AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೋರ್ಟ್​ಗೆ ಬಂದ ದರ್ಶನ್ ಪರ ವಕೀಲರು; ನಡೆದ ಚರ್ಚೆಗಳೇನು?

ನಟ ದರ್ಶನ್​ಗೆ ಹೊಸ ಸಂಕಷ್ಟ ಶುರುವಾಗಿದೆ. ಇಷ್ಟು ದಿನಗಳ ಕಾಲ ಅವರು ರೇಣುಕಾಸ್ವಾಮಿ ಕೊಲೆ ಕೇಸ್​ನಲ್ಲಿ ತೀವ್ರ ವಿಚಾರಣೆ ಎದುರಿಸಿದ್ದಾರೆ. ಬಳ್ಳಾರಿ ಕೇಂದ್ರ ಕಾರಗೃಹಕ್ಕೆ ದರ್ಶನ್ ಪರ ವಕೀಲರು ಬಂದಿದ್ದಾರೆ. ಈ ವೇಳೆ ಹಲವು ವಿಚಾರಗಳ ಕುರಿತು ಮಾತುಕತೆ ನಡೆಸಲಾಗಿದೆ.

ಕೋರ್ಟ್​ಗೆ ಬಂದ ದರ್ಶನ್ ಪರ ವಕೀಲರು; ನಡೆದ ಚರ್ಚೆಗಳೇನು?
ದರ್ಶನ್
ವಿನಾಯಕ ಬಡಿಗೇರ್​
| Edited By: |

Updated on: Sep 24, 2024 | 2:28 PM

Share

ನಟ ದರ್ಶನ್ ಅವರ ಜಾಮೀನು ಅರ್ಜಿ ವಿಚಾರಣೆ ಸೆಪ್ಟೆಂಬರ್ 27ಕ್ಕೆ ಮುಂದೂಡಲ್ಪಟ್ಟಿದೆ. ಅವರು ಶತಾಯ-ಗತಾಯ ಜಾಮೀನು ಪಡೆಯಲು ಪ್ರಯತ್ನ ಮಾಡುತ್ತಾ ಇದ್ದಾರೆ. ಈಗ ಅರ್ಜಿ ವಿಚಾರಣೆ ಮುಂದಕ್ಕೆ ಹೋದ ಬೆನ್ನಲ್ಲೇ ದರ್ಶನ್ ಇರುವ ಬಳ್ಳಾರಿ ಕೇಂದ್ರ ಕಾರಗೃಹಕ್ಕೆ ಅವರ ಪರ ವಕೀಲರು ಬಂದಿದ್ದಾರೆ. ಈ ವೇಳೆ ಹಲವು ವಿಚಾರಗಳ ಕುರಿತು ಮಾತುಕತೆ ನಡೆಸಲಾಗಿದೆ.

ಜೈಲು ಸಂದರ್ಶಕರ ಕೊಠಡಿಗೆ ಹೈ ಸೆಕ್ಯೂರಿಟಿ ಸೆಲ್​ನಿಂದ ದರ್ಶನ್ ಬಂದಿದ್ದಾರೆ. ಮಧ್ಯಾಹ್ನ 1 ಗಂಟೆ ಸುಮಾರಿಗೆ ಈ ಭೇಟಿ ನಡೆದಿದೆ. ಮೂವರು ವಕೀಲರೊಂದಿಗೆ ದರ್ಶನ್ ಕೇಸ್ ಬಗ್ಗೆ ಚರ್ಚೆ ನಡೆಸಿದ್ದಾರೆ. ಕೋರ್ಟ್​ನಲ್ಲಿ ನಡೆದ ವಿಚಾರಣೆಯ ಕುರಿತು ವಕೀಲರ ಜೊತೆ ಅವರು ಚರ್ಚೆ ಮಾಡಿದ್ದಾರೆ.

ಪ್ರಕರಣದ ಸಾಕ್ಷ್ಯ, ಕಾನೂನು ಹೋರಾಟದ ಕುರಿತು ದರ್ಶನ್ ಅವರು ಚರ್ಚೆ ನಡೆಸುತ್ತಾರೆ ಎನ್ನಲಾಗಿದೆ. ಚರ್ಚೆ ಬಳಿಕ ಕೆಲವು ಅರ್ಜಿಗಳಿಗೂ ಸಹಿ ಪಡೆದಿರುವ ಸಾಧ್ಯತೆ ಇದೆ ಎನ್ನಲಾಗಿದೆ. ಕೆಲ ಸವಲತ್ತು ನೀಡಲು ಕೋರ್ಟ್‌ಗೆ ದರ್ಶನ್ ಮನವಿ ಮಾಡಿದ್ದರು. ಸದ್ಯ ಜೈಲಧಿಕಾರಿ ಅನುಮತಿ ಪಡೆದುಕೊಳ್ಳಿ ಎಂದು  ನ್ಯಾಯಾಲಯ ಹೇಳಿದೆ. ಆದರೆ, ದರ್ಶನ್ ಮನವಿಯನ್ನು ಜೈಲಧಿಕಾರಿಗಳು ತಿರಸ್ಕರಿಸಿದ್ದಾರೆ. ಈ ಬಗ್ಗೆ ದರ್ಶನ ಪರ ವಕೀಲರು ಮಾಹಿತಿ ಪಡೆದಿದ್ದಾರೆ.

ಇದನ್ನೂ ಓದಿ: ದರ್ಶನ್ ಮನೆ ಮೇಲೆ ನಡೆಯಲಿದೆ ಐಟಿ ದಾಳಿ; ದಾಸನಿಗೆ ಹೊಸ ಕೇಸ್ ತಲೆಬಿಸಿ ಶುರು

ರೇಣುಕಾ ಸ್ವಾಮಿ ಕೊಲೆ ಕೇಸ್​ನಲ್ಲಿ ದರ್ಶನ್ ಜೈಲು ಸೇರಿ ನಾಲ್ಕು ತಿಂಗಳು ಕಳೆಯುತ್ತಾ ಬಂದಿದೆ. ಬೆಂಗಳೂರು ಕೇಂದ್ರ ಕಾರಾಗೃಹದಲ್ಲಿ ಇದ್ದ ಅವರು ಸದ್ಯ ಬಳ್ಳಾರಿ ಶಿಫ್ಟ್ ಆಗಿದ್ದಾರೆ. ಅಲ್ಲಿ ಅವರಿಗೆ ಸಾಕಷ್ಟು ತೊಂದರೆಗಳು ಎದುರಾಗುತ್ತಿವೆ. ಬೆನ್ನು ನೋವು ಇರುವುದರಿಂದ ದರ್ಶನ್ ತೊಂದರೆ ಅನುಭವಿಸುತ್ತಾ ಇದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು
ತಹಶೀಲ್ದಾರ್ ಕಚೇರಿಯ ಶೌಚಾಲಯ ಸ್ವಚ್ಛಗೊಳಿಸಿದ ಸಚಿವ
ತಹಶೀಲ್ದಾರ್ ಕಚೇರಿಯ ಶೌಚಾಲಯ ಸ್ವಚ್ಛಗೊಳಿಸಿದ ಸಚಿವ
'ಜೈಲಿನಲ್ಲಿ ಹಣ ಕೊಟ್ಟರೆ ಅದು ಸಿಗುತ್ತೆ': ಆತ ಬಿಚ್ಚಿಟ್ಟ ಸ್ಫೋಟಕ ಸತ್ಯ
'ಜೈಲಿನಲ್ಲಿ ಹಣ ಕೊಟ್ಟರೆ ಅದು ಸಿಗುತ್ತೆ': ಆತ ಬಿಚ್ಚಿಟ್ಟ ಸ್ಫೋಟಕ ಸತ್ಯ
ಅವೈಜ್ಞಾನಿಕ ಪಾರ್ಕಿಂಗ್‌ಗೆ 3 ದಿನಗಳಲ್ಲಿ ಮೂರು ಬಲಿ
ಅವೈಜ್ಞಾನಿಕ ಪಾರ್ಕಿಂಗ್‌ಗೆ 3 ದಿನಗಳಲ್ಲಿ ಮೂರು ಬಲಿ
ಸಕ್ಕರೆ ಬೆಲೆ ಏರಿಕೆ ಕಡಿವಾಣಕ್ಕೆ ಸರ್ಕಾರ ಪ್ಲಾನ್; ಸೆ. 1ರಿಂದ ಹೊಸ ನಿಯಮ
ಸಕ್ಕರೆ ಬೆಲೆ ಏರಿಕೆ ಕಡಿವಾಣಕ್ಕೆ ಸರ್ಕಾರ ಪ್ಲಾನ್; ಸೆ. 1ರಿಂದ ಹೊಸ ನಿಯಮ
ಮೈಸೂರಿನಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋ.. ಸ್ಪೆಷಾಲಿಟಿ ಏನ್ಗೊತ್ತಾ?
ಮೈಸೂರಿನಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋ.. ಸ್ಪೆಷಾಲಿಟಿ ಏನ್ಗೊತ್ತಾ?
TV9 ರಿಯಲ್ ಎಸ್ಟೇಟ್ ಎಕ್ಸ್​ಪೋ ಬಗ್ಗೆ ಅರುಣ್ ಯೋಗಿರಾಜ್ ಹೇಳಿದ್ದಿಷ್ಟು!
TV9 ರಿಯಲ್ ಎಸ್ಟೇಟ್ ಎಕ್ಸ್​ಪೋ ಬಗ್ಗೆ ಅರುಣ್ ಯೋಗಿರಾಜ್ ಹೇಳಿದ್ದಿಷ್ಟು!
ಕಲಬೆರಕೆ ತುಪ್ಪದ ದಂಧೆ: ಬಳ್ಳಾರಿಯಿಂದ ಚಿಕ್ಕಮಗಳೂರುವರೆಗೆ ಮಾರಾಟ ಜಾಲ ಪತ್ತೆ
ಕಲಬೆರಕೆ ತುಪ್ಪದ ದಂಧೆ: ಬಳ್ಳಾರಿಯಿಂದ ಚಿಕ್ಕಮಗಳೂರುವರೆಗೆ ಮಾರಾಟ ಜಾಲ ಪತ್ತೆ