AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Darshan: ದರ್ಶನ್-ವಿಜಯಲಕ್ಷ್ಮಿ ವಿವಾಹ ಆಮಂತ್ರಣ ಪತ್ರ ಹೇಗಿತ್ತು ನೋಡಿ..

ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರಿಗೆ ಇಂದು ಜನ್ಮದಿನದ ಸಂಭ್ರಮ. ಈ ಸಂದರ್ಭದಲ್ಲಿ ಅವರ ಆಮಂತ್ರಣದ ಫೋಟೋ ವೈರಲ್ ಆಗಿದೆ. 19-05-2003ನೇ ರಂದು ಇವರ ಮದುವೆ ಧರ್ಮಸ್ಥಳದ ವಸಂತ್​ ಮಹಲ್​ನಲ್ಲಿ ನಡೆದಿತ್ತು. ವಿಜಯಲಕ್ಷ್ಮಿ ಕೆಮಿಕಲ್​ ಇಂಜಿನಿಯರ್ ಓದಿದ್ದಾರೆ​. ದರ್ಶನ್​-ವಿಜಯಲಕ್ಷ್ಮಿ ಪುತ್ರನ ಹೆಸರು ವಿನೀಶ್​.

Darshan: ದರ್ಶನ್-ವಿಜಯಲಕ್ಷ್ಮಿ ವಿವಾಹ ಆಮಂತ್ರಣ ಪತ್ರ ಹೇಗಿತ್ತು ನೋಡಿ..
ದರ್ಶನ್-ವಿಜಯಲಕ್ಷ್ಮಿ
ರಾಜೇಶ್ ದುಗ್ಗುಮನೆ
|

Updated on: Feb 16, 2024 | 7:46 AM

Share

ನಟ ದರ್ಶನ್ (Darshan Thoogudeepa) ಅವರಿಗೆ ಇಂದು (ಫೆಬ್ರವರಿ 16) ಜನ್ಮದಿನದ ಸಂಭ್ರಮ. ಫೆಬ್ರವರಿ 15ರ ಮಧ್ಯರಾತ್ರಿ ಅವರ ಮನೆಯ ಎದುರು ಸಂಭ್ರಮಾಚರಣೆ ಮುಗಿಲುಮುಟ್ಟಿತ್ತು. ಅವರ ಫ್ಯಾನ್ಸ್ ಆಗಮಿಸಿ ದರ್ಶನ್​ಗೆ ಶುಭಾಶಯ ಕೋರಿದ್ದಾರೆ. ಅಭಿಮಾನಿಗಳ ಜೊತೆ ಸಂಭ್ರಮದಿಂದ ಬರ್ತ್​ಡೇ ಆಚರಣೆ ಮಾಡಿಕೊಂಡಿದ್ದಾರೆ ದರ್ಶನ್. ಅವರ ಬರ್ತ್​ಡೇ ಸಂದರ್ಭದಲ್ಲಿ ದರ್ಶನ್ ಅವರ ಮದುವೆ ಆಮಂತ್ರಣ ಪತ್ರ ಸೋಶಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿದೆ. ಅವರ ಆಮಂತ್ರಣ ಪತ್ರ ಹೇಗಿತ್ತು ಎಂಬುದರ ಝಲಕ್ ಇಲ್ಲಿದೆ.

2003ರಲ್ಲಿ ಧರ್ಮಸ್ಥಳದಲ್ಲಿ ವಿಜಯಲಕ್ಷ್ಮಿ ಹಾಗೂ ದರ್ಶನ್ ಮದುವೆ ಆದರು. ವಿಜಯಲಕ್ಷ್ಮಿ ಕೆಮಿಕಲ್​ ಇಂಜಿನಿಯರ್ ಓದಿದ್ದಾರೆ​. ದರ್ಶನ್​-ವಿಜಯಲಕ್ಷ್ಮಿ ಪುತ್ರನ ಹೆಸರು ವಿನೀಶ್​. ದರ್ಶನ್​-ವಿಜಯಲಕ್ಷ್ಮಿ ದಾಂಪತ್ಯಕ್ಕೆ 20 ವರ್ಷಗಳು ಕಳೆದಿವೆ. ಈ ಪಯಣದಲ್ಲಿ ಈ ದಂಪತಿ ಸಾಕಷ್ಟು ಏಳು ಬೀಳುಗಳನ್ನು ಕಂಡಿದ್ದಾರೆ.

ವಿವಾಹ ಆಮಂತ್ರಣ ಪತ್ರದಲ್ಲೇನಿದೆ?

19-05-2003ನೇ ಸೋಮವಾರ ಬೆಳಿಗ್ಗೆ 9:10ರಿಂದ 9:50ರವರೆಗಿನ ಮಿಥುನ ಲಗ್ನದಲ್ಲಿ ನಾವು ವಿವಾಹವಾಗುತ್ತಿದ್ದೇವೆ. ಧರ್ಮಸ್ಥಳದ ವಸಂತ್​ ಮಹಲ್​ನಲ್ಲಿ ಮದುವೆ ನಡೆಯಲಿದೆ. ಎಲ್ಲರೂ ಮದುವೆಗೆ ಆಗಮಿಸಬೇಕು ಎಂದು ಆಮಂತ್ರಣ ಕೋರುತ್ತಿದ್ದೇನೆ ಎಂಬುದಾಗಿ ಆಮಂತ್ರಣ ಪತ್ರದಲ್ಲಿ ಇದೆ.

ಇದನ್ನೂ ಓದಿ: ದರ್ಶನ್​ಗೆ ಹಸು ಸಾಕುವ ಹವ್ಯಾಸ ಬಂದಿದ್ದು ಹೇಗೆ? ಎಲ್ಲವನ್ನೂ ಹೇಳಿಕೊಂಡಿದ್ದ ಚಾಲೆಂಜಿಂಗ್ ಸ್ಟಾರ್

ಗಮನ ಸೆಳೆದ ‘ಡೆವಿಲ್’ ಲುಕ್

ದರ್ಶನ್ ಅವರ ‘ಡೆವಿಲ್’ ಲುಕ್ ಸಾಕಷ್ಟು ಗಮನ ಸೆಳೆದಿದೆ. ದರ್ಶನ್ ಅವರ ಹೊಸ ಅವತಾರ ನೋಡಿ ಎಲ್ಲರೂ ಮೆಚ್ಚಿಕೊಂಡಿದ್ದಾರೆ. ಕ್ಲೀನ್ ಶೇವ್​ನಲ್ಲಿ ಅವರು ಪ್ರೇಕ್ಷಕರ ಎದುರು ಬಂದಿದ್ದಾರೆ. ಈ ಸಿನಿಮಾದ ಮೊದಲ ಗ್ಲಿಂಪ್ಸ್ ನೋಡಿದ ಎಲ್ಲರಿಗೂ ಸಿನಿಮಾ ಸೂಪರ್ ಹಿಟ್ ಆಗುವ ಮುನ್ಸೂಚನೆ ಸಿಕ್ಕಿದೆ. ಈ ಚಿತ್ರದ ಟೀಸರ್ ಲಕ್ಷಾಂತರ ಬಾರಿ ವೀಕ್ಷಣೆ ಕಂಡಿದೆ. ಮಧ್ಯರಾತ್ರಿ ಈ ಟೀಸರ್ ರಿಲೀಸ್ ಆಗಿದೆ.

‘ಕಾಟೇರ’ ಯಶಸ್ಸು

ಕಳೆದ ವರ್ಷ ಡಿಸೆಂಬರ್ ಅಂತ್ಯಕ್ಕೆ ರಿಲೀಸ್ ಆದ ‘ಕಾಟೇರ’ ದೊಡ್ಡ ಗೆಲುವು ಕಂಡಿದೆ. ಈ ಸಿನಿಮಾ ಬಾಕ್ಸ್ ಆಫೀಸ್​ನಲ್ಲಿ 200 ಕೋಟಿ ರೂಪಾಯಿ ಗಳಿಕೆ ಮಾಡಿದೆ. ಈ ಚಿತ್ರ ಒಟಿಟಿಯಲ್ಲಿ ರಿಲೀಸ್ ಆಗಿ ಭರ್ಜರಿ ವೀಕ್ಷಣೆ ಕಾಣುತ್ತಿದೆ. ಈ ಸಿನಿಮಾದ ಯಶಸ್ಸು ದರ್ಶನ್​ ಬರ್ತ್​ಡೇ ಖುಷಿಯನ್ನು ಹೆಚ್ಚಿಸಿದೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Follow Us
Rajesh Duggumane
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
ಕಾಂಗ್ರೆಸ್ ನಾಯಕರಿಂದ ಐ ಆ್ಯಮ್ ಕೊಕ್ರೋಚ್ ಟೀ ಶರ್ಟ್ ಬಿಡುಗಡೆ
ಕಾಂಗ್ರೆಸ್ ನಾಯಕರಿಂದ ಐ ಆ್ಯಮ್ ಕೊಕ್ರೋಚ್ ಟೀ ಶರ್ಟ್ ಬಿಡುಗಡೆ
ಹೊಸ ಶಾಪಿಂಗ್ ಸಂಕೀರ್ಣಕ್ಕಾಗಿ ನೂರಾರು ಮರಗಳ ಮಾರಣಹೋಮ
ಹೊಸ ಶಾಪಿಂಗ್ ಸಂಕೀರ್ಣಕ್ಕಾಗಿ ನೂರಾರು ಮರಗಳ ಮಾರಣಹೋಮ
ನೀಟ್ ಹಗರಣದ ವಿರುದ್ಧ ಬೀದಿಗಿಳಿದ ಸಾವಿರಾರು ಹಸ್ತ ಪಡೆ
ನೀಟ್ ಹಗರಣದ ವಿರುದ್ಧ ಬೀದಿಗಿಳಿದ ಸಾವಿರಾರು ಹಸ್ತ ಪಡೆ
ಭಕ್ತರು ಮತ್ತು ಭಗವಂತನ ನಡುವೆ ವ್ಯವಹಾರದ ಸ್ಥಳ ದೇವಾಲಯ: ಡಿಕೆಶಿ
ಭಕ್ತರು ಮತ್ತು ಭಗವಂತನ ನಡುವೆ ವ್ಯವಹಾರದ ಸ್ಥಳ ದೇವಾಲಯ: ಡಿಕೆಶಿ
ರಾತ್ರಿ ಹೊತ್ತು ಮನೆಯಲ್ಲಿರಲಾಗದೆ ಗೋಳು ತೋಡಿಕೊಂಡ ನಿವಾಸಿಗಳು
ರಾತ್ರಿ ಹೊತ್ತು ಮನೆಯಲ್ಲಿರಲಾಗದೆ ಗೋಳು ತೋಡಿಕೊಂಡ ನಿವಾಸಿಗಳು
ನಟಿ ಶ್ರುತಿ ಪ್ರಕಾಶ್‌ಗೆ ಡೈಮಂಡ್ ಉಂಗುರ ತೊಡಿಸಿ ಪ್ರಪೋಸ್ ಮಾಡಿದ ಕರಣ್
ನಟಿ ಶ್ರುತಿ ಪ್ರಕಾಶ್‌ಗೆ ಡೈಮಂಡ್ ಉಂಗುರ ತೊಡಿಸಿ ಪ್ರಪೋಸ್ ಮಾಡಿದ ಕರಣ್
ಕಾಣೆಯಾದ ಹುಡುಗಿಯನ್ನು ಹುಡುಕಲು ಗಾಡಿಯಲ್ಲಿ ಡೀಸೆಲ್ ಇಲ್ಲ ಎಂದ ಪೊಲೀಸ್
ಕಾಣೆಯಾದ ಹುಡುಗಿಯನ್ನು ಹುಡುಕಲು ಗಾಡಿಯಲ್ಲಿ ಡೀಸೆಲ್ ಇಲ್ಲ ಎಂದ ಪೊಲೀಸ್
ಕೈದಿಗಳಿಗೆ ಅಲೋಕ್ ಕುಮಾರ್ ಬಿಗ್ ಶಾಕ್: ಜೈಲುಗಳಲ್ಲಿ ಭಾರಿ ಬದಲಾವಣೆ
ಕೈದಿಗಳಿಗೆ ಅಲೋಕ್ ಕುಮಾರ್ ಬಿಗ್ ಶಾಕ್: ಜೈಲುಗಳಲ್ಲಿ ಭಾರಿ ಬದಲಾವಣೆ
3 ದಿನಗಳಿಂದ ವಿದ್ಯುತ್​​ ಕಡಿತ: ಹೆಸ್ಕಾಂ ವಿರುದ್ಧ ಸಾರ್ವಜನಿಕರ ಪ್ರತಿಭಟನೆ
3 ದಿನಗಳಿಂದ ವಿದ್ಯುತ್​​ ಕಡಿತ: ಹೆಸ್ಕಾಂ ವಿರುದ್ಧ ಸಾರ್ವಜನಿಕರ ಪ್ರತಿಭಟನೆ
ಹಿರಿಯೂರು ಉಪಚುನಾವಣೆ ಮೇಲೆ ಜೆಡಿಎಸ್​​ ಕಣ್ಣು: ದಳಪತಿಗಳ ಲೆಕ್ಕಾಚಾರವೇನು?
ಹಿರಿಯೂರು ಉಪಚುನಾವಣೆ ಮೇಲೆ ಜೆಡಿಎಸ್​​ ಕಣ್ಣು: ದಳಪತಿಗಳ ಲೆಕ್ಕಾಚಾರವೇನು?