AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸೋಷಿಯಲ್ ಮೀಡಿಯಾದಲ್ಲಿ ‘ದಚ್ಚು-ಕಿಚ್ಚ’ ಫ್ಯಾನ್ಸ್ ಡಿಚ್ಚಿ ಡಿಚ್ಚಿ

ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಮತ್ತು ಚಾಲೆಂಜಿಂಗ್ ಸ್ಟಾರ್ ನಟ ದರ್ಶನ್ ಇಬ್ಬರೂ ಒಂದು ಕಾಲದಲ್ಲಿ ಕುಚಿಕು ಗೆಳೆಯರು. ಆದ್ರೆ ಕಾರಣಾಂತರಗಳಿಂದ ಕೆಲ ವರ್ಷಗಳಿಂದ ಇಬ್ಬರ ನಡುವಿನ ಸ್ನೇಹ ಅಷ್ಟಕಷ್ಟೆ. ಇತ್ತೀಚೆಗೆ ಸುದೀಪ್ ಅಭಿನಯದ ಪೈಲ್ವಾನ್ ಚಿತ್ರ ಬಿಡುಗಡೆಯಾದ ದಿನವೇ ಪೈರಸಿಯಾಗಿತ್ತು. ಇದಕ್ಕೆ ಕಾರಣ ದರ್ಶನ್ ಅಭಿಮಾನಿಗಳು ಅಂತ ಸಾಮಾಜಿಕ ಜಾಲತಾಣಗಳಲ್ಲಿ ಕಿಚ್ಚನ ಫ್ಯಾನ್ಸ್​ ಮುಗಿಬಿದ್ದಿದ್ದರು. ಇದೀಗ ದರ್ಶನ್ ಅಭಿಮಾನಿಗಳು ಬಹಿರಂಗವಾಗಿ ಪತ್ರ ಬರೆದಿದ್ದಾರೆ. ಸುದೀಪ್ ಹೆಸರು ಬಳಸದೇ ಕೆಲ ಘಟನೆಗಳನ್ನ ಉಲ್ಲೇಖಿಸಿ ಪತ್ರ ಬರೆದಿರುವ ದರ್ಶನ್ […]

ಸೋಷಿಯಲ್ ಮೀಡಿಯಾದಲ್ಲಿ ‘ದಚ್ಚು-ಕಿಚ್ಚ’ ಫ್ಯಾನ್ಸ್ ಡಿಚ್ಚಿ ಡಿಚ್ಚಿ
ಸಾಧು ಶ್ರೀನಾಥ್​
|

Updated on:Sep 16, 2019 | 7:44 PM

Share

ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಮತ್ತು ಚಾಲೆಂಜಿಂಗ್ ಸ್ಟಾರ್ ನಟ ದರ್ಶನ್ ಇಬ್ಬರೂ ಒಂದು ಕಾಲದಲ್ಲಿ ಕುಚಿಕು ಗೆಳೆಯರು. ಆದ್ರೆ ಕಾರಣಾಂತರಗಳಿಂದ ಕೆಲ ವರ್ಷಗಳಿಂದ ಇಬ್ಬರ ನಡುವಿನ ಸ್ನೇಹ ಅಷ್ಟಕಷ್ಟೆ. ಇತ್ತೀಚೆಗೆ ಸುದೀಪ್ ಅಭಿನಯದ ಪೈಲ್ವಾನ್ ಚಿತ್ರ ಬಿಡುಗಡೆಯಾದ ದಿನವೇ ಪೈರಸಿಯಾಗಿತ್ತು. ಇದಕ್ಕೆ ಕಾರಣ ದರ್ಶನ್ ಅಭಿಮಾನಿಗಳು ಅಂತ ಸಾಮಾಜಿಕ ಜಾಲತಾಣಗಳಲ್ಲಿ ಕಿಚ್ಚನ ಫ್ಯಾನ್ಸ್​ ಮುಗಿಬಿದ್ದಿದ್ದರು. ಇದೀಗ ದರ್ಶನ್ ಅಭಿಮಾನಿಗಳು ಬಹಿರಂಗವಾಗಿ ಪತ್ರ ಬರೆದಿದ್ದಾರೆ.

ಸುದೀಪ್ ಹೆಸರು ಬಳಸದೇ ಕೆಲ ಘಟನೆಗಳನ್ನ ಉಲ್ಲೇಖಿಸಿ ಪತ್ರ ಬರೆದಿರುವ ದರ್ಶನ್ ಅಭಿಮಾನಿಗಳು, ದರ್ಶನ್ ಹೆಸರು ಬಳಸಿಕೊಂಡು ಬೆಳೆದಿದ್ದೀರಿ, ಈಗ ಪ್ರಚಾರಕ್ಕೂ ಡಿಬಾಸ್ ಹೆಸರು ಬೇಕೇ..? ಎಂದು ಪ್ರಶ್ನಿಸಿದ್ದಾರೆ. ದರ್ಶನ್ ಅಭಿನಯದ ಚಕ್ರವರ್ತಿ, ತಾರಕ್, ಯಜಮಾನ, ಕುರುಕ್ಷೇತ್ರ ಚಿತ್ರಗಳ ಅಪಪ್ರಚಾರ ಆದಾಗ ಫ್ಯಾನ್ಸ್ ಯಾರನ್ನೂ ದೂಷಿಸಲಿಲ್ಲ, ಅಭಿಮಾನಿಗಳನ್ನ ಯುದ್ಧಕ್ಕೆ ಎತ್ತಿ ಕಟ್ಟಲಿಲ್ಲ. ಫ್ಯಾನ್ ವಾರ್ ಪರಿಚಯಿಸಿದ್ದು ನೀವು, ನಿಮ್ಮ ಫ್ಯಾನ್ಸ್ ಎಂದು ಗರಂ ಆಗಿದ್ದಾರೆ.

ನಟ ಗಣೇಶ್​ ಅವರ ಮುಂಗಾರು ಮಳೆ ಬಗ್ಗೆ ಕೆಟ್ಟದಾಗಿ ಮಾತಾಡಿದ್ದೀರಿ. ರಾಜ್​ಕಪ್​ನಲ್ಲಿ ಜಗಳ, ನಟ ಯಶ್ ವಿರುದ್ಧ ಏಕವಚನ ಬಳಕೆ ಮಾಡಿ ಚಿತ್ರರಂಗವನ್ನು 2 ಭಾಗ ಮಾಡಿದ್ದೀರಿ. ನಿಮ್ಮ ಅಭಿಮಾನಿಗಳಿಂದಲೇ ದರ್ಶನ್​ಗೆ ಅವಾಚ್ಯ ಪದಗಳಿಂದ ನಿಂದನೆಯಾಗುತ್ತಿದೆ. ಇದಕ್ಕೆ ನಿಮ್ಮ ಪರೋಕ್ಷ ಬೆಂಬಲ ಇದೆಯೇ? ಎಂದು ಉಲ್ಲೇಖಿಸಿ ದರ್ಶನ್ ಅಭಿಮಾನಿಗಳು ಪತ್ರ ಬರೆದಿದ್ದಾರೆ.

Published On - 7:34 pm, Mon, 16 September 19

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಹಾಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಹಾಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ