AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Darshan Thoogudeepa: ಬಳ್ಳಾರಿ ಜೈಲಿನಲ್ಲಿ ದರ್ಶನ್: ಹೇಗಿತ್ತು ಮೊದಲ ದಿನ?

Darshan Thoogudeepa: ನಟ ದರ್ಶನ್ ಅನ್ನು ನಿನ್ನೆ ಬಳ್ಳಾರಿ ಜೈಲಿಗೆ ಸ್ಥಳಾಂತರ ಮಾಡಲಾಗಿದೆ. ಬಳ್ಳಾರಿ ಜೈಲಿನಲ್ಲಿ ಮೊದಲ ದಿನ ಹೇಗಿತ್ತು ವಾಸ್ತವ್ಯ. ದರ್ಶನ್ ಕುರಿತಾದ ಇನ್ನಿತರೆ ಬೆಳವಣಿಗಳ ವಿವರಗಳು ಇಲ್ಲಿವೆ.

Darshan Thoogudeepa: ಬಳ್ಳಾರಿ ಜೈಲಿನಲ್ಲಿ ದರ್ಶನ್: ಹೇಗಿತ್ತು ಮೊದಲ ದಿನ?
ಮಂಜುನಾಥ ಸಿ.
|

Updated on: Aug 30, 2024 | 10:57 AM

Share

ನಟ ದರ್ಶನ್ ಅನ್ನು ನಿನ್ನೆ (ಆಗಸ್ಟ್ 29) ಕ್ಕೆ ಬಳ್ಳಾರಿ ಜೈಲಿಗೆ ಸ್ಥಳಾಂತರ ಮಾಡಲಾಗಿದೆ. ಪರಪ್ಪನ ಅಗ್ರಹಾರ ಜೈಲಿನಲ್ಲಿ ದರ್ಶನ್​ಗೆ ವಿಶೇಷ ಆತಿಥ್ಯ ದೊರೆಯುತ್ತಿದ್ದ ಕಾರಣ ಹಾಗೂ ಒಂದೇ ಪ್ರಕರಣದ ಆರೋಪಿಗಳಿಗೆ ಭೇಟಿ ಮಾಡಲು ಮಾಡಲು ಅವಕಾಶ ಸಿಕ್ಕಿದ್ದ ಕಾರಣ ದರ್ಶನ್ ಸೇರಿದಂತೆ ರೇಣುಕಾ ಸ್ವಾಮಿ ಕೊಲೆ ಪ್ರಕರಣದ ಆರೋಪಿಗಳನ್ನು ಬೇರೆ ಬೇರೆ ಜೈಲುಗಳಿಗೆ ವರ್ಗಾವಣೆ ಮಾಡಲಾಗಿದೆ. ದರ್ಶನ್ ಅನ್ನು ನಿನ್ನೆ ಬೆಳಿಗ್ಗೆ ಬಳ್ಳಾರಿ ಜೈಲಿಗೆ ಕರೆತರಲಾಯ್ತು.

ಸನ್ ಗ್ಲಾಸು

ದರ್ಶನ್ ಅನ್ನು ಜೈಲಿಗೆ ಕರೆತಂದಾಗ ಅವರ ಬಳಿ ಕೂಲಿಂಗ್ ಗ್ಲಾಸ್ ಇದ್ದಿದ್ದರ ಬಗ್ಗೆ ಚರ್ಚೆಯಾಗಿತ್ತು. ದರ್ಶನ್ ಕೈಯಲ್ಲಿ, ಕಡಗ, ಕೊರಳಲ್ಲಿ ಮಣಿ ಸರ ಇತ್ತು ಎನ್ನಲಾಗಿತ್ತು. ಆದರೆ ಬಳ್ಳಾರಿ ಎಸ್​ಪಿ ಇದನ್ನು ಅಲ್ಲಗಳೆದಿದ್ದು, ದರ್ಶನ್ ಕೈಯಲ್ಲಿ ಕಡಗ ಇರಲಿಲ್ಲ ಎಂದಿದ್ದಾರೆ. ಹಾಗೂ ದರ್ಶನ್ ಅವರದ್ದು ಟೆಸ್ಟೆಡ್ ಗ್ಲಾಸು ಎಂದಿದ್ದಾರೆ. ಅದರ ಬಗ್ಗೆ ಪರೀಕ್ಷೆ ಮಾಡುತ್ತೇವೆ ಎಂದಿದ್ದಾರೆ.

ಬೆಳಿಗಿನ ತಿಂಡಿ

ನಿನ್ನೆ ಮಧ್ಯಾಹ್ನ ಊಟ ನಿರಾಕರಿಸಿ ನಿದ್ದೆಗೆ ಜಾರಿದ್ದ ನಟ ದರ್ಶನ್, ನಿನ್ನೆ ರಾತ್ರಿ ತುಸು ಊಟ ಮಾಡಿದ್ದರು. ಇಂದು (ಆಗಸ್ಟ್ 30) ರ ಬೆಳಿಗ್ಗೆ ಜೈಲಿನಲ್ಲಿ ತಿನ್ನಲು ಉಪ್ಪಿಟ್ಟು ನೀಡಿದ್ದು, ಉಪ್ಪಿಟ್ಟು ಸೇವಿಸಿದ್ದಾರೆ. ಎರಡು ಬ್ಯಾಗಿನ ತುಂಬ ಪುಸ್ತಕಗಳನ್ನು ದರ್ಶನ್ ಬಳ್ಳಾರಿ ಜೈಲಿಗೆ ಕೊಂಡು ಒಯ್ದಿದ್ದು, ಪುಸ್ತಕ ಓದುವುದರಲ್ಲಿ ನಿರತರಾಗಿದ್ದಾರಂತೆ. ಸುಮಾರು 20 ಹೊಸ ಪುಸ್ತಕಗಳನ್ನು ದರ್ಶನ್, ಜೈಲಿಗೆ ತಂದಿದ್ದಾರಂತೆ.

ಅಭಿಮಾನಿಗಳ ಪೂಜೆ

ದರ್ಶನ್ ಇರುವ ಕೇಂದ್ರ ಕಾರಾಗೃಹದ ಸಮೀಪದಲ್ಲಿರುವ ದುರ್ಗಾ ದೇವಿ ದೇವಸ್ಥಾನಕ್ಕೆ ದರ್ಶನ್ ಅಭಿಮಾನಿಗಳು ಭೇಟಿ ನೀಡಲಿದ್ದು, ದರ್ಶನ್​ರ ಒಳಿತಾಗಿ ಇಂದು ತೆಂಗಿನ ಕಾಯಿ ಒಡೆದು ವಿಶೇಷ ಪೂಜೆ ಮಾಡಲಿದ್ದಾರೆ. ಈಗ ಬಳ್ಳಾರಿ ಜೈಲಿನಲ್ಲಿ ದರ್ಶನ್​ಗೆ ಕೈದಿ ಸಂಖ್ಯೆ 511 ನೀಡಿದ್ದು, ಆ ಸಂಖ್ಯೆಯನ್ನು ಆಟೋಗಳ ಮೇಲೆ, ಬೈಕುಗಳ ಮೇಲೆ ಬರೆದುಕೊಳ್ಳುತ್ತಿದ್ದಾರೆ ಅಭಿಮಾನಿಗಳು.

ಇದನ್ನೂ ಓದಿ:ದರ್ಶನ್ ತೂಗುದೀಪ: ಬಳ್ಳಾರಿ ಜೈಲು ಮುಂದಿನ ರಸ್ತೆಗಳು ಸಂಚಾರ ಮುಕ್ತ, ಬ್ಯಾರಿಕೇಡ್ ಸರಿಸಿದ ಪೊಲೀಸರು

ವಿಜಯಲಕ್ಷ್ಮಿ ಭೇಟಿ ಸಾಧ್ಯತೆ

ದರ್ಶನ್, ಪರಪ್ಪನ ಅಗ್ರಹಾರ ಜೈಲಿನಲ್ಲಿದ್ದಾಗ ಪ್ರತಿ ಸೋಮವಾರ ವಿಜಯಲಕ್ಷ್ಮಿ ಅವರು ಜೈಲಿಗೆ ಬಂದು ದರ್ಶನ್ ಅನ್ನು ಭೇಟಿ ಮಾಡುತ್ತಿದ್ದರು. ಹಣ್ಣು, ಬಟ್ಟೆಗಳನ್ನು ನೀಡುತ್ತಿದ್ದರು. ಆದರೆ ಕಳೆದ ಸೋಮವಾರ ಭೇಟಿ ಮಾಡಿರಲಿಲ್ಲ. ಇದೀಗ ಬಳ್ಳಾರಿ ಜೈಲಿಗೆ ದರ್ಶನ್ ವಾಸ್ತವ್ಯ ಬದಲಾಗಿದ್ದು, ಇಂದು (ಆಗಸ್ಟ್ 30) ವಿಜಯಲಕ್ಷ್ಮಿ ಅವರು ಬಳ್ಳಾರಿ ಜೈಲಿಗೆ ಭೇಟಿ ನೀಡುವ ಸಾಧ್ಯತೆ ಇದೆ.

ಕರಿಯ ಮರು ಬಿಡುಗಡೆ

ಇತ್ತ ಬೆಂಗಳೂರಿನಲ್ಲಿ ದರ್ಶನ್ ನಟನೆಯ ‘ಕರಿಯ’ ಸಿನಿಮಾ ಮರು ಬಿಡುಗಡೆ ಆಗಿದ್ದು, ಅಭಿಮಾನಿಗಳು ಅತಿರೇಕದ ಸಂಭ್ರಮಾಚರಣೆ ಮಾಡಿದ್ದಾರೆ. ದರ್ಶನ್ ಕೈದಿ ಸಂಖ್ಯೆಯ ಪೋಸ್ಟರ್​ಗಳನ್ನು ಹಾಕಲಾಗಿದೆ. ಮಾಧ್ಯಮಗಳ ವಿರುದ್ಧ ಘೋಷಣೆಗಳನ್ನು ಸಹ ಕೂಗಲಾಗಿದೆ. ಬಳಿಕ ಪೊಲೀಸರು ಬಂದು ದರ್ಶನ್ ಅಭಿಮಾನಿಗಳಿಗೆ ‘ಬುದ್ಧಿ’ ಹೇಳಿ ಕಟೌಟ್​ಗಳನ್ನು ತೆಗೆಸಿದ್ದಾರೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!
ಗದಗ: ಬಸ್ ನಿಲ್ಲಿಸದಿರುವುದನ್ನ ಪ್ರಶ್ನಿಸಿದ ವಿದ್ಯಾರ್ಥಿ ಮೇಲೆ ದರ್ಪ
ಗದಗ: ಬಸ್ ನಿಲ್ಲಿಸದಿರುವುದನ್ನ ಪ್ರಶ್ನಿಸಿದ ವಿದ್ಯಾರ್ಥಿ ಮೇಲೆ ದರ್ಪ