AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆರ್ಥಿಕ ಸಂಕಷ್ಟದಲ್ಲಿದ್ದಾಗ ದರ್ಶನ್ ಮಾಡಿದ ಸಹಾಯ ಎಂಥದ್ದು? ವಿವರಿಸಿದ ಟೆನ್ನಿಸ್ ಕೃಷ್ಣ

ಟೆನ್ನಿಸ್ ಕೃಷ್ಣ ಅವರು ಚಿತ್ರರಂಗದಲ್ಲಿ ಸಾಕಷ್ಟು ಬೇಡಿಕೆ ಹೊಂದಿದ್ದರು. ಅವರು ಕಾಮಿಡಿಯನ್ ಆಗಿ ಎಲ್ಲರ ಗಮನ ಸೆಳೆದರು. ಆದರೆ, ಇತ್ತೀಚೆಗೆ ಅವರಿಗೆ ಬೇಡಿಕೆ ಕಡಿಮೆ ಆಗಿದೆ. ಅವರು ಸಿನಿಮಾಗಳಲ್ಲಿ ಅಷ್ಟಾಗಿ ಕಾಣಿಸಿಕೊಳ್ಳುತ್ತಿಲ್ಲ. ಅವರು ದರ್ಶನ್ ಬಗ್ಗೆ ಮಾತನಾಡಿದ್ದಾರೆ.

ಆರ್ಥಿಕ ಸಂಕಷ್ಟದಲ್ಲಿದ್ದಾಗ ದರ್ಶನ್ ಮಾಡಿದ ಸಹಾಯ ಎಂಥದ್ದು? ವಿವರಿಸಿದ ಟೆನ್ನಿಸ್ ಕೃಷ್ಣ
ಟೆನ್ನಿಸ್ ಕೃಷ್ಣ-ದರ್ಶನ್
 ಶ್ರೀಲಕ್ಷ್ಮೀ ಎಚ್
| Edited By: |

Updated on: May 26, 2024 | 6:18 AM

Share

ನಟ ದರ್ಶನ್ (Darshan) ಅವರು ಚಿತ್ರರಂಗದಲ್ಲಿ ಬಹುಬೇಡಿಕೆ ಹೊಂದಿದ್ದಾರೆ. ನಟನೆಯ ಜೊತೆಗೆ ಅವರು ಕಷ್ಟದಲ್ಲಿದ್ದವರಿಗೆ ಆರ್ಥಿಕ ಸಹಾಯ ಕೂಡ ಮಾಡುತ್ತಾರೆ. ಆದರೆ, ಅವರು ಸಹಾಯ ಮಾಡಿದ್ದನ್ನು ಎಂದಿಗೂ ಯಾರ ಜೊತೆಯೂ ಹೇಳಿಕೊಳ್ಳುವುದಿಲ್ಲ. ಯಾರಾದರೂ ಈ ಬಗ್ಗೆ ಹೇಳಿಕೊಳ್ಳೋಕೆ ಹೋದರೆ ಅದಕ್ಕೆ ಅವಕಾಶ ನೀಡುವುದಿಲ್ಲ. ದರ್ಶನ್ ಅವರು ಮಾಡಿದ ಸಹಾಯದ ಬಗ್ಗೆ ಟೆನ್ನಿಸ್ ಕೃಷ್ಣ ಅವರು ಸಂದರ್ಶನ ಒಂದರಲ್ಲಿ ಹೇಳಿಕೊಂಡಿದ್ದರು. ಈ ವಿಡಿಯೋ ಈಗ ವೈರಲ್ ಆಗುತ್ತಿದೆ. ದರ್ಶನ್ ಅಭಿಮಾನಿಗಳ ಪೇಜ್​ನಲ್ಲಿ ಈ ವಿಡಿಯೋ ಹಂಚಿಕೊಳ್ಳಲಾಗುತ್ತಿದೆ.

ಟೆನ್ನಿಸ್ ಕೃಷ್ಣ ಅವರು ಚಿತ್ರರಂಗದಲ್ಲಿ ಸಾಕಷ್ಟು ಬೇಡಿಕೆ ಹೊಂದಿದ್ದರು. ಅವರು ಕಾಮಿಡಿಯನ್ ಆಗಿ ಎಲ್ಲರ ಗಮನ ಸೆಳೆದರು. ಆದರೆ, ಇತ್ತೀಚೆಗೆ ಅವರಿಗೆ ಬೇಡಿಕೆ ಕಡಿಮೆ ಆಗಿದೆ. ಅವರು ಸಿನಿಮಾಗಳಲ್ಲಿ ಅಷ್ಟಾಗಿ ಕಾಣಿಸಿಕೊಳ್ಳುತ್ತಿಲ್ಲ. ‘ಸೈಕಲ್ ಗ್ಯಾಪ್ ಪ್ಲಸ್’ ಅನ್ನೋ ಯೂಟ್ಯೂಬ್ ಚಾನೆಲ್​ಗೆ ನೀಡಿದ ಸಂದರ್ಶನದಲ್ಲಿ ಟೆನ್ನಿಸ್ ಕೃಷ್ಣ ಅವರು ಈ ಬಗ್ಗೆ ಮಾತನಾಡಿದ್ದರು.

‘ಹಲವು ಸೆಲೆಬ್ರಿಟಿಗಳ ಬಳಿ ಹೋದೆ. ಯಾರೂ ಸಹಾಯಕ್ಕೆ ಬಂದಿಲ್ಲ. ಆ ಬಳಿಕ ದರ್ಶನ್ ಅವರ ಬಳಿ ಹೋದೆ. ಸ್ವಲ್ಪ ಜಾಸ್ತಿನೇ ಕೇಳಿದ್ದೆ. ಸೋಮವಾರ ಬನ್ನಿ ಎಂದರು. ಎಲ್ಲಿಯೋ ಇಟ್ಟ ಹಣವನ್ನು ಕೊಟ್ಟರು. ನನ್ನ ಮಗನ ಅಡ್ಮಿಷನ್​ಗೆ ಆ ಹಣ ಕೇಳಿದ್ದೆ’ ಎಂದು ದರ್ಶನ್ ಅವರ ಸಹಾಯ ನೆನಪಿಸಿಕೊಂಡಿದ್ದಾರೆ ಟೆನ್ನಿಸ್ ಕೃಷ್ಣ.

‘ಅನೇಕರ ಬಳಿ ಹೋಗಿ ಡೇಟ್ ತೆಗೆದುಕೊಂಡು ಹಣ ನಿಡಿ, ಇಲ್ಲ ಹಾಗೆ ಆದರೂ ಸಹಾಯ ಮಾಡಿ ಎಂದು ಕೋರಿದ್ದೆ. ಹೂ ಎಂದರು ಕಾಲ್ ಎತ್ತಲೇ ಇಲ್ಲ. ಆ ನೋವು ಸ್ವಲ್ಪ ದಿನ ಇತ್ತು. ದರ್ಶನ್ ಸಹಾಯ ಮಾಡಿದರು. ಆ ಬಳಿಕ ಕಲಾ ಸರಸ್ವತಿ ನನ್ನ ಕೈ ಬಿಡಲಿಲ್ಲ. ಕಾಲೇಜು ಕಾರ್ಯಕ್ರಮ, ಅನೇಕ ಕಾರ್ಯಕ್ರಮದಲ್ಲಿ ನಾನು ಭಾಗವಹಿಸಿದೆ. ಅಲ್ಲಿ ಹಣ ಸಿಕ್ತು’ ಎಂದಿದ್ದಾರೆ ಅವರು.

ಇದನ್ನೂ ಓದಿ: ನಟ ದರ್ಶನ್​ಗೆ ಅರ್ಜುನನ ಮೇಲೆ ವಿಶೇಷ ಪ್ರೀತಿಯೇಕೆ? ಇಲ್ಲಿದೆ ವಿವರ

ದರ್ಶನ್ ಅವರು ‘ಡೆವಿಲ್’ ಕೆಲಸಗಳಲ್ಲಿ ಬ್ಯುಸಿ ಇದ್ದಾರೆ. ಕೈಗೆ ಪೆಟ್ಟಾಗಿದ್ದರಿಂದ ಈ ಸಿನಿಮಾ ಕೆಲಸಗಳು ಮುಂದಕ್ಕೆ ಹೋಗಿದ್ದವು. ಅಕ್ಟೋಬರ್​ನಲ್ಲೇ ಸಿನಿಮಾ ರಿಲೀಸ್ ಆಗಬೇಕಿತ್ತು. ಆದರೆ, ಈಗ ಡಿಸೆಂಬರ್​ನಲ್ಲಿ ಸಿನಿಮಾ ಬರಲಿದೆ ಎಂದು ತಂಡ ಘೋಷಿಸಿದೆ. ಈ ಚಿತ್ರದ ಬಗ್ಗೆ ಅಭಿಮಾನಿಗಳಿಗೆ ಸಾಕಷ್ಟು ನಿರೀಕ್ಷೆ ಇದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ