AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದರ್ಶನ್ ಹಾಗೂ ಸಂಗಡಿಗರ ಪಾರ್ಟಿ ಪ್ರಕರಣ: ಜೆಟ್ಲಾಗ್ ಪರವಾನಗಿ ರದ್ದು

Darshan: ದರ್ಶನ್ ಹಾಗೂ ಸಂಗಡಿಗರು ಅವಧಿ ಮೀರಿ ಪಾರ್ಟಿ ಮಾಡಿದ್ದರು ಎನ್ನಲಾಗುತ್ತಿರುವ ಜೆಟ್​ಲ್ಯಾಗ್​ ಪಬ್​ನ ಪರವಾನಗಿಯನ್ನು ನಿರ್ದಿಷ್ಟ ಅವಧಿಗೆ ರದ್ದು ಮಾಡಲಾಗಿದೆ.

ದರ್ಶನ್ ಹಾಗೂ ಸಂಗಡಿಗರ ಪಾರ್ಟಿ ಪ್ರಕರಣ: ಜೆಟ್ಲಾಗ್ ಪರವಾನಗಿ ರದ್ದು
Follow us
ಮಂಜುನಾಥ ಸಿ.
|

Updated on: Jan 16, 2024 | 8:17 PM

ನಟ ದರ್ಶನ್ (Darshan) ಹಾಗೂ ಇತರೆ ಸಿನಿಮಾ ತಾರೆಯರು ನಿಯಮ ಮೀರಿ ತಡರಾತ್ರಿವರೆಗೆ ಬೆಂಗಳೂರಿನ ಜೆಟ್​ಲ್ಯಾಗ್ ಪಬ್​ನಲ್ಲಿ ಪಾರ್ಟಿ ಮಾಡಿರುವ ಬಗ್ಗೆ ನಗರ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ದರ್ಶನ್ ಹಾಗೂ ಇತರರಿಗೆ ನೊಟೀಸ್ ನೀಡಿ ವಿಚಾರಣೆಗೆ ಕರೆಸಿ ಹೇಳಿಕೆ ದಾಖಲಿಸಿಕೊಳ್ಳಲಾಗಿತ್ತು. ಇದೀಗ ದರ್ಶನ್ ಹಾಗೂ ಇತರರು ಅವಧಿ ಮೀರಿ ಪಾರ್ಟಿ ಮಾಡಲು ಅವಕಾಶ ಕೊಟ್ಟಿದ್ದ ಜೆಟ್​​ಲ್ಯಾಗ್​ ಪಬ್​ನ ಪರವಾನಗಿಯನ್ನು 25ದಿನಗಳ ಕಾಲ ರದ್ದು ಮಾಡಿ ಆದೇಶಿಸಲಾಗಿದೆ.

ದರ್ಶನ್, ಡಾಲಿ ಧನಂಜಯ್, ನೀನಾಸಂ ಸತೀಶ್, ರಾಕ್​ಲೈನ್ ವೆಂಕಟೇಶ್, ಸಂಗೀತ ನಿರ್ದೇಶಕ ವಿ ಹರಿಕೃಷ್ಣ ಇನ್ನೂ ಹಲವರು ಜನವರಿ 3ರಂದು ಜೆಟ್​ಲ್ಯಾಗ್ ಪಬ್​ನಲ್ಲಿ ತಡರಾತ್ರಿ ವರೆಗೆ ಪಾರ್ಟಿ ಮಾಡಿದ್ದರು. ಈ ಬಗ್ಗೆ ಪೊಲೀಸರು ಸ್ವಯಂಪ್ರೇರಿತ ದೂರು ದಾಖಲಿಸಿಕೊಂಡು ದರ್ಶನ್ ಸೇರಿದಂತೆ ಹಲವರಿಗೆ ನೊಟೀಸ್ ಜಾರಿ ಮಾಡಿ ವಿಚಾರಣೆಗೆ ಹಾಜರಾಗುವಂತೆ ಸೂಚಿಸಿದ್ದರು.

‘ಕಾಟೇರ’ ಸಿನಿಮಾದ ಪ್ರಚಾರಕ್ಕೆ ದುಬೈಗೆ ತೆರಳಿದ್ದ ನಟ ದರ್ಶನ್, ಅಲ್ಲಿಂದ ಬಂದ ಬಳಿಕ ರಾಕ್​ಲೈನ್ ವೆಂಕಟೇಶ್, ಡಾಲಿ ಧನಂಜಯ್, ನೀನಾಸಂ ಸತೀಶ್, ಹರಿಕೃಷ್ಣ ಇತರರ ಜೊತೆ ಸೇರಿ ಪೊಲೀಸ್ ಠಾಣೆಗೆ ಹಾಜರಾಗಿ ಹೇಳಿಕೆ ದಾಖಲಿಸಿದ್ದರು. ಅಂದು ಮಾತನಾಡಿದ್ದ ದರ್ಶನ್ ಪರ ವಕೀಲರು, ಪೊಲೀಸರು ವಿನಾಕಾರಣ ದರ್ಶನ್​ಗೆ ತೊಂದರೆ ನೀಡುವ ಪ್ರಯತ್ನ ಮಾಡುತ್ತಿದ್ದಾರೆ ಎಂದು ಆರೋಪಿಸಿದ್ದರು ವೀರಾವೇಷದಿಂದ ಮಾತನಾಡಿ ಸವಾಲು ಎಸೆದಿದ್ದರು.

ಇದನ್ನೂ ಓದಿ:ಜೆಟ್​ ಲ್ಯಾಗ್ ಕೇಸ್; ವಿಚಾರಣೆ ವೇಳೆ ಆ ಒಂದು ಪ್ರಶ್ನೆಗೆ ಸಿಟ್ಟಾದ್ರಾ ದರ್ಶನ್?

ಜೆಟ್​ಲ್ಯಾಗ್ ಪಬ್​ ಅಬಕಾರಿ ನಿಯಮ ಮೀರಿರುವ ಕಾರಣ ಅದರ ಪರವಾನಗಿಯನ್ನು ಮುಂದಿನ 25 ದಿನಗಳ ಅವಧಿಗೆ ರದ್ದು ಮಾಡಿ ಬೆಂಗಳೂರು ನಗರ ಜಿಲ್ಲಾಧಿಕಾರಿ ಆದೇಶ ಮಾಡಿದ್ದಾರೆ. ಮುಂದಿನ 25 ದಿನಗಳ ಕಾಲ ಜೆಟ್​ಲ್ಯಾಗ್​ ಪಬ್​ನಲ್ಲಿ ಮದ್ಯ ಮಾರಾಟ ಮಾಡುವಂತಿಲ್ಲ. ಜೆಟ್​ಲ್ಯಾಗ್​ ಪಬ್​ನಲ್ಲಿ ಅಬಕಾರಿ ನಿಯಮ ಉಲ್ಲಂಘನೆ ಮಾಡಿರುವ ಬಗ್ಗೆ ಎಫ್ಐಆರ್ ನಲ್ಲಿ ಉಲ್ಲೇಖ ಮಾಡಲಾಗಿತ್ತು. ಹಾಗಾಗಿ ಈಗ ಪರವಾನಗಿ ರದ್ದು ಮಾಡಲಾಗಿದೆ. ಮೂರು ಬಾರಿ ನಿಯಮ ಉಲ್ಲಂಘನೆ ಮಾಡಿದರೆ ಪರವಾನಗಿ ರದ್ದು ಮಾಡಲಾಗುತ್ತದೆ. ಮೊದಲ ಬಾರಿ ಜೆಟ್ಲಾಗ್ ವಿರುದ್ಧ ದೂರು ಬಂದಿರುವ ಕಾರಣ 25 ದಿನಗಳ ಕಾಲ ಪರವಾನಗಿ ರದ್ದು ಮಾಡಲಾಗಿದೆ.

ಈ ಪಬ್, ದರ್ಶನ್​, ರಾಕ್​ಲೈವ್ ವೆಂಕಟೇಶ್​ಗೆ ಆಪ್ತರಾಗಿರುವ ಸೌಂದರ್ಯ ಜಗದೀಶ್ ಅವರದ್ದೇ ಆಗಿದೆ ಎನ್ನಲಾಗುತ್ತಿದೆ. ಅವರ ಆಹ್ವಾನದ ಮೇರೆಗೆಯೇ ದರ್ಶನ್ ಹಾಗೂ ತಂಡ ಅಂದು ಪಬ್​ಗೆ ತೆರಳಿದ್ದರು ಎನ್ನಲಾಗುತ್ತಿದೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ವಿವಾಹ ವಾರ್ಷಿಕೋತ್ಸವ: ಪತ್ನಿ ವಿಜಯಲಕ್ಷ್ಮಿ ಜೊತೆ ನಟ ದರ್ಶನ್ ಡ್ಯಾನ್ಸ್
ವಿವಾಹ ವಾರ್ಷಿಕೋತ್ಸವ: ಪತ್ನಿ ವಿಜಯಲಕ್ಷ್ಮಿ ಜೊತೆ ನಟ ದರ್ಶನ್ ಡ್ಯಾನ್ಸ್
ಒಂದಂಕಿಗೆ ಸುಸ್ತಾದ ಪಂತ್; ಕೋಪಗೊಂಡ ಮಾಲೀಕ
ಒಂದಂಕಿಗೆ ಸುಸ್ತಾದ ಪಂತ್; ಕೋಪಗೊಂಡ ಮಾಲೀಕ
ಕೆರೆಯಂತಾದ ಬೆಂಗಳೂರು ರಸ್ತೆಗಳು: ಹೊಸೂರು ಹೆದ್ದಾರಿಯಲ್ಲಿ ಫುಲ್ ಟ್ರಾಫಿಕ್!
ಕೆರೆಯಂತಾದ ಬೆಂಗಳೂರು ರಸ್ತೆಗಳು: ಹೊಸೂರು ಹೆದ್ದಾರಿಯಲ್ಲಿ ಫುಲ್ ಟ್ರಾಫಿಕ್!
5 ಲಕ್ಷ ರೂ ಮೌಲ್ಯದ ಸಿಕ್ಸರ್ ಬಾರಿಸಿದ ಮಿಚೆಲ್ ಮಾರ್ಷ್
5 ಲಕ್ಷ ರೂ ಮೌಲ್ಯದ ಸಿಕ್ಸರ್ ಬಾರಿಸಿದ ಮಿಚೆಲ್ ಮಾರ್ಷ್
ಜೈಲಿನಲ್ಲಿ ಸುಹಾಸ್ ಶೆಟ್ಟಿ ಹತ್ಯೆ ಆರೋಪಿ ಮೇಲೆ ದಾಳಿ: ವಿಡಿಯೋ ನೋಡಿ
ಜೈಲಿನಲ್ಲಿ ಸುಹಾಸ್ ಶೆಟ್ಟಿ ಹತ್ಯೆ ಆರೋಪಿ ಮೇಲೆ ದಾಳಿ: ವಿಡಿಯೋ ನೋಡಿ
ಏಕೆ ಎಫ್‌ಐಆರ್ ಹಾಕಿಲ್ಲ?; ನ್ಯಾ. ವರ್ಮಾ ವಿವಾದದ ಬಗ್ಗೆ ಉಪರಾಷ್ಟ್ರಪತಿ ಟೀಕೆ
ಏಕೆ ಎಫ್‌ಐಆರ್ ಹಾಕಿಲ್ಲ?; ನ್ಯಾ. ವರ್ಮಾ ವಿವಾದದ ಬಗ್ಗೆ ಉಪರಾಷ್ಟ್ರಪತಿ ಟೀಕೆ
ಅಧಿಕಾರಿಗಳ ನಿರ್ಲಕ್ಷ್ಯ, ಉಡಾಫೆ ಗೊತ್ತಾಗುತ್ತಿದೆ;ಸರ್ಕಾರವೇನು ಮಾಡುತ್ತಿದೆ?
ಅಧಿಕಾರಿಗಳ ನಿರ್ಲಕ್ಷ್ಯ, ಉಡಾಫೆ ಗೊತ್ತಾಗುತ್ತಿದೆ;ಸರ್ಕಾರವೇನು ಮಾಡುತ್ತಿದೆ?
ಬಿಡದಿ ದಿವ್ಯಾಂಗ ಬಾಲಕಿ ಸಾವಿನ ಬಗ್ಗೆ ಮತ್ತಷ್ಟು ಸ್ಫೋಟಕ ಅಂಶ ಬಿಚ್ಚಿಟ್ಟ SP
ಬಿಡದಿ ದಿವ್ಯಾಂಗ ಬಾಲಕಿ ಸಾವಿನ ಬಗ್ಗೆ ಮತ್ತಷ್ಟು ಸ್ಫೋಟಕ ಅಂಶ ಬಿಚ್ಚಿಟ್ಟ SP
ಇವತ್ತೂ ನಗರದಲ್ಲಿ ಮಳೆ, ಮುಂದಿನ ಎರಡು ದಿನಗಳಲ್ಲೂ ಮಳೆ; ಬವಣೆ ತಪ್ಪಿದ್ದಲ್ಲ
ಇವತ್ತೂ ನಗರದಲ್ಲಿ ಮಳೆ, ಮುಂದಿನ ಎರಡು ದಿನಗಳಲ್ಲೂ ಮಳೆ; ಬವಣೆ ತಪ್ಪಿದ್ದಲ್ಲ
ಹಬ್ಬಕ್ಕೆಂದು ಬೆಂಗಳೂರಿನಿಂದ ಬಂದವರು ಮಸಣಕ್ಕೆ: ಇಲ್ಲಿದೆ ಕೊನೆಯ ಕ್ಷಣ
ಹಬ್ಬಕ್ಕೆಂದು ಬೆಂಗಳೂರಿನಿಂದ ಬಂದವರು ಮಸಣಕ್ಕೆ: ಇಲ್ಲಿದೆ ಕೊನೆಯ ಕ್ಷಣ