AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದರ್ಶನ್ ಬೆಳೆದು ಬಂದ ಹಾದಿಯ ಬಗ್ಗೆ ಆಪ್ತ ಗೆಳೆಯ ವಿವರಿಸಿದ್ದು ಹೀಗೆ

Darshan Friend: ನಟ ದರ್ಶನ್ ತೂಗುದೀಪ ಚಿತ್ರರಂಗಕ್ಕೆ ಬಂದು 25 ವರ್ಷಗಳಾಗಿವೆ. ನಟನಾಗುವ ಮುಂಚೆಯಿಂದಲೂ ದರ್ಶನ್ ಅವರನ್ನು ಹತ್ತಿರದಿಂದ ನೋಡಿರುವ ಶಿವಕುಮಾರ್, ದರ್ಶನ್ ಬಗ್ಗೆ ಮಾತನಾಡಿದ್ದಾರೆ.

ದರ್ಶನ್ ಬೆಳೆದು ಬಂದ ಹಾದಿಯ ಬಗ್ಗೆ ಆಪ್ತ ಗೆಳೆಯ ವಿವರಿಸಿದ್ದು ಹೀಗೆ
ಮಂಜುನಾಥ ಸಿ.
|

Updated on: Feb 17, 2024 | 9:42 PM

Share

ನಟ ದರ್ಶನ್ (Darshan) ಚಿತ್ರರಂಗಕ್ಕೆ ಕಾಲಿಟ್ಟು 25 ವರ್ಷಗಳಾಗಿವೆ. ಲೈಟ್ ಬಾಯ್ ಆಗಿ ಚಿತ್ರರಂಗಕ್ಕೆ ಕಾಲಿಟ್ಟ ದರ್ಶನ್ ಈಗ ಕನ್ನಡ ಚಿತ್ರರಂಗದ ಸೂಪರ್ ಸ್ಟಾರ್. ಅವರ ಈ 25 ವರ್ಷಗಳ ಸಿನಿಮಾ ಪಯಣ ಸುಲಭದ್ದಾಗಿರಲಿಲ್ಲ. ಆರಂಭದಲ್ಲಿ ನಾನಾ ಕಷ್ಟಗಳನ್ನು ಎದುರಿಸಿ ನಟರಾದವರು, ನಟನಾದ ಮೇಲೆಯೂ ಸಾಕಷ್ಟು ಸವಾಲುಗಳನ್ನು ಎದುರಿಸಿ ಸತತ ಪರಿಶ್ರಮ ಪಟ್ಟು ಈಗಿರುವ ಸ್ಥಾನಕ್ಕೆ ಏರಿದ್ದಾರೆ ನಟ ದರ್ಶನ್. ತೂಗುದೀಪ ದರ್ಶನ್​ರ 25 ವರ್ಷಗಳ ಪಯಣವನ್ನು ಹತ್ತಿರದಿಂದ ನೋಡಿದ ಗೆಳೆಯರು ಕೆಲವರಷ್ಟೆ. ಅವರಲ್ಲಿ ಒಬ್ಬರು ನಿರ್ಮಾಪಕ ಶಿವಕುಮಾರ್. ತಮ್ಮ ಆಪ್ತ ಗೆಳೆಯ ಆರಂಭದಲ್ಲಿ ಎದುರಿಸಿದ ಕಷ್ಟಗಳು, ಬೆಳೆದ ರೀತಿ ಬಗ್ಗೆ ಅಪರೂಪದ ಸಂಗತಿಗಳನ್ನು ಶಿವಕುಮಾರ್ ಹಂಚಿಕೊಂಡಿದ್ದಾರೆ.

‘ಮೈಸೂರಿನಲ್ಲಿ ಒಂದು ಕೇಬಲ್ ಆಫೀಸ್ ಇತ್ತು ಅದು ನಮ್ಮ ಅಡ್ಡ. ಎಷ್ಟೋ ವರ್ಷಗಳ ಕಾಲ ದರ್ಶನ್ ಆ ಕೇಬಲ್ ಆಫೀಸ್​ನಲ್ಲೇ ಮಲಗಿದ್ದಾರೆ. ಈಗ ಮೈಸೂರಿನ ಗ್ಯಾಂಗ್ ಏನಿದೆಯೋ ಎಲ್ಲರಿಗೂ ಅದೇ ಅಡ್ಡ. ಆ ಗ್ಯಾಂಗ್ ಅನ್ನು ಕಟ್ಟಿದ್ದು ಸಹ ದರ್ಶನ್. ಆಗಿನಿಂದಲೂ ದರ್ಶನ್ ಶ್ರಮ ಜೀವಿ. ಹಸು ಸಾಕುತ್ತಿದ್ದರು, ಹಾಲು ಹಾಕುತ್ತಿದ್ದರು. ಹೊಲಕ್ಕೆ ಹೋಗಿ ಹಸುಗಳಿಗೆ ಮೇವು ಕೊಯ್ದು ತರುತ್ತಿದ್ದರು. ಹಸುಗಳ ಶೆಡ್ಡು ಕ್ಲೀನ್ ಮಾಡುತ್ತಿದ್ದರು’ ಎಂದು ಹಳೆಯ ದರ್ಶನ್ ಅನ್ನು ಶಿವಕುಮಾರ್ ನೆನಪು ಮಾಡಿಕೊಂಡರು.

ಇದನ್ನೂ ಓದಿ:21 ವರ್ಷದ ಬಳಿಕ ಒಂದಾದ ದರ್ಶನ್-ಪ್ರೇಮ್, ಈ ಬಾರಿ ರೌಡಿಸಂ ಕಥೆಯಲ್ಲ?

‘ಆಗಿನಿಂದಲೂ ದರ್ಶನ್​ಗೆ ನಟನಾಗಬೇಕು ಎಂಬ ಆಸೆ ಇತ್ತು. ಒಮ್ಮೆ ಮೈಸೂರಿನ ಪ್ರಭಾತ್ ಚಿತ್ರಮಂದಿರದ ಮುಂದೆ ಹೋಗುವಾಗ ‘ಆಕಸ್ಮಿಕ’ ಸಿನಿಮಾದ ಕಟೌಟ್ ನೋಡಿ ನಾನೂ ಸಿನಿಮಾ ಹೀರೋ ಆಗ್ತೀನಾ, ನನ್ನ ಕಟೌಟ್ ಹೀಗೆ ಬೀಳುತ್ತಾ ಎಂದು ಕೇಳುತ್ತಿದ್ದ. ಅದರಂತೆ ಕಷ್ಟಪಟ್ಟ ನೀನಾಸಂಗೆ ಹೋದ ನಟನೆ ಕಲಿತರು, ಅಲ್ಲಿಂದ ಬಂದು ಲೈಟ್ ಬಾಯ್ ಆಗಿ ಕೆಲಸ ಮಾಡಿದರು. ಗೌರಿಶಂಕರ್ ಅವರಿಗೆ ಸಹಾಯಕರಾಗಿ ಕೆಲಸ ಮಾಡಿದರು. ಧಾರಾವಾಹಿಗಳಲ್ಲಿ ಕೆಲಸ ಮಾಡಿದರು. ಬಹಳ ಕಷ್ಟಪಟ್ಟರು, ಎಲ್ಲಿಯೂ ತಮ್ಮ ಹಿನ್ನೆಲೆ ಹೇಳಿಕೊಳ್ಳಲಿಲ್ಲ, ಕೊನೆಗೆ ನಾಯಕನಾದರು’ ಎಂದು ಗೆಳೆಯನನ್ನು ಶಿವಕುಮಾರ್ ಕೊಂಡಾಡಿದರು.

ಸ್ಟಾರ್ ನಟನಾದರೂ ಗೆಳೆಯರ ಬಳಿಕ ಗೆಳೆಯನಂತೆ ಇರುತ್ತಾರೆ. ಎಷ್ಟೋ ಜನ ಗೆಳೆಯರಿಗೆ ಹಲವಾರು ವಿಷಯಗಳಲ್ಲಿ ಸಹಾಯ ಮಾಡಿದ್ದಾರೆ. ನಮ್ಮನ್ನೆಲ್ಲ ಮೊದಲು ಫ್ಲೈಟ್ ಹತ್ತಿಸಿದ್ದು ದರ್ಶನ್. ಶೂಟಿಂಗ್​ಗೆ ನಮ್ಮನ್ನು ಕರೆದುಕೊಂಡು ಹೋದರೆ ನಮ್ಮ ಜೊತೆಗೆ ಸಾಮಾನ್ಯ ರೂಂನಲ್ಲಿ ಉಳಿಯುತ್ತಿದ್ದ. ನಾನು ನಿರ್ಮಾಪಕ ಆದಮೇಲೆ, ನನಗೆ ಸಹ ಮೂರು ಬಾರಿ ಕಾಲ್​ಶೀಟ್ ಕೊಟ್ಟಿದ್ದ ಆದರೆ ಮೂರೂ ಬಾರಿಯೂ ಸಿನಿಮಾ ಮಾಡಲು ಆಗಲಿಲ್ಲ. ಆದರೂ ನನ್ನ ಸಿನಿಮಾಗಳಿಗೆ ಬೆಂಬಲ ನೀಡುತ್ತಾನೆ’ ಎಂದರು ಶಿವಕುಮಾರ್.

ಇದನ್ನೂ ಓದಿ:ದರ್ಶನ್ ಹುಟ್ಟುಹಬ್ಬದಂದು ಅವರಿಗೆ ದೃಷ್ಟಿ ತೆಗೆದ ಮಹಿಳೆಯರ ಮಾತು

‘ದರ್ಶನ್ ಇನ್ನೂ ಏಳೆಂಟು ವರ್ಷಗಳ ಕಾಲ ಬ್ಯುಸಿಯಾಗಿದ್ದಾರೆ. ಅವರು ಈಗ ಒಪ್ಪಿಕೊಂಡಿರುವ ಸಿನಿಮಾಗಳನ್ನು ಮುಗಿಸಲು ಅವರಿಗೆ ಏಳರಿಂದ ಎಂಟು ವರ್ಷ ಸಮಯ ಬೇಕು. ಅವರು ಚಿತ್ರರಂಗದ ಬಗ್ಗೆ ಸಾಕಷ್ಟು ಯೋಜನೆಗಳನ್ನು ಹಾಕಿಕೊಂಡಿದ್ದಾರೆ. ವರ್ಷಕ್ಕೆ ಎರಡು ಸಿನಿಮಾ ಮಾಡುವ ಕಮಿಟ್​ಮೆಂಟ್ ಇಟ್ಟುಕೊಂಡು ಕೆಲಸ ಮಾಡುತ್ತಿದ್ದಾರೆ. ‘ಕಾಟೇರ’ ಸಿನಿಮಾ ಬರದೇ ಇದ್ದಿದ್ದರೆ ಚಿತ್ರರಂಗಕ್ಕೆ ಕಷ್ಟವಾಗಿರುತ್ತಿತ್ತು. ಚಿತ್ರರಂಗ ಇಂದು ಉಸಿರಾಡುತ್ತಿದೆ ಎಂದರೆ ಅದಕ್ಕೆ ದರ್ಶನ್ ಕಾರಣ’ ಎಂದರು ಶಿವಕುಮಾರ್.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
Manjunatha C
Manjunatha C

ಮಂಜುನಾಥ ಸಿ, ಬೆಂಗಳೂರು ಗ್ರಾಮಾಂತರ, ವಿಜಯರಪುರ ಪಟ್ಟಣ ನಿವಾಸಿ. ಕಳೆದ ಏಳು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯನಾಗಿದ್ದೇನೆ. ಕಳೆದ ಐದು ವರ್ಷದಿಂದ ಡಿಜಿಟಲ್ ಪತ್ರಿಕೋದ್ಯಮದಲ್ಲಿ ತೊಡಗಿಕೊಂಡಿದ್ದೇನೆ. ಈ ಹಿಂದೆ ಪ್ರಜಾವಾಣಿ, ಒನ್ ಇಂಡಿಯಾ ಕನ್ನಡ ಸಂಸ್ಥೆಗಳ ವಿವಿಧ ವಿಭಾಗಗಳಲ್ಲಿ ಕೆಲಸ ಮಾಡಿದ್ದೇನೆ. ಪ್ರಸ್ತುತ ಟಿವಿ9 ಕನ್ನಡ ಡಿಜಿಟಲ್​ನ ಸಿನಿಮಾ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಮೆಚ್ಚಿನ ಹವ್ಯಾಸ ಸಿನಿಮಾ ವೀಕ್ಷಣೆ, ಪುಸ್ತಕಗಳನ್ನು ಓದುವುದು.

Read More
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು