AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆರ್​ಸಿಬಿ ಸೋಲಿಗೆ ಅಶ್ವಿನಿ ಕಾರಣವೆಂದ ದರ್ಶನ್​ ಫ್ಯಾನ್ಸ್; ದೂರು ನೀಡಲು ಮುಂದಾದ ಅಪ್ಪು ಅಭಿಮಾನಿಗಳು

ಆರ್​ಸಿಬಿ ಅನ್​ಬಾಕ್ಸಿಂಗ್ ಇವೆಂಟ್​ಗೆ ಅಶ್ವಿನಿ ಅವರು ಕೂಡ ತೆರಳಿದ್ದರು. ‘ಗಂಡ ಇಲ್ಲದ ಮಹಿಳೆಯನ್ನು ಶುಭ ಕಾರ್ಯಕ್ಕೆ ಕರೆಸಿದ್ದು ಸರಿ ಅಲ್ಲ, ಇದಕ್ಕಾಗಿಯೇ ಆರ್​ಸಿಬಿ ಸೋಲುತ್ತಿದೆ’ ಎಂದು ‘ಗಜಪಡೆ’ ಹೆಸರಿನ ಟ್ವಿಟರ್ ಅಕೌಂಟ್ ಮೂಲಕ ಟ್ವೀಟ್ ಮಾಡಲಾಗಿದೆ.

ಆರ್​ಸಿಬಿ ಸೋಲಿಗೆ ಅಶ್ವಿನಿ ಕಾರಣವೆಂದ ದರ್ಶನ್​ ಫ್ಯಾನ್ಸ್; ದೂರು ನೀಡಲು ಮುಂದಾದ ಅಪ್ಪು ಅಭಿಮಾನಿಗಳು
ಅಶ್ವಿನಿ-ದರ್ಶನ್
TV9 Web
| Updated By: ರಾಜೇಶ್ ದುಗ್ಗುಮನೆ|

Updated on: Apr 05, 2024 | 8:43 AM

Share

ಆರ್​ಸಿಬಿ ತಂಡ ಈ ಬಾರಿಯ ಐಪಿಎಲ್​ನಲ್ಲೂ ಮುಗ್ಗರಿಸುವ ಸೂಚನೆ ಸಿಕ್ಕಿದೆ. ಆಡಿದ ನಾಲ್ಕು ಪಂದ್ಯಗಳಲ್ಲಿ ಮೂರು ಸೋತು, ಒಂದು ಮ್ಯಾಚ್​ ಗೆದ್ದಿದೆ. ಆರ್​ಸಿಬಿ ಸೋಲಿಗೆ ಮ್ಯಾನೇಜ್​ಮೆಂಟ್​ನ ಕೆಲವರು ದೂರುತ್ತಿದ್ದಾರೆ. ಇನ್ನೂ ಕೆಲವರು ತಂಡ ಪರ್ಫಾರ್ಮೆನ್ಸ್​​ನ ತೆಗಳುತ್ತಿದ್ದಾರೆ. ದರ್ಶನ್ (Darshan) ಅವರ ಕೆಲ ಅಭಿಮಾನಿಗಳು ಮಾತ್ರ ಆರ್​ಸಿಬಿ ಸೋಲಿಗೆ ಅಶ್ವಿನಿ ಪುನೀತ್ ರಾಜ್​ಕುಮಾರ್ ಅವರನ್ನು ದೂರಿದ್ದಾರೆ. ಆರ್​ಸಿಬಿ ಸೋಲುವುದಕ್ಕೂ, ಅಶ್ವಿನಿ ಪುನೀತ್​ ರಾಜ್​ಕುಮಾರ್ಗೂ ಏನು ಸಂಬಂಧ ಎಂಬ ಪ್ರಶ್ನೆ ನಿಮ್ಮಲ್ಲಿ ಕಾಡಬಹುದು. ಇದಕ್ಕೆ ದರ್ಶನ್ ಅಭಿಮಾನಿಗಳ ಥಿಯರಿ ತುಂಬಾನೇ ಕೀಳುಮಟ್ಟದ್ದು.

ಆರ್​ಸಿಬಿ ಅನ್​ಬಾಕ್ಸಿಂಗ್ ಇವೆಂಟ್​ಗೆ ಅಶ್ವಿನಿ ಅವರು ಕೂಡ ತೆರಳಿದ್ದರು. ‘ಗಂಡ ಇಲ್ಲದ ಮಹಿಳೆಯನ್ನು ಶುಭ ಕಾರ್ಯಕ್ಕೆ ಕರೆಸಿದ್ದು ಸರಿ ಅಲ್ಲ, ಇದಕ್ಕಾಗಿಯೇ ಆರ್​ಸಿಬಿ ಸೋಲುತ್ತಿದೆ’ ಎಂದು ‘ಗಜಪಡೆ’ (@GAJAPADE6) ಹೆಸರಿನ ಟ್ವಿಟರ್ ಅಕೌಂಟ್ ಮೂಲಕ ಟ್ವೀಟ್ ಮಾಡಲಾಗಿದೆ. ಇದನ್ನು ಅನೇಕರು ಖಂಡಿಸಿದ್ದಾರೆ. ಇಷ್ಟು ಕೆಳಮಟ್ಟಕ್ಕೆ ಇಳಿಯಬಾರದು ಎಂದು ಅನೇಕರು ಅಭಿಪ್ರಾಯ ಹೊರಹಾಕಿದ್ದಾರೆ. ಇನ್ನೂ ಕೆಲವರು ‘ದರ್ಶನ್ ಅವರು ಫ್ಯಾನ್ಸ್​ಗೆ ಬುದ್ಧಿವಾದ ಹೇಳಬೇಕು’ ಎಂದಿದ್ದಾರೆ. ಈ ರೀತಿ ಪೋಸ್ಟ್ ಮಾಡಿದ್ದು ನಿಜಕ್ಕೂ ದರ್ಶನ್ ಅಭಿಮಾನಿಯೇ ಅಥವಾ ಫೇಕ್ ಖಾತೆಯೇ ಎಂಬ ಪ್ರಶ್ನೆಯೂ ಮೂಡಿದೆ.

ಸಿಟ್ಟಿಗೆದ್ದ ಅಭಿಮಾನಿಗಳು

ಈ ಟ್ವೀಟ್​ನಿಂದ ಪುನೀತ್ ರಾಜಕುಮಾರ್ ಫ್ಯಾನ್ಸ್ ಸದ್ಯ ಕೋಪಗೊಂಡಿದ್ದಾರೆ. ಹೀಗಾಗಿ, ಕಾನೂನು ಕ್ರಮಕ್ಕೆ ಅಪ್ಪು ಅಭಿಮಾನಿಗಳು ಮುಂದಾಗಿದ್ದಾರೆ. ಇಂದು ಕಮಿಷನರ್ ಭೇಟಿಯಾಗಿ, ದೂರು ಕೋಡೋ ಸಾಧ್ಯತೆ ಇದೆ. ಈ ಪ್ರಕರಣದ ತನಿಖೆ ನಡೆದರೆ ಅಸಲಿ ವಿಚಾರ ಹೊರ ಬೀಳಲಿದೆ.

ಇದನ್ನೂ ಓದಿ: ಆಡಿ ಕ್ಯೂ 7 ಕಾರು ಖರೀದಿಸಿದ ಅಶ್ವಿನಿ ಪುನೀತ್​ರಾಜ್​ಕುಮಾರ್, ಬೆಲೆ ಎಷ್ಟು ಕೋಟಿ?

ಸ್ಯಾಂಡಲ್​ವುಡ್​ನಲ್ಲಿ ಅಭಿಮಾನಿಗಳ ಮಧ್ಯೆ ಆಗಾಗ ಸೋಶಿಯಲ್ ಮೀಡಿಯಾದಲ್ಲಿ ವಾರ್ ನಡೆಯುತ್ತಲೇ ಇರುತ್ತದೆ. ಫ್ಯಾನ್ಸ್ ಪರಸ್ಪರ ಕಿತ್ತಾಡಿಕೊಳ್ಳುತ್ತಾ ಇರುತ್ತಾರೆ. ಆದರೆ, ಇಷ್ಟು ಕೀಳುಮಟ್ಟದಲ್ಲಿ ಮಾತನಾಡುತ್ತಿರುವುದು ಸರಿ ಅಲ್ಲ ಎಂದು ಅನೇಕರು ಅಭಿಪ್ರಾಯಪಟ್ಟಿದ್ದಾರೆ.

ಅಶ್ವಿನಿ ಪುನೀತ್​ರಾಜ್​ಕುಮಾರ್ ಅವರು ಅನೇಕರಿಗೆ ಮಾದರಿ. ಪುನೀತ್ ನಿಧನದ ನಂತರ ಅವರು ಪಿಆರ್​ಕೆ ಪ್ರೊಡಕ್ಷನ್ಸ್​ನ ಸಂಪೂರ್ಣ ಜವಾಬ್ದಾರಿಯನ್ನು ತಾವೇ ತೆಗೆದುಕೊಂಡಿದ್ದಾರೆ. ಹೊಸಬರಿಗೆ ಅವರು ಅವಕಾಶ ನೀಡುತ್ತಿದ್ದಾರೆ. ಇತ್ತೀಚೆಗೆ ಅವರು ಆಡಿ ಕ್ಯೂ 7 ಕಾರು ಖರೀಸಿದ್ದರು.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!