AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆರ್​ಸಿಬಿ ಸೋಲಿಗೆ ಅಶ್ವಿನಿ ಕಾರಣವೆಂದ ದರ್ಶನ್​ ಫ್ಯಾನ್ಸ್; ದೂರು ನೀಡಲು ಮುಂದಾದ ಅಪ್ಪು ಅಭಿಮಾನಿಗಳು

ಆರ್​ಸಿಬಿ ಅನ್​ಬಾಕ್ಸಿಂಗ್ ಇವೆಂಟ್​ಗೆ ಅಶ್ವಿನಿ ಅವರು ಕೂಡ ತೆರಳಿದ್ದರು. ‘ಗಂಡ ಇಲ್ಲದ ಮಹಿಳೆಯನ್ನು ಶುಭ ಕಾರ್ಯಕ್ಕೆ ಕರೆಸಿದ್ದು ಸರಿ ಅಲ್ಲ, ಇದಕ್ಕಾಗಿಯೇ ಆರ್​ಸಿಬಿ ಸೋಲುತ್ತಿದೆ’ ಎಂದು ‘ಗಜಪಡೆ’ ಹೆಸರಿನ ಟ್ವಿಟರ್ ಅಕೌಂಟ್ ಮೂಲಕ ಟ್ವೀಟ್ ಮಾಡಲಾಗಿದೆ.

ಆರ್​ಸಿಬಿ ಸೋಲಿಗೆ ಅಶ್ವಿನಿ ಕಾರಣವೆಂದ ದರ್ಶನ್​ ಫ್ಯಾನ್ಸ್; ದೂರು ನೀಡಲು ಮುಂದಾದ ಅಪ್ಪು ಅಭಿಮಾನಿಗಳು
ಅಶ್ವಿನಿ-ದರ್ಶನ್
TV9 Web
| Edited By: |

Updated on: Apr 05, 2024 | 8:43 AM

Share

ಆರ್​ಸಿಬಿ ತಂಡ ಈ ಬಾರಿಯ ಐಪಿಎಲ್​ನಲ್ಲೂ ಮುಗ್ಗರಿಸುವ ಸೂಚನೆ ಸಿಕ್ಕಿದೆ. ಆಡಿದ ನಾಲ್ಕು ಪಂದ್ಯಗಳಲ್ಲಿ ಮೂರು ಸೋತು, ಒಂದು ಮ್ಯಾಚ್​ ಗೆದ್ದಿದೆ. ಆರ್​ಸಿಬಿ ಸೋಲಿಗೆ ಮ್ಯಾನೇಜ್​ಮೆಂಟ್​ನ ಕೆಲವರು ದೂರುತ್ತಿದ್ದಾರೆ. ಇನ್ನೂ ಕೆಲವರು ತಂಡ ಪರ್ಫಾರ್ಮೆನ್ಸ್​​ನ ತೆಗಳುತ್ತಿದ್ದಾರೆ. ದರ್ಶನ್ (Darshan) ಅವರ ಕೆಲ ಅಭಿಮಾನಿಗಳು ಮಾತ್ರ ಆರ್​ಸಿಬಿ ಸೋಲಿಗೆ ಅಶ್ವಿನಿ ಪುನೀತ್ ರಾಜ್​ಕುಮಾರ್ ಅವರನ್ನು ದೂರಿದ್ದಾರೆ. ಆರ್​ಸಿಬಿ ಸೋಲುವುದಕ್ಕೂ, ಅಶ್ವಿನಿ ಪುನೀತ್​ ರಾಜ್​ಕುಮಾರ್ಗೂ ಏನು ಸಂಬಂಧ ಎಂಬ ಪ್ರಶ್ನೆ ನಿಮ್ಮಲ್ಲಿ ಕಾಡಬಹುದು. ಇದಕ್ಕೆ ದರ್ಶನ್ ಅಭಿಮಾನಿಗಳ ಥಿಯರಿ ತುಂಬಾನೇ ಕೀಳುಮಟ್ಟದ್ದು.

ಆರ್​ಸಿಬಿ ಅನ್​ಬಾಕ್ಸಿಂಗ್ ಇವೆಂಟ್​ಗೆ ಅಶ್ವಿನಿ ಅವರು ಕೂಡ ತೆರಳಿದ್ದರು. ‘ಗಂಡ ಇಲ್ಲದ ಮಹಿಳೆಯನ್ನು ಶುಭ ಕಾರ್ಯಕ್ಕೆ ಕರೆಸಿದ್ದು ಸರಿ ಅಲ್ಲ, ಇದಕ್ಕಾಗಿಯೇ ಆರ್​ಸಿಬಿ ಸೋಲುತ್ತಿದೆ’ ಎಂದು ‘ಗಜಪಡೆ’ (@GAJAPADE6) ಹೆಸರಿನ ಟ್ವಿಟರ್ ಅಕೌಂಟ್ ಮೂಲಕ ಟ್ವೀಟ್ ಮಾಡಲಾಗಿದೆ. ಇದನ್ನು ಅನೇಕರು ಖಂಡಿಸಿದ್ದಾರೆ. ಇಷ್ಟು ಕೆಳಮಟ್ಟಕ್ಕೆ ಇಳಿಯಬಾರದು ಎಂದು ಅನೇಕರು ಅಭಿಪ್ರಾಯ ಹೊರಹಾಕಿದ್ದಾರೆ. ಇನ್ನೂ ಕೆಲವರು ‘ದರ್ಶನ್ ಅವರು ಫ್ಯಾನ್ಸ್​ಗೆ ಬುದ್ಧಿವಾದ ಹೇಳಬೇಕು’ ಎಂದಿದ್ದಾರೆ. ಈ ರೀತಿ ಪೋಸ್ಟ್ ಮಾಡಿದ್ದು ನಿಜಕ್ಕೂ ದರ್ಶನ್ ಅಭಿಮಾನಿಯೇ ಅಥವಾ ಫೇಕ್ ಖಾತೆಯೇ ಎಂಬ ಪ್ರಶ್ನೆಯೂ ಮೂಡಿದೆ.

ಸಿಟ್ಟಿಗೆದ್ದ ಅಭಿಮಾನಿಗಳು

ಈ ಟ್ವೀಟ್​ನಿಂದ ಪುನೀತ್ ರಾಜಕುಮಾರ್ ಫ್ಯಾನ್ಸ್ ಸದ್ಯ ಕೋಪಗೊಂಡಿದ್ದಾರೆ. ಹೀಗಾಗಿ, ಕಾನೂನು ಕ್ರಮಕ್ಕೆ ಅಪ್ಪು ಅಭಿಮಾನಿಗಳು ಮುಂದಾಗಿದ್ದಾರೆ. ಇಂದು ಕಮಿಷನರ್ ಭೇಟಿಯಾಗಿ, ದೂರು ಕೋಡೋ ಸಾಧ್ಯತೆ ಇದೆ. ಈ ಪ್ರಕರಣದ ತನಿಖೆ ನಡೆದರೆ ಅಸಲಿ ವಿಚಾರ ಹೊರ ಬೀಳಲಿದೆ.

ಇದನ್ನೂ ಓದಿ: ಆಡಿ ಕ್ಯೂ 7 ಕಾರು ಖರೀದಿಸಿದ ಅಶ್ವಿನಿ ಪುನೀತ್​ರಾಜ್​ಕುಮಾರ್, ಬೆಲೆ ಎಷ್ಟು ಕೋಟಿ?

ಸ್ಯಾಂಡಲ್​ವುಡ್​ನಲ್ಲಿ ಅಭಿಮಾನಿಗಳ ಮಧ್ಯೆ ಆಗಾಗ ಸೋಶಿಯಲ್ ಮೀಡಿಯಾದಲ್ಲಿ ವಾರ್ ನಡೆಯುತ್ತಲೇ ಇರುತ್ತದೆ. ಫ್ಯಾನ್ಸ್ ಪರಸ್ಪರ ಕಿತ್ತಾಡಿಕೊಳ್ಳುತ್ತಾ ಇರುತ್ತಾರೆ. ಆದರೆ, ಇಷ್ಟು ಕೀಳುಮಟ್ಟದಲ್ಲಿ ಮಾತನಾಡುತ್ತಿರುವುದು ಸರಿ ಅಲ್ಲ ಎಂದು ಅನೇಕರು ಅಭಿಪ್ರಾಯಪಟ್ಟಿದ್ದಾರೆ.

ಅಶ್ವಿನಿ ಪುನೀತ್​ರಾಜ್​ಕುಮಾರ್ ಅವರು ಅನೇಕರಿಗೆ ಮಾದರಿ. ಪುನೀತ್ ನಿಧನದ ನಂತರ ಅವರು ಪಿಆರ್​ಕೆ ಪ್ರೊಡಕ್ಷನ್ಸ್​ನ ಸಂಪೂರ್ಣ ಜವಾಬ್ದಾರಿಯನ್ನು ತಾವೇ ತೆಗೆದುಕೊಂಡಿದ್ದಾರೆ. ಹೊಸಬರಿಗೆ ಅವರು ಅವಕಾಶ ನೀಡುತ್ತಿದ್ದಾರೆ. ಇತ್ತೀಚೆಗೆ ಅವರು ಆಡಿ ಕ್ಯೂ 7 ಕಾರು ಖರೀಸಿದ್ದರು.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Follow Us
ಬಾಗೇಪಲ್ಲಿ ಕಾರು ಚಾಲಕನ ಹತ್ಯೆ ಮಾಡಿದ ಆರೋಪಿಗೆ ಪೊಲೀಸರ ತೀವ್ರ ಶೋಧ
ಬಾಗೇಪಲ್ಲಿ ಕಾರು ಚಾಲಕನ ಹತ್ಯೆ ಮಾಡಿದ ಆರೋಪಿಗೆ ಪೊಲೀಸರ ತೀವ್ರ ಶೋಧ
ಬೆಂಗಳೂರಿಗೆ ಬಂದ ಇಡಿ ನಿರ್ದೇಶಕ ರಾಹುಲ್ ನವೀನ್
ಬೆಂಗಳೂರಿಗೆ ಬಂದ ಇಡಿ ನಿರ್ದೇಶಕ ರಾಹುಲ್ ನವೀನ್
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ