Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇಂದೇ ಆಸ್ಪತ್ರೆಗೆ ಭೇಟಿ ನೀಡಲಿರುವ ದರ್ಶನ್, ಯಾವ ಆಸ್ಪತ್ರೆ?

ಅನಾರೋಗ್ಯದ ಕಾರಣ ನೀಡಿ ಆರು ವಾರಗಳ ಮಧ್ಯಂತರ ಜಾಮೀನನ್ನು ದರ್ಶನ್ ತೂಗುದೀಪ ಪಡೆದುಕೊಂಡಿದ್ದಾರೆ. ಜಾಮೀನು ದೊರೆತ ಮೇಲೆ ದರ್ಶನ್ ಇಂದು ಮೊದಲ ಬಾರಿಗೆ ಆಸ್ಪತ್ರೆಗೆ ಭೇಟಿ ನೀಡಲಿದ್ದಾರೆ. ಯಾವ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯಲಿದ್ದಾರೆ ದರ್ಶನ್?

ಇಂದೇ ಆಸ್ಪತ್ರೆಗೆ ಭೇಟಿ ನೀಡಲಿರುವ ದರ್ಶನ್, ಯಾವ ಆಸ್ಪತ್ರೆ?
Follow us
ಮಂಜುನಾಥ ಸಿ.
| Updated By: ಮದನ್​ ಕುಮಾರ್​

Updated on:Nov 01, 2024 | 3:44 PM

ರೇಣುಕಾ ಸ್ವಾಮಿ ಕೊಲೆ ಪ್ರಕರಣದ ಆರೋಪಿ ದರ್ಶನ್​ಗೆ ಆರೋಗ್ಯ ಚಿಕಿತ್ಸೆಗೆಂದು ಮಾನ್ಯ ಹೈಕೋರ್ಟ್ ಆರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ. ಎರಡು ದಿನದ ಹಿಂದೆ ಬಳ್ಳಾರಿ ಜೈಲಿನಿಂದ ಮನೆಗೆ ಮರಳಿರುವ ದರ್ಶನ್ ಇನ್ನೂ ಆಸ್ಪತ್ರೆ ಕಡೆ ಮುಖ ಹಾಕಿಲ್ಲ. ಅಲ್ಲದೆ ಒಂದು ವಾರದಲ್ಲಿ ದರ್ಶನ್​ರ ಚಿಕಿತ್ಸೆಯ ಮಾಹಿತಿಯನ್ನು ನೀಡಬೇಕೆಂದು ನ್ಯಾಯಾಲಯ ಹೇಳಿದೆ, ಹೀಗಿದ್ದರೂ ಸಹ ದರ್ಶನ್ ಆಸ್ಪತ್ರೆಗೆ ಹೋಗದೇ ಇರುವುದು ಆಶ್ಚರ್ಯ ತರಿಸಿತ್ತು. ಆದರೆ ಇಂದು ದರ್ಶನ್ ಆಸ್ಪತ್ರೆಗೆ ಹೋಗುತ್ತಿದ್ದಾರೆ.

ದರ್ಶನ್, ಬೆಂಗಳೂರಿನ ಕೆಂಗೇರಿ ಬಳಿ ಇರುವ ಬಿಜಿಎಸ್ ಆಸ್ಪತ್ರೆಗೆ ಹೋಗುತ್ತಿದ್ದು, ಇಂದು ಹಲವು ಪರೀಕ್ಷೆಗಳಿಗೆ ಒಳಗಾಗಲಿದ್ದಾರೆ. ಪರೀಕ್ಷೆಗಳ ವರದಿ ಆಧರಿಸಿ, ವೈದ್ಯರೊಟ್ಟಿಗೆ ಚರ್ಚೆ ನಡೆಸಿ ಮುಂದಿನ ಚಿಕಿತ್ಸೆ ಬಗ್ಗೆ ನಿರ್ಣಯವನ್ನು ದರ್ಶನ್ ಹಾಗೂ ಅವರ ಕುಟುಂಬ ತೆಗೆದುಕೊಳ್ಳಲಿದೆ.

ಬುಧವಾರ ರಾತ್ರಿ ಜೈಲಿನಿಂದ ಬಿಡುಗಡೆ ಆಗಿ ಮನೆಗೆ ಬಂದ ದರ್ಶನ್, ವೈದ್ಯರ ಸಲಹೆಯಂತೆ ಬೆನ್ನಿಗೆ ನೋವು ನಿವಾರಕ ಪಟ್ಟಿಕೊಂಡಿದ್ದರು. ಆ ನಂತರ ನಿನ್ನೆ ಪತ್ನಿಯ ಮನೆಗೆ ತಮ್ಮ ವಾಹನಗಳನ್ನು ಸಹಾಯಕರಿಂದ ಕರೆಸಿಕೊಂಡು ಎಲ್ಲ ವಾಹನಗಳಿಗೆ ಪೂಜೆ ಮಾಡಿದರು. ನಿನ್ನೆ ದರ್ಶನ್ ಪುತ್ರ ವಿನೀಶ್ ಹುಟ್ಟುಹಬ್ಬ ಸಹ ಇತ್ತಾದ್ದರಿಂದ ನಿನ್ನೆ ಆಸ್ಪತ್ರೆಗೆ ಹೋಗಿರಲಿಲ್ಲ. ಇಂದು ಅಮವಾಸ್ಯೆ ಇದ್ದು, ಅಮವಾಸ್ಯೆ ಮುಗಿಸಿಕೊಂಡು ಆಸ್ಪತ್ರೆಗೆ ಹೋಗಲಿದ್ದಾರೆ ಎನ್ನಲಾಗಿತ್ತು. ಆದರೆ ದರ್ಶನ್ ಅಮವಾಸ್ಯ ಮುಗಿಯುವ ಮುಂಚೆಯೇ ಆಸ್ಪತ್ರೆಗೆ ಹೋಗಲು ಸಜ್ಜಾಗಿದ್ದಾರೆ.

ಇದನ್ನೂ ಓದಿ:ನಟ ದರ್ಶನ್​ ವಿಚಾರದಲ್ಲಿ ಅರ್ಜುನ್ ಗುರೂಜಿ ನುಡಿದಿದ್ದ ಭವಿಷ್ಯ ನಿಜ ಆಯ್ತು

ದರ್ಶನ್ ಈ ಹಿಂದೆಯೂ ಸಹ ಬಿಜಿಎಸ್​ ಆಸ್ಪತ್ರೆಯಲ್ಲಿಯೇ ಚಿಕಿತ್ಸೆ ಪಡೆದುಕೊಂಡಿದ್ದರು. 2013 ರಲ್ಲಿ ದರ್ಶನ್ ‘ಬೃಂದಾವನ’ ಸಿನಿಮಾದ ಚಿತ್ರೀಕರಣದಲ್ಲಿ ಪಾಲ್ಗೊಂಡಿದ್ದಾಗ ಕುದುರೆ ಓಡಿಸುವಾಗ ಕುದುರೆಯಿಂದ ಬಿದ್ದು ಬೆನ್ನು ಹಾಗೂ ಕತ್ತಿನ ಭಾಗಕ್ಕೆ ಗಾಯ ಮಾಡಿಕೊಂಡಿದ್ದರು. ಆಗ ಇದೇ ಬಿಜಿಎಸ್​ಗೆ ದಾಖಲಾಗಿ ಚಿಕಿತ್ಸೆ ಪಡೆದುಕೊಂಡಿದ್ದರು. ಅಲ್ಲದೆ ಆಗ ಹಲವು ದಿನಗಳ ಕಾಲ ಕೊರಳಿಗೆ ಪಟ್ಟಿಕಟ್ಟಿಕೊಂಡು ಓಡಾಡುತ್ತಿದ್ದರು. ಈಗ ಮತ್ತೆ ಬಿಜಿಎಸ್​ಗೆ ದಾಖಲಾಗುತ್ತಿದ್ದಾರೆ.

ಶುಕ್ರವಾರ ಮೂರು ಗಂಟೆ ಮೇಲೆ ದರ್ಶನ್ ಬಿಜಿಎಸ್​ ಆಸ್ಪತ್ರೆಗೆ ಬರಲಿದ್ದಾರೆ ಎನ್ನಲಾಗುತ್ತಿದೆ. ದರ್ಶನ್ ಆಸ್ಪತ್ರೆಗೆ ಆಗಮಿಸುವ ಮುನ್ನವೇ ನಟಿ ಅಮೂಲ್ಯ ಹಾಗೂ ಅವರ ಪತಿ ಜಗದೀಶ್ ಅದೇ ಆಸ್ಪತ್ರೆಗೆ ಬಂದು ದರ್ಶನ್​ಗಾಗಿ ಕಾಯುತ್ತಿದ್ದರು. ಆಸ್ಪತ್ರೆ ಮುಂದೆ ಪೊಲೀಸರು ಬ್ಯಾರಿಕೇಡ್​ಗಳನ್ನು ಹಾಕಿದ್ದು, ಮುನ್ನೆಚ್ಚರಿಕೆಗಾಗಿ ಪೊಲೀಸ್ ಸಿಬ್ಬಂದಿಯನ್ನು ಸಹ ನಿಯೋಜನೆ ಮಾಡಿದ್ದಾರೆ. ಎಸಿಪಿ ಬಸವರಾಜು ಬಿಜಿಸ್​ಗೆ ಆಗಮಿಸಿದ್ದಾರೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 3:31 pm, Fri, 1 November 24

‘ನಾನು ಇಲ್ಲಿಯವನು, ಬೆಂಗಳೂರು ಹೃದಯದಲ್ಲಿದೆ’; ಕನ್ನಡಿಗ ಕೆಎಲ್ ರಾಹುಲ್
‘ನಾನು ಇಲ್ಲಿಯವನು, ಬೆಂಗಳೂರು ಹೃದಯದಲ್ಲಿದೆ’; ಕನ್ನಡಿಗ ಕೆಎಲ್ ರಾಹುಲ್
ಹುಬ್ಬಳ್ಳಿ: ಕುಸಿದು ಬಿದ್ದ ಪೊಲೀಸ್ ಠಾಣೆ ಮೇಲ್ಚಾವಣಿ ಕಾಂಕ್ರೀಟ್!
ಹುಬ್ಬಳ್ಳಿ: ಕುಸಿದು ಬಿದ್ದ ಪೊಲೀಸ್ ಠಾಣೆ ಮೇಲ್ಚಾವಣಿ ಕಾಂಕ್ರೀಟ್!
ಹಾಟ್​ ಏರ್​ ಬಲೂನ್ ರೈಡ್ ಮಾಡುವಾಗ ಹಗ್ಗ ತುಂಡಾಗಿ ವ್ಯಕ್ತಿ ಸಾವು
ಹಾಟ್​ ಏರ್​ ಬಲೂನ್ ರೈಡ್ ಮಾಡುವಾಗ ಹಗ್ಗ ತುಂಡಾಗಿ ವ್ಯಕ್ತಿ ಸಾವು
ಹೋಮಕ್ಕೆ ತುಪ್ಪ ಹಾಗೂ ಧಾನ್ಯಗಳ ಹವಿಸ್ಸು ಕೊಡುವುದರ ಹಿಂದಿನ ರಹಸ್ಯ ತಿಳಿಯಿರಿ
ಹೋಮಕ್ಕೆ ತುಪ್ಪ ಹಾಗೂ ಧಾನ್ಯಗಳ ಹವಿಸ್ಸು ಕೊಡುವುದರ ಹಿಂದಿನ ರಹಸ್ಯ ತಿಳಿಯಿರಿ
ಈ ರಾಶಿಯವರು ಇಂದು ಉತ್ತಮ ಭವಿಷ್ಯದ ಕನಸುಗಳನ್ನು ಕಟ್ಟಿಕೊಳ್ಳುವ ಸಮಯ
ಈ ರಾಶಿಯವರು ಇಂದು ಉತ್ತಮ ಭವಿಷ್ಯದ ಕನಸುಗಳನ್ನು ಕಟ್ಟಿಕೊಳ್ಳುವ ಸಮಯ
ಸಾಧಾರಣ ಮೊತ್ತ ಗಳಿಸಿದ ಆರ್​ಸಿಬಿ, ಬೌಲರ್​ಗಳ ಮೇಲೆ ಹೆಚ್ಚಿನ ನಿರೀಕ್ಷೆ!
ಸಾಧಾರಣ ಮೊತ್ತ ಗಳಿಸಿದ ಆರ್​ಸಿಬಿ, ಬೌಲರ್​ಗಳ ಮೇಲೆ ಹೆಚ್ಚಿನ ನಿರೀಕ್ಷೆ!
ಇನ್ಮುಂದೆ 108 ಆಂಬ್ಯುಲೆನ್ಸ್ ಸೇವೆ ಖಾಸಗಿಯಿಂದ ಸರ್ಕಾರದ ಕಂಟ್ರೋಲ್​ಗೆ
ಇನ್ಮುಂದೆ 108 ಆಂಬ್ಯುಲೆನ್ಸ್ ಸೇವೆ ಖಾಸಗಿಯಿಂದ ಸರ್ಕಾರದ ಕಂಟ್ರೋಲ್​ಗೆ
ಬಿಹಾರದಲ್ಲಿ ಸಿಡಿಲು ಬಡಿದು 25 ಜನ ಸಾವು; ನಿತೀಶ್ ಕುಮಾರ್ ಪರಿಹಾರ ಘೋಷಣೆ
ಬಿಹಾರದಲ್ಲಿ ಸಿಡಿಲು ಬಡಿದು 25 ಜನ ಸಾವು; ನಿತೀಶ್ ಕುಮಾರ್ ಪರಿಹಾರ ಘೋಷಣೆ
ಎಲೆಕ್ಟ್ರಾನಿಕ್ ಸಿಟಿ ಫ್ಲೈಓವರ್​ ಮೇಲೆ ಸರಣಿ ಅಪಘಾತ: ಫುಲ್ ಟ್ರಾಫಿಕ್ ಜಾಮ್
ಎಲೆಕ್ಟ್ರಾನಿಕ್ ಸಿಟಿ ಫ್ಲೈಓವರ್​ ಮೇಲೆ ಸರಣಿ ಅಪಘಾತ: ಫುಲ್ ಟ್ರಾಫಿಕ್ ಜಾಮ್
ವಾಮನ ನೋಡಲು ದರ್ಶನ್ ಜತೆ ವಿಜಯಲಕ್ಷ್ಮಿ ಬರಲಿಲ್ಲ ಯಾಕೆ? ಉತ್ತರಿಸಿದ ಧನ್ವೀರ್
ವಾಮನ ನೋಡಲು ದರ್ಶನ್ ಜತೆ ವಿಜಯಲಕ್ಷ್ಮಿ ಬರಲಿಲ್ಲ ಯಾಕೆ? ಉತ್ತರಿಸಿದ ಧನ್ವೀರ್