ಸಾಕಷ್ಟು ರಕ್ತ ನೋಡಿದೆ ಪಟ್ಟಣಗೆರೆ ಶೆಡ್, ದರ್ಶನ್​ಗೂ ಇದೆ ರೌಡಿಗಳ ನಂಟು

ರೇಣುಕಾ ಸ್ವಾಮಿಯನ್ನು ಹಿಂಸಿಸಿ ಕೊಂದ ಪಟ್ಟಣಗೆರೆ ಶೆಡ್​ನಲ್ಲಿ ಈ ಹಿಂದೆಯೂ ಹಲ್ಲೆ, ಬೆದರಿಕೆ, ಸೆಟಲ್​ಮೆಂಟ್​ನಂಥಹಾ ಪ್ರಕರಣಗಳು ನಡೆದಿದ್ದು, ದರ್ಶನ್​ಗೆ ಸಹ ಹಲವು ರೌಡಿ ಆಸಾಮಿಗಳೊಟ್ಟಿಗೆ ಸಂಪರ್ಕ ಇರುವ ವಿಷಯ ಪೊಲೀಸರ ವಿಚಾರಣೆಯಿಂದ ತಿಳಿದು ಬಂದಿದೆ.

ಸಾಕಷ್ಟು ರಕ್ತ ನೋಡಿದೆ ಪಟ್ಟಣಗೆರೆ ಶೆಡ್, ದರ್ಶನ್​ಗೂ ಇದೆ ರೌಡಿಗಳ ನಂಟು
ಪಟ್ಟಣಗೆರೆ ಶೆಡ್
Follow us
|

Updated on: Jun 19, 2024 | 12:37 PM

ಬಡ ಮಧ್ಯಮ ಕುಟುಂಬದ, ಕೃಷ ದೇಹಿ, ರೇಣುಕಾ ಸ್ವಾಮಿಯನ್ನು (Renuka Swamy) ಅಮಾನುಷವಾಗಿ ಹಲ್ಲೆ ಮಾಡಿ ಕೊಲ್ಲಲಾಗಿದೆ. ಕೊಲೆ ಪ್ರಕರಣದಲ್ಲಿ ದರ್ಶನ್ (Darshan), ಪವಿತ್ರಾ ಗೌಡ ಸೇರಿದಂತೆ 20ಕ್ಕೂ ಹೆಚ್ಚು ಮಂದಿ ಆರೋಪಿಗಳನ್ನು ಬಂಧಿಸಲಾಗಿದೆ. ಚಿತ್ರದುರ್ಗದಿಂದ ರೇಣುಕಾ ಸ್ವಾಮಿಯನ್ನು ಅಪಹರಣ ಮಾಡಿಸಿ, ಪಟ್ಟಣಗೆರೆ ಶೆಡ್​ಗೆ ಕರೆತಂದು ಅಲ್ಲಿ ದರ್ಶನ್ ಮತ್ತು ಗ್ಯಾಂಗ್ ಹಲ್ಲೆ ಮಾಡಿದೆ ಎನ್ನಲಾಗುತ್ತಿದೆ. ಅಪರಾಧ ನಡೆದ ಸ್ಥಳ ಪಟ್ಟಣಗೆರೆ ಶೆಡ್​ ಬಗ್ಗೆ ಈಗ ಹಲವು ವಿಷಯಗಳು ಹೊರಬರುತ್ತಿವೆ. ಆ ಶೆಡ್​ಗೆ ರಕ್ತ ಹೊಸದೇನೂ ಅಲ್ಲ ಎನ್ನಲಾಗುತ್ತಿದೆ. ಮಾತ್ರವಲ್ಲ ದರ್ಶನ್​ಗೂ ಸಹ ಹಿಂಸೆ ಹೊಸದಲ್ಲ ಎನ್ನುತ್ತಿದೆ ಪೊಲೀಸ್ ತನಿಖೆ.

ರೇಣುಕಾ ಸ್ವಾಮಿಯನ್ನು ಹೊಡೆದು ಕೊಲ್ಲಲಾದ ಪಟ್ಟಣಗೆರೆ ಶೆಡ್​ ನಲ್ಲಿ ಪೊಲೀಸರು ಸುಮಾರು ಐದು ದಿನ ತನಿಖೆ ಹಾಗೂ ಮಹಜರು ಕಾರ್ಯ ಮಾಡಿದ್ದಾರೆ. ಆರೋಪಿಗಳನ್ನು ಕರೆದೊಯ್ದು ಎರಡು ದಿನಗಳ ಕಾಲ ಮಹಜರು ಮಾಡಲಾಗಿತ್ತು, ಅಲ್ಲದೆ ಪೊಲೀಸರು ಸಹ ಪ್ರತ್ಯೇಕವಾಗಿ ತೆರಳಿ ಸಾಕ್ಷ್ಯ ಸಂಗ್ರಹದ ಕೆಲಸ ಮಾಡಿದ್ದರು. ಶೆಡ್​ನಲ್ಲಿರುವ ಸಿಸಿಟಿವಿ ಕ್ಯಾಮೆರಾದ ದೃಶ್ಯಗಳನ್ನು ಸಹ ಪೊಲೀಸರು ವಶಪಡಿಸಿಕೊಂಡಿದ್ದು, ಪೊಲೀಸರ ತನಿಖೆಯಿಂದ ಶೆಡ್​ನಲ್ಲಿ ನಡೆದಿರುವ ಇನ್ನಷ್ಟು ಹಲ್ಲೆ ಪ್ರಕರಣಗಳ ಮಾಹಿತಿ ಹೊರಬಿದ್ದಿದೆ.

ಪಟ್ಟಣಗೆರೆ ಜಯಣ್ಣ ಎಂಬುವರಿಗೆ ಸೇರಿದ ಈ ಶೆಡ್​ ಒಂದು ರೀತಿ ಸೆಟಲ್​ಮೆಂಟ್ ಅಡ್ಡೆಯಾಗಿತ್ತು ಎನ್ನಲಾಗುತ್ತಿದೆ. ತಮಗಾಗದವರನ್ನು ಇದೇ ಶೆಡ್​ಗೆ ಕರೆದುಕೊಂಡು ಬಂದು ಹಲ್ಲೆ ಮಾಡುವ ಕಾರ್ಯವನ್ನು ಕೆಲವು ರೌಡಿ ಆಸಾಮಿಗಳು ಮಾಡಿದ್ದಾರೆ ಎಂಬುದು ಪೊಲೀಸರ ತನಿಖೆಯಿಂದ ಬೆಳಕಿಗೆ ಬಂದಿದೆ. ನಟ ದರ್ಶನ್​ಗೂ ಈ ಶೆಡ್​ಗೂ ಹಳೆಯ ನಂಟಿದ್ದು, ದರ್ಶನ್​ಗೆ ಸಂಬಂಧಿಸಿದ ಕೆಲವು ಸೆಟಲ್​ಮೆಂಟ್ ವ್ಯವಹಾರಗಳು ಸಹ ಶೆಡ್​ನಲ್ಲಿ ನಡೆದಿವೆಯಂತೆ.

ಇದನ್ನೂ ಓದಿ:ರೇಣುಕಾ ಸ್ವಾಮಿ ಕೇಸ್: ದರ್ಶನ್ ಸ್ವ-ಇಚ್ಛಾ ಹೇಳಿಕೆ, ಕೊಲೆಯಲ್ಲಿ ತನ್ನ ಪಾತ್ರ ವಿವರಿಸಿದ ನಟ

ದರ್ಶನ್​ರ ಮೊಬೈಲ್ ಕರೆ ವಿವರಗಳ ತಪಾಸಣೆ ವೇಳೆ, ದರ್ಶನ್​ಗೆ ಹಲವು ರೌಡಿಗಳ ಜೊತೆ ನಂಟಿರುವ ವಿಷಯವೂ ಬೆಳಕಿಗೆ ಬಂದಿದೆ. ಹಲವು ಜಿಲ್ಲೆಗಳಲ್ಲಿ ದರ್ಶನ್​ಗೆ ರೌಡಿಗಳ ಪರಿಚಯ ಹಾಗೂ ಆಪ್ತ ಬಂಧ ಇದೆಯೆಂಬುದು ತಿಳಿದುಬಂದಿದೆ. ಅಲ್ಲದೆ ಈಗ ದರ್ಶನ್​ ಜೊತೆಗೆ ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ವಿನಯ್ ಎಂಬಾತ ರೌಡಿತನದಿಂದ ಪೊಲೀಸರಿಗೆ ಚಿರಪರಿಚಿತ. ಈ ಹಿಂದೆಯೂ ಸಹ ಕೆಲವರೊಟ್ಟಿಗೆ ಸೇರಿ ವ್ಯಕ್ತಿಯೊಬ್ಬರ ಮೇಲೆ ವಿನಯ್ ಮಾರಣಾಂತಿಕ ಹಲ್ಲೆ ನಡೆಸಿದ್ದ. ಈಗ ದರ್ಶನ್ ಜೊತೆಗೆ ಆತನೂ ಸಹ ಜೈಲಿನಲ್ಲಿ ಬಂಧಿಯಾಗಿದ್ದಾನೆ.

ದರ್ಶನ್​ರ ಈ ಹಿಂದಿನ ಕೆಲವು ಪ್ರಕರಣಗಳು ಹಾಗೂ ಸಾರ್ವಜನಿಕವಾಗಿ ಅವರು ನಡೆದುಕೊಳ್ಳುವ, ಮಾತನಾಡಿರುವ ರೀತಿ, ಈಗ ನಡೆದಿರುವ ಪ್ರಕರಣಗಳು, ಅವರ ಸ್ನೇಹಿತರು ಮತ್ತು ಆಪ್ತ ವಲಯ ಇದನ್ನೆಲ್ಲ ಗಮನಿಸಿ ದರ್ಶನ್ ಮೇಲೆ ರೌಡಿ ಶೀಟ್ ತೆರೆಯುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ. ಈ ಬಗ್ಗೆ ಪೊಲೀಸರು ಶೀಘ್ರವೇ ನಿರ್ಣಯ ಪ್ರಕಟಿಸಲಿದ್ದಾರೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಕೊಪ್ಪಳ: ಕೆಸರುಮಯವಾದ ರಸ್ತೆ, ಭತ್ತ ನಾಟಿ ಮಾಡಿ ಗ್ರಾಮಸ್ಥರ ಆಕ್ರೋಶ
ಕೊಪ್ಪಳ: ಕೆಸರುಮಯವಾದ ರಸ್ತೆ, ಭತ್ತ ನಾಟಿ ಮಾಡಿ ಗ್ರಾಮಸ್ಥರ ಆಕ್ರೋಶ
ದೇವರಿಗೆ ಯಾವ ದಿನ ಯಾವ ನೈವೇದ್ಯ ಅರ್ಪಿಸಬೇಕು? ವಿಡಿಯೋ ನೋಡಿ
ದೇವರಿಗೆ ಯಾವ ದಿನ ಯಾವ ನೈವೇದ್ಯ ಅರ್ಪಿಸಬೇಕು? ವಿಡಿಯೋ ನೋಡಿ
ಈ ರಾಶಿಯವರಿಗೆ ಆಗಬೇಕಾದ ವಿವಾಹವು ಕಾರಾಣಾಂತರದಿಂದ ಮುಂದೆ ಹೋಗಲಿದೆ
ಈ ರಾಶಿಯವರಿಗೆ ಆಗಬೇಕಾದ ವಿವಾಹವು ಕಾರಾಣಾಂತರದಿಂದ ಮುಂದೆ ಹೋಗಲಿದೆ
FIR ದಾಖಲಾಗಿದ್ದರೂ ಸುದೀರ್ಘ 8 ವರೆ ಗಂಟೆ ಪ್ರಗತಿ ಪರಿಶೀಲನಾ ಸಭೆ ನಡೆಸಿದ CM
FIR ದಾಖಲಾಗಿದ್ದರೂ ಸುದೀರ್ಘ 8 ವರೆ ಗಂಟೆ ಪ್ರಗತಿ ಪರಿಶೀಲನಾ ಸಭೆ ನಡೆಸಿದ CM
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದ ಗೋಡೆ ಕುಸಿದು ಇಬ್ಬರು ಸಾವು
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದ ಗೋಡೆ ಕುಸಿದು ಇಬ್ಬರು ಸಾವು
ಈ ಪ್ರಕರಣದಲ್ಲಿ ನಂಗೆ ಗಂಡಾಂತರ ಇಲ್ಲ: ಲೋಕಾಯುಕ್ತ ವಿಚಾರಣೆ ಬಳಿಕ HDK ಮಾತು
ಈ ಪ್ರಕರಣದಲ್ಲಿ ನಂಗೆ ಗಂಡಾಂತರ ಇಲ್ಲ: ಲೋಕಾಯುಕ್ತ ವಿಚಾರಣೆ ಬಳಿಕ HDK ಮಾತು
ಸಿಎಂ ವಿರುದ್ಧ FIR: ಪಂಜು ಹಿಡಿದು ಪ್ರತಿಭಟನೆ ನಡೆಸಿದ ಸಿದ್ದು ಬೆಂಬಲಿಗರು
ಸಿಎಂ ವಿರುದ್ಧ FIR: ಪಂಜು ಹಿಡಿದು ಪ್ರತಿಭಟನೆ ನಡೆಸಿದ ಸಿದ್ದು ಬೆಂಬಲಿಗರು
ದಿಲ್ಲಿಯಿಂದ ನೇರವಾಗಿ ಬೆಂಗಳೂರಿನ ಲೋಕಾಯುಕ್ತ ಕಚೇರಿಗೆ ಬಂದ ಕುಮಾರಸ್ವಾಮಿ
ದಿಲ್ಲಿಯಿಂದ ನೇರವಾಗಿ ಬೆಂಗಳೂರಿನ ಲೋಕಾಯುಕ್ತ ಕಚೇರಿಗೆ ಬಂದ ಕುಮಾರಸ್ವಾಮಿ
ಅರಮನೆ ಆವರಣದಲ್ಲಿ ಸಿದ್ದುಗೆ ದಸರಾ ಆನೆಗಳು ಸೆಲ್ಯೂಟ್
ಅರಮನೆ ಆವರಣದಲ್ಲಿ ಸಿದ್ದುಗೆ ದಸರಾ ಆನೆಗಳು ಸೆಲ್ಯೂಟ್
‘ದೇವರ’ ಬಿಡುಗಡೆ, ಜೂ ಎನ್​ಟಿಆರ್ ಬೃಹತ್ ಕಟೌಟ್​ಗೆ ಬೆಂಕಿ: ವಿಡಿಯೋ ನೋಡಿ
‘ದೇವರ’ ಬಿಡುಗಡೆ, ಜೂ ಎನ್​ಟಿಆರ್ ಬೃಹತ್ ಕಟೌಟ್​ಗೆ ಬೆಂಕಿ: ವಿಡಿಯೋ ನೋಡಿ