ದರ್ಶನ್ ನ್ಯಾಯಾಂಗ ಬಂಧನದ ಅವಧಿ ವಿಸ್ತರಣೆ; ಸೆ.30ರವರೆಗೆ ಜೈಲೇ ಗತಿ

ರೇಣುಕಾ ಸ್ವಾಮಿ ಕೊಲೆ ಪ್ರಕರಣ ಕುರಿತಂತೆ ಪೊಲೀಸರು ಸುದೀರ್ಘವಾದ ಆರೋಪ ಪಟ್ಟಿಯನ್ನು ನ್ಯಾಯಾಲಯಕ್ಕೆ ಸಲ್ಲಿಸಿದ್ದಾರೆ. ಆರೋಪ ಪಟ್ಟಿಯನ್ನು ಕೋರ್ಟ್ ಮಾನ್ಯ ಮಾಡಿದೆ. ಈಗ ದರ್ಶನ್ ಹಾಗೂ ಗ್ಯಾಂಗ್​ನ ನ್ಯಾಯಾಂಗ ಬಂಧನ ಅವಧಿ ಸೆಪ್ಟೆಂಬರ್​ 30ರವರೆಗೆ ವಿಸ್ತರಣೆ ಆಗಿದೆ.

ದರ್ಶನ್ ನ್ಯಾಯಾಂಗ ಬಂಧನದ ಅವಧಿ ವಿಸ್ತರಣೆ; ಸೆ.30ರವರೆಗೆ ಜೈಲೇ ಗತಿ
ದರ್ಶನ್
Follow us
|

Updated on:Sep 17, 2024 | 2:28 PM

ರೇಣುಕಾ ಸ್ವಾಮಿಯನ್ನು ಕೊಲೆ ಮಾಡಿರುವ ಪ್ರಕರಣದಲ್ಲಿ ನಟ ದರ್ಶನ್ ಹಾಗೂ ಅವರ ಸಹಚಚರರನ್ನು ಬಂಧಿಸಲಾಗಿದೆ. ಈಗಾಗಲೇ ಅವರು ಜೈಲು ಸೇರಿ ಮೂರು ತಿಂಗಳು ಆಗಿದೆ. ಇಂದಿಗೆ (ಸೆಪ್ಟೆಂಬರ್ 17) ದರ್ಶನ್ ನ್ಯಾಯಾಂಗ ಬಂಧನದ ಅವಧಿ ಪೂರ್ಣಗೊಳ್ಳುವುದರಲ್ಲಿ ಇತ್ತು. ಹೀಗಾಗಿ, ದರ್ಶನ್ ಹಾಗೂ ಗ್ಯಾಂಗ್​ನ ವಿಡಿಯೋ ಕಾನ್ಫರೆನ್ಸ್ ಮೂಲಕ ಕೋರ್ಟ್ ಎದುರು ಹಾಜರುಪಡಿಸಲಾಗಿದೆ. ಅವರ ನ್ಯಾಯಾಂಗ ಬಂಧನ ಅವಧಿ  ಸೆಪ್ಟೆಂಬರ್​ 30ರವರೆಗೆ ವಿಸ್ತರಣೆ ಆಗಿದೆ.

ಕುರ್ಚಿ ಬಗ್ಗೆ ಮತ್ತೊಮ್ಮೆ ಜಡ್ಜ್​ ಎದುರು ದರ್ಶನ್ ಪರ ವಕೀಲರು ಮನವಿ ಮಾಡಿದ್ದಾರೆ. ‘ಪ್ಲಾಸ್ಟಿಕ್ ಚೇರ್ ವ್ಯವಸ್ಥೆ ಮಾಡೋಕು ಜೈಲಾಧಿಕಾರಿಗಳು ಆಗಲ್ಲ ಎಂದು ಹೇಳುತ್ತಿದ್ದಾರೆ. ಬೇರೆ ಕೈದಿಗಳಿಗೆ ಆ ವ್ಯವಸ್ಥೆ ಇದೆ.  ಆದರೆ, ದರ್ಶನ್​ಗೆ ಚೇರ್ ವ್ಯವಸ್ಥೆ ಮಾಡುತ್ತಿಲ್ಲ. ದರ್ಶನ್ ಅವರನ್ನು ಯಾರು ಏನು ಅಂದುಕೊಂಡಿದ್ದಾರೋ ಗೊತ್ತಿಲ್ಲ’ ಎಂದು ದರ್ಶನ್ ಪರ ವಕೀಲರು ಹೇಳಿದರು. ‘ಕೈದಿಗಳಿಗೆ ಏನು ವ್ಯವಸ್ಥೆ ನೀಡಬೇಕು ಎಂದು ಜೈಲಿನ ನಿಯಮ ಪಟ್ಟಿಯಲ್ಲಿ ಇದೆ. ಅದು ಕೊಡಬೇಕು ಎಂದು ಆದೇಶ ಮಾಡುತ್ತೇನೆ’ ಎಂದು ಜಡ್ಜ್ ಹೇಳಿದರು.

ಇದನ್ನೂ ಓದಿ: ದರ್ಶನ್ ನ್ಯಾಯಾಂಗ ಬಂಧನದ ಅವಧಿ ವಿಸ್ತರಣೆ; ಸೆ.30ರವರೆಗೆ ಜೈಲೇ ಗತಿ

ಇಂದು ದರ್ಶನ್ ನ್ಯಾಯಾಂಗ ಬಂಧನದ ಅವಧಿ ಪೂರ್ಣಗೊಳ್ಳುವುದರಲ್ಲಿ ಇತ್ತು. ಹೀಗಾಗಿ, ಬೆಂಗಳೂರಿನ 24ನೇ ಎಸಿಎಂಎಂ ಕೋರ್ಟ್ ಎದುರು ಅವರನ್ನು ಹಾಜರುಪಡಿಸಲಾಯಿತು. ಬಳ್ಳಾರಿ ಸೆಂಟ್ರಲ್​ ಜೈಲಿನಿಂದ ದರ್ಶನ್​, ಪರಪ್ಪನ ಅಗ್ರಹಾರ ಸೆಂಟ್ರಲ್ ಜೈಲಿನಿಂದ ಪವಿತ್ರಾಗೌಡ ಹಾಜರಾಗಿದ್ದರು. ಉಳಿದಂತೆ ತುಮಕೂರು, ಮೈಸೂರು, ಧಾರವಾಡ, ಕಲಬುರಗಿ, ವಿಜಯಪುರ, ಹಿಂಡಲಗಾ ಜೈಲಿನಿಂದ ಆರೋಪಿಗಳು ಹಾಜರಾಗಿದ್ದರು. ಎಲ್ಲಾ ಆರೋಪಿಗಳ ನ್ಯಾಯಾಂಗ ಬಂಧನ ಅವಧಿ ವಿಸ್ತರಣೆ ಮಾಡಿ ಜಡ್ಜ್​ ಆದೇಶ ಹೊರಡಿಸಿದ್ದಾರೆ.

ರೇಣುಕಾ ಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿ 3991 ಪುಟಗಳ ಚಾರ್ಜ್​ಶೀಟ್ ಸಲ್ಲಿಕೆ ಮಾಡಿದ್ದಾರೆ. ಇದರಲ್ಲಿ ದರ್ಶನ್ ಸೇರಿದಂತೆ ಎಲ್ಲಾ ಆರೋಪಿಗಳ ಹೇಳಿಕೆ, ಸಾಕ್ಷಿಗಳ ಬಗ್ಗೆ ಉಲ್ಲೇಖ ಆಗಿದೆ. ವಿಚಾರಣೆ ವೇಳೆ ದರ್ಶನ್ ಅವರು ತಾವು ಹಲ್ಲೆ ಮಾಡಿರುವುದಾಗಿ ಒಪ್ಪಿಕೊಂಡಿದ್ದಾರೆ. ಆದರೆ, ಎಲ್ಲಿಯೂ ಕೊಲೆಯನ್ನು ಇವರೇ ಮಾಡಿದ್ದಾರೆ ಎಂಬ ವಿಚಾರ ಉಲ್ಲೇಖ ಆಗಿಲ್ಲ. ಶೀಘ್ರವೇ ದರ್ಶನ್ ಜಾಮೀನಿಗೆ ಅರ್ಜಿ ಸಲ್ಲಿಕೆ ಮಾಡೋ ಸಾಧ್ಯತೆ ಇದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 2:13 pm, Tue, 17 September 24

ಗದಗ: ಲಂಚದ ಆರೋಪ, ಅಧಿಕಾರಿಗೆ ಸಚಿವ ಎಚ್​ಕೆ ಪಾಟೀಲ್​ ಹಿಗ್ಗಾಮುಗ್ಗಾ ತರಾಟೆ
ಗದಗ: ಲಂಚದ ಆರೋಪ, ಅಧಿಕಾರಿಗೆ ಸಚಿವ ಎಚ್​ಕೆ ಪಾಟೀಲ್​ ಹಿಗ್ಗಾಮುಗ್ಗಾ ತರಾಟೆ
ಪ್ರವಾಹ ಸ್ಥಳದಲ್ಲಿ ಟಿಎಂಸಿ ಶಾಸಕರು, ಸಂಸದರಿದ್ದ ದೋಣಿ ಪಲ್ಟಿ
ಪ್ರವಾಹ ಸ್ಥಳದಲ್ಲಿ ಟಿಎಂಸಿ ಶಾಸಕರು, ಸಂಸದರಿದ್ದ ದೋಣಿ ಪಲ್ಟಿ
ಒಬ್ಬರೇ ಇದ್ದೀರಾ? ಭಯ ಅನಿಸುತ್ತಿದೆಯಾ? ಈ ವೇಳೆ ಜಪಿಸಬೇಕಾದ ನಾಮಗಳು ಇಲ್ಲಿವೆ
ಒಬ್ಬರೇ ಇದ್ದೀರಾ? ಭಯ ಅನಿಸುತ್ತಿದೆಯಾ? ಈ ವೇಳೆ ಜಪಿಸಬೇಕಾದ ನಾಮಗಳು ಇಲ್ಲಿವೆ
ಈ ರಾಶಿಯವರು ಗೊತ್ತಾಗದೇ ಕೆಟ್ಟವರ ಸಹವಾಸವನ್ನು ಮಾಡುವಿರಿ
ಈ ರಾಶಿಯವರು ಗೊತ್ತಾಗದೇ ಕೆಟ್ಟವರ ಸಹವಾಸವನ್ನು ಮಾಡುವಿರಿ
ಚಲಿಸುವಾಗಲೇ ನೀರಿನಲ್ಲಿ ತೇಲಿದ ಕಾರು; ಪ್ರಾಣದ ಹಂಗು ತೊರೆದು ಜನರ ರಕ್ಷಣೆ
ಚಲಿಸುವಾಗಲೇ ನೀರಿನಲ್ಲಿ ತೇಲಿದ ಕಾರು; ಪ್ರಾಣದ ಹಂಗು ತೊರೆದು ಜನರ ರಕ್ಷಣೆ
ಹೃದಯ ವಿದ್ರಾವಕ ಘಟನೆ: ಬೈಕ್‌ನಲ್ಲೇ ತಂದೆಯ ಶವ ಸಾಗಿಸಿದ ಮಕ್ಕಳು
ಹೃದಯ ವಿದ್ರಾವಕ ಘಟನೆ: ಬೈಕ್‌ನಲ್ಲೇ ತಂದೆಯ ಶವ ಸಾಗಿಸಿದ ಮಕ್ಕಳು
ಭಾರತದ ಷೇರುಪೇಟೆ ಇನ್ನೆಷ್ಟು ಬೇಗ ಡಬಲ್ ಆಗುತ್ತೆ?
ಭಾರತದ ಷೇರುಪೇಟೆ ಇನ್ನೆಷ್ಟು ಬೇಗ ಡಬಲ್ ಆಗುತ್ತೆ?
ಸುದ್ದಿಗೋಷ್ಠಿಗೂ ಮುನ್ನ ಸಿಎಂ- ಸಚಿವರುಗಳು ಪಿಸು ಪಿಸು ಮಾತು
ಸುದ್ದಿಗೋಷ್ಠಿಗೂ ಮುನ್ನ ಸಿಎಂ- ಸಚಿವರುಗಳು ಪಿಸು ಪಿಸು ಮಾತು
ಚಾಮುಂಡೇಶ್ವರಿ ತಾಯಿಗೆ ವಿಶೇಷ ಪೂಜೆ ಸಲ್ಲಿಸಿದ ನಿಖಿಲ್ ಕುಮಾರಸ್ವಾಮಿ
ಚಾಮುಂಡೇಶ್ವರಿ ತಾಯಿಗೆ ವಿಶೇಷ ಪೂಜೆ ಸಲ್ಲಿಸಿದ ನಿಖಿಲ್ ಕುಮಾರಸ್ವಾಮಿ
ಡ್ರೋನ್​​ನಲ್ಲಿ ಗಣಪತಿಯನ್ನು ವಿಸರ್ಜನೆ ಮಾಡಿದ ಯುವಕರು! ವಿಡಿಯೋ ನೋಡಿ
ಡ್ರೋನ್​​ನಲ್ಲಿ ಗಣಪತಿಯನ್ನು ವಿಸರ್ಜನೆ ಮಾಡಿದ ಯುವಕರು! ವಿಡಿಯೋ ನೋಡಿ