AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜೆಟ್​ ಲ್ಯಾಗ್ ಪಾರ್ಟಿ ಪ್ರಕರಣ; ಸೆಲೆಬ್ರಿಟಿಗಳ ಹೇಳಿಕೆಗೂ, ಪೊಲೀಸರು ಹಾಕಿರೋ ಕೇಸ್​ಗೂ ಬರುತ್ತಿಲ್ಲ ತಾಳೆ

ಅವಧಿಮೀರಿ ಪಾರ್ಟಿ ವೇಳೆ ಮದ್ಯ ಸೇವನೆ ಮಾಡಲಾಗಿತ್ತು ಎಂದು ಪೊಲೀಸರು ಎಫ್​ಐಆರ್​ನಲ್ಲಿ ದಾಖಲಿಸಿದ್ದರು. ಜೆಟ್ ಲ್ಯಾಗ್​ನಲ್ಲಿ ನಾವು ಊಟ ಮಾತ್ರ ಮಾಡಿದೆವು ಎಂದು ಸೆಲೆಬ್ರಿಟಿಗಳು ಹೇಳಿದ್ದಾರೆ.

ಜೆಟ್​ ಲ್ಯಾಗ್ ಪಾರ್ಟಿ ಪ್ರಕರಣ; ಸೆಲೆಬ್ರಿಟಿಗಳ ಹೇಳಿಕೆಗೂ, ಪೊಲೀಸರು ಹಾಕಿರೋ ಕೇಸ್​ಗೂ ಬರುತ್ತಿಲ್ಲ ತಾಳೆ
ದರ್ಶನ್
Jagadisha B
| Updated By: ರಾಜೇಶ್ ದುಗ್ಗುಮನೆ|

Updated on: Jan 13, 2024 | 8:59 AM

Share

‘ಕಾಟೇರ’ (Kaatera Movie) ಸೆಲೆಬ್ರಿಟಿ ಶೋ ಮುಗಿದ ಬಳಿಕೆ ದರ್ಶನ್, ರಾಕ್​ಲೈನ್ ವೆಂಕಟೇಶ್ ಸೇರಿ ಅನೇಕ ಸೆಲೆಬ್ರಿಟಿಗಳು ಬೆಂಗಳೂರಿನ ಜೆಟ್ ಲ್ಯಾಗ್​ನಲ್ಲಿ ಅವಧಿ ಮೀರಿ ಪಾರ್ಟಿ ಮಾಡಿದ್ದರು ಎನ್ನುವ ಪ್ರಕರಣ ಸಾಕಷ್ಟು ಚರ್ಚೆ ಆಗುತ್ತಿದೆ. ನೋಟಿಸ್ ಪಡೆದ ಎಲ್ಲಾ ಸೆಲೆಬ್ರಿಟಿಗಳು ಜನವರಿ 12ರಂದು ಬಂದು ವಿಚಾರಣೆ ಎದುರಿಸಿದ್ದಾರೆ. ಈ ಪ್ರಕರಣದಲ್ಲಿ ಯಾವುದು ಸತ್ಯ ಮತ್ತು ಯಾವುದು ಸುಳ್ಳು ಎನ್ನುವ ಪ್ರಶ್ನೆ ಮೂಡಿದೆ. ಸೆಲೆಬ್ರಿಟಿಗಳ ಹೇಳಿಕೆ ಬಳಿಕ ಸಾಕಷ್ಟು ಅನುಮಾನ ಶುರುವಾಗಿದೆ.

ಅವಧಿ ಮೀರಿ ಪಾರ್ಟಿ ಮಾಡಿದ ಹಿನ್ನಲೆಯಲ್ಲಿ ಎಫ್​ಐಆರ್ ದಾಖಲಾಗಿತ್ತು. ಆದರೆ, ಊಟಕ್ಕೆ ಮಾತ್ರ ಬಂದಿದ್ದಾಗಿ ಸೆಲೆಬ್ರಿಟಿಗಳ ಹೇಳಿಕೆ ನೀಡಿದ್ದಾರೆ. ಅವಧಿಮೀರಿ ಪಾರ್ಟಿ ವೇಳೆ ಮದ್ಯ ಸೇವನೆ ಮಾಡಲಾಗಿತ್ತು ಎಂದು ಎಫ್​ಐಆರ್​ನಲ್ಲಿ ದಾಖಲಿಸಿಕೊಳ್ಳಲಾಗಿದೆ. ಜೆಟ್ ಲ್ಯಾಗ್​ನಲ್ಲಿ ನಾವು ಊಟ ಮಾತ್ರ ಮಾಡಿದೆವು ಎಂದು ಸೆಲೆಬ್ರಿಟಿಗಳು ಹೇಳಿದ್ದಾರೆ. ಪಬ್​ನಲ್ಲಿ ಗ್ರಾಹಕರಿದ್ದರು, ಅವರಿಗೆ ಮದ್ಯ ಸರಬರಾಜು ಮಾಡಲಾಗುತಿತ್ತು ಎಂದು ಎಫ್​ಐಆರ್​ನಲ್ಲಿ ಉಲ್ಲೇಖ ಮಾಡಲಾಗಿದೆ. ಮಧ್ಯರಾತ್ರಿ ಜೆಟ್ ಲ್ಯಾಗ್​ನಲ್ಲಿ ಕೆಲಸದವರು ಸಹ ಇರಲಿಲ್ಲ ಎಂದು ಸೆಲೆಬ್ರಿಟಿಗಳು ಹೇಳಿಕೆ ನೀಡಿದ್ದಾರೆ.

ಇದನ್ನೂ ಓದಿ: ನಿಮಗೆ ತಾಕತ್ತಿದ್ದರೆ, ಧೈರ್ಯ ಇದ್ದರೆ..  ಪೊಲೀಸರಿಗೆ ಸವಾಲೆಸೆದ ದರ್ಶನ್ ಪರ ವಕೀಲ

ಮಧ್ಯರಾತ್ರಿ ತೆರಳಿ ಪಬ್ ಮುಚ್ಚುವಂತೆ ಹೇಳಿದ್ದಾಗಿ ಪೊಲೀಸರು ಈ ಮೊದಲು ತಿಳಿಸಿದ್ದರು. ನಾವು ಊಟ ಮುಗಿಸಿ ಹೊದರು ಯಾವ ಪೊಲೀಸರೂ ಬಂದಿಲ್ಲ ಎಂದು ರಾಕ್​ಲೈನ್ ಹೇಳಿಕೆ ನೀಡಿದ್ದಾರೆ. ಅಬಕಾರಿ ಕಾಯ್ದೆ, ಪೊಲೀಸ್ ಕಾಯ್ದೆ ಷರತ್ತು ಉಲ್ಲಂಘನೆ ಹಿನ್ನಲೆಯಲ್ಲಿ ದಾಳಿ ಮಾಡಿರುವುದಾಗಿ ಪೊಲೀಸರು ಉಲ್ಲೇಖ ಮಾಡಿದ್ದಾರೆ. ಆದರೆ ಪೊಲೀಸರೇ ಬಂದಿಲ್ಲ ಎಂದು ಸೆಲೆಬ್ರಿಟಿಗಳು ಹೇಳಿರೋದು ಸಾಕಷ್ಟು ಅನುಮಾನ ಹುಟ್ಟುಹಾಕಿದೆ. ಹೀಗಾಗಿ, ಯಾವುದು ಸತ್ಯ? ಯಾವುದು ಸುಳ್ಳು ಎನ್ನುವ ಪ್ರಶ್ನೆ ಮೂಡಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಪಬ್​ನ ಸಿಸಿಟಿವಿ ದೃಶ್ಯಗಳನ್ನು ಪರಿಶೀಲನೆ ಮಾಡಲಾಗುತ್ತಿದೆ.

ಈ ಪ್ರಕರಣದ ಹಿಂದೆ ಇರೋದು ಯಾರು ಎಂದು ರಾಕ್​ಲೈನ್ ವೆಂಕಟೇಶ್ ಮಾಧ್ಯಮಗಳ ಎದುರು ಹೇಳಿದ್ದಾರೆ. ಈ ಪ್ರಕರಣದಲ್ಲಿ ದರ್ಶನ್​ ಟಾರ್ಗೆಟ್ ಮಾಡುತ್ತಲಾಗುತ್ತಿದೆಯೇ ಎನ್ನುವ ಪ್ರಶ್ನೆ ಮೂಡಿದೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

ಜೋರ್ಡಾನ್ ಕಿಂಗ್ ಅಬ್ದುಲ್ಲಾ ಜೊತೆ ಪ್ರಧಾನಿ ಮೋದಿ ಮಾತುಕತೆ
ಜೋರ್ಡಾನ್ ಕಿಂಗ್ ಅಬ್ದುಲ್ಲಾ ಜೊತೆ ಪ್ರಧಾನಿ ಮೋದಿ ಮಾತುಕತೆ
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ