AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅವಧಿ ಮೀರಿ ಪಾರ್ಟಿ ಮಾಡಿದ ಪ್ರಕರಣ: ನಟ ದರ್ಶನ್​ಗೆ ಸಿಕ್ತು ಬಿಗ್ ರಿಲೀಫ್

ಕೆಲ ತಿಂಗಳ ಹಿಂದೆ ದರ್ಶನ್ ಹಾಗೂ ತಂಡ ಜೆಟ್​ಲ್ಯಾಗ್​ನಲ್ಲಿ ಪಾರ್ಟಿ ಮಾಡಿದ ಆರೋಪ ಎದುರಾಗಿತ್ತು. ಈ ಪ್ರಕರಣ ದೊಡ್ಡ ಮಟ್ಟದಲ್ಲಿ ಸದ್ದು ಮಾಡಿತ್ತು. ಆ ಬಳಿಕ ಪೊಲೀಸರು ನೋಟಿಸ್ ಕೊಟ್ಟ ಹಿನ್ನೆಲೆಯಲ್ಲಿ ದರ್ಶನ್, ರಾಕ್​ಲೈನ್ ವೆಂಕಟೇಶ್, ಅಭಿಷೇಕ್ ಅಂಬರೀಷ್ ಮೊದಲಾದವರು ಪೊಲೀಸ್ ಠಾಣೆಗೆ ಬಂದು ಹೇಳಿಕೆ ನೀಡಿದ್ದರು.

ಅವಧಿ ಮೀರಿ ಪಾರ್ಟಿ ಮಾಡಿದ ಪ್ರಕರಣ: ನಟ ದರ್ಶನ್​ಗೆ ಸಿಕ್ತು ಬಿಗ್ ರಿಲೀಫ್
ದರ್ಶನ್
Shivaprasad B
| Edited By: |

Updated on: Apr 01, 2024 | 12:15 PM

Share

‘ಕಾಟೇರ’ ಸಿನಿಮಾ (Katera Movie) ಸೆಲೆಬ್ರಿಟಿ ಶೋ ಬಳಿಕ ನಟ ದರ್ಶನ್ ಹಾಗೂ ಅವರ ತಂಡ ಬೆಂಗಳೂರಿನ ರಾಜಾಜಿ ನಗರದಲ್ಲಿ ಇರುವ ಜೆಟ್​ಲ್ಯಾಗ್​ನಲ್ಲಿ ತಡರಾತ್ರಿವರೆಗೆ ಪಾರ್ಟಿ ಮಾಡಿದ ಆರೋಪ ಎದುರಾಗಿತ್ತು. ಈಗ ಈ ಪ್ರಕರಣದಲ್ಲಿ ದರ್ಶನ್ ಅವರಿಗೆ ಬಿಗ್ ರಿಲೀಫ್ ಸಿಕ್ಕಿದೆ. ಸುಬ್ರಹ್ಮಣ್ಯನಗರ ಪೊಲೀಸರು ಕೋರ್ಟ್​​ಗೆ ಚಾರ್ಜ್ ಶೀಟ್​​ ಸಲ್ಲಿಕೆ ಮಾಡಿದ್ದರು. ಇದರಲ್ಲಿ ಒಂದು ಪ್ರಮುಖ ಅಂಶ ಉಲ್ಲೇಖ ಮಾಡಿದ್ದಾರೆ. ಇದರಿಂದ ದರ್ಶನ್ ಹಾಗೂ ತಂಡ ನಿಟ್ಟುಸಿರು ಬಿಡುವಂತೆ ಆಗಿದೆ.

ಕೆಲ ತಿಂಗಳ ಹಿಂದೆ ದರ್ಶನ್ ಹಾಗೂ ತಂಡ ಜೆಟ್​ಲ್ಯಾಗ್​ನಲ್ಲಿ ಪಾರ್ಟಿ ಮಾಡಿದ ಆರೋಪ ಎದುರಾಗಿತ್ತು. ಈ ಪ್ರಕರಣ ದೊಡ್ಡ ಮಟ್ಟದಲ್ಲಿ ಸದ್ದು ಮಾಡಿತ್ತು. ಆ ಬಳಿಕ ಪೊಲೀಸರು ನೋಟಿಸ್ ಕೊಟ್ಟ ಹಿನ್ನೆಲೆಯಲ್ಲಿ ದರ್ಶನ್, ರಾಕ್​ಲೈನ್ ವೆಂಕಟೇಶ್, ಅಭಿಷೇಕ್ ಅಂಬರೀಷ್ ಮೊದಲಾದವರು ಪೊಲೀಸ್ ಠಾಣೆಗೆ ಬಂದು ಹೇಳಿಕೆ ನೀಡಿದ್ದರು. ಈ ಹೇಳಿಕೆಯಲ್ಲಿ ‘ಊಟ ಮಾಡಿದ್ದೇವೆ ಅಷ್ಟೆ, ಪಾರ್ಟಿ ಮಾಡಿಲ್ಲ’ ಎಂದಿದ್ದರು. ಈ ಹೇಳಿಕೆಯನ್ನು ಪೊಲೀಸರು ಪರಿಗಣನೆಗೆ ತೆಗೆದುಕೊಂಡಿದ್ದಾರೆ.

ಓವರ್ ನೈಟ್ ಪಾರ್ಟಿ ಆಗಿರಲಿಲ್ಲ. ಊಟದ ಪಾರ್ಟಿ ಎಂದು ಚಾರ್ಜ್​ಶೀಟ್​ನಲ್ಲಿ ಉಲ್ಲೇಖ ಆಗಿದೆ. ನಟ ದರ್ಶನ್, ರಾಕ್​ಲೈನ್ ಸೇರಿ ಹಲವರು ಪಾರ್ಟಿ‌ ಮಾಡಿದ್ದ ಆರೋಪ ಇತ್ತು. ಈಗ ಚಾರ್ಜ್​ಶೀಟ್​ನಲ್ಲಿ ಮಾಡಲಾದ ಉಲ್ಲೇಖದಿಂದ ಎಲ್ಲರೂ ನಿಟ್ಟುಸಿರು ಬಿಡುವಂತೆ ಆಗಿದೆ.

ಇದನ್ನೂ ಓದಿ: ಕುದುರೆ ಓಡಿಸೋದ್ರಲ್ಲಿ ತಂದೆಯನ್ನೂ ಮೀರಿಸ್ತಾರೆ ವಿನೀಶ್ ದರ್ಶನ್; ಇಲ್ಲಿದೆ ವಿಡಿಯೋ

ಎಂಟು ಜನರಿಗೆ ನೋಟಿಸ್

ಕೇಸ್​ ಸಂಬಂಧ ದರ್ಶನ್ ಸೇರಿ 8 ನಟರಿಗೆ ನೋಟಿಸ್ ನೀಡಲಾಗಿತ್ತು. ಪೊಲೀಸರು ನೋಟಿಸ್​ ಕೊಟ್ಟು ಎಂಟು ಜನರನ್ನು ವಿಚಾರಣೆ ಮಾಡಿದ್ದರು. ಸದ್ಯ 8 ನಟರನ್ನು ಸಾಕ್ಷಿಗಳಾಗಿ ಪರಿಗಣನೆ ಮಾಡಿ ಚಾರ್ಜ್​ಶೀಟ್ ಸಲ್ಲಿಕೆ ಆಗಿದೆ. ಸುಬ್ರಹ್ಮಣ್ಯನಗರ ಪೊಲೀಸರಿಂದ ACMM ಕೋರ್ಟ್​​ಗೆ ಚಾರ್ಜ್ ಶೀಟ್ ಸಲ್ಲಿಕೆ ಆಗಿದೆ. ಚಾರ್ಜ್​ಶೀಟ್​ನಲ್ಲಿ ದರ್ಶನ್ ಸೇರಿ ಎಲ್ಲರಿಗೂ ರಿಲೀಫ್ ಸಿಕ್ಕಂತೆ ಆಗಿದೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Follow Us
Shivaprasad B
Shivaprasad B
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ