AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದರ್ಶನ್​ಗೆ ಮಿತಿಮೀರಿದ ಬೆನ್ನು ನೋವು; ನಿಲ್ಲೋಕೂ ಆಗ್ತಿಲ್ಲ, ಕೂರೋಕು ಆಗ್ತಿಲ್ಲ

ಕೋರ್ಟ್​ನಲ್ಲಿ ದರ್ಶನ್ ಪರ ವಕೀಲರು ವಾದ ಮಂಡನೆ ಮಾಡುತ್ತಿದ್ದಾರೆ. ಎಲ್ಲಾ ಸಾಕ್ಷಿಗಳನ್ನು ಸೃಷ್ಟಿ ಮಾಡಲಾಗಿದೆ ಎನ್ನುವ ಆರೋಪವನ್ನು ಮಾಡುತ್ತಿದ್ದಾರೆ. ಕಲೆ ಹಾಕಿರುವ ಸಾಕ್ಷಿಗಳನ್ನು ಸೃಷ್ಟಿ ಮಾಡಲಾಗಿದೆ ಈ ಮೂಲಕ ದರ್ಶನ್​ನ ಸಿಕ್ಕಿಸುವ ಪ್ರಯತ್ನ ನಡೆದಿದೆ ಎಂದು ಅವರು ಆರೋಪ ಮಾಡಿದ್ದಾರೆ.

ದರ್ಶನ್​ಗೆ ಮಿತಿಮೀರಿದ ಬೆನ್ನು ನೋವು; ನಿಲ್ಲೋಕೂ ಆಗ್ತಿಲ್ಲ, ಕೂರೋಕು ಆಗ್ತಿಲ್ಲ
Darshan
ವಿನಾಯಕ ಬಡಿಗೇರ್​
| Edited By: |

Updated on: Oct 05, 2024 | 11:19 AM

Share

ಕೊಲೆ ಕೇಸ್​ನಲ್ಲಿ ಬಳ್ಳಾರಿ ಸೆಂಟ್ರಲ್​ ಜೈಲು ಪಾಲಾಗಿರುವ ದರ್ಶನ್ ಅವರಿಗೆ ಸಂಕಷ್ಟ ಹೆಚ್ಚಿದೆ. ಒಂದು ಕಡೆ ಅವರು ಜಾಮೀನಿಗಾಗಿ ಪರದಾಡುತ್ತಿದ್ದಾರೆ. ಮತ್ತೊಂದು ಕಡೆ ಬೆನ್ನುನೋವಿನ ಸಮಸ್ಯೆಯಿಂದ ರಾತ್ರಿ ನಿದ್ದೆ ಮಾಡದೆ ಒದ್ದಾಡಿದ್ದಾರೆ. ಅವರಿಗೆ ಕುಳಿತುಕೊಳ್ಳಲು ಹಾಗೂ ನಿಲ್ಲಲು ಆಗದ ಸ್ಥಿತಿ ಬಂದಿದೆ. ಪೇನ್‌ಕ್ಯೂಲರ್ ಟ್ಯಾಬ್ಲೆಟ್ ನುಂಗಿದರೂ ನೋವು ಕಡಿಮೆಯಾಗುತ್ತಿಲ್ಲ. ಮುಂದೇನು ಎನ್ನುವ ಪ್ರಶ್ನೆ ಅವರನ್ನು ಕಾಡಿದೆ.

ಬೆನ್ನು ನೋವಿಗೆ ದರ್ಶನ್ ಸರ್ಜರಿಗೆ ಒಳಗಾಗಲೇ ಬೇಕಿದೆ. ಸರ್ಜರಿ ಮಾಡಿಸದಿದ್ದರೆ ಕಷ್ಟ ಎಂದು ವೈದ್ಯರು ಹೇಳುತ್ತಿದ್ದಾರೆ. ಆದರೆ, ದರ್ಶನ್ ಬಳ್ಳಾರಿಯಲ್ಲಿ ಸರ್ಜರಿಗೆ ರೆಡಿ ಇಲ್ಲ. ಬೆಂಗಳೂರಿನಲ್ಲಿಯೇ ಚಿಕಿತ್ಸೆ ಪಡೆಯುತ್ತೇನೆ ಎಂದು ಹಠ ಹಿಡಿದ್ದಾರೆ. ಇಂದು ವೈದ್ಯರು ಮತ್ತೆ ದರ್ಶನ್​ ಆರೋಗ್ಯ ತಪಾಸಣೆ ಮಾಡಲಿದ್ದಾರೆ.

ಸದ್ಯ ಬೆನ್ನು ನೋವಿಗೆ ಸ್ಕ್ಯಾನಿಂಗ್ ಹಾಗೂ ಸರ್ಜರಿ ಮಾಡಿಸಲು ಎ2 ದರ್ಶನ್ ನಿರಾಕರಿಸಿದ್ದಾರೆ. ದರ್ಶನ್ ಹೇಳಿಕೆಯನ್ನು ಜೈಲಧಿಕಾರಿಗಳು ರೆಕಾರ್ಡ್ ಮಾಡಿದ್ದಾರೆ. ಏನಾದರೂ ಹೆಚ್ಚು ಕಡಿಮೆ ಆದರೆ ತಮ್ಮ ಮೇಲೆ ಬರಬಾರದು ಎನ್ನುವ ಕಾರಣಕ್ಕೆ ಜೈಲು ಅಧಿಕಾರಿಗಳ ಈ ರೀತಿ ಮಾಡಿದ್ದಾರೆ. ದರ್ಶನ್ ಒಪ್ಪಿದರೆ ವಿಮ್ಸ್​ ಆಸ್ಪತ್ರೆಯಲ್ಲಿ ಸ್ಕ್ಯಾನಿಂಗ್ ಮಾಡಿಸಲು ಸಿದ್ಧತೆ ನಡೆದಿದೆ.

ಕೋರ್ಟ್​ನಲ್ಲಿ ದರ್ಶನ್ ಪರ ವಕೀಲರು ವಾದ ಮಂಡನೆ ಮಾಡುತ್ತಿದ್ದಾರೆ. ಎಲ್ಲಾ ಸಾಕ್ಷಿಗಳನ್ನು ಸೃಷ್ಟಿ ಮಾಡಲಾಗಿದೆ ಎನ್ನುವ ಆರೋಪವನ್ನು ಮಾಡುತ್ತಿದ್ದಾರೆ. ಕಲೆ ಹಾಕಿರುವ ಸಾಕ್ಷಿಗಳನ್ನು ಸೃಷ್ಟಿ ಮಾಡಲಾಗಿದೆ ಈ ಮೂಲಕ ದರ್ಶನ್​ನ ಸಿಕ್ಕಿಸುವ ಪ್ರಯತ್ನ ನಡೆದಿದೆ ಎಂದು ಅವರು ಆರೋಪ ಮಾಡಿದ್ದಾರೆ.

ದರ್ಶನ್ ಅವರ ಆರೋಗ್ಯ ಸಮಸ್ಯೆ ದಿನಕಳೆದಂತೆ ಹೆಚ್ಚುತ್ತಿದೆ. ಇದನ್ನು ಅವರ ಪರ ವಕೀಲರು ಕೋರ್ಟ್​ ಮುಂದೆ ಇಡೋ ಸಾಧ್ಯತೆ ಇದೆ. ಇದನ್ನು ಆಧರಿಸಿ ಜಾಮೀನು ನೀಡುವಂತೆ ಅವರು ಬೇಡಿಕೆ ಇಡೋ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ.

ಇದನ್ನೂ ಓದಿ: ದರ್ಶನ್​ಗೆ ವಿಪರೀತ ಬೆನ್ನು ನೋವು; ತಪಾಸಣೆ ಮಾಡಲು ಬಳ್ಳಾರಿ ಜೈಲಿಗೆ ವೈದ್ಯರ ಎಂಟ್ರಿ

ದರ್ಶನ್ ಅವರು ಬೆಂಗಳೂರು ಜೈಲಿನಲ್ಲಿ ಹಾಯಾಗಿ ಇದ್ದರು. ಬೇಕಾದ ವ್ಯವಸ್ಥೆಗಳು ಸಿಗುತ್ತಿದ್ದವು. ಆದರೆ, ಬಳ್ಳಾರಿ ಜೈಲಿನಲ್ಲಿ ಅವರ ಪರಿಸ್ಥಿತಿ ಹದಗೆಟ್ಟಿದೆ. ಅವರು ಪ್ರತಿ ವಿಚಾರಕ್ಕೂ ಕೋರ್ಟ್ ಮೊರೆ ಹೋಗಬೇಕಾದ ಪರಿಸ್ಥಿತಿ ಬಂದಿದೆ. ಅವರು ಟಿವಿಗಾಗಿ ಬೇಡಿಕೆ ಇಟ್ಟಿದ್ದರು. ಹಲವು ದಿನಗಳ ಬಳಿಕ ಟಿವಿ ಸಿಕ್ಕಿತ್ತು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ಸುರ್ಜೇವಾಲ ಜೊತೆಗಿನ ಸಭೆ ಬಳಿಕ ಡಿಕೆ ಶಿವಕುಮಾರ್​ ಹೇಳಿದ್ದಿಷ್ಟು
ಸುರ್ಜೇವಾಲ ಜೊತೆಗಿನ ಸಭೆ ಬಳಿಕ ಡಿಕೆ ಶಿವಕುಮಾರ್​ ಹೇಳಿದ್ದಿಷ್ಟು
ಬಸ್​​ನೊಳಗಿಂದ ತಿಂಡಿಗಾಗಿ ದುಡ್ಡು ಕೊಟ್ಟ ಯುವಕನಿಗೆ ವ್ಯಾಪಾರಿ ಮಾಡಿದ್ದೇನು?
ಬಸ್​​ನೊಳಗಿಂದ ತಿಂಡಿಗಾಗಿ ದುಡ್ಡು ಕೊಟ್ಟ ಯುವಕನಿಗೆ ವ್ಯಾಪಾರಿ ಮಾಡಿದ್ದೇನು?
ಹಂಸಲೇಖ, ರವಿಚಂದ್ರನ್ ನಡುವೆ ಆ ಒಂದು ಹಾಡಿಗಾಗಿ ಮೂಡಿತ್ತು ಭಿನ್ನಾಭಿಪ್ರಾಯ
ಹಂಸಲೇಖ, ರವಿಚಂದ್ರನ್ ನಡುವೆ ಆ ಒಂದು ಹಾಡಿಗಾಗಿ ಮೂಡಿತ್ತು ಭಿನ್ನಾಭಿಪ್ರಾಯ
ಬೈಎಲೆಕ್ಷನ್: 2 ಕ್ಷೇತ್ರಗಳಲ್ಲಿ ಕಾಂಗ್ರೆಸ್​ ಜಯ ಸಾಧಿಸುತ್ತೆ ಎಂದ ಸುರ್ಜೇವಾ
ಬೈಎಲೆಕ್ಷನ್: 2 ಕ್ಷೇತ್ರಗಳಲ್ಲಿ ಕಾಂಗ್ರೆಸ್​ ಜಯ ಸಾಧಿಸುತ್ತೆ ಎಂದ ಸುರ್ಜೇವಾ
ತಂದೆಯಿಂದಲೇ ಹಸುಗೂಸಿನ ಕೊಲೆ: ಭೀಮರಾಯನ ಕ್ರೂರತೆ ಬಿಚ್ಚಿಟ್ಟ ಸಂಬಂಧಿಕರು
ತಂದೆಯಿಂದಲೇ ಹಸುಗೂಸಿನ ಕೊಲೆ: ಭೀಮರಾಯನ ಕ್ರೂರತೆ ಬಿಚ್ಚಿಟ್ಟ ಸಂಬಂಧಿಕರು
ರೌಡಿ ಶೀಟರ್ ಜೊತೆ ದೋಸ್ತಿ: ಡಾಗ್ ಸತೀಶ್​​ಗೆ ಸಂಕಷ್ಟ
ರೌಡಿ ಶೀಟರ್ ಜೊತೆ ದೋಸ್ತಿ: ಡಾಗ್ ಸತೀಶ್​​ಗೆ ಸಂಕಷ್ಟ
ಇರಾನ್-ಇಸ್ರೇಲ್ ಸಂಘರ್ಷ; ರಿಯಾದ್‌ನಲ್ಲಿ ಭಾರತೀಯ ಪ್ರಜೆ ಸಾವು
ಇರಾನ್-ಇಸ್ರೇಲ್ ಸಂಘರ್ಷ; ರಿಯಾದ್‌ನಲ್ಲಿ ಭಾರತೀಯ ಪ್ರಜೆ ಸಾವು
ಟೊಮೆಟೊ ಬೆಲೆ ಕುಸಿತ: ರೈತರಿಂದ ರಸ್ತೆಗೆ ಟೊಮೆಟೊ ಸುರಿದು ಆಕ್ರೋಶ
ಟೊಮೆಟೊ ಬೆಲೆ ಕುಸಿತ: ರೈತರಿಂದ ರಸ್ತೆಗೆ ಟೊಮೆಟೊ ಸುರಿದು ಆಕ್ರೋಶ
ಕಾರಿನಲ್ಲಿ ಬರುತ್ತಿದ್ದ ವ್ಯಕ್ತಿಯ ಮೇಲೆ ಏಕಾಏಕಿ ಗುಂಡಿನ ದಾಳಿ
ಕಾರಿನಲ್ಲಿ ಬರುತ್ತಿದ್ದ ವ್ಯಕ್ತಿಯ ಮೇಲೆ ಏಕಾಏಕಿ ಗುಂಡಿನ ದಾಳಿ
ಪ್ರಜ್ವಲ್ ವಿಡಿಯೋ ಕೇಸ್​​: ಚಾರ್ಜ್​​ಶೀಟ್​​ ವಿರುದ್ಧ ಜೆಡಿಎಸ್ ​​ಆಕ್ರೋಶ
ಪ್ರಜ್ವಲ್ ವಿಡಿಯೋ ಕೇಸ್​​: ಚಾರ್ಜ್​​ಶೀಟ್​​ ವಿರುದ್ಧ ಜೆಡಿಎಸ್ ​​ಆಕ್ರೋಶ