AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದರ್ಶನ್ ಫಾರಂ ಹೌಸ್ ಮ್ಯಾನೇಜರ್ ಎನ್ನಲಾದ ವ್ಯಕ್ತಿಯ ಆತ್ಮಹತ್ಯೆ: ಪ್ರಕರಣದ ಮರು ತನಿಖೆ?

ನಟ ದರ್ಶನ್ ತೂಗುದೀಪ ಅವರ ಮ್ಯಾನೇಜರ್ ಆಗಿ ಕಾರ್ಯ ನಿರ್ವಹಿಸಿದ್ದ ಎನ್ನಲಾಗಿರುವ ಶ್ರೀಧರ್ ಎಂಬಾತ ಏಪ್ರಿಲ್ ತಿಂಗಳಲ್ಲಿ ಆತ್ಮಹತ್ಯೆಗೆ ಶರಣಾಗಿದ್ದು ಆ ಪ್ರಕರಣದ ಮರು ತನಿಖೆ ನಡೆಯುವ ಸಾಧ್ಯತೆ ಇದೆ.

ದರ್ಶನ್ ಫಾರಂ ಹೌಸ್ ಮ್ಯಾನೇಜರ್ ಎನ್ನಲಾದ ವ್ಯಕ್ತಿಯ ಆತ್ಮಹತ್ಯೆ: ಪ್ರಕರಣದ ಮರು ತನಿಖೆ?
ದರ್ಶನ್
ಮಂಜುನಾಥ ಸಿ.
|

Updated on:Jun 18, 2024 | 7:04 PM

Share

ರೇಣುಕಾ ಸ್ವಾಮಿ (Renuka Swamy) ಕೊಲೆ ಪ್ರಕರಣದಲ್ಲಿ ಆರೋಪಿಯಾಗಿರುವ ದರ್ಶನ್​ರಿಗೆ ಹಲವು ಸಂಕಷ್ಟಗಳು ಸುತ್ತಿಕೊಳ್ಳುತ್ತಿವೆ. ಕೆಲವು ಹಳೆ ಪ್ರಕರಣಗಳಿಗೂ ಈಗ ಮರುಜೀವ ಬಂದಿದೆ. ಈಗಾಗಲೇ ದರ್ಶನ್​ರ ಮಾಜಿ ಮ್ಯಾನೇಜರ್ ಮಲ್ಲಿ ಕುರಿತು ಹುಡುಕಾಟ ಜಾರಿಯಲ್ಲಿದೆ. ಇದರ ಮಧ್ಯೆ ಮಲ್ಲಿ ತಾನು ಜೀವಂತ ಇರುವುದಾಗಿಯೂ ಸಾಲಗಳಿಂದಾಗಿ ಕಷ್ಟದಲ್ಲಿದ್ದು, ಸಾಲ ಮರುಪಾವತಿಗೆ ಬೇಕಾದ ಹಣ ಗಳಿಸಿಯೇ ಬರುವುದಾಗಿ ಪತ್ನಿಗೆ ಬರೆದ ಪತ್ರದಲ್ಲಿ ತಿಳಿಸಿದ್ದಾಗಿ ವರದಿಯಾಗಿದೆ. ಇದೀಗ ದರ್ಶನ್​ರ ಮತ್ತೊಬ್ಬ ಮ್ಯಾನೇಜರ್ ಆತ್ಮಹತ್ಯೆ ಮಾಡಿಕೊಂಡಿರುವ ಬಗ್ಗೆ ಇದೀಗ ವರದಿಯಾಗಿದ್ದು, ಆ ಪ್ರಕರಣದ ಮರು ತನಿಖೆ ನಡೆಯುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ.

ದರ್ಶನ್​ರ ಫಾರಂಹೌಸ್​ನಲ್ಲಿ ಮ್ಯಾನೇಜರ್ ಆಗಿ ಕೆಲಸ ಮಾಡಿದ್ದ, ದರ್ಶನ್​ರ ಆಪ್ತವಲಯದಲ್ಲಿ ಗುರುತಿಸಿಕೊಂಡಿದ್ದ ಎನ್ನಲಾದ ಶ್ರೀಧರ್ ಎಂಬುವರು ಏಪ್ರಿಲ್​ನಲ್ಲಿ ಆತ್ಮಹತ್ಯೆಗೆ ಶರಣಾಗಿದ್ದರು. ಈ ವಿಷಯ ಇದೀಗ ಮಹತ್ವ ಪಡೆದುಕೊಂಡಿದ್ದು, ಆತ್ಮಹತ್ಯೆ ಪ್ರಕರಣದ ಮರು ತನಿಖೆ ನಡೆಯುವ ಸಾಧ್ಯತೆ ಇದೆ.

ಶ್ರೀಧರ್ ಎಂಬುವರು ಕಳೆದ ಏಪ್ರಿಲ್ 17 ರಂದು ಆತ್ಮಹತ್ಯೆಗೆ ಶರಣಾಗಿದ್ದರು. ಅವರ ಮೃತದೇಹ ಆನೇಕಲ್ ತಾಲೂಕಿನ ಬಗ್ಗನದೊಡ್ಡಿಯಲ್ಲಿರುವ ದರ್ಶನ್​​ಗೆ ಸೇರಿದ ಫಾರ್ಮ್​ಹೌಸ್ ನಲ್ಲಿ ಪತ್ತೆಯಾಗಿತ್ತು. ಆ ಫಾರಂ ಹೌಸ್​ನ ಮೇಲ್ವಿಚಾರಣೆಯನ್ನು ಶ್ರೀಧರ್ ಅವರೇ ನೋಡಿಕೊಳ್ಳುತ್ತಿದ್ದರು. ಅದೇ ಫಾರಂ ಹೌಸ್​ನಲ್ಲಿ ಅವರ ಮೃತದೇಹ ಪತ್ತೆಯಾಗಿತ್ತು. 2 ಎಕರೆ 36 ಗುಂಟೆ ಪ್ರದೇಶದಲ್ಲಿರುವ ಫಾರ್ಮ್​ಹೌಸ್​ನ ಕಲ್ಲು ಬಂಡೆಯೊಂದರ ಮೇಲೆ ಶ್ರೀಧರ್ ಮೃತದೇಹ ಪತ್ತೆಯಾಗಿತ್ತು. ಆತನ ಗೆಳೆಯನೊಬ್ಬ ಆ ಸಮಯದಲ್ಲಿ ಪೊಲೀಸರಿಗೆ ಮಾಹಿತಿ ಒದಗಿಸಿದ್ದ.

ಇದನ್ನೂ ಓದಿ:ಪಾರ್ಟಿಯಲ್ಲಿ ದರ್ಶನ್, ಚಿಕ್ಕಣ್ಣ ಜೊತೆ ಇದ್ದ ಮತ್ತೋರ್ವ ಹೀರೋ ಇವರೇ ನೋಡಿ

ಆತ್ಮಹತ್ಯೆಗೆ ಶರಣಾಗಿದ್ದ ಶ್ರೀಧರ್ ಅವರ ಡೆತ್ ನೋಟ್ ಸಹ ಆ ಸಮಯದಲ್ಲಿ ಪತ್ತೆಯಾಗಿತ್ತು, ‘ನನ್ನ ಸಾವಿಗೆ ನಾನೇ ಕಾರಣ, ಒಂಟಿತನ ಕಾಡುತ್ತಿದೆ ಹಾಗಾಗಿ ಆತ್ಮಹತ್ಯೆ ಮಾಡಿಕೊಳ್ಳುತ್ತಿರುವುದಾಗಿ ಶ್ರೀಧರ್ ಬರೆದುಕೊಂಡಿದ್ದ. ಅನೆಕಲ್ ಪೊಲೀಸ್ ಠಾಣೆಯಲ್ಲಿ ಈ ಪ್ರಕರಣ ದಾಖಲಾಗಿತ್ತು. ಇದೀಗ ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್​ ಆರೋಪಿಯಾಗಿರುವ ಹಿನ್ನೆಲೆಯಲ್ಲಿ ಅವರ ಹಳೆಯ ಪ್ರಕರಣಗಳನ್ನು ಸಹ ಪೊಲೀಸರು ಜಾಲಾಡುತ್ತಿದ್ದು, ಶ್ರೀಧರ್ ಆತ್ಮಹತ್ಯೆ ಪ್ರಕರಣದ ಮರು ತನಿಖೆ ನಡೆಯುವ ಸಂಭವ ಇದೆ.

ಈ ಘಟನೆ ಬಗ್ಗೆ ಮಾತನಾಡಿರುವ ಬೆಂಗಳೂರು ಗ್ರಾಮಾಂತರ ಎಸ್​ಪಿ ಮಲ್ಲಿಕಾರ್ಜುನ, ‘ಶ್ರೀಧರ್​ಗೆ 39 ವರ್ಷ ಆಗಿದ್ದು, ಮದುವೆ ಆಗಿರಲಿಲ್ಲ, ಡೆತ್ ನೋಟ್ ನಲ್ಲಿ ಸಾವಿಗೆ ಯಾರು ಕಾರಣ ಅಲ್ಲ, ಒಂಟಿತನದಿಂದ ಬೇಸರಗೊಂಡು ಸಾಯುತ್ತಿದ್ದೇನೆ, ಯಾರಿಗೂ ತೊಂದರೆ ಕೊಡಬೇಡಿ ಎಂದು ಬರೆದಿತ್ತು. ಮರಣೋತ್ತರ ಪರೀಕ್ಷೆಯ ಪ್ರಾಥಮಿಕ ವರದಿಯಲ್ಲಿ ವಿಷ ಸೇವಿಸಿರುವುದಾಗಿ ಬಂದಿತ್ತು. ಕೆಲವು ಬಾಡಿ ಪಾರ್ಟ್​ಗಳನ್ನು ಕಳಿಸಿದ್ದೆವು, ಅದರ ವರದಿ ಇನ್ನೂ ಬಂದಿಲ್ಲ. ಫಾರಂ ಹೌಸ್​ನ ಇನ್ನೂ ಕೆಲವರ ವಿಚಾರಣೆ ಮಾಡಿ ಹೇಳಿಕೆ ಪಡೆಯಬೇಕಿದೆ’ ಎಂದಿದ್ದಾರೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 1:14 pm, Tue, 18 June 24

Follow Us
ಕೋಟಿ ಆಸ್ತಿಗಾಗಿ ಜೀವಂತ ವೃದ್ಧನ ಮರಣ ಪ್ರಮಾಣಪತ್ರ ಸೃಷ್ಟಿಸಿ ವಂಚನೆ!
ಕೋಟಿ ಆಸ್ತಿಗಾಗಿ ಜೀವಂತ ವೃದ್ಧನ ಮರಣ ಪ್ರಮಾಣಪತ್ರ ಸೃಷ್ಟಿಸಿ ವಂಚನೆ!
ಒಂಟಿ ಮನೆಗಳನ್ನೇ ದರೋಡೆ ಮಾಡ್ತಿದ್ದ ಖತರ್ನಾಕ್ ಗ್ಯಾಂಗ್ ಬಂಧನ
ಒಂಟಿ ಮನೆಗಳನ್ನೇ ದರೋಡೆ ಮಾಡ್ತಿದ್ದ ಖತರ್ನಾಕ್ ಗ್ಯಾಂಗ್ ಬಂಧನ
ನಾಗೇಂದ್ರ ರಾಜೀನಾಮೆ ಪಟ್ಟು, ರಾಜ್ಯಾದ್ಯಂತ ಪ್ರತಿಭಟನೆಗೂ ಬಿಜೆಪಿ ಪ್ಲ್ಯಾನ್
ನಾಗೇಂದ್ರ ರಾಜೀನಾಮೆ ಪಟ್ಟು, ರಾಜ್ಯಾದ್ಯಂತ ಪ್ರತಿಭಟನೆಗೂ ಬಿಜೆಪಿ ಪ್ಲ್ಯಾನ್
ಇಂದು ನಾಗಪಂಚಮಿಯ ಜೊತೆಗೆ ಸೂರ್ಯ ಸಂಕ್ರಮಣದ ವಿಶೇಷ ಪರ್ವ ದಿನ!
ಇಂದು ನಾಗಪಂಚಮಿಯ ಜೊತೆಗೆ ಸೂರ್ಯ ಸಂಕ್ರಮಣದ ವಿಶೇಷ ಪರ್ವ ದಿನ!
ಚಿಕ್ಕಪ್ಪನ ಜೊತೆ ನಟನೆ, ನಟ ನಿರಂಜನ್ ಹೇಳಿದ್ದೇನು? ವಿಡಿಯೋ ನೋಡಿ
ಚಿಕ್ಕಪ್ಪನ ಜೊತೆ ನಟನೆ, ನಟ ನಿರಂಜನ್ ಹೇಳಿದ್ದೇನು? ವಿಡಿಯೋ ನೋಡಿ
ದರ್ಶನ್ ಅಭಿಮಾನಿಗಳಿಗೆ ನಗುತ್ತಲೇ ಬುದ್ಧಿವಾದ ಹೇಳಿದ ವಿಜಯಲಕ್ಷ್ಮಿ ದರ್ಶನ್
ದರ್ಶನ್ ಅಭಿಮಾನಿಗಳಿಗೆ ನಗುತ್ತಲೇ ಬುದ್ಧಿವಾದ ಹೇಳಿದ ವಿಜಯಲಕ್ಷ್ಮಿ ದರ್ಶನ್
ಬೆಂಗಳೂರಿನಲ್ಲಿ ಉತ್ತರ ಕರ್ನಾಟಕದ ಸಂಸ್ಕೃತಿಯ ಸೊಗಡು
ಬೆಂಗಳೂರಿನಲ್ಲಿ ಉತ್ತರ ಕರ್ನಾಟಕದ ಸಂಸ್ಕೃತಿಯ ಸೊಗಡು
ವಂದೇ ಮಾತರಂಗೆ ಅವಮಾನಿಸಿದ ಆರೋಪ: ಸೋನಿಯಾ ಗಾಂಧಿ ವಿರುದ್ಧ ಕೇಸ್ ಬುಕ್!
ವಂದೇ ಮಾತರಂಗೆ ಅವಮಾನಿಸಿದ ಆರೋಪ: ಸೋನಿಯಾ ಗಾಂಧಿ ವಿರುದ್ಧ ಕೇಸ್ ಬುಕ್!
ಮತ್ತೆ ಮುನ್ನೆಲೆಗೆ ಬಂದ ನೈಸ್ ರಸ್ತೆ ಟೋಲ್:ಸಿಡಿದೆದ್ದ ಪ್ರತಿಪಕ್ಷಗಳು
ಮತ್ತೆ ಮುನ್ನೆಲೆಗೆ ಬಂದ ನೈಸ್ ರಸ್ತೆ ಟೋಲ್:ಸಿಡಿದೆದ್ದ ಪ್ರತಿಪಕ್ಷಗಳು
ಹಾನೂರು ಶೂಟೌಟ್ ಪ್ರಕರಣಕ್ಕೆ ಬಿಗ್ ಟ್ವಿಸ್ಟ್: ಹೇಳಿದ್ದಿಷ್ಟು
ಹಾನೂರು ಶೂಟೌಟ್ ಪ್ರಕರಣಕ್ಕೆ ಬಿಗ್ ಟ್ವಿಸ್ಟ್: ಹೇಳಿದ್ದಿಷ್ಟು