ಬಳ್ಳಾರಿಯಿಂದ ಬೆಂಗಳೂರಿಗೆ ಶಿಫ್ಟ್ ಆಗುತ್ತಾರೆಯೇ ನಟ ದರ್ಶನ್

Darshan Thoogudeepa: ಜೈಲು ಸೇರಿದಾಗಿನಿಂದಲೂ ಸೌಲಭ್ಯಗಳಿಗಾಗಿ ಹಪಹಪಿಸುತ್ತಿರುವ, ಅನಾರೋಗ್ಯದ ಕಾರಣಗಳನ್ನು ಪದೇ ಪದೇ ಮುಂದೆ ಮಾಡುತ್ತಿರುವ ದರ್ಶನ್ ತೂಗುದೀಪ, ಇದೀಗ ಅನಾರೋಗ್ಯದ ಕಾರಣವನ್ನೇ ನೀಡಿ ಬಳ್ಳಾರಿಯಿಂದ ಬೆಂಗಳೂರಿಗೆ ಶಿಫ್ಟ್ ಆಗುವ ಸಾಧ್ಯತೆ ಇದೆ.

ಬಳ್ಳಾರಿಯಿಂದ ಬೆಂಗಳೂರಿಗೆ ಶಿಫ್ಟ್ ಆಗುತ್ತಾರೆಯೇ ನಟ ದರ್ಶನ್
Follow us
|

Updated on: Oct 06, 2024 | 2:03 PM

ರೇಣುಕಾ ಸ್ವಾಮಿ ಕೊಲೆ ಆರೋಪಿ ನಟ ದರ್ಶನ್ ಬಂಧನವಾಗಿ ನಾಲ್ಕು ತಿಂಗಳಾಗುತ್ತಾ ಬಂದಿದೆ. ಜೂನ್ 11 ರಂದು ದರ್ಶನ್, ಪವಿತ್ರಾ ಮತ್ತು ಇತರೆ ಆರೋಪಿಗಳನ್ನು ಈ ಪ್ರಕರಣದಲ್ಲಿ ಬಂಧಿಸಲಾಗಿತ್ತು. ಆರಂಭದ ಸುಮಾರು ಎರಡು ತಿಂಗಳು ಸಮಯವನ್ನು ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಲ್ಲಿ ಕಳೆದ ನಟ ದರ್ಶನ್, ಅಲ್ಲಿ ಕೆಲ ಇತರೆ ಆರೋಪಿಗಳೊಟ್ಟಿಗೆ ಸೇರಿ ಹಣ ಕೊಟ್ಟು ರಾಜಾತಿಥ್ಯ ಸ್ವೀಕರಿಸಿದ ಕಾರಣ ಅವರನ್ನು ಬಳ್ಳಾರಿಯ ಕೇಂದ್ರ ಕಾರಾಗ್ರಹಕ್ಕೆ ಸ್ಥಳಾಂತರ ಮಾಡಲಾಗಿದೆ. ಇದೀಗ ದರ್ಶನ್ ಅನ್ನು ಬಳ್ಳಾರಿ ಜೈಲಿನಿಂದ ಮತ್ತೆ ಬೆಂಗಳೂರಿಗೆ ವರ್ಗಾವಣೆ ಮಾಡುವ ಸಾಧ್ಯತೆ ಕಂಡು ಬರುತ್ತಿದೆ.

ದರ್ಶನ್ ಜೈಲು ಸೇರಿದಾಗಿನಿಂದಲೂ, ಜೈಲಿನಲ್ಲಿ ತಮಗೆ ದೊರಕುತ್ತಿರುವ ಸೌಲಭ್ಯಗಳ ಬಗ್ಗೆ ಅಸಮಾಧಾನ ವ್ಯಕ್ತಪಡಿಸುತ್ತಾ, ಜೈಲು ಅಧಿಕಾರಿಗಳ ಜೊತೆಗೆ ವಾದ ಮಾಡುತ್ತಾ, ನ್ಯಾಯಾಲಯದಲ್ಲಿಯೂ ಮನವಿಗಳನ್ನು ಸಲ್ಲಿಸುತ್ತಲೇ ಬಂದಿದ್ದಾರೆ. ಪರಪ್ಪನ ಅಗ್ರಹಾರ ಜೈಲು ಸೇರಿದಾಗಲೇ ದರ್ಶನ್, ತಮಗೆ ಬೆನ್ನು ನೋವು, ಕೈ ನೋವಿದ್ದು ತಮಗೆ ಮಲಗಲು ವಿಶೇಷ ಹಾಸಿಗೆ ಬೇಕೆಂದು ಮನವಿ ಮಾಡಿದ್ದರು. ಆದರೆ ಹೈಕೋರ್ಟ್ ಹಾಗೂ ಸೆಷನ್ಸ್ ಈ ಕೋರ್ಟ್ ಈ ಮನವಿಯನ್ನು ಪುರಸ್ಕರಿಸಲಿಲ್ಲ.

ಆ ನಂತರ ಬಳ್ಳಾರಿ ಜೈಲಿಗೆ ಶಿಫ್ಟ್ ಆದ ದರ್ಶನ್​ಗೆ ಇಲ್ಲಿ ಇನ್ನಷ್ಟು ಕಠಿಣ ನಿಯಮಗಳನ್ನು ಪಾಲಿಸಬೇಕಾಗಿ ಬಂತು. ಇಲ್ಲಿಗೆ ಬಂದಾಗಿನಿಂದಲೂ ಜೈಲು ಅಧಿಕಾರಿಗಳಿಗಳೊಟ್ಟಿಗೆ ಸೌಲಭ್ಯಗಳಿಗಾಗಿ ತಿಕ್ಕಾಟ ನಡೆಸುತ್ತಲೇ ಇದ್ದಾರೆ ದರ್ಶನ್, ಮಾತ್ರವಲ್ಲದೆ ಬಳ್ಳಾರಿಗೆ ಬಂದ ಬಳಿಕ ಅವರ ದೇಹಾರಾಗೋದ್ಯಲ್ಲಿಯೂ ವ್ಯತ್ಯಾಸವಾಗಿದೆ. ಬಳ್ಳಾರಿ ಜೈಲಿಗೆ ಶಿಫ್ಟ್ ಆದ ಬಳಿಕ ದರ್ಶನ್​ಗೆ ಬೆನ್ನು ನೋವು ಉಲ್ಬಣಗೊಂಡಿದ್ದು, ಈಗಾಗಲೇ ಜೈಲು ವೈದ್ಯರು ಹಾಗೂ ಹೊರಗಿನಿಂದಲೂ ಬಂದಿದ್ದ ವೈದ್ಯರು ತಪಾಸಣೆ ನಡೆಸಿದ್ದಾರೆ.

ಇದನ್ನೂ ಓದಿ:ದರ್ಶನ್​ಗೆ ಏಕೆ ಜಾಮೀನು ನೀಡಬೇಕು? ವಕೀಲರು ಮುಂದಿಟ್ಟ ಎಂಟು ಕಾರಣ

ದರ್ಶನ್ ಅನ್ನು ತಪಾಸಣೆ ಮಾಡಿರುವ ವೈದ್ಯರು, L1 , L5 ಭಾಗದಲ್ಲಿ ಊತ ಇದೆಯೆಂದು ವರದಿ ನೀಡಿದ್ದು, ಸ್ಕ್ಯಾನಿಂಗ್ ಹಾಗೂ ಮುಂದಿನ ಚಿಕಿತ್ಸೆ ಪಡೆದುಕೊಳ್ಳುವಂತೆ ದರ್ಶನ್​ಗೆ ಸೂಚನೆ ನೀಡಿದ್ದಾರೆ. ಆದರೆ ದರ್ಶನ್, ತಾವು ಬಳ್ಳಾರಿಯಲ್ಲಿ ಯಾವುದೇ ಕಾರಣಕ್ಕೂ ಚಿಕಿತ್ಸೆ ಪಡೆಯುವುದಿಲ್ಲ ಎಂದು ಪಟ್ಟು ಹಿಡಿದಿದ್ದಾರೆ. ಮಾತ್ರವಲ್ಲದೆ ಬಳ್ಳಾರಿಯಲ್ಲಿ ಸ್ಕ್ಯಾನಿಂಗ್ ಸಹ ಮಾಡಿಸುವುದಿಲ್ಲ ಎಂದು ದರ್ಶನ್ ಹಠ ಹಿಡಿದಿದ್ದು, ಬೆಂಗಳೂರಿನ ವೈದ್ಯರ ಬಳಿಯೇ, ಬೆಂಗಳೂರಿನ ಆಸ್ಪತ್ರೆಯಲ್ಲಿಯೇ ಚಿಕಿತ್ಸೆ ನೀಡುವುದಾಗಿ ಹಠ ಹಿಡಿದಿದ್ದಾರೆ.

ಸೋಮವಾರ ದರ್ಶನ್ ಅನ್ನು ಕಾಣಲು ವಕೀಲರು ಬರುವವರಿದ್ದು, ಅವರ ಮೂಲಕ ಮೆಡಿಕಲ್ ಬೆಡ್ ಮತ್ತು ಕುರ್ಚಿಗಾಗಿ ಹೈಕೋರ್ಟ್​ಗೆ ಅರ್ಜಿ ಹಾಕಿಸುವ ಸಾಧ್ಯತೆ ಇದೆ. ಅಲ್ಲದೆ ಮಂಗಳವಾರದಂದು (ಅಕ್ಟೋಬರ್ 08) ಜಾಮೀನು ಅರ್ಜಿ ವಿಚಾರಣೆ ಇದ್ದು, ಒಂದೊಮ್ಮೆ ಅದು ಸಿಗದೇ ಇದ್ದರೆ ಮೆಡಿಕಲ್ ಎಮರ್ಜೆನ್ಸಿ ಹೆಸರಿನಲ್ಲಿ ಬೆಂಗಳೂರಿಗೆ ಸ್ಥಳಾಂತರಗೊಳ್ಳುವ ಸಾಧ್ಯತೆ ಇದೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಅವರೇ ಹಾರೆ ಹಿಡಿದು ಗುಂಡಿ ಮುಚ್ಚಲು ಹೋಗಿದ್ದರಲ್ಲ ಈಗೇನಾಯ್ತು: ಹೆಚ್​ಡಿಕೆ
ಅವರೇ ಹಾರೆ ಹಿಡಿದು ಗುಂಡಿ ಮುಚ್ಚಲು ಹೋಗಿದ್ದರಲ್ಲ ಈಗೇನಾಯ್ತು: ಹೆಚ್​ಡಿಕೆ
ರಾಮಲೀಲಾ ನಾಟಕ ಪ್ರದರ್ಶನದ ವೇಳೆ ರಾಮ ಪಾತ್ರಧಾರಿ ಹೃದಯಾಘಾತದಿಂದ ಸಾವು
ರಾಮಲೀಲಾ ನಾಟಕ ಪ್ರದರ್ಶನದ ವೇಳೆ ರಾಮ ಪಾತ್ರಧಾರಿ ಹೃದಯಾಘಾತದಿಂದ ಸಾವು
ಸಿದ್ದರಾಮಯ್ಯ ವಾಹನಕ್ಕೆ ವಿರುದ್ಧ ದಿಕ್ಕಿನಲ್ಲಿ ಬಂದ ಜನಾರ್ದನ ರೆಡ್ಡಿ ಕಾರು
ಸಿದ್ದರಾಮಯ್ಯ ವಾಹನಕ್ಕೆ ವಿರುದ್ಧ ದಿಕ್ಕಿನಲ್ಲಿ ಬಂದ ಜನಾರ್ದನ ರೆಡ್ಡಿ ಕಾರು
ಅಕ್ಟೋಬರ್ 07 ರಿಂದ 13 ರವರೆಗಿನ ವಾರ ಭವಿಷ್ಯ ತಿಳಿಯಿರಿ
ಅಕ್ಟೋಬರ್ 07 ರಿಂದ 13 ರವರೆಗಿನ ವಾರ ಭವಿಷ್ಯ ತಿಳಿಯಿರಿ
Navratri 2024 4th Day: ನವರಾತ್ರಿ 4ನೇ ದಿನ ಕುಷ್ಮಾಂಡ ದೇವಿಯ ಮಹತ್ವವೇನು?
Navratri 2024 4th Day: ನವರಾತ್ರಿ 4ನೇ ದಿನ ಕುಷ್ಮಾಂಡ ದೇವಿಯ ಮಹತ್ವವೇನು?
Nithya Bhavishya: ನವರಾತ್ರಿಯ ನಾಲ್ಕನೇ ದಿನದ ರಾಶಿ ಭವಿಷ್ಯ ತಿಳಿಯಿರಿ
Nithya Bhavishya: ನವರಾತ್ರಿಯ ನಾಲ್ಕನೇ ದಿನದ ರಾಶಿ ಭವಿಷ್ಯ ತಿಳಿಯಿರಿ
ರಾಜಕಾಲುವೆ ಮುಚ್ಚಿರುವ ಕಾರಣ ಐದಾರು ಮನೆಗಳಿಗೆ ನುಗ್ಗಿದ ಮಳೆ ನೀರು
ರಾಜಕಾಲುವೆ ಮುಚ್ಚಿರುವ ಕಾರಣ ಐದಾರು ಮನೆಗಳಿಗೆ ನುಗ್ಗಿದ ಮಳೆ ನೀರು
‘ಬಿಗ್​ಬಾಸ್ ಅನ್ನು ಹಾಳು ಮಾಡಲು ನಿಮ್ಮಪ್ಪನಾಣೆ ಸಾಧ್ಯವಿಲ್ಲ‘
‘ಬಿಗ್​ಬಾಸ್ ಅನ್ನು ಹಾಳು ಮಾಡಲು ನಿಮ್ಮಪ್ಪನಾಣೆ ಸಾಧ್ಯವಿಲ್ಲ‘
ಸಿದ್ದರಾಮಯ್ಯ ಪಾರ್ವತಿ ಅವರನ್ನು ಮದುವೆ ಆಗಿದ್ದೇ ತಪ್ಪಾ? ಸಿಎಂ ಇಬ್ರಾಹಿಂ
ಸಿದ್ದರಾಮಯ್ಯ ಪಾರ್ವತಿ ಅವರನ್ನು ಮದುವೆ ಆಗಿದ್ದೇ ತಪ್ಪಾ? ಸಿಎಂ ಇಬ್ರಾಹಿಂ
ಮಹಾರಾಷ್ಟ್ರದ ದೇವಸ್ಥಾನದಲ್ಲಿ ಡೋಲು ಬಾರಿಸಿದ ಪ್ರಧಾನಿ ಮೋದಿ
ಮಹಾರಾಷ್ಟ್ರದ ದೇವಸ್ಥಾನದಲ್ಲಿ ಡೋಲು ಬಾರಿಸಿದ ಪ್ರಧಾನಿ ಮೋದಿ