AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದರ್ಶನ್​ಗೆ ಮಿತಿಮೀರಿದ ಬೆನ್ನು ನೋವು; ನಿಲ್ಲೋಕೂ ಆಗ್ತಿಲ್ಲ, ಕೂರೋಕು ಆಗ್ತಿಲ್ಲ

ಕೋರ್ಟ್​ನಲ್ಲಿ ದರ್ಶನ್ ಪರ ವಕೀಲರು ವಾದ ಮಂಡನೆ ಮಾಡುತ್ತಿದ್ದಾರೆ. ಎಲ್ಲಾ ಸಾಕ್ಷಿಗಳನ್ನು ಸೃಷ್ಟಿ ಮಾಡಲಾಗಿದೆ ಎನ್ನುವ ಆರೋಪವನ್ನು ಮಾಡುತ್ತಿದ್ದಾರೆ. ಕಲೆ ಹಾಕಿರುವ ಸಾಕ್ಷಿಗಳನ್ನು ಸೃಷ್ಟಿ ಮಾಡಲಾಗಿದೆ ಈ ಮೂಲಕ ದರ್ಶನ್​ನ ಸಿಕ್ಕಿಸುವ ಪ್ರಯತ್ನ ನಡೆದಿದೆ ಎಂದು ಅವರು ಆರೋಪ ಮಾಡಿದ್ದಾರೆ.

ದರ್ಶನ್​ಗೆ ಮಿತಿಮೀರಿದ ಬೆನ್ನು ನೋವು; ನಿಲ್ಲೋಕೂ ಆಗ್ತಿಲ್ಲ, ಕೂರೋಕು ಆಗ್ತಿಲ್ಲ
Darshan
ವಿನಾಯಕ ಬಡಿಗೇರ್​
| Edited By: |

Updated on: Oct 05, 2024 | 11:19 AM

Share

ಕೊಲೆ ಕೇಸ್​ನಲ್ಲಿ ಬಳ್ಳಾರಿ ಸೆಂಟ್ರಲ್​ ಜೈಲು ಪಾಲಾಗಿರುವ ದರ್ಶನ್ ಅವರಿಗೆ ಸಂಕಷ್ಟ ಹೆಚ್ಚಿದೆ. ಒಂದು ಕಡೆ ಅವರು ಜಾಮೀನಿಗಾಗಿ ಪರದಾಡುತ್ತಿದ್ದಾರೆ. ಮತ್ತೊಂದು ಕಡೆ ಬೆನ್ನುನೋವಿನ ಸಮಸ್ಯೆಯಿಂದ ರಾತ್ರಿ ನಿದ್ದೆ ಮಾಡದೆ ಒದ್ದಾಡಿದ್ದಾರೆ. ಅವರಿಗೆ ಕುಳಿತುಕೊಳ್ಳಲು ಹಾಗೂ ನಿಲ್ಲಲು ಆಗದ ಸ್ಥಿತಿ ಬಂದಿದೆ. ಪೇನ್‌ಕ್ಯೂಲರ್ ಟ್ಯಾಬ್ಲೆಟ್ ನುಂಗಿದರೂ ನೋವು ಕಡಿಮೆಯಾಗುತ್ತಿಲ್ಲ. ಮುಂದೇನು ಎನ್ನುವ ಪ್ರಶ್ನೆ ಅವರನ್ನು ಕಾಡಿದೆ.

ಬೆನ್ನು ನೋವಿಗೆ ದರ್ಶನ್ ಸರ್ಜರಿಗೆ ಒಳಗಾಗಲೇ ಬೇಕಿದೆ. ಸರ್ಜರಿ ಮಾಡಿಸದಿದ್ದರೆ ಕಷ್ಟ ಎಂದು ವೈದ್ಯರು ಹೇಳುತ್ತಿದ್ದಾರೆ. ಆದರೆ, ದರ್ಶನ್ ಬಳ್ಳಾರಿಯಲ್ಲಿ ಸರ್ಜರಿಗೆ ರೆಡಿ ಇಲ್ಲ. ಬೆಂಗಳೂರಿನಲ್ಲಿಯೇ ಚಿಕಿತ್ಸೆ ಪಡೆಯುತ್ತೇನೆ ಎಂದು ಹಠ ಹಿಡಿದ್ದಾರೆ. ಇಂದು ವೈದ್ಯರು ಮತ್ತೆ ದರ್ಶನ್​ ಆರೋಗ್ಯ ತಪಾಸಣೆ ಮಾಡಲಿದ್ದಾರೆ.

ಸದ್ಯ ಬೆನ್ನು ನೋವಿಗೆ ಸ್ಕ್ಯಾನಿಂಗ್ ಹಾಗೂ ಸರ್ಜರಿ ಮಾಡಿಸಲು ಎ2 ದರ್ಶನ್ ನಿರಾಕರಿಸಿದ್ದಾರೆ. ದರ್ಶನ್ ಹೇಳಿಕೆಯನ್ನು ಜೈಲಧಿಕಾರಿಗಳು ರೆಕಾರ್ಡ್ ಮಾಡಿದ್ದಾರೆ. ಏನಾದರೂ ಹೆಚ್ಚು ಕಡಿಮೆ ಆದರೆ ತಮ್ಮ ಮೇಲೆ ಬರಬಾರದು ಎನ್ನುವ ಕಾರಣಕ್ಕೆ ಜೈಲು ಅಧಿಕಾರಿಗಳ ಈ ರೀತಿ ಮಾಡಿದ್ದಾರೆ. ದರ್ಶನ್ ಒಪ್ಪಿದರೆ ವಿಮ್ಸ್​ ಆಸ್ಪತ್ರೆಯಲ್ಲಿ ಸ್ಕ್ಯಾನಿಂಗ್ ಮಾಡಿಸಲು ಸಿದ್ಧತೆ ನಡೆದಿದೆ.

ಕೋರ್ಟ್​ನಲ್ಲಿ ದರ್ಶನ್ ಪರ ವಕೀಲರು ವಾದ ಮಂಡನೆ ಮಾಡುತ್ತಿದ್ದಾರೆ. ಎಲ್ಲಾ ಸಾಕ್ಷಿಗಳನ್ನು ಸೃಷ್ಟಿ ಮಾಡಲಾಗಿದೆ ಎನ್ನುವ ಆರೋಪವನ್ನು ಮಾಡುತ್ತಿದ್ದಾರೆ. ಕಲೆ ಹಾಕಿರುವ ಸಾಕ್ಷಿಗಳನ್ನು ಸೃಷ್ಟಿ ಮಾಡಲಾಗಿದೆ ಈ ಮೂಲಕ ದರ್ಶನ್​ನ ಸಿಕ್ಕಿಸುವ ಪ್ರಯತ್ನ ನಡೆದಿದೆ ಎಂದು ಅವರು ಆರೋಪ ಮಾಡಿದ್ದಾರೆ.

ದರ್ಶನ್ ಅವರ ಆರೋಗ್ಯ ಸಮಸ್ಯೆ ದಿನಕಳೆದಂತೆ ಹೆಚ್ಚುತ್ತಿದೆ. ಇದನ್ನು ಅವರ ಪರ ವಕೀಲರು ಕೋರ್ಟ್​ ಮುಂದೆ ಇಡೋ ಸಾಧ್ಯತೆ ಇದೆ. ಇದನ್ನು ಆಧರಿಸಿ ಜಾಮೀನು ನೀಡುವಂತೆ ಅವರು ಬೇಡಿಕೆ ಇಡೋ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ.

ಇದನ್ನೂ ಓದಿ: ದರ್ಶನ್​ಗೆ ವಿಪರೀತ ಬೆನ್ನು ನೋವು; ತಪಾಸಣೆ ಮಾಡಲು ಬಳ್ಳಾರಿ ಜೈಲಿಗೆ ವೈದ್ಯರ ಎಂಟ್ರಿ

ದರ್ಶನ್ ಅವರು ಬೆಂಗಳೂರು ಜೈಲಿನಲ್ಲಿ ಹಾಯಾಗಿ ಇದ್ದರು. ಬೇಕಾದ ವ್ಯವಸ್ಥೆಗಳು ಸಿಗುತ್ತಿದ್ದವು. ಆದರೆ, ಬಳ್ಳಾರಿ ಜೈಲಿನಲ್ಲಿ ಅವರ ಪರಿಸ್ಥಿತಿ ಹದಗೆಟ್ಟಿದೆ. ಅವರು ಪ್ರತಿ ವಿಚಾರಕ್ಕೂ ಕೋರ್ಟ್ ಮೊರೆ ಹೋಗಬೇಕಾದ ಪರಿಸ್ಥಿತಿ ಬಂದಿದೆ. ಅವರು ಟಿವಿಗಾಗಿ ಬೇಡಿಕೆ ಇಟ್ಟಿದ್ದರು. ಹಲವು ದಿನಗಳ ಬಳಿಕ ಟಿವಿ ಸಿಕ್ಕಿತ್ತು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ವಿಭಜಕಕ್ಕೆ ಡಿಕ್ಕಿ ಹೊಡೆದು ಕಾರಿನ ಮೇಲೆ ಉರುಳಿದ ಲಾರಿ
ವಿಭಜಕಕ್ಕೆ ಡಿಕ್ಕಿ ಹೊಡೆದು ಕಾರಿನ ಮೇಲೆ ಉರುಳಿದ ಲಾರಿ
ಕತ್ರಿಗುಪ್ಪೆಯಲ್ಲಿ ಗ್ಯಾಂಗ್​ ವಾರ್, ಲಾಂಗು ಮಚ್ಚಿನ ಹೊಡೆತಕ್ಕೆ ಕಾರು ಪೀಸ್!
ಕತ್ರಿಗುಪ್ಪೆಯಲ್ಲಿ ಗ್ಯಾಂಗ್​ ವಾರ್, ಲಾಂಗು ಮಚ್ಚಿನ ಹೊಡೆತಕ್ಕೆ ಕಾರು ಪೀಸ್!
ಬಿಜೆಪಿ ಶಾಸಕ ಶರಣು ಸಲಗರ ವಿರುದ್ಧ ಎಫ್ಐಆರ್ ದಾಖಲು
ಬಿಜೆಪಿ ಶಾಸಕ ಶರಣು ಸಲಗರ ವಿರುದ್ಧ ಎಫ್ಐಆರ್ ದಾಖಲು
ಪೊಲೀಸರ ಕಣ್ಣಿಗೆ ಬಿದ್ದ ಚಿರತೆ, ಗ್ರಾಮಸ್ಥರಲ್ಲಿ ಆತಂಕ
ಪೊಲೀಸರ ಕಣ್ಣಿಗೆ ಬಿದ್ದ ಚಿರತೆ, ಗ್ರಾಮಸ್ಥರಲ್ಲಿ ಆತಂಕ
ಕರ್ನಾಟಕವನ್ನೇ ಬೆಚ್ಚಿ ಬೀಳಿಸಿದ ದರೋಡೆ ಪ್ರಕರಣಗಳ ಲಿಸ್ಟ್ ಇಲ್ಲಿದೆ ನೋಡಿ!
ಕರ್ನಾಟಕವನ್ನೇ ಬೆಚ್ಚಿ ಬೀಳಿಸಿದ ದರೋಡೆ ಪ್ರಕರಣಗಳ ಲಿಸ್ಟ್ ಇಲ್ಲಿದೆ ನೋಡಿ!
ಅಬ್ಬರಿಸಿದ ಸಾಲ್ಟ್ ಅ್ಯಂಡ್ ಪೆಪ್ಪರ್: ಪ್ಲೇಆಫ್​ಗೆ ನೈಟ್ ರೈಡರ್ಸ್​
ಅಬ್ಬರಿಸಿದ ಸಾಲ್ಟ್ ಅ್ಯಂಡ್ ಪೆಪ್ಪರ್: ಪ್ಲೇಆಫ್​ಗೆ ನೈಟ್ ರೈಡರ್ಸ್​
ಡಿಕೆಶಿ​ಗೆ 16 ಲಕ್ಷ ರೂ ಮೌಲ್ಯದ ಗಿಫ್ಟ್: ಅಂಥದ್ದೇನಿದೆ? ಇಲ್ಲಿದೆ ನೋಡಿ
ಡಿಕೆಶಿ​ಗೆ 16 ಲಕ್ಷ ರೂ ಮೌಲ್ಯದ ಗಿಫ್ಟ್: ಅಂಥದ್ದೇನಿದೆ? ಇಲ್ಲಿದೆ ನೋಡಿ
ಅಮೆರಿಕದಲ್ಲಿ ಎರಡು ಹೆಲಿಕಾಪ್ಟರ್​ಗಳ ನಡುವೆ ಡಿಕ್ಕಿ, ಪೈಲಟ್ ಸಾವು
ಅಮೆರಿಕದಲ್ಲಿ ಎರಡು ಹೆಲಿಕಾಪ್ಟರ್​ಗಳ ನಡುವೆ ಡಿಕ್ಕಿ, ಪೈಲಟ್ ಸಾವು
ಆಂಧ್ರಪ್ರದೇಶದಲ್ಲಿ 158 ಪ್ರಯಾಣಿಕರಿದ್ದ 2 ರೈಲು ಬೋಗಿಗಳಿಗೆ ಬೆಂಕಿ
ಆಂಧ್ರಪ್ರದೇಶದಲ್ಲಿ 158 ಪ್ರಯಾಣಿಕರಿದ್ದ 2 ರೈಲು ಬೋಗಿಗಳಿಗೆ ಬೆಂಕಿ
104 ಮೀಟರ್​ ಸಿಕ್ಸರ್​ನೊಂದಿಗೆ ಹೊಸ ಮೈಲುಗಲ್ಲು ದಾಟಿದ ಮ್ಯಾಕ್ಸ್​ವೆಲ್
104 ಮೀಟರ್​ ಸಿಕ್ಸರ್​ನೊಂದಿಗೆ ಹೊಸ ಮೈಲುಗಲ್ಲು ದಾಟಿದ ಮ್ಯಾಕ್ಸ್​ವೆಲ್