AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅವಧಿ ಮೀರಿ ಪಾರ್ಟಿ ಮಾಡಿದ ಪ್ರಕರಣ: ನಟ ದರ್ಶನ್​ಗೆ ಸಿಕ್ತು ಬಿಗ್ ರಿಲೀಫ್

ಕೆಲ ತಿಂಗಳ ಹಿಂದೆ ದರ್ಶನ್ ಹಾಗೂ ತಂಡ ಜೆಟ್​ಲ್ಯಾಗ್​ನಲ್ಲಿ ಪಾರ್ಟಿ ಮಾಡಿದ ಆರೋಪ ಎದುರಾಗಿತ್ತು. ಈ ಪ್ರಕರಣ ದೊಡ್ಡ ಮಟ್ಟದಲ್ಲಿ ಸದ್ದು ಮಾಡಿತ್ತು. ಆ ಬಳಿಕ ಪೊಲೀಸರು ನೋಟಿಸ್ ಕೊಟ್ಟ ಹಿನ್ನೆಲೆಯಲ್ಲಿ ದರ್ಶನ್, ರಾಕ್​ಲೈನ್ ವೆಂಕಟೇಶ್, ಅಭಿಷೇಕ್ ಅಂಬರೀಷ್ ಮೊದಲಾದವರು ಪೊಲೀಸ್ ಠಾಣೆಗೆ ಬಂದು ಹೇಳಿಕೆ ನೀಡಿದ್ದರು.

ಅವಧಿ ಮೀರಿ ಪಾರ್ಟಿ ಮಾಡಿದ ಪ್ರಕರಣ: ನಟ ದರ್ಶನ್​ಗೆ ಸಿಕ್ತು ಬಿಗ್ ರಿಲೀಫ್
ದರ್ಶನ್
Shivaprasad B
| Edited By: |

Updated on: Apr 01, 2024 | 12:15 PM

Share

‘ಕಾಟೇರ’ ಸಿನಿಮಾ (Katera Movie) ಸೆಲೆಬ್ರಿಟಿ ಶೋ ಬಳಿಕ ನಟ ದರ್ಶನ್ ಹಾಗೂ ಅವರ ತಂಡ ಬೆಂಗಳೂರಿನ ರಾಜಾಜಿ ನಗರದಲ್ಲಿ ಇರುವ ಜೆಟ್​ಲ್ಯಾಗ್​ನಲ್ಲಿ ತಡರಾತ್ರಿವರೆಗೆ ಪಾರ್ಟಿ ಮಾಡಿದ ಆರೋಪ ಎದುರಾಗಿತ್ತು. ಈಗ ಈ ಪ್ರಕರಣದಲ್ಲಿ ದರ್ಶನ್ ಅವರಿಗೆ ಬಿಗ್ ರಿಲೀಫ್ ಸಿಕ್ಕಿದೆ. ಸುಬ್ರಹ್ಮಣ್ಯನಗರ ಪೊಲೀಸರು ಕೋರ್ಟ್​​ಗೆ ಚಾರ್ಜ್ ಶೀಟ್​​ ಸಲ್ಲಿಕೆ ಮಾಡಿದ್ದರು. ಇದರಲ್ಲಿ ಒಂದು ಪ್ರಮುಖ ಅಂಶ ಉಲ್ಲೇಖ ಮಾಡಿದ್ದಾರೆ. ಇದರಿಂದ ದರ್ಶನ್ ಹಾಗೂ ತಂಡ ನಿಟ್ಟುಸಿರು ಬಿಡುವಂತೆ ಆಗಿದೆ.

ಕೆಲ ತಿಂಗಳ ಹಿಂದೆ ದರ್ಶನ್ ಹಾಗೂ ತಂಡ ಜೆಟ್​ಲ್ಯಾಗ್​ನಲ್ಲಿ ಪಾರ್ಟಿ ಮಾಡಿದ ಆರೋಪ ಎದುರಾಗಿತ್ತು. ಈ ಪ್ರಕರಣ ದೊಡ್ಡ ಮಟ್ಟದಲ್ಲಿ ಸದ್ದು ಮಾಡಿತ್ತು. ಆ ಬಳಿಕ ಪೊಲೀಸರು ನೋಟಿಸ್ ಕೊಟ್ಟ ಹಿನ್ನೆಲೆಯಲ್ಲಿ ದರ್ಶನ್, ರಾಕ್​ಲೈನ್ ವೆಂಕಟೇಶ್, ಅಭಿಷೇಕ್ ಅಂಬರೀಷ್ ಮೊದಲಾದವರು ಪೊಲೀಸ್ ಠಾಣೆಗೆ ಬಂದು ಹೇಳಿಕೆ ನೀಡಿದ್ದರು. ಈ ಹೇಳಿಕೆಯಲ್ಲಿ ‘ಊಟ ಮಾಡಿದ್ದೇವೆ ಅಷ್ಟೆ, ಪಾರ್ಟಿ ಮಾಡಿಲ್ಲ’ ಎಂದಿದ್ದರು. ಈ ಹೇಳಿಕೆಯನ್ನು ಪೊಲೀಸರು ಪರಿಗಣನೆಗೆ ತೆಗೆದುಕೊಂಡಿದ್ದಾರೆ.

ಓವರ್ ನೈಟ್ ಪಾರ್ಟಿ ಆಗಿರಲಿಲ್ಲ. ಊಟದ ಪಾರ್ಟಿ ಎಂದು ಚಾರ್ಜ್​ಶೀಟ್​ನಲ್ಲಿ ಉಲ್ಲೇಖ ಆಗಿದೆ. ನಟ ದರ್ಶನ್, ರಾಕ್​ಲೈನ್ ಸೇರಿ ಹಲವರು ಪಾರ್ಟಿ‌ ಮಾಡಿದ್ದ ಆರೋಪ ಇತ್ತು. ಈಗ ಚಾರ್ಜ್​ಶೀಟ್​ನಲ್ಲಿ ಮಾಡಲಾದ ಉಲ್ಲೇಖದಿಂದ ಎಲ್ಲರೂ ನಿಟ್ಟುಸಿರು ಬಿಡುವಂತೆ ಆಗಿದೆ.

ಇದನ್ನೂ ಓದಿ: ಕುದುರೆ ಓಡಿಸೋದ್ರಲ್ಲಿ ತಂದೆಯನ್ನೂ ಮೀರಿಸ್ತಾರೆ ವಿನೀಶ್ ದರ್ಶನ್; ಇಲ್ಲಿದೆ ವಿಡಿಯೋ

ಎಂಟು ಜನರಿಗೆ ನೋಟಿಸ್

ಕೇಸ್​ ಸಂಬಂಧ ದರ್ಶನ್ ಸೇರಿ 8 ನಟರಿಗೆ ನೋಟಿಸ್ ನೀಡಲಾಗಿತ್ತು. ಪೊಲೀಸರು ನೋಟಿಸ್​ ಕೊಟ್ಟು ಎಂಟು ಜನರನ್ನು ವಿಚಾರಣೆ ಮಾಡಿದ್ದರು. ಸದ್ಯ 8 ನಟರನ್ನು ಸಾಕ್ಷಿಗಳಾಗಿ ಪರಿಗಣನೆ ಮಾಡಿ ಚಾರ್ಜ್​ಶೀಟ್ ಸಲ್ಲಿಕೆ ಆಗಿದೆ. ಸುಬ್ರಹ್ಮಣ್ಯನಗರ ಪೊಲೀಸರಿಂದ ACMM ಕೋರ್ಟ್​​ಗೆ ಚಾರ್ಜ್ ಶೀಟ್ ಸಲ್ಲಿಕೆ ಆಗಿದೆ. ಚಾರ್ಜ್​ಶೀಟ್​ನಲ್ಲಿ ದರ್ಶನ್ ಸೇರಿ ಎಲ್ಲರಿಗೂ ರಿಲೀಫ್ ಸಿಕ್ಕಂತೆ ಆಗಿದೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಹಾಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಹಾಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್