AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊಲೆ ಆರೋಪಿ ದರ್ಶನ್​​ಗೆ ಕೊನೆಗೂ ಸಿಕ್ತು ರಿಲೀಫ್; ಫ್ಯಾನ್ಸ್​ಗೆ ಗುಡ್ ನ್ಯೂಸ್

ದರ್ಶನ್ ಅವರು ಜಾಮೀನು ನೀಡಬೇಕು ಎಂದು ಕೆಳ ಹಂತದ ಕೋರ್ಟ್​ನಲ್ಲಿ ಕೋರಿದ್ದರು. ಆದರೆ, ಇದಕ್ಕೆ ಕೋರ್ಟ್ ಒಪ್ಪಿಗೆ ಕೊಟ್ಟಿಲ್ಲ. ದರ್ಶನ್ ಅವರ ಜಾಮೀನು ಅರ್ಜಿ ವಜಾ ಆಗಿದೆ. ಈ ಬೆನ್ನಲ್ಲೇ ದರ್ಶನ್ ಪರ ವಕೀಲರು ಹೈಕೋರ್ಟ್​ನಲ್ಲಿ ಜಾಮೀನು ಅರ್ಜಿ ಸಲ್ಲಿಕೆ ಮಾಡಿದ್ದಾರೆ.  ಈ ಮಧ್ಯೆ ಅವರಿಗೆ ಥೆರಪಿ ಕೊಡಲಾಗಿದೆ.

ಕೊಲೆ ಆರೋಪಿ ದರ್ಶನ್​​ಗೆ ಕೊನೆಗೂ ಸಿಕ್ತು ರಿಲೀಫ್; ಫ್ಯಾನ್ಸ್​ಗೆ ಗುಡ್ ನ್ಯೂಸ್
ದರ್ಶನ್
ವಿನಾಯಕ ಬಡಿಗೇರ್​
| Edited By: |

Updated on:Oct 19, 2024 | 12:02 PM

Share

ನಟ ದರ್ಶನ್ ಅವರು ರೇಣುಕಾಸ್ವಾಮಿ ಕೊಲೆ ಕೇಸ್​ನಲ್ಲಿ ಜೈಲು ಸೇರಿ ನಾಲ್ಕು ತಿಂಗಳುಗಳು ಕಳೆದಿವೆ. ಹೊರ ಬರಲು ಅವರು ಸಾಕಷ್ಟು ಪ್ರಯತ್ನ ಮಾಡುತ್ತಿದ್ದರಾದರೂ ಅದು ಸಾಧ್ಯವಾಗುತ್ತಿಲ್ಲ. ದರ್ಶನ್ ಅವರ ಜಾಮೀನು ಅರ್ಜಿ ಈಗಾಗಲೇ ಕೆಳ ಹಂತದ ಕೋರ್ಟ್​ನಲ್ಲಿ ರಿಜೆಕ್ಟ್ ಆಗಿದೆ. ಈ ಮಧ್ಯೆ ದರ್ಶನ್​ಗೆ ಕೊಂಚ ರಿಲೀಫ್ ಆಗುವಂತಹ ಬೆಳವಣಿಗೆ ನಡೆದಿದೆ. ತೀವ್ರ ಬೆನ್ನುನೋವಿನಿಂದ ಬಳಲುತ್ತಿದ್ದ ದರ್ಶನ್​ಗೆ ಫಿಜಿಯೋ ಥೆರಪಿ ಚಿಕಿತ್ಸೆ ಕೊಡಿಸಲಾಗಿದೆ.

ಶುಕ್ರವಾರ (ಅಕ್ಟೋಬರ್ 19) ಸಂಜೆಯಿಂದಲೇ ವಿಮ್ಸ್ ಆಸ್ಪತ್ರೆ ವೈದ್ಯರಿಂದ ಫಿಜಿಯೋಥೆರೆಪಿ ಚಿಕಿತ್ಸೆ ಕೊಡಲಾಗುತ್ತಿದೆ. ಜೈಲಿನ ಹೈ ಸೆಕ್ಯೂರಿಟಿ ಸೆಲ್​ನಲ್ಲೇ ವಿಮ್ಸ್ ವೈದ್ಯರು ಒಂದು ಗಂಟೆ ಫಿಜಿಯೋಥೆರೆಪಿ ಮಾಡಿದ್ದಾರೆ. ಇದರಿಂದ ದರ್ಶನ್ ಕೊಂಚ ರಿಲೀಫ್ ಆಗಿದ್ದಾರೆ. ದರ್ಶನ್​ ಬೆನ್ನಿನ ಭಾಗದಲ್ಲಿ ಊತ ಕಾಣಿಸಿಕೊಂಡಿದೆ. ಈಗ ಅವರಿಗೆ ಚಿಕಿತ್ಸೆ ಸಿಗುತ್ತಿರುವ ವಿಚಾರ ಫ್ಯಾನ್ಸ್ ಖುಷಿಗೆ ಕಾರಣ ಆಗಿದೆ.

ನ್ಯೂರೋ ಹಾಗೂ ಆರ್ಥೋಪಿಡಿಷನ್ ವೈದ್ಯರು ದರ್ಶನ್ ಅವರ ದೇಹವನ್ನು ಸ್ಕ್ಯಾನಿಂಗ್ ಮಾಡಿದ್ದರು. ಈ ವೇಳೆ ಸರ್ಜರಿ ಹಾಗೂ ಫಿಜಿಯೋಥೆರಪಿ ಮಾಡಿಸುವಂತೆ ಸಲಹೆ ನೀಡಿದ್ದರು. ಸದ್ಯ ಸರ್ಜರಿಯನ್ನು ಅವರು ಬೆಂಗಳೂರಿಗೆ ಹೋಗಿ ಮಾಡಿಸುವುದಾಗಿ ಹೇಳುತ್ತಿದ್ದಾರೆ. ಹೀಗಾಗಿ, ಫಿಜಿಯೋಥೆರೆಪಿ ಆರಂಭಿಸಲಾಗಿದೆ.

ದರ್ಶನ್​ಗೆ ಬುಧವಾರವೇ ಫಿಜಿಯೋಥೆರೆಪಿ ಆರಂಭ ಆಗಬೇಕಿತ್ತು. ಆದರೆ, ಕಾರಣಾಂತರಗಳಿಂದ ಫಿಜಿಯೋಥೆರಪಿ ಮಾಡಿಸಲು ಸಾಧ್ಯವಾಗಿರಲಿಲ್ಲ. ಈಗ ಅವರು ಫಿಜಿಯೋಥೆರೆಪಿ ಮಾಡಿಸಿದ್ದಾರೆ. ವೈದ್ಯರ ಸೂಚನೆ ಮೇರೆಗೆ ಮೆಡಿಕಲ್ ಬೆಡ್, ದಿಂಬು ಹಾಗೂ ಚೇರ್​ಗಳನ್ನು ಕೊಡಲಾಗಿದೆ.

ಇದನ್ನೂ ಓದಿ: ಜೈಲಿಗೆ ಬಂದ ಸಹೋದರ, ಪತ್ನಿಯ ಭೇಟಿಗೆ ಬೇಸರದಲ್ಲೇ ಬಂದ ದರ್ಶನ್: ವಿಡಿಯೋ

ದರ್ಶನ್ ಅವರು ಜಾಮೀನು ನೀಡಬೇಕು ಎಂದು ಕೆಳ ಹಂತದ ಕೋರ್ಟ್​ನಲ್ಲಿ ಕೋರಿದ್ದರು. ಆದರೆ, ಇದಕ್ಕೆ ಕೋರ್ಟ್ ಒಪ್ಪಿಗೆ ಕೊಟ್ಟಿಲ್ಲ. ದರ್ಶನ್ ಅವರ ಜಾಮೀನು ಅರ್ಜಿ ವಜಾ ಆಗಿದೆ. ಈ ಬೆನ್ನಲ್ಲೇ ದರ್ಶನ್ ಪರ ವಕೀಲರು ಹೈಕೋರ್ಟ್​ನಲ್ಲಿ ಜಾಮೀನು ಅರ್ಜಿ ಸಲ್ಲಿಕೆ ಮಾಡಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 12:00 pm, Sat, 19 October 24

ಬಸ್​​ನಲ್ಲಿ 240 ಗ್ರಾಂ ಚಿನ್ನ ಕದ್ದಾಕೆ ಸಿಕ್ಕಿಬಿದ್ದಿದ್ಹೇಗೆ ಗೊತ್ತಾ?
ಬಸ್​​ನಲ್ಲಿ 240 ಗ್ರಾಂ ಚಿನ್ನ ಕದ್ದಾಕೆ ಸಿಕ್ಕಿಬಿದ್ದಿದ್ಹೇಗೆ ಗೊತ್ತಾ?
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?
ಹಿಮಾಚಲದ ಕಟ್ಟಡದಲ್ಲಿ ಬೆಂಕಿ ಅವಘಡ; 8 ವರ್ಷದ ಮಗು ಸಾವು, ಹಲವರಿಗೆ ಗಾಯ
ಹಿಮಾಚಲದ ಕಟ್ಟಡದಲ್ಲಿ ಬೆಂಕಿ ಅವಘಡ; 8 ವರ್ಷದ ಮಗು ಸಾವು, ಹಲವರಿಗೆ ಗಾಯ
ಬಿಗ್​ಬಾಸ್​ಗೆ ಸಂಕಷ್ಟ; ಶೋ ಹಾಗೂ ನಟ ಸುದೀಪ್ ವಿರುದ್ಧ ದೂರು ದಾಖಲು
ಬಿಗ್​ಬಾಸ್​ಗೆ ಸಂಕಷ್ಟ; ಶೋ ಹಾಗೂ ನಟ ಸುದೀಪ್ ವಿರುದ್ಧ ದೂರು ದಾಖಲು
ಉಚ್ಛಾಟಿತ ಶಾಸಕ ಯತ್ನಾಳ್​ ಸಂಪರ್ಕದಲ್ಲಿದ್ಯಾ BJP ಹೈಕಮಾಂಡ್​?
ಉಚ್ಛಾಟಿತ ಶಾಸಕ ಯತ್ನಾಳ್​ ಸಂಪರ್ಕದಲ್ಲಿದ್ಯಾ BJP ಹೈಕಮಾಂಡ್​?