AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೋರ್ಟ್​​ನಲ್ಲಿ ಅಕ್ಕ-ಪಕ್ಕ ನಿಂತರೂ ಮಾತನಾಡದ ದರ್ಶನ್-ಪವಿತ್ರಾ

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್, ಪವಿತ್ರಾ ಗೌಡ ಸೇರಿದಂತೆ 17 ಮಂದಿ ಅರೆಸ್ಟ್ ಆಗಿದ್ದರು. ಇವರೆಲ್ಲರೂ ಈಗ ಜಾಮೀನಿನ ಮೇಲೆ ಹೊರಕ್ಕೆ ಬಂದಿದ್ದಾರೆ. ಈ ಪ್ರಕರಣದ 17 ಆರೋಪಿಗಳು ಇಂದು (ಫೆಬ್ರವರಿ 25) ಕೋರ್ಟ್ ಮುಂದೆ ಹಾಜರಾಗಿದ್ದಾರೆ. ಆದರೆ, ದರ್ಶನ್-ಪವಿತ್ರಾ ಮಾತನಾಡಿಲ್ಲ.

ಕೋರ್ಟ್​​ನಲ್ಲಿ ಅಕ್ಕ-ಪಕ್ಕ ನಿಂತರೂ ಮಾತನಾಡದ ದರ್ಶನ್-ಪವಿತ್ರಾ
ಪವಿತ್ರಾ-ದರ್ಶನ್
Ramesha M
| Edited By: |

Updated on:Feb 25, 2025 | 2:12 PM

Share

ಬೆಂಗಳೂರು, ಫೆ. 25: ದರ್ಶನ್ ಹಾಗೂ ಪವಿತ್ರಾ ಗೌಡ ಮಧ್ಯೆ ಈ ಮೊದಲು ಸಾಕಷ್ಟು ಆಪ್ತತೆ ಇತ್ತು. ಈ ಆಪ್ತತೆ ಈಗ ಮುರಿದು ಬಿದ್ದಿದೆ. ರೇಣುಕಾಸ್ವಾಮಿ ಕೊಲೆ ಕೇಸ್​​ನಲ್ಲಿ ದರ್ಶನ್ ಬಂಧನ ಆದ ಬಳಿಕ ಇಬ್ಬರ ಮಧ್ಯೆ ಇದ್ದ ಬಾಂಧವ್ಯದಲ್ಲಿ ಬಿರುಕು ಕಾಣಿಸಿಕೊಂಡಿದೆ. ಇಂದು (ಫೆಬ್ರವರಿ 25) ಕೋರ್ಟ್ ಎದುರು ದರ್ಶನ್ ಹಾಗೂ ಪವಿತ್ರಾ ಗೌಡ ಮುಖಾಮುಖಿ ಆದರು. ಆದರೆ, ಒಬ್ಬರಿಗೊಬ್ಬರು ಮಾತನಾಡಿಕೊಳ್ಳಲೇ ಇಲ್ಲ.

ರೇಣುಕಾಸ್ವಾಮಿ ಕೊಲೆ ಕೇಸ್​​ನಲ್ಲಿ 17ರ ಜನರ ಬಂಧನ ಆಗಿತ್ತು. ಇವರಿಗೆ ಹೈಕೋರ್ಟ್ ಜಾಮೀನು ನೀಡಿತ್ತು. ಷರತ್ತುಗಳ ಪ್ರಕಾರ ಪ್ರತಿ ತಿಂಗಳು ಕೋರ್ಟ್​ಗೆ ಹಾಜರಿ ಹಾಕಬೇಕಿತ್ತು. ಅಂತೆಯೇ, ಬೆಂಗಳೂರಿನ 57ನೇ ಸಿಸಿಹೆಚ್​ ಕೋರ್ಟ್​ನಲ್ಲಿ 17 ಆರೋಪಿಗಳ ವಿಚಾರಣೆ ನಡೆದಿದೆ. ಮೊದಲು ಜಡ್ಜ್​​ ಎಲ್ಲಾ ಆರೋಪಿಗಳ ಹೆಸರು ಕರೆದಿದ್ದಾರೆ.

ಆ ಬಳಿಕ ಕೋರ್ಟ್​ನಲ್ಲಿ ಆರೋಪಿ ದರ್ಶನ್​​, ಪವಿತ್ರಾಗೌಡ ಮುಖಾಮುಖಿ ಆಗಿದ್ದಾರೆ. ಕೋರ್ಟ್​ನಲ್ಲಿ ಮುಖಾಮುಖಿ ಆದರೂ ಇಬ್ಬರೂ ಮಾತನಾಡಿಲ್ಲ. ಕಳೆದ ಬಾರಿ ಕೋರ್ಟ್​ಗೆ ಬಂದಾಗ ದರ್ಶನ್ ಹಾಗೂ ಪವಿತ್ರಾ ಪರಸ್ಪರ ಸಂಭಾಷಣೆ ನಡೆಸಿಕೊಂಡಿದ್ದರು. ಈ ಬಾರಿ ಕೋರ್ಟ್​ನಲ್ಲಿ ಮಾತನಾಡಿಲ್ಲ. ಈ ವಿಚಾರ ಸಾಕಷ್ಟು ಕುತೂಹಲ ಮೂಡಿಸಿದೆ.

ಇದನ್ನೂ ಓದಿ: ದರ್ಶನ್ ಕಾಲಿಗೆ ಬಿದ್ದ ಅಭಿಮಾನಿ; ಡಿ ಬಾಸ್ ಪ್ರತಿಕ್ರಿಯೆ ಏನು?

ದರ್ಶನ್ ಪರ ವಕೀಲರ ಆರೋಪ

ಅಪ್ರೂವರ್ ಆಗುವಂತೆ ಇತರೆ ಆರೋಪಿಗಳಿಗೆ ಪೊಲೀಸರು ಒತ್ತಡ ಹೇರುತ್ತಿದ್ದಾರೆ ಎಂದು ದರ್ಶನ್ ಪರ ವಕೀಲ ಸುನೀಲ್ ಕೋರ್ಟ್​​ನಲ್ಲಿ ಆರೋಪಿಸಿದ್ದಾರೆ. ‘ಮಾಫಿ ಸಾಕ್ಷಿಯಾಗುವಂತೆ ಪೊಲೀಸರಿಂದ ಒತ್ತಡ ಬಂದಿದೆ’ ಎಂದು ಸುನೀಲ್ ಹೇಳಿದರು. ಇದಕ್ಕೆ ಉತ್ತರಿಸಿ ಜಡ್ಜ್ ಜೈಶಂಕರ್, ‘ಅಪ್ರೂವರ್ ಆಗಲು ಕೋರ್ಟ್ ಅನುಮತಿ ಬೇಕು. ಒತ್ತಡದಿಂದ ಮಾಫಿ ಸಾಕ್ಷಿಯಾಗಿ ಮಾಡಲಾಗದು. ನೀವು ಅರ್ಜಿ ಹಾಕಿದರೆ ಈ ಬಗ್ಗೆ ವಿಚಾರಣೆ ನಡೆಸಬಹುದು’ ಎಂದು ಜಡ್ಜ್​ ಉತ್ತರಿಸಿದರು. ಸದ್ಯ ಪ್ರಕರಣದ ವಿಚಾರಣೆ ಏಪ್ರಿಲ್8 ಕ್ಕೆ ಮುಂದೂಡಿಕೆ ಆಗಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 12:04 pm, Tue, 25 February 25

ಬೆಳ್ಳಂಬೆಳಗ್ಗೆ ಭ್ರಷ್ಟರಿಗೆ ಬಿಸಿಮುಟ್ಟಿಸಿದ ಲೋಕಾಯುಕ್ತ: ಹಲವೆಡೆ ದಾಳಿ
ಬೆಳ್ಳಂಬೆಳಗ್ಗೆ ಭ್ರಷ್ಟರಿಗೆ ಬಿಸಿಮುಟ್ಟಿಸಿದ ಲೋಕಾಯುಕ್ತ: ಹಲವೆಡೆ ದಾಳಿ
2 ವರ್ಷ ಹೋಟೆಲ್ ರೂಮ್ ಕೊಟ್ಟಿದ್ದಕ್ಕೆ 3 ಅಡಿಯಷ್ಟು ಕಸ ತುಂಬಿ ಹೋದ ಅತಿಥಿ
2 ವರ್ಷ ಹೋಟೆಲ್ ರೂಮ್ ಕೊಟ್ಟಿದ್ದಕ್ಕೆ 3 ಅಡಿಯಷ್ಟು ಕಸ ತುಂಬಿ ಹೋದ ಅತಿಥಿ
ಉಸಿರಾಟ ಸಮಸ್ಯೆ ಎಂದು ಆಸ್ಪತ್ರೆಗೆ ಬಂದ ರೋಗಿಯ ಮೇಲೆ ವೈದ್ಯನಿಂದ ಹಲ್ಲೆ
ಉಸಿರಾಟ ಸಮಸ್ಯೆ ಎಂದು ಆಸ್ಪತ್ರೆಗೆ ಬಂದ ರೋಗಿಯ ಮೇಲೆ ವೈದ್ಯನಿಂದ ಹಲ್ಲೆ
ರಸ್ತೆ ಅಡ್ಡಗಟ್ಟಿ ಬರ್ತ್‌ಡೇ ಆಚರಣೆ, ಪುಂಡರ ಹಾವಳಿ ವಿಡಿಯೋ ವೈರಲ್
ರಸ್ತೆ ಅಡ್ಡಗಟ್ಟಿ ಬರ್ತ್‌ಡೇ ಆಚರಣೆ, ಪುಂಡರ ಹಾವಳಿ ವಿಡಿಯೋ ವೈರಲ್
ರೈಲಿನ ಶೌಚಾಲಯದ ಪಕ್ಕ ಕುಳಿತು ಪ್ರಯಾಣಿಸಿದ ಕ್ರೀಡಾ ಪಟುಗಳು
ರೈಲಿನ ಶೌಚಾಲಯದ ಪಕ್ಕ ಕುಳಿತು ಪ್ರಯಾಣಿಸಿದ ಕ್ರೀಡಾ ಪಟುಗಳು
ಬೆಂಗಳೂರಲ್ಲಿ ನ್ಯೂ ಇಯರ್ ಸೆಲೆಬ್ರೇಟ್ ಮಾಡ್ತೀರಾ? ಈ ವಿಚಾರಗಳನ್ನು ತಿಳಿದಿರಿ
ಬೆಂಗಳೂರಲ್ಲಿ ನ್ಯೂ ಇಯರ್ ಸೆಲೆಬ್ರೇಟ್ ಮಾಡ್ತೀರಾ? ಈ ವಿಚಾರಗಳನ್ನು ತಿಳಿದಿರಿ
ತಿರುಮಲ ವೆಂಕಟೇಶ್ವರನ ದರ್ಶನಕ್ಕೂ ಮುನ್ನ ಭೂವರಾಹ ಸ್ವಾಮಿ ದರ್ಶನ ಕಡ್ಡಾಯ
ತಿರುಮಲ ವೆಂಕಟೇಶ್ವರನ ದರ್ಶನಕ್ಕೂ ಮುನ್ನ ಭೂವರಾಹ ಸ್ವಾಮಿ ದರ್ಶನ ಕಡ್ಡಾಯ
ಇಂದು ಈ ರಾಶಿಯವರ ವ್ಯವಹಾರಗಳಲ್ಲಿ ಯಶಸ್ಸು ಲಭಿಸಲಿದೆ
ಇಂದು ಈ ರಾಶಿಯವರ ವ್ಯವಹಾರಗಳಲ್ಲಿ ಯಶಸ್ಸು ಲಭಿಸಲಿದೆ
ರೀಲ್ಸ್ ತಂದ ಆಪತ್ತು: ಇನ್ಸ್ಟಾಗ್ರಾಮ್​​​ ಬಳಸುವವರು ಈ ವಿಡಿಯೋನ ಒಮ್ಮೆ ನೋಡಿ
ರೀಲ್ಸ್ ತಂದ ಆಪತ್ತು: ಇನ್ಸ್ಟಾಗ್ರಾಮ್​​​ ಬಳಸುವವರು ಈ ವಿಡಿಯೋನ ಒಮ್ಮೆ ನೋಡಿ
ಆಟೋ ಚಾಲಕನಿಗೆ ಬಿಜೆಪಿ ಶಾಸಕನಿಂದ ಕಪಾಳಮೋಕ್ಷ; ವೈರಲ್ ವಿಡಿಯೋಗೆ ಆಕ್ರೋಶ
ಆಟೋ ಚಾಲಕನಿಗೆ ಬಿಜೆಪಿ ಶಾಸಕನಿಂದ ಕಪಾಳಮೋಕ್ಷ; ವೈರಲ್ ವಿಡಿಯೋಗೆ ಆಕ್ರೋಶ