AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದರ್ಶನ್​ಗೆ ಜಾಮೀನು ಕೊಡಬೇಕು ಎಂದು ಕೋರಲು ವಕೀಲರು ನೀಡಿದ ಕಾರಣಗಳೇನು?

ನಟ ದರ್ಶನ್ ಅವರು ಶುಕ್ರವಾರ (ಸೆಪ್ಟೆಂಬರ್ 27) ಜಾಮೀನು ಸಿಗುವ ನಿರೀಕ್ಷೆಯಲ್ಲಿ ಇದ್ದರು. ಆದರೆ, ಆಕ್ಷೇಪಣೆ ಸಲ್ಲಿಸಲು ಸರ್ಕಾರಿ ಪರ ವಕೀಲರು ಸಮಯ ಕೇಳಿದ್ದರಿಂದ ಅರ್ಜಿ ವಿಚಾರಣೆ ಸೆಪ್ಟೆಂಬರ್ 30ಕ್ಕೆ ಮುಂದೂಡಿಕೆ ಆಗಿದೆ. ಇಂದು ಕೋರ್ಟ್​ನಲ್ಲಿ ಅರ್ಜಿ ವಿಚಾರಣೆ ನಡೆಯಲಿದೆ.

ದರ್ಶನ್​ಗೆ ಜಾಮೀನು ಕೊಡಬೇಕು ಎಂದು ಕೋರಲು ವಕೀಲರು ನೀಡಿದ ಕಾರಣಗಳೇನು?
ದರ್ಶನ್
Ramesha M
| Edited By: |

Updated on: Sep 30, 2024 | 8:55 AM

Share

ಬೆಂಗಳೂರಿನ ಸೆಷನ್ಸ್ ಕೋರ್ಟ್ ಸಿಸಿಹೆಚ್ 57ರಲ್ಲಿ ದರ್ಶನ್, ಪವಿತ್ರಾಗೌಡ ಜಾಮೀನು ಅರ್ಜಿ ವಿಚಾರಣೆ ಇಂದು (ಸೆಪ್ಟೆಂಬರ್ 30) ನಡೆಯಲಿದೆ. ದರ್ಶನ್ ಪರ ವಕೀಲ ಸುನೀಲ್​ ಜಾಮೀನು ಅರ್ಜಿ ಸಲ್ಲಿಕೆ ಮಾಡಿದ್ದಾರೆ. ಈ ವೇಳೆ ಅವರು ಹಲವು ವಾದಗಳನ್ನು ಕೋರ್ಟ್ ಮುಂದೆ ಇಟ್ಟಿದ್ದಾರೆ. ಇವುಗಳನ್ನು ಕೋರ್ಟ್ ಪರಿಗಣಿಸಿದರೆ ಅವರಿಗೆ ಜಾಮೀನು ಸಿಗೋದು ಸುಲಭವಾಗಲಿದೆ.

‘ದರ್ಶನ್ ಹೇಳಿಕೆ ಆಧರಿಸಿ ಸಾಕ್ಷ್ಯ ಸಂಗ್ರಹಿಸಿದ್ದಾಗಿ ಹೇಳಲಾಗಿದೆ. ಆದರೆ ಸಾಕ್ಷ್ಯ ಗಮನಿಸಿದರೆ ಪ್ರಾಸಿಕ್ಯೂಷನ್ ಆರೋಪಗಳು ಸುಳ್ಳು ಎಂದು ಅನಿಸುತ್ತದೆ. ಸಾಕ್ಷ್ಯಾಧಾರಗಳನ್ನು ಸೃಷ್ಟಿಸುವ ಕೆಲಸವಾಗಿರುವುದು ಕಂಡುಬರುತ್ತಿದೆ’ ಎಂಬುದು ದರ್ಶನ್ ಪರ ವಕೀಲರ ವಾದ. ‘ಇತರೆ ಆರೋಪಿಗಳೊಂದಿಗೆ ದರ್ಶನ್ ದೂರವಾಣಿ ಕರೆ ವಿವರ ಸಂಗ್ರಹ ಮಾಡಿದ್ದಾರೆ. ರೇಣುಕಾಸ್ವಾಮಿ ಮೇಲಿನ ಹಲ್ಲೆ ದರ್ಶನ್​ಗೆ ತಿಳಿದಿತ್ತೆಂಬಂತೆ ಬಿಂಬಿಸಲಾಗಿದೆ. ದರ್ಶನ್ ಕರೆ ಮಾಡಿರುವುದು ತಮ್ಮ ಸ್ನೇಹಿತರು, ಉದ್ಯೋಗಿಗಳು ಮತ್ತಿತರರಿಗೆ. ಎಂದಿನಂತೆ ದರ್ಶನ್ ಅವರೊಂದಿಗೆ ಸಹಜವಾಗೇ ಮಾತನಾಡಿದ್ದಾರೆ’ ಎಂದು ದರ್ಶನ್ ಪರ ವಕೀಲರು ಹೇಳುತ್ತಿದ್ದಾರೆ.

‘ಕೃತ್ಯದ ನಾಲ್ಕು ದಿನದ ಬಳಿಕ ಪೋಸ್ಟ್​ಮಾರ್ಟಮ್ ಮಾಡಲಾಗಿದೆ. ನಾಲ್ಕು ದಿನದ ಬಳಿಕವೇ ಶವದ ಪಂಚನಾಮೆ ನಡೆದಿದೆ. ಈ ವಿಳಂಬಕ್ಕೆ ತನಿಖಾಧಿಕಾರಿ ಯಾವುದೇ ವಿವರಣೆ ನೀಡಿಲ್ಲ. ರೇಣುಕಾ ಸ್ವಾಮಿ ತಲೆಯ ಮೇಲೆ 2.5X1 ಸೆಂಟಿ ಮೀಟರ್​ನ ಒಂದು ಆಳವಾದ ಗಾಯವಿದೆ. ಮೃತದೇಹದ ಕೆಲವೆಡೆ ಏಟುಗಳ ಗುರುತುಗಳಿವೆ. ಶವಪರೀಕ್ಷೆ ನಡೆಸಿದ ವೈದ್ಯರ ವರದಿಯಲ್ಲಿ ಸ್ಪಷ್ಟತೆಯಿಲ್ಲ. ಸಾವಿಗೆ ಕಾರಣ ಹಾಗೂ ಸಾವಿನ ಸಮಯದ ಬಗ್ಗೆ ಸ್ಪಷ್ಟತೆ ಇಲ್ಲ’ ಎಂದು ದರ್ಶನ್ ಪರ ವಕೀಲರು ಹೇಳುತ್ತಿದ್ದಾರೆ. ಇದು ವಿಚಾರಣೆಯಲ್ಲಿ ಪ್ರಾಮುಖ್ಯತೆ ಪಡೆದುಕೊಳ್ಳಲಿದೆ.

‘ಸಹ ಆರೋಪಿಗಳ ಮೊಬೈಲ್​ ಸಂದೇಶಕ್ಕೂ ದರ್ಶನ್​ಗೂ ಸಂಬಂಧವಿಲ್ಲ. ಕೃತ್ಯಕ್ಕೂ ಮೊಬೈಲ್ ಸಂದೇಶಗಳಿಗೂ ಯಾವುದೇ ಸಂಬಂಧವಿಲ್ಲ. ಸಿಸಿಟಿವಿ ದೃಶ್ಯಾವಳಿ ಸತ್ಯವೆಂದು ನಂಬಿದರೂ ದರ್ಶನ್ ಪಾತ್ರ ಸಾಬೀತಾಗುತ್ತಿಲ್ಲ. ಸಿಸಿಟಿವಿಯಲ್ಲಿ ದರ್ಶನ್ ಹಾಜರಿ, ಕೃತ್ಯದಲ್ಲಿ ಭಾಗಿ ಬಗ್ಗೆ ಕಂಡುಬಂದಿಲ್ಲ. ಸಿಆರ್‌ಪಿಸಿ 164 ಹೇಳಿಕೆಗೂ ವೈದ್ಯಕೀಯ ವರದಿಗೂ ವ್ಯತ್ಯಾಸಗಳಿವೆ. ವೈಜ್ಞಾನಿಕ ಸಾಕ್ಷಿಗೂ, ಪ್ರತ್ಯಕ್ಷದರ್ಶಿಗಳ ಹೇಳಿಕೆಗೂ ಸಾಮ್ಯತೆ ಇಲ್ಲ. ಸಾಕ್ಷ್ಯಗಳಿಂದಲೇ ಕೃತ್ಯದಲ್ಲಿ ದರ್ಶನ್ ಪಾತ್ರವಿಲ್ಲದ್ದು ಕಂಡುಬರುತ್ತಿದೆ. ದರ್ಶನ್ ಮುಗ್ಧನಾಗಿದ್ದರೂ ಈ ಕೇಸ್​ನಲ್ಲಿ ಎಳೆತರಲಾಗಿದೆ’ ಎಂಬುದು ದರ್ಶನ್ ಪರ ವಕೀಲರ ವಾದ.

ಇದನ್ನೂ ಓದಿ: ಬೇಲ್ ಸಿಗುವ ಹುಮ್ಮಸಿನಲ್ಲಿದ್ದ ದರ್ಶನ್‌ಗೆ ನಿರಾಸೆ; ಆ ಒಂದು ವಿಚಾರದ ಬಗ್ಗೆ ಶುರುವಾಗಿದೆ ಆತಂಕ

‘ಹೀಗೆ ಮಾಡಿದ್ದೇಕೆಂಬ ಬಗ್ಗೆ ತನಿಖಾಧಿಕಾರಿಯೇ ಕಾರಣ ಕೊಡಬೇಕಿದೆ. ದರ್ಶನ್ ಸ್ಥಾನಮಾನ ಗಮನಿಸಿದರೆ ನ್ಯಾಯದಾನದಿಂದ ತಪ್ಪಿಸಿಕೊಳ್ಳುವ ವ್ಯಕ್ತಿಯಲ್ಲ. ಹೀಗಾಗಿ ಜಾಮೀನು ನೀಡಬೇಕು’ ಎಂದು ದರ್ಶನ್ ಪರ ವಕೀಲರು ಮನವಿ ಮಾಡಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಭಾರತ ಹಿಂದೂ ರಾಷ್ಟ್ರ, ಅದಕ್ಕೆ ಯಾವುದೇ ಸಾಂವಿಧಾನಿಕ ಅನುಮೋದನೆ ಬೇಕಿಲ್ಲ
ಭಾರತ ಹಿಂದೂ ರಾಷ್ಟ್ರ, ಅದಕ್ಕೆ ಯಾವುದೇ ಸಾಂವಿಧಾನಿಕ ಅನುಮೋದನೆ ಬೇಕಿಲ್ಲ
ಅಪ್ಪನೇ ಗರ್ಭಿಣಿ ಮಗಳ ಕುರಿ ಕಡಿದಂಗೆ ಕಡಿದವ್ನೆ: ಭೀಕರತೆ ಬಿಚ್ಚಿಟ್ಟ ಮಹಿಳೆ
ಅಪ್ಪನೇ ಗರ್ಭಿಣಿ ಮಗಳ ಕುರಿ ಕಡಿದಂಗೆ ಕಡಿದವ್ನೆ: ಭೀಕರತೆ ಬಿಚ್ಚಿಟ್ಟ ಮಹಿಳೆ
ILT20: ಸೋತರೂ ಪ್ಲೇಆಫ್​ಗೇರಿದ ಡೆಸರ್ಟ್ ವೈಪರ್ಸ್
ILT20: ಸೋತರೂ ಪ್ಲೇಆಫ್​ಗೇರಿದ ಡೆಸರ್ಟ್ ವೈಪರ್ಸ್
ಕುಕ್ಕೆ ಕಿರುಷಷ್ಠಿ: ಖಾದರ್ ಸೇರಿ ಅನ್ಯಧರ್ಮದ ನಾಯಕರ ಕರೆಸಿದ್ದಕ್ಕೆ ಆಕ್ರೋಶ
ಕುಕ್ಕೆ ಕಿರುಷಷ್ಠಿ: ಖಾದರ್ ಸೇರಿ ಅನ್ಯಧರ್ಮದ ನಾಯಕರ ಕರೆಸಿದ್ದಕ್ಕೆ ಆಕ್ರೋಶ
4719 ಎಸೆತಗಳಲ್ಲಿ ನಿರ್ಧಾರವಾದ ಆ್ಯಶಸ್ ಸರಣಿ ಫಲಿತಾಂಶ
4719 ಎಸೆತಗಳಲ್ಲಿ ನಿರ್ಧಾರವಾದ ಆ್ಯಶಸ್ ಸರಣಿ ಫಲಿತಾಂಶ
ದೆಹಲಿಗೆ ಡಿಕೆ ಶಿವಕುಮಾರ್: ಕಾರ್ಯಕಾರಿಣಿಗೂ ಮುನ್ನ ರಾಹುಲ್ ಭೇಟಿಗೆ ಪ್ರಯತ್ನ
ದೆಹಲಿಗೆ ಡಿಕೆ ಶಿವಕುಮಾರ್: ಕಾರ್ಯಕಾರಿಣಿಗೂ ಮುನ್ನ ರಾಹುಲ್ ಭೇಟಿಗೆ ಪ್ರಯತ್ನ
ಇಸ್ಲಾಮಿಸ್ಟ್​ಗಳು, ಇಸ್ಲಾಮಿಸಂ ಇಡೀ ವಿಶ್ವಕ್ಕೆ ದೊಡ್ಡ ಬೆದರಿಕೆ: ತುಳಸಿ
ಇಸ್ಲಾಮಿಸ್ಟ್​ಗಳು, ಇಸ್ಲಾಮಿಸಂ ಇಡೀ ವಿಶ್ವಕ್ಕೆ ದೊಡ್ಡ ಬೆದರಿಕೆ: ತುಳಸಿ
ಇಂದು ಈ ರಾಶಿಯವರು ಇತರರನ್ನು ನಂಬಿ ಮೋಸ ಹೋಗುವ ಸಾಧ್ಯತೆ
ಇಂದು ಈ ರಾಶಿಯವರು ಇತರರನ್ನು ನಂಬಿ ಮೋಸ ಹೋಗುವ ಸಾಧ್ಯತೆ
ಸ್ವಂತ ಮನೆ ಕನಸು ನನಸಾಗಲು ಏನು ಮಾಡಬೇಕು ನೋಡಿ
ಸ್ವಂತ ಮನೆ ಕನಸು ನನಸಾಗಲು ಏನು ಮಾಡಬೇಕು ನೋಡಿ
ಸುದೀಪ್ ಹೇಳಿಕೆಗೆ ಟಾಂಗ್ ಕೊಟ್ಟ ದರ್ಶನ್ ಪತ್ನಿ ವಿಜಯಲಕ್ಷ್ಮಿ: ಹೇಳಿದ್ದೇನು?
ಸುದೀಪ್ ಹೇಳಿಕೆಗೆ ಟಾಂಗ್ ಕೊಟ್ಟ ದರ್ಶನ್ ಪತ್ನಿ ವಿಜಯಲಕ್ಷ್ಮಿ: ಹೇಳಿದ್ದೇನು?