AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Breaking: ದರ್ಶನ್​ ಜಾಮೀನು ಅರ್ಜಿ: ನಾಳೆ ಆದೇಶ ಪ್ರಕಟ

ದರ್ಶನ್ ಜಾಮೀನು ಅರ್ಜಿಯ ವಿಚಾರಣೆ ಹೈಕೋರ್ಟ್​ನಲ್ಲಿ ನಡೆದಿದೆ. ದರ್ಶನ್​ರ ಆರೋಗ್ಯ ಸಮಸ್ಯೆಯನ್ನು ಮುಂದು ಮಾಡಿ ಜಾಮೀನು ಕೇಳಲಾಗಿದೆ. ದರ್ಶನ್​ಗೆ ಆರೋಗ್ಯ ಸಮಸ್ಯೆ ಇದ್ದು, ಅವರಿಗೆ ತುರ್ತಾಗಿ ಶಸ್ತ್ರಚಿಕಿತ್ಸೆಯ ಅವಶ್ಯಕತೆ ಇದೆ ಎಂದು ದರ್ಶನ್ ಪರ ವಕೀಲ ಸಿವಿ ನಾಗೇಶ್ ವಾದ ಮಂಡಿಸಿದ್ದಾರೆ. ಆದರೆ ಎಸ್​ಪಿಪಿ ಅವರು ದರ್ಶನ್​ ಜಾಮೀನು ಅರ್ಜಿಗೆ ಕೆಲ ತಕರಾರುಗಳನ್ನು ಎತ್ತಿದ್ದಾರೆ. ಇಬ್ಬರ ವಾದವನ್ನು ಆಲಿಸಿದ ಹೈಕೋರ್ಟ್ ನ್ಯಾಯಾಧೀಶರು ಆದೇಶವನ್ನು ಅಕ್ಟೋಬರ್ 30 ಕ್ಕೆ ಕಾಯ್ದಿರಿಸಲಾಗಿದೆ.

Breaking: ದರ್ಶನ್​ ಜಾಮೀನು ಅರ್ಜಿ: ನಾಳೆ ಆದೇಶ ಪ್ರಕಟ
ದರ್ಶನ್
ಮಂಜುನಾಥ ಸಿ.
|

Updated on:Oct 29, 2024 | 4:51 PM

Share

ದರ್ಶನ್ ಜಾಮೀನು ಅರ್ಜಿಯ ವಿಚಾರಣೆ ಹೈಕೋರ್ಟ್​ನಲ್ಲಿ ನಡೆದಿದೆ. ದರ್ಶನ್​ರ ಆರೋಗ್ಯ ಸಮಸ್ಯೆಯನ್ನು ಮುಂದು ಮಾಡಿ ಜಾಮೀನು ಕೇಳಲಾಗಿದೆ. ದರ್ಶನ್​ಗೆ ಆರೋಗ್ಯ ಸಮಸ್ಯೆ ಇದ್ದು, ಅವರಿಗೆ ತುರ್ತಾಗಿ ಶಸ್ತ್ರಚಿಕಿತ್ಸೆಯ ಅವಶ್ಯಕತೆ ಇದೆ ಎಂದು ದರ್ಶನ್ ಪರ ವಕೀಲ ಸಿವಿ ನಾಗೇಶ್ ವಾದ ಮಂಡಿಸಿದ್ದಾರೆ. ಆದರೆ ಎಸ್​ಪಿಪಿ ಅವರು ದರ್ಶನ್​ ಜಾಮೀನು ಅರ್ಜಿಗೆ ಕೆಲ ತಕರಾರುಗಳನ್ನು ಎತ್ತಿದ್ದಾರೆ. ಇಬ್ಬರ ವಾದವನ್ನು ಆಲಿಸಿದ ಹೈಕೋರ್ಟ್ ನ್ಯಾಯಾಧೀಶರು ಆದೇಶವನ್ನು ಅಕ್ಟೋಬರ್ 30 ಕ್ಕೆ ಕಾಯ್ದಿರಿಸಿದ್ದಾರೆ.

ನಿನ್ನೆಯ ವಾದ ಮುಂದುವರೆಸಿದ ದರ್ಶನ್ ವಕೀಲ ಸಿವಿ ನಾಗೇಶ್, ‘ದರ್ಶನ್ ಬೆನ್ನು ಹುರಿಯ ಸಮಸ್ಯೆ ಯಿಂದ ಬಳಲುತ್ತಿದ್ದಾರೆ. ಅದರಿಂದ ಈಗಾಗಲೇ ಕಾಲು ಮರಗಟ್ಟುವಿಕೆ ಆಗುತ್ತಿದೆ. ಹೀಗೇ ಮುಂದುವರಿದರೆ ಇನ್ನಷ್ಟು ಸಮಸ್ಯೆ ಆಗಬಹುದು. ಡಿಸ್ಕ್ ನಲ್ಲಿನ ಸಮಸ್ಯೆಯಿಂದ ನರದಿಂದ ರಕ್ತಪರಿಚಲನೆ ಆಗುತ್ತಿಲ್ಲ …‌ ಹೀಗಾಗಿ ಶಸ್ತ್ರಚಿಕಿತ್ಸೆ ಅಗತ್ಯವಿದೆ. ಪಾರಂಪರಿಕ ಚಿಕಿತ್ಸೆಯಿಂದ ಇದು ಪರಿಹಾರ ಆಗದು, ಅದಕ್ಕೆ ಶಸ್ತ್ರಚಿಕಿತ್ಸೆಯನ್ನೇ ಮಾಡಿಸಬೇಕು. ಈ ಹಿಂದೆ ಜಾಮೀನಿಗೆ ಅರ್ಜಿ ಸಲ್ಲಿಸಿದ್ದಾಗ ಆರೋಗ್ಯ ಸಮಸ್ಯೆ ಉಲ್ಲೇಖಿಸಿರಲಿಲ್ಲ. ಆದರೆ ಈಗ ಸಮಸ್ಯೆ ಉಲ್ಬಣ ಆಗಿರುವ ಕಾರಣ ಕೇಳುತ್ತಿದ್ದೇವೆ. ದರ್ಶನ್​ಗೆ ಮಧ್ಯಂತರ ಜಾಮೀನು ನೀಡಬೇಕು’ ಎಂದು ವಾದಿಸಿದರು.

ಕೆಲವು ಹಳೆಯ ಪ್ರಕರಣಗಳು ಹಾಗೂ ಸುಪ್ರೀಂಕೋರ್ಟ್​ನ ಕೆಲ ಆದೇಶಗಳನ್ನು ಸಹ ಉಲ್ಲೇಖ ಮಾಡಿದ ಸಿವಿ ನಾಗೇಶ್ ಅವರು, ‘ಆರೋಗ್ಯ ಪ್ರತಿಯೊಬ್ಬರ ಹಕ್ಕು. ಅವರು ಎಂಥಹಾ ಕಠಿಣ ಪ್ರಕರಣದಲ್ಲಿ ಸಿಲುಕಿದ್ದರೂ ಸಹ ಮೆರಿಟ್​ಗಳನ್ನು ನೋಡದೆ ಜಾಮೀನು ನೀಡಬೇಕಾಗುತ್ತದೆ. ಈ ಹಿಂದೆ ಇಂಥಹಾ ಹಲವು ಪ್ರಕರಣಗಳಲ್ಲಿ ಜಾಮೀನು ನೀಡಲಾಗಿದೆ ಎಂದರು.

ಆದರೆ ಜಾಮೀನಿಗೆ ವಿರೋಧ ವ್ಯಕ್ತಪಡಿಸಿದ ಎಸ್​ಪಿಪಿ ಪ್ರಸನ್ನ ಕುಮಾರ್, ‘ರೋಗಿಯ (ದರ್ಶನ್) ತಪಾಸಣೆ ಮಾಡಿರುವ ವೈದ್ಯರು ಮುಂದೊಮ್ಮೆ ಸಮಸ್ಯೆ ಆಗಬಹುದು ಎಂದಿದ್ದಾರೆ, ಅಲ್ಲದೆ ಹಿಂದಿನ ವರದಿಯಲ್ಲಿ ಅಷ್ಟೇನೂ ಸಮಸ್ಯೆ ಇಲ್ಲ ಎಂದಿದ್ದರು, ಈ ಹಿಂದೆ ಹಿಪ್ ಜಾಯಿಂಟ್ ಸಮಸ್ಯೆ ಇತ್ತು ಅದನ್ನು ಸರಿಪಡಿಸಲಾಗಿದೆ ಎಂದು ವೈದ್ಯರು ಹೇಳಿದ್ದಾರೆ’ ಎಂದರು. ಆದರೆ ಅದಕ್ಕೆ ಸ್ವತಃ ಜಡ್ಜ್ ಪ್ರಶ್ನೆ ಕೇಳಿ, ‘ಮುಂದೆ ಆದಾಗ ಅದನ್ನು ಸರಿ ಮಾಡಬಹುದೇ?, ವಿಚಾರಣಾಧೀನ ಖೈದಿಗೂ ಉತ್ತಮ ಆರೋಗ್ಯದ ಹಕ್ಕಿದೆ’ ಎಂದರು. ‘ಈ ಹಿಂದಿನ ವರದಿಯಲ್ಲಿ ಹಾಗಿದೆ, ಆದರೆ ಜೈಲು ಸೇರಿದ ಮೇಲಿನ ವರದಿಯಲ್ಲಿ ಅನಾರೋಗ್ಯ ಎಂದಿದೆಯಲ್ಲ. ಈಗಿನ ವರದಿಯನ್ನು ಪರಿಗಣಿಸಬೇಕು ತಾನೆ? ಎಂದು ಜಡ್ಜ್ ಎಸ್​ಪಿಪಿ ಪ್ರಸನ್ನ ಅವರನ್ನು ಪ್ರಶ್ನೆ ಮಾಡಿದರು.

ಇದನ್ನೂ ಓದಿ:ದರ್ಶನ್ ಮೊದಲ ಸಿನಿಮಾಕ್ಕೆ ಸಹಾಯ ಮಾಡಿದ್ದ ಪುನೀತ್ ರಾಜ್​ಕುಮಾರ್

ಎಸ್​ಪಿಪಿ ಪ್ರಸನ್ನ ಅವರು, ‘ವೈದ್ಯರ ವರದಿಯಲ್ಲಿ ಯಾವ ರೀತಿಯ ಶಸ್ತ್ರಚಿಕಿತ್ಸೆ ಮಾಡಬೇಕಿದೆ? ಎಷ್ಟು ದಿನದ ಅವಶ್ಯಕತೆ ಇದೆ? ಎಲ್ಲಿ ಆಪರೇಷನ್ ಮಾಡಲಾಗುವುದು ಎಂಬಿತ್ಯಾದಿ ಮಾಹಿತಿ ಇಲ್ಲ’ ಎಂದರು. ಇದಕ್ಕೆ ಉತ್ತರಿಸಿದ ಸಿವಿ ನಾಗೇಶ್ ಅವರು, ‘ದರ್ಶನ್ ಮೈಸೂರು ನಿವಾಸಿ ಆಗಿದ್ದು, ಈ ಹಿಂದೆ ಒಮ್ಮೆ ಅಪೋಲೋ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದರು. ಈಗಲೂ ಸಹ ಅಲ್ಲಿಯೇ ಚಿಕಿತ್ಸೆ ಪಡೆಯುತ್ತಾರೆ. ಅಲ್ಲದೆ, ಪ್ರಕರಣಕ್ಕೆ ಸಂಬಂಧಿಸಿದ ಸಾಕ್ಷಿಗಳು ಯಾರೂ ಮೈಸೂರಿನಲ್ಲಿ ಇಲ್ಲ’ ಎಂದರು.

ಇಬ್ಬರೂ ವಕೀಲರ ವಾದಗಳನ್ನು ಆಲಿಸಿದ ನ್ಯಾಯಾಧೀಶರು ಜಾಮೀನು ಅರ್ಜಿಯ ಆದೇಶವನ್ನು ಅಕ್ಟೋಬರ್ 30 ಅಂದರೆ ನಾಳೆಗೆ ಮುಂದೂಡಿದರು. ನಾಳೆ ದರ್ಶನ್​ಗೆ ಷರತ್ತು ಸಹಿತ ಮಧ್ಯಂತರ ಜಾಮೀನು ಮಂಜೂರಾಗುವ ಸಾಧ್ಯತೆ ದಟ್ಟವಾಗಿದೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 3:45 pm, Tue, 29 October 24

Follow Us
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?