಈ ಸಿನಿಮಾಗೆ ದರ್ಶನ್ ಸಾಥ್ ಕೊಡಬಹುದು. ಸದ್ಯ ಅವರಿಗೆ ಬೆನ್ನು ನೋವಿದೆ. ಇದರ ಟ್ರೀಟ್​ಮೆಂಟ್​ಗಾಗಿ ಮೈಸೂರಿಗೆ ಹೋಗಿದ್ದೇವೆ. ಅಜಯ್ ಹೆಗಡೆ ಎರಡು ಬಾರಿ ಟ್ರೀಟ್​ಮೆಂಟ್ ಮಾಡಿದ್ದಾರೆ. ಈ ಕಾರಣಕ್ಕೆ ಅಲ್ಲಿಯೇ ಟ್ರೀಟ್​ಮೆಂಟ್ ನಡೆಯುತ್ತಿದೆ’ ಎಂದು ದಿನಕರ್ ಮಾಹಿತಿ ನೀಡಿದ್ದಾರೆ

ಸಿನಿಮಾ ಮಾಡೋ ವಿಚಾರ

‘ದರ್ಶನ್​ಗೆ ನಾನು ಸಿನಿಮಾ ಮಾಡೋದು ಖಚಿತ. ನಿರ್ಮಾಪಕರ ಲಿಸ್ಟ್ ದರ್ಶನ್ ಕಡೆಗಿದೆ. ಅವರಿಗೆ ಸಿನಿಮಾ ಮಾಡಬೇಕು ಅಂದಾಗ ಕಥೆ ಕೇಳೋಲ್ಲ. ದರ್ಶನ್ ನನಗಿಂತ ಇಂಡಸ್ಟ್ರಿಯಲ್ಲಿ ಸೀನಿಯರ್’ ಎಂದು ಖುಷಿ ಹೊರಹಾಕಿದ್ದಾರೆ ದಿನಕರ್.

ಇದನ್ನೂ ಓದಿ: ನೋವಿನಲ್ಲೂ ಅಭಿಮಾನಿಗಳನ್ನು ನೋಡಿ ನಗುತ್ತಾ ಕೈ ಬೀಸಿದ ದರ್ಶನ್

‘ಡೆವಿಲ್’ ಶೂಟಿಂಗ್

ಸಂಕ್ರಾಂತಿ ಬಳಿಕ ದರ್ಶನ್ ನಟನೆಯ ‘ಡೆವಿಲ್’ ಶೂಟಿಂಗ್ ಆರಂಭ ಆಗಲಿದೆ ಎಂದು ಹೇಳಲಾಗುತ್ತಿದೆ. ಈ ವಿಚಾರ ಕೇಳಿ ಫ್ಯಾನ್ಸ್ ಖುಷಿಪಟ್ಟಿದ್ದಾರೆ. ದರ್ಶನ್ ಇನ್ನೂ ಬೆನ್ನು ನೋವಿನಿಂದ ಬಳಲುತ್ತಿದ್ದು, ಶೂಟಿಂಗ್ ಮತ್ತೆ ವಿಳಂಬ ಆಗುತ್ತದೆಉಏ ಎನ್ನುವ ಪ್ರಶ್ನೆ ಮೂಡಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 11:41 am, Sat, 28 December 24

Follow Us
ಆರ್​ಎಸ್​ಎಸ್​ನವರು ಪುಕ್ಕಲರು, ಧೈರ್ಯವೇ ಇಲ್ಲ ಎಂದ ಹರಿಪ್ರಸಾದ್!
ಆರ್​ಎಸ್​ಎಸ್​ನವರು ಪುಕ್ಕಲರು, ಧೈರ್ಯವೇ ಇಲ್ಲ ಎಂದ ಹರಿಪ್ರಸಾದ್!
ಇನ್ಮುಂದೆ ನನ್ನನ್ನು ಕೊನೆಯ ಭಾಷಣಕಾರನನ್ನಾಗಿ ಮಾಡಬೇಡಿ ಎಂದ ಸಿದ್ದರಾಮಯ್ಯ
ಇನ್ಮುಂದೆ ನನ್ನನ್ನು ಕೊನೆಯ ಭಾಷಣಕಾರನನ್ನಾಗಿ ಮಾಡಬೇಡಿ ಎಂದ ಸಿದ್ದರಾಮಯ್ಯ
ನೀಟ್ ಪರೀಕ್ಷೆಗೆ ಬಂದ ವಿದ್ಯಾರ್ಥಿಗಳ ಚೈನ್, ಮೂಗುತಿಗೆ ಕತ್ತರಿ
ನೀಟ್ ಪರೀಕ್ಷೆಗೆ ಬಂದ ವಿದ್ಯಾರ್ಥಿಗಳ ಚೈನ್, ಮೂಗುತಿಗೆ ಕತ್ತರಿ
ಅಖಂಡ ಶ್ರೀನಿವಾಸಮೂರ್ತಿ ಘರ್ ವಾಪ್ಸಿ: ಯಾವ ಕ್ಷೇತ್ರದ ಟಿಕೆಟ್ ಆಕಾಂಕ್ಷಿ?
ಅಖಂಡ ಶ್ರೀನಿವಾಸಮೂರ್ತಿ ಘರ್ ವಾಪ್ಸಿ: ಯಾವ ಕ್ಷೇತ್ರದ ಟಿಕೆಟ್ ಆಕಾಂಕ್ಷಿ?
ಹರಿಪ್ರಸಾದ್​​​ಗೆ ಖರ್ಗೆ ಕೊಟ್ಟ ಸಲಹೆಗಳೇನು?
ಹರಿಪ್ರಸಾದ್​​​ಗೆ ಖರ್ಗೆ ಕೊಟ್ಟ ಸಲಹೆಗಳೇನು?
ಗಿಲ್ಲಿ ನಟನ ಮೊದಲ ಸಿನಿಮಾಕ್ಕೆ ಕಾವೂನೇ ನಾಯಕಿ: ಗಿಲ್ಲಿ ಹೇಳಿದ್ದೇನು?
ಗಿಲ್ಲಿ ನಟನ ಮೊದಲ ಸಿನಿಮಾಕ್ಕೆ ಕಾವೂನೇ ನಾಯಕಿ: ಗಿಲ್ಲಿ ಹೇಳಿದ್ದೇನು?
ಕರ್ನಾಟಕ ಕಾಂಗ್ರೆಸ್ ಅಧ್ಯಕ್ಷರಾಗಿ ಬಿಕೆ ಹರಿಪ್ರಸಾದ್​​​ಗೆ ಪಟ್ಟಾಭಿಷೇಕ
ಕರ್ನಾಟಕ ಕಾಂಗ್ರೆಸ್ ಅಧ್ಯಕ್ಷರಾಗಿ ಬಿಕೆ ಹರಿಪ್ರಸಾದ್​​​ಗೆ ಪಟ್ಟಾಭಿಷೇಕ
ಈ ಜನ್ಮದಲ್ಲಿ ಚುನಾವಣೆಗೆ ನಿಲ್ಲಬಾರದು ಹಾಗೇ ಮಾಡ್ತೀವಿ:ಅಶೋಕ್
ಈ ಜನ್ಮದಲ್ಲಿ ಚುನಾವಣೆಗೆ ನಿಲ್ಲಬಾರದು ಹಾಗೇ ಮಾಡ್ತೀವಿ:ಅಶೋಕ್
ಹುಲಿಗೆಮ್ಮ ದೇವಾಲಯದ ಹುಂಡಿ ಎಣಿಕೆ: 1 ಕೋಟಿಗೂ ಅಧಿಕ ದೇಣಿಗೆ ಸಂಗ್ರಹ!
ಹುಲಿಗೆಮ್ಮ ದೇವಾಲಯದ ಹುಂಡಿ ಎಣಿಕೆ: 1 ಕೋಟಿಗೂ ಅಧಿಕ ದೇಣಿಗೆ ಸಂಗ್ರಹ!
ಪರಪ್ಪನ ಅಗ್ರಹಾರ ಜೈಲಿನಲ್ಲಿ ಯೋಗ ದಿನಾಚರಣೆ; ದರ್ಶನ್, ಪವಿತ್ರಾ ಗೌಡ ಭಾಗಿ
ಪರಪ್ಪನ ಅಗ್ರಹಾರ ಜೈಲಿನಲ್ಲಿ ಯೋಗ ದಿನಾಚರಣೆ; ದರ್ಶನ್, ಪವಿತ್ರಾ ಗೌಡ ಭಾಗಿ