AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Darshan Birthday: ದರ್ಶನ್ ಜನ್ಮದಿನ: ಸ್ಟಾರ್ ನಟನ ಜನ್ಮದಿನದ ಖುಷಿ ಹೆಚ್ಚಿಸಿದ ‘ಕಾಟೇರ’ ಗೆಲುವು

ಕಳೆದ ವರ್ಷ ರಿಲೀಸ್ ಆದ ‘ಕಾಟೇರ’ ಚಿತ್ರ 200 ಕೋಟಿ ರೂಪಾಯಿ ಕ್ಲಬ್ ಸೇರಿತು. ಇದರಿಂದ ದರ್ಶನ್ ಅವರ ಖ್ಯಾತಿ ಹೆಚ್ಚಿದೆ. ಈ ಸಿನಿಮಾಗೆ ತರುಣ್ ಸುಧೀರ್ ನಿರ್ದೇಶನ ಮಾಡಿದ್ದಾರೆ. ಈ ಚಿತ್ರದ ಗೆಲುವು ದರ್ಶನ್ ಬರ್ತ್​ಡೇ ಖುಷಿಯನ್ನು ಹೆಚ್ಚಿಸಿದೆ.

Darshan Birthday: ದರ್ಶನ್ ಜನ್ಮದಿನ: ಸ್ಟಾರ್ ನಟನ ಜನ್ಮದಿನದ ಖುಷಿ ಹೆಚ್ಚಿಸಿದ ‘ಕಾಟೇರ’ ಗೆಲುವು
ದರ್ಶನ್
ರಾಜೇಶ್ ದುಗ್ಗುಮನೆ
|

Updated on:Feb 16, 2024 | 5:36 AM

Share

ನಟ ದರ್ಶನ್ (Darshan) ಅವರಿಗೆ ಇಂದು (ಫೆಬ್ರವರಿ 16) ಜನ್ಮದಿನದ ಸಂಭ್ರಮ. ಅವರಿಗೆ ಎಲ್ಲ ಕಡೆಗಳಿಂದ ಶುಭಾಶಯ ಬರುತ್ತಿದೆ. ಸೋಶಿಯಲ್ ಮೀಡಿಯಾದಲ್ಲಿ ಅವರು ಕಾಮನ್ ಡಿಪಿ ಹಂಚಿಕೊಂಡು ಫ್ಯಾನ್ಸ್ ಸಂಭ್ರಮಿಸುತ್ತಿದ್ದಾರೆ. ಅವರು ಚಿತ್ರರಂಗದಲ್ಲಿ ಮತ್ತಷ್ಟಟು ಗೆಲುವು ಕಾಣಲಿ ಎಂದು ಫ್ಯಾನ್ಸ್ ಹಾರೈಸುತ್ತಿದ್ದಾರೆ. ಬರ್ತ್​ಡೇ ದಿನ ಹೂವು-ಹಣ್ಣು ತರದಂತೆ ದರ್ಶನ್ ಅವರು ಈ ಮೊದಲೇ ಅಭಿಮಾನಿಗಳ ಬಳಿ ಕೋರಿಕೊಂಡಿದ್ದಾರೆ. ಇದನ್ನು ಅವರು ಫಾಲೋ ಮಾಡುತ್ತಿದ್ದಾರೆ. ದರ್ಶನ್ ಹೆಸರಲ್ಲಿ ಸಾಕಷ್ಟು ಸಾಮಾಜಿಕ ಕಾರ್ಯಗಳು ಕೂಡ ನಡೆಯುತ್ತಿವೆ. ಮಧ್ಯರಾತ್ರಿಯೇ ಫ್ಯಾನ್ಸ್ ಮನೆಯ ಸಮೀಪ ಜಮಾಯಿಸಿ ಸಂಭ್ರಮಿಸಿದ್ದಾರೆ.

ದರ್ಶನ್ ಅವರು ಚಿತ್ರರಂಗಕ್ಕೆ ಕಾಲಿಟ್ಟಿದ್ದು 1997ರಲ್ಲಿ. ‘ಮಹಾಭಾರತ’ ಅವರು ನಟಿಸಿದ ಮೊದಲ ಸಿನಿಮಾ. 200ನೇ ಇಸವಿಯಲ್ಲಿ ರಿಲೀಸ್ಆದ ಶಿವರಾಜ್​ಕುಮಾರ್, ಅಂಬರೀಷ್ ನಟನೆಯ ‘ದೇವರ ಮಗ’ ಚಿತ್ರದಲ್ಲಿ ದರ್ಶನ್ ನಟಿಸಿದರು. ಈ ಚಿತ್ರದಲ್ಲಿ ಅವರು ದರ್ಶನ್ ಹೆಸರಿನ ಪಾತ್ರದಲ್ಲೇ ಕಾಣಿಸಿಕೊಂಡರು. ನಂತರ ತಮಿಳು ಚಿತ್ರವೊಂದರಲ್ಲಿ ಅವರು ಬಣ್ಣ ಹಚ್ಚಿದ್ದರು. ‘ಮೆಜೆಸ್ಟಿಕ್’ ಚಿತ್ರದ ಮೂಲಕ ಹೀರೋ ಆದರು. ಮೊದಲ ಸಿನಿಮಾದಲ್ಲೇ ದೊಡ್ಡ ಗೆಲುವು ಕಂಡರು.

‘ಕರಿಯ’, ‘ನಮ್ಮ ಪ್ರೀತಿಯ ರಾಮು’, ‘ಕಲಾಸಿಪಾಳ್ಯ’, ‘ಗಜ’, ಸೇರಿ ಅನೇಕ ಚಿತ್ರಗಳಲ್ಲಿ ದರ್ಶನ್ ನಟಿಸಿದ್ದಾರೆ. ಅವರು ಕನ್ನಡ ಚಿತ್ರರಂಗಕ್ಕೆ ನೀಡಿದ ಕೊಡುಗೆ ತುಂಬಾನೇ ದೊಡ್ಡದು. 2023ರ ಕೊನೆಯಲ್ಲಿ ರಿಲೀಸ್ ಆದ ‘ಕಾಟೇರ’ ಚಿತ್ರ 200 ಕೋಟಿ ರೂಪಾಯಿ ಕ್ಲಬ್ ಸೇರಿದೆ. ಇದರಿಂದ ದರ್ಶನ್ ಅವರ ಖ್ಯಾತಿ ಹೆಚ್ಚಾಗಿದೆ. ಈ ಚಿತ್ರಕ್ಕೆ ತರುಣ್ ಸುಧೀರ್ ನಿರ್ದೇಶನ ಮಾಡಿದ್ದಾರೆ. ಈ ಚಿತ್ರದ ಗೆಲುವು ದರ್ಶನ್ ಬರ್ತ್​ಡೇ ಖುಷಿಯನ್ನು ಹೆಚ್ಚಿಸಿದೆ.

ಇದನ್ನೂ ಓದಿ: ದರ್ಶನ್ ಬರ್ತ್​ಡೇ ಸಂದರ್ಭದಲ್ಲಿ ಬೆನ್ನಿಗೆ ‘ಕಾಟೇರ’ ಟ್ಯಾಟೂ ಹಾಕಿಸಿಕೊಂಡ ಅಭಿಮಾನಿ

ದರ್ಶನ್ ಅವರ ಸಿಡಿಪಿಯನ್ನು ಸೋಶಿಯಲ್ ಮೀಡಿಯಾದಲ್ಲಿ ಅನಾವರಣ ಮಾಡಲಾಗಿದೆ. ದರ್ಶನ್ ಗದೆ ಹಿಡಿದು ನಿಂತಿದ್ದಾರೆ. ಅವರ ಎದುರು ಅಭಿಮಾನಿಗಳು ಕೈ ಮುಗಿದು ನಿಂತಿದ್ದಾರೆ. ಹಿಂಭಾಗದಲ್ಲಿ ಡಿ ಬಾಸ್ ಎಂದು ಬರೆಯಲಾಗಿದೆ. ತುಗುದೀಪ ಕಲಾ ಮಂಡಳಿ ಎನ್ನುವ ಬೋರ್ಡ್ ಕೂಡ ಇದೆ. ಈ ಸಿಡಿಪಿ ಗಮನ ಸೆಳೆದಿದೆ.

ದರ್ಶನ್ ಅವರ ಹೆಸರಲ್ಲಿ ಸಾಕಷ್ಟು ಸಾಮಾಜಿಕ ಕೆಲಸಗಳು ನಡೆಯುತ್ತಿವೆ. ದರ್ಶನ್ ಬರ್ತ್​ಡೇ ದಿನ ಅವರ ಮುಂದಿನ ಸಿನಿಮಾ ‘ಡೆವಿಲ್’ ಚಿತ್ರದ ಫಸ್ಟ್ ಲುಕ್ ಟೀಸರ್ ಕೂಡ ಅನಾವರಣ ಆಗಿದೆ. ಇದು ಅಭಿಮಾನಿಗಳ ಖುಷಿಯನ್ನು ದುಪಟ್ಟು ಮಾಡಿದೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 5:30 am, Fri, 16 February 24

Follow Us
ರಾಜೇಶ್ ದುಗ್ಗುಮನೆ
ರಾಜೇಶ್ ದುಗ್ಗುಮನೆ

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ
ಸಿಎಂ ಡಿಕೆಶಿಗೆ ಯಾವುದೇ ಕಂಟಕವಿಲ್ಲ: ನೊಣವಿನಕೆರೆ ಸ್ವಾಮೀಜಿ ಭವಿಷ್ಯ
ಸಿಎಂ ಡಿಕೆಶಿಗೆ ಯಾವುದೇ ಕಂಟಕವಿಲ್ಲ: ನೊಣವಿನಕೆರೆ ಸ್ವಾಮೀಜಿ ಭವಿಷ್ಯ
26 ವರ್ಷಗಳ ಬಳಿಕ ಮನೆಗೆ ಮರಳಿದ ಮಗ: ಭಾವುಕ ಕ್ಷಣಕ್ಕೆ ಸಾಕ್ಷಿಯಾದ ಧರ್ಮಸ್ಥಳ
26 ವರ್ಷಗಳ ಬಳಿಕ ಮನೆಗೆ ಮರಳಿದ ಮಗ: ಭಾವುಕ ಕ್ಷಣಕ್ಕೆ ಸಾಕ್ಷಿಯಾದ ಧರ್ಮಸ್ಥಳ
ವಿಧಾನ ಪರಿಷತ್ ಕದನದಲ್ಲಿ ಜೆಡಿಎಸ್​ಗೆ ಡಬಲ್ ಟೆನ್ಷನ್!
ವಿಧಾನ ಪರಿಷತ್ ಕದನದಲ್ಲಿ ಜೆಡಿಎಸ್​ಗೆ ಡಬಲ್ ಟೆನ್ಷನ್!
ಕೆಆರ್​ಎಸ್ ಜಲಮಟ್ಟ 81 ಅಡಿಗೆ ಕುಸಿತ, ತಮಿಳುನಾಡಿಗೆ ನೀರು ಬಿಡುಗಡೆ ಸವಾಲು
ಕೆಆರ್​ಎಸ್ ಜಲಮಟ್ಟ 81 ಅಡಿಗೆ ಕುಸಿತ, ತಮಿಳುನಾಡಿಗೆ ನೀರು ಬಿಡುಗಡೆ ಸವಾಲು
ಒಮಾನ್​ನಲ್ಲಿ ಟ್ಯಾಂಕರ್ ದಾಳಿ, ಅಮೆರಿಕ ರಾಜತಾಂತ್ರಿಕರಿಗೆ ಭಾರತ ಸಮನ್ಸ್
ಒಮಾನ್​ನಲ್ಲಿ ಟ್ಯಾಂಕರ್ ದಾಳಿ, ಅಮೆರಿಕ ರಾಜತಾಂತ್ರಿಕರಿಗೆ ಭಾರತ ಸಮನ್ಸ್