AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರೇಣುಕಾ ಸ್ವಾಮಿ ಕೊಲೆ: ಆರೋಪಿಗಳಿಂದ ಸಾಕ್ಷಿಗಳಿಗೆ ಬೆದರಿಕೆ

ರೇಣುಕಾ ಸ್ವಾಮಿ ಕೊಲೆ ಪ್ರಕರಣದ 17 ಆರೋಪಿಗಳಲ್ಲಿ ಕೆಲವರು ಸಾಕ್ಷಿಗಳಾಗಿ ಪರಿವರ್ತಿತವಾಗಿದ್ದು, ಆ ಸಾಕ್ಷಿಗಳ ಮೇಲೆ ಇತರೆ ಆರೋಪಿಗಳು ಪ್ರಭಾವ ಬೀರಬಹುದು, ಹಲ್ಲೆ ಮಾಡಬಹುದು ಎಂಬ ಆತಂಕವನ್ನು ಪೊಲೀಸರು ವ್ಯಕ್ತಪಡಿಸಿದ್ದಾರೆ. ಈ ವಿಷಯವನ್ನು ರಿಮ್ಯಾಂಡ್ ವರದಿಯಲ್ಲಿ ನಮೂದಿಸಿದ್ದಾರೆ.

ರೇಣುಕಾ ಸ್ವಾಮಿ ಕೊಲೆ: ಆರೋಪಿಗಳಿಂದ ಸಾಕ್ಷಿಗಳಿಗೆ ಬೆದರಿಕೆ
ರೇಣುಕಾ ಸ್ವಾಮಿ-ದರ್ಶನ್
ಮಂಜುನಾಥ ಸಿ.
|

Updated on:Jun 22, 2024 | 5:47 PM

Share

ರೇಣುಕಾ ಸ್ವಾಮಿ (Renuka Swamy) ಕೊಲೆ ಪ್ರಕರಣದಲ್ಲಿ ದಿನಕ್ಕೊಂದು ಬೆಳವಣಿಗೆಗಳಾಗುತ್ತಿದೆ. ಈಗಾಗಲೇ ದರ್ಶನ್, ಪವಿತ್ರಾ ಗೌಡ ಸೇರಿದಂತೆ 17 ಆರೋಪಿಗಳನ್ನು ಬಂಧಿಸಿ ವಿಚಾರಣೆ ನಡೆಸಿ ನ್ಯಾಯಾಂಗ ಬಂಧನಕ್ಕೆ ನೀಡಲಾಗಿದೆ. ಪ್ರಕರಣಕ್ಕೆ ತಾರ್ಕಿಕ ಅಂತ್ಯ ನೀಡಲು ಪೊಲೀಸರು ಶ್ರಮಿಸುತ್ತಿದ್ದಾರೆ. ಆದರೆ ಆರೋಪಿಗಳು ಸಹ ಪೊಲೀಸರಿಗೆ ಅಸಹಕಾರ ತೋರುತ್ತಾ ತನಿಖೆಯ ದಿಕ್ಕು ತಪ್ಪಿಸಲು ಶತಪ್ರಯತ್ನ ಮಾಡುತ್ತಿದ್ದಾರೆ ಎನ್ನಲಾಗುತ್ತಿದೆ. ಪ್ರಕರಣದಲ್ಲಿ ಈವರೆಗೆ ಬಂಧನಕ್ಕೆ ಒಳಗಾಗಿರುವ 17 ಆರೋಪಿಗಳಲ್ಲಿ ಕೆಲವರು ಅಪ್ರೂವರ್​ಗಳಾಗಿದ್ದು ಘಟನೆ ಬಗ್ಗೆ ಸಾಕ್ಷಿ ಹೇಳಿಕೆ ನೀಡಲು ತಯಾರಾಗಿದ್ದಾರೆ. ಆದರೆ ಇವರಿಗೆ ಆರೋಪಿಗಳಿಂದಲೇ ಬೆದರಿಕೆ ಇದೆ ಎನ್ನಲಾಗುತ್ತಿದೆ.

ಇಂದು (ಜೂನ್ 22) ದರ್ಶನ್, ಪ್ರದೋಶ್, ವಿನಯ್ ಹಾಗೂ ಧನರಾಜ್ ಅನ್ನು ನ್ಯಾಯಾಲಯದ ಮುಂದೆ ಹಾಜರುಪಡಿಸಿದ್ದ ಪೊಲೀಸರು ನ್ಯಾಯಾಲಯಕ್ಕೆ ನೀಡಿದ ರಿಮ್ಯಾಂಡ್ ಅರ್ಜಿಯನ್ನು ಈ ವಿಷಯವನ್ನು ನಮೂದು ಮಾಡಿದ್ದಾರೆ. ಪ್ರಕರಣದ ಆರೋಪಿಗಳಿಂದ ಸಾಕ್ಷ್ಯಗಳಿಗೆ ಬೆದರಿಕೆ ಇರುವ ಕಾರಣ, ಎಲ್ಲ ಆರೋಪಿಗಳನ್ನು ಒಟ್ಟಿಗೆ ಇರಿಸಬಾರದು ಬದಲಿಗೆ ಬೇರೆ ಬೇರೆ ಜೈಲಿನಲ್ಲಿ ಇಡಬೇಕು ಎಂದು ಮನವಿ ಮಾಡಲಾಗಿತ್ತು. ಆದರೆ ಇದಕ್ಕೆ ದರ್ಶನ್ ಪರ ವಕೀಲರು ಆಕ್ಷೇಪ ವ್ಯಕ್ತಪಡಿಸಿದ್ದು, ವಿಚಾರಣೆಯನ್ನು ಸೋಮವಾರಕ್ಕೆ ಮುಂದೂಡಲಾಗಿದೆ.

ಇದನ್ನೂ ಓದಿ:ರೇಣುಕಾ ಸ್ವಾಮಿ ಪ್ರಕರಣ: ದರ್ಶನ್​ ಹಾಗೂ ಗ್ಯಾಂಗ್​ಗೆ ಜುಲೈ 4ರ ವರೆಗೆ ನ್ಯಾಯಾಂಗ ಬಂಧನ

ಯಾವ ಆರೋಪಿಗಳು ಸಾಕ್ಷ್ಯ ಹೇಳಲಿದ್ದಾರೆ ಎಂಬುದನ್ನು ಭದ್ರತೆ ಕಾರಣಕ್ಕೆ ರಿಮ್ಯಾಂಡ್ ವರದಿಯಲ್ಲಿ ಪೊಲೀಸರು ಬಹಿರಂಗಪಡಿಸಿಲ್ಲ. ಆದರೆ ಸಾಕ್ಷ್ಯಗಳ ಮೇಲೆ ಇತರೆ ಆರೋಪಿಗಳು ದೌರ್ಜನ್ಯ ಮಾಡಬಹುದು ಅಥವಾ ಪ್ರಭಾವ ಬೀರಬಹುದು ಎಂಬ ಕಾರಣಕ್ಕೆ ಆರೋಪಿಗಳನ್ನು ಪ್ರತ್ಯೇಕವಾಗಿ ಇಡುವಂತೆ ಪೊಲೀಸರು ಮನವಿ ಮಾಡಿದ್ದರು.

ಇದರ ಜೊತೆಗೆ ಪ್ರಕರಣದ ಬಗ್ಗೆ ಇನ್ನೂ ಕೆಲವು ಅಂಶಗಳು ಇಂದು (ಜೂನ್ 22) ಹೊರಗೆ ಬಂದಿವೆ. ಮೃತನ ಬಟ್ಟೆ ಬದಲಾಯಿಸಿದ್ದಾರೆ, ಮೃತನ ಬಟ್ಟೆಗಳನ್ನು ಬದಲಾಯಿಸಲಾಗಿದೆ. ಹಾಗೂ ಮೃತನ ಬಟ್ಟೆಗಳನ್ನು ಬೇರೆ ಬೇರೆ ಕಡೆಗಳಲ್ಲಿ ಎಸೆಯಲಾಗಿದೆ. ಬಟ್ಟೆಗಳನ್ನು ಎಸೆದ ಆರೋಪಿಗಳಿಂದ ಪೊಲೀಸರು ಹೇಳಿಕೆ ಪಡೆದುಕೊಂಡಿದ್ದಾರೆ. ಎ9 ಆರೋಪಿ ಧನರಾಜ್​ಗೆ ಎಲೆಕ್ಟ್ರಿಕ್ ಮಗ್ಗರ್ ಯಂತ್ರವನ್ನು ಖರೀದಿಸಲು ಆನ್​ಲೈನ್ ಮೂಲಕ ಹಣ ಕಳಿಸಿರುವುದು ಪತ್ತೆಯಾಗಿದೆ. ಆದರೆ ಆರೋಪಿ ಧನರಾಜ್, ತನ್ನೊಂದಿಗೆ ಕೊಲೆಯಾದ ಸ್ಥಳಕ್ಕೆ ಬಂದ ಇನ್ನೊಬ್ಬ ವ್ಯಕ್ತಿಯ ಮಾಹಿತಿಯನ್ನು ಬಹಿರಂಗಪಡಿಸಿಲ್ಲ. ಧನರಾಜ್ ಪೊಲೀಸರ ತನಿಖೆಗೆ ಸೂಕ್ತವಾಗಿ ಸಹಕರಿಸುತ್ತಿಲ್ಲ ಎನ್ನಲಾಗುತ್ತಿದೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 5:45 pm, Sat, 22 June 24

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್