AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Darshan Thoogudeepa: ಬಳ್ಳಾರಿ ಜೈಲಿನಲ್ಲಿ ದರ್ಶನ್: ಹೇಗಿತ್ತು ಮೊದಲ ದಿನ?

Darshan Thoogudeepa: ನಟ ದರ್ಶನ್ ಅನ್ನು ನಿನ್ನೆ ಬಳ್ಳಾರಿ ಜೈಲಿಗೆ ಸ್ಥಳಾಂತರ ಮಾಡಲಾಗಿದೆ. ಬಳ್ಳಾರಿ ಜೈಲಿನಲ್ಲಿ ಮೊದಲ ದಿನ ಹೇಗಿತ್ತು ವಾಸ್ತವ್ಯ. ದರ್ಶನ್ ಕುರಿತಾದ ಇನ್ನಿತರೆ ಬೆಳವಣಿಗಳ ವಿವರಗಳು ಇಲ್ಲಿವೆ.

Darshan Thoogudeepa: ಬಳ್ಳಾರಿ ಜೈಲಿನಲ್ಲಿ ದರ್ಶನ್: ಹೇಗಿತ್ತು ಮೊದಲ ದಿನ?
ಮಂಜುನಾಥ ಸಿ.
|

Updated on: Aug 30, 2024 | 10:57 AM

Share

ನಟ ದರ್ಶನ್ ಅನ್ನು ನಿನ್ನೆ (ಆಗಸ್ಟ್ 29) ಕ್ಕೆ ಬಳ್ಳಾರಿ ಜೈಲಿಗೆ ಸ್ಥಳಾಂತರ ಮಾಡಲಾಗಿದೆ. ಪರಪ್ಪನ ಅಗ್ರಹಾರ ಜೈಲಿನಲ್ಲಿ ದರ್ಶನ್​ಗೆ ವಿಶೇಷ ಆತಿಥ್ಯ ದೊರೆಯುತ್ತಿದ್ದ ಕಾರಣ ಹಾಗೂ ಒಂದೇ ಪ್ರಕರಣದ ಆರೋಪಿಗಳಿಗೆ ಭೇಟಿ ಮಾಡಲು ಮಾಡಲು ಅವಕಾಶ ಸಿಕ್ಕಿದ್ದ ಕಾರಣ ದರ್ಶನ್ ಸೇರಿದಂತೆ ರೇಣುಕಾ ಸ್ವಾಮಿ ಕೊಲೆ ಪ್ರಕರಣದ ಆರೋಪಿಗಳನ್ನು ಬೇರೆ ಬೇರೆ ಜೈಲುಗಳಿಗೆ ವರ್ಗಾವಣೆ ಮಾಡಲಾಗಿದೆ. ದರ್ಶನ್ ಅನ್ನು ನಿನ್ನೆ ಬೆಳಿಗ್ಗೆ ಬಳ್ಳಾರಿ ಜೈಲಿಗೆ ಕರೆತರಲಾಯ್ತು.

ಸನ್ ಗ್ಲಾಸು

ದರ್ಶನ್ ಅನ್ನು ಜೈಲಿಗೆ ಕರೆತಂದಾಗ ಅವರ ಬಳಿ ಕೂಲಿಂಗ್ ಗ್ಲಾಸ್ ಇದ್ದಿದ್ದರ ಬಗ್ಗೆ ಚರ್ಚೆಯಾಗಿತ್ತು. ದರ್ಶನ್ ಕೈಯಲ್ಲಿ, ಕಡಗ, ಕೊರಳಲ್ಲಿ ಮಣಿ ಸರ ಇತ್ತು ಎನ್ನಲಾಗಿತ್ತು. ಆದರೆ ಬಳ್ಳಾರಿ ಎಸ್​ಪಿ ಇದನ್ನು ಅಲ್ಲಗಳೆದಿದ್ದು, ದರ್ಶನ್ ಕೈಯಲ್ಲಿ ಕಡಗ ಇರಲಿಲ್ಲ ಎಂದಿದ್ದಾರೆ. ಹಾಗೂ ದರ್ಶನ್ ಅವರದ್ದು ಟೆಸ್ಟೆಡ್ ಗ್ಲಾಸು ಎಂದಿದ್ದಾರೆ. ಅದರ ಬಗ್ಗೆ ಪರೀಕ್ಷೆ ಮಾಡುತ್ತೇವೆ ಎಂದಿದ್ದಾರೆ.

ಬೆಳಿಗಿನ ತಿಂಡಿ

ನಿನ್ನೆ ಮಧ್ಯಾಹ್ನ ಊಟ ನಿರಾಕರಿಸಿ ನಿದ್ದೆಗೆ ಜಾರಿದ್ದ ನಟ ದರ್ಶನ್, ನಿನ್ನೆ ರಾತ್ರಿ ತುಸು ಊಟ ಮಾಡಿದ್ದರು. ಇಂದು (ಆಗಸ್ಟ್ 30) ರ ಬೆಳಿಗ್ಗೆ ಜೈಲಿನಲ್ಲಿ ತಿನ್ನಲು ಉಪ್ಪಿಟ್ಟು ನೀಡಿದ್ದು, ಉಪ್ಪಿಟ್ಟು ಸೇವಿಸಿದ್ದಾರೆ. ಎರಡು ಬ್ಯಾಗಿನ ತುಂಬ ಪುಸ್ತಕಗಳನ್ನು ದರ್ಶನ್ ಬಳ್ಳಾರಿ ಜೈಲಿಗೆ ಕೊಂಡು ಒಯ್ದಿದ್ದು, ಪುಸ್ತಕ ಓದುವುದರಲ್ಲಿ ನಿರತರಾಗಿದ್ದಾರಂತೆ. ಸುಮಾರು 20 ಹೊಸ ಪುಸ್ತಕಗಳನ್ನು ದರ್ಶನ್, ಜೈಲಿಗೆ ತಂದಿದ್ದಾರಂತೆ.

ಅಭಿಮಾನಿಗಳ ಪೂಜೆ

ದರ್ಶನ್ ಇರುವ ಕೇಂದ್ರ ಕಾರಾಗೃಹದ ಸಮೀಪದಲ್ಲಿರುವ ದುರ್ಗಾ ದೇವಿ ದೇವಸ್ಥಾನಕ್ಕೆ ದರ್ಶನ್ ಅಭಿಮಾನಿಗಳು ಭೇಟಿ ನೀಡಲಿದ್ದು, ದರ್ಶನ್​ರ ಒಳಿತಾಗಿ ಇಂದು ತೆಂಗಿನ ಕಾಯಿ ಒಡೆದು ವಿಶೇಷ ಪೂಜೆ ಮಾಡಲಿದ್ದಾರೆ. ಈಗ ಬಳ್ಳಾರಿ ಜೈಲಿನಲ್ಲಿ ದರ್ಶನ್​ಗೆ ಕೈದಿ ಸಂಖ್ಯೆ 511 ನೀಡಿದ್ದು, ಆ ಸಂಖ್ಯೆಯನ್ನು ಆಟೋಗಳ ಮೇಲೆ, ಬೈಕುಗಳ ಮೇಲೆ ಬರೆದುಕೊಳ್ಳುತ್ತಿದ್ದಾರೆ ಅಭಿಮಾನಿಗಳು.

ಇದನ್ನೂ ಓದಿ:ದರ್ಶನ್ ತೂಗುದೀಪ: ಬಳ್ಳಾರಿ ಜೈಲು ಮುಂದಿನ ರಸ್ತೆಗಳು ಸಂಚಾರ ಮುಕ್ತ, ಬ್ಯಾರಿಕೇಡ್ ಸರಿಸಿದ ಪೊಲೀಸರು

ವಿಜಯಲಕ್ಷ್ಮಿ ಭೇಟಿ ಸಾಧ್ಯತೆ

ದರ್ಶನ್, ಪರಪ್ಪನ ಅಗ್ರಹಾರ ಜೈಲಿನಲ್ಲಿದ್ದಾಗ ಪ್ರತಿ ಸೋಮವಾರ ವಿಜಯಲಕ್ಷ್ಮಿ ಅವರು ಜೈಲಿಗೆ ಬಂದು ದರ್ಶನ್ ಅನ್ನು ಭೇಟಿ ಮಾಡುತ್ತಿದ್ದರು. ಹಣ್ಣು, ಬಟ್ಟೆಗಳನ್ನು ನೀಡುತ್ತಿದ್ದರು. ಆದರೆ ಕಳೆದ ಸೋಮವಾರ ಭೇಟಿ ಮಾಡಿರಲಿಲ್ಲ. ಇದೀಗ ಬಳ್ಳಾರಿ ಜೈಲಿಗೆ ದರ್ಶನ್ ವಾಸ್ತವ್ಯ ಬದಲಾಗಿದ್ದು, ಇಂದು (ಆಗಸ್ಟ್ 30) ವಿಜಯಲಕ್ಷ್ಮಿ ಅವರು ಬಳ್ಳಾರಿ ಜೈಲಿಗೆ ಭೇಟಿ ನೀಡುವ ಸಾಧ್ಯತೆ ಇದೆ.

ಕರಿಯ ಮರು ಬಿಡುಗಡೆ

ಇತ್ತ ಬೆಂಗಳೂರಿನಲ್ಲಿ ದರ್ಶನ್ ನಟನೆಯ ‘ಕರಿಯ’ ಸಿನಿಮಾ ಮರು ಬಿಡುಗಡೆ ಆಗಿದ್ದು, ಅಭಿಮಾನಿಗಳು ಅತಿರೇಕದ ಸಂಭ್ರಮಾಚರಣೆ ಮಾಡಿದ್ದಾರೆ. ದರ್ಶನ್ ಕೈದಿ ಸಂಖ್ಯೆಯ ಪೋಸ್ಟರ್​ಗಳನ್ನು ಹಾಕಲಾಗಿದೆ. ಮಾಧ್ಯಮಗಳ ವಿರುದ್ಧ ಘೋಷಣೆಗಳನ್ನು ಸಹ ಕೂಗಲಾಗಿದೆ. ಬಳಿಕ ಪೊಲೀಸರು ಬಂದು ದರ್ಶನ್ ಅಭಿಮಾನಿಗಳಿಗೆ ‘ಬುದ್ಧಿ’ ಹೇಳಿ ಕಟೌಟ್​ಗಳನ್ನು ತೆಗೆಸಿದ್ದಾರೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
Manjunatha C
Manjunatha C

ಮಂಜುನಾಥ ಸಿ, ಬೆಂಗಳೂರು ಗ್ರಾಮಾಂತರ, ವಿಜಯರಪುರ ಪಟ್ಟಣ ನಿವಾಸಿ. ಕಳೆದ ಏಳು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯನಾಗಿದ್ದೇನೆ. ಕಳೆದ ಐದು ವರ್ಷದಿಂದ ಡಿಜಿಟಲ್ ಪತ್ರಿಕೋದ್ಯಮದಲ್ಲಿ ತೊಡಗಿಕೊಂಡಿದ್ದೇನೆ. ಈ ಹಿಂದೆ ಪ್ರಜಾವಾಣಿ, ಒನ್ ಇಂಡಿಯಾ ಕನ್ನಡ ಸಂಸ್ಥೆಗಳ ವಿವಿಧ ವಿಭಾಗಗಳಲ್ಲಿ ಕೆಲಸ ಮಾಡಿದ್ದೇನೆ. ಪ್ರಸ್ತುತ ಟಿವಿ9 ಕನ್ನಡ ಡಿಜಿಟಲ್​ನ ಸಿನಿಮಾ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಮೆಚ್ಚಿನ ಹವ್ಯಾಸ ಸಿನಿಮಾ ವೀಕ್ಷಣೆ, ಪುಸ್ತಕಗಳನ್ನು ಓದುವುದು.

Read More
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​