AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜೈಲಿನಲ್ಲಿ ದರ್ಶನ್​​ಗೆ ಮತ್ತೆ ಸಂಕಷ್ಟ: ವಾಕ್ ಮಾಡಲು ಅವಕಾಶ ಇಲ್ಲ; ಕಠಿಣ ನಿಯಮ ಜಾರಿ

ಪರಪ್ಪನ ಅಗ್ರಹಾರ ಮುಖ್ಯ ಜೈಲು ಅಧೀಕ್ಷಕರಾಗಿ ಐಪಿಎಸ್ ಅಧಿಕಾರಿ ಅಂಶು ಕುಮಾರ್ ನೇಮಕ ಆಗಿದ್ದಾರೆ. ಅವರು ನೇಮಕ ಆದ ಬಳಿಕ ಜೈಲಿನ ಎಲ್ಲ ನಿಯಮಗಳು ಕಟ್ಟುನಿಟ್ಟಾಗಿ ಪಾಲನೆ ಆಗುವಂತೆ ನೋಡಿಕೊಳ್ಳಲಾಗುತ್ತಿದೆ. ಇದರಿಂದಾಗಿ ದರ್ಶನ್ ಅವರಿಗೆ ಸಂಕಷ್ಟ ಹೆಚ್ಚಾಗಿದೆ. ವಾಕಿಂಗ್ ಮಾಡಲು ಕೂಡ ಅವಕಾಶ ಇಲ್ಲದಂತಾಗಿದೆ.

ಜೈಲಿನಲ್ಲಿ ದರ್ಶನ್​​ಗೆ ಮತ್ತೆ ಸಂಕಷ್ಟ: ವಾಕ್ ಮಾಡಲು ಅವಕಾಶ ಇಲ್ಲ; ಕಠಿಣ ನಿಯಮ ಜಾರಿ
Darshan
ರಾಚಪ್ಪಾಜಿ ನಾಯ್ಕ್
| Edited By: |

Updated on: Nov 28, 2025 | 6:32 PM

Share

ನಟ ದರ್ಶನ್ (Darshan Thoogudeepa) ಅವರು ಪರಪ್ಪನ ಅಗ್ರಹಾರ ಜೈಲಿನಲ್ಲಿ ಇನ್ನಷ್ಟು ಕಷ್ಟಪಡಬೇಕಾದ ಸಂದರ್ಭ ಬಂದಿದೆ. ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿ ಆಗಿರುವ ಅವರು ಕನಿಷ್ಟ ಸೌಲಭ್ಯಗಳಿಗಾಗಿ ಮತ್ತೆ ಪರದಾಡಬೇಕಾಗಿದೆ. ಈ ಮೊದಲು ಅವರಿಗೆ ವಾಕಿಂಗ್ ಮಾಡಲು ಅವಕಾಶ ನೀಡಲಾಗಿತ್ತು. ಆದರೆ ಈಗ ಅದನ್ನು ಕೂಡ ನಿರಾಕರಿಸಲಾಗಿದೆ. ಜೊತೆಗೆ ಇನ್ನಷ್ಟು ಕಠಿಣ ನಿಯಮಗಳನ್ನು ವಿಧಿಸಲಾಗಿದೆ. ಪರಪ್ಪನ ಅಗ್ರಹಾರ (Parappana Agrahara) ಜೈಲಿನಲ್ಲಿ ಐಪಿಎಸ್ ಅಧಿಕಾರಿ ಅಂಶು ಕುಮಾರ್ ಅವರು ಕಟ್ಟುನಿಟ್ಟಿನ ನಿಯಮಗಳನ್ನು ಜಾರಿ ಮಾಡಿದ್ದಾರೆ. ಇದರಿಂದ ದರ್ಶನ್ ಅವರಿಗೆ ಸಂಕಷ್ಟ ಹೆಚ್ಚಿದೆ.

ಪರಪ್ಪನ ಅಗ್ರಹಾರ ಜೈಲಿನಲ್ಲಿ ಅಕ್ರಮಗಳು ನಡೆದಿರುವುದು ಪದೇಪದೇ ಬೆಳಕಿಗೆ ಬಂದಿದೆ. ಈ ಹಿನ್ನೆಲೆಯಲ್ಲಿ ಮುಖ್ಯ ಜೈಲು ಅಧೀಕ್ಷಕರಾಗಿ ಐಪಿಎಸ್ ಅಧಿಕಾರಿ ಅಂಶು ಕುಮಾರ್ ಅವರನ್ನು ನೇಮಕ ಮಾಡಲಾಗಿದೆ. ಜೈಲಿನಲ್ಲಿ ಬದಲಾವಣೆ ತರಲು ಅಂಶು ಕುಮಾರ್ ಅವರು ಮುಂದಾಗಿದ್ದಾರೆ. ಪ್ರತಿ ದಿನ ಐಪಿಎಸ್ ಅಧಿಕಾರಿಯಿಂದ ಜೈಲಿನಲ್ಲಿ ಮಾನಿಟರಿಂಗ್ ಮಾಡಲಾಗುತ್ತಿದೆ.

ಸಿಬ್ಬಂದಿಗಳಿಂದ ಪ್ರತಿದಿನ ಜೈಲಿನಲ್ಲಿ ತಪಾಸಣೆ ನಡೆಯುತ್ತಿದೆ. ಎಷ್ಟೇ ಪ್ರಯತ್ನ ಪಟ್ಟರು ಜೈಲಿನೊಳಗೆ ಮೊಬೈಲ್ ಪತ್ತೆ ಆಗುತ್ತಲೇ ಇದೆ. ಮೊಬೈಲ್​​ ಫೋನ್​ಗಳಿಗೆ ಕಡಿವಾಣ ಹಾಕಲು ಐಪಿಎಸ್ ಅಧಿಕಾರಿ ಹರಸಾಹಸ ಮಾಡುತ್ತಿದ್ದಾರೆ. ಜೈಲಿನಲ್ಲಿ ಮೊಬೈಲ್ ಸಿಗುತ್ತಿದ್ದಂತೆಯೇ ಪರಪ್ಪನ ಅಗ್ರಹಾರ ಠಾಣೆಯಲ್ಲಿ ಸಾಲು ಸಾಲು ಕೇಸ್ ದಾಖಲಾಗುತ್ತಿವೆ. ಅಂಶು ಕುಮಾರ್ ಅವರ ಕಠಿಣ ಕ್ರಮದಿಂದ ದರ್ಶನ್ ಅವರಿಗೂ ಸಂಕಷ್ಟ ಶುರುವಾಗಿದೆ.

ಸದ್ಯಕ್ಕೆ ದರ್ಶನ್ ಅವರಿಗೆ ವಾಕಿಂಗ್ ಮಾಡಲು ಅವಕಾಶ ಇಲ್ಲ. ರೂಮಿಗೆ ಬರುತ್ತಿದ್ದ ಊಟ, ತಿಂಡಿ ಕೂಡ ಬಂದ್ ಆಗಿದೆ. ದರ್ಶನ್ ಈಗ ತಾವೇ ಹೋಗಿ ಊಟ, ತಿಂಡಿ ತರಬೇಕಿದೆ. ಈ ಮೊದಲು ಜೈಲಿನ ಸಿಬ್ಬಂದಿಯೇ ದರ್ಶನ್ ಕೊಠಡಿಗೆ ಊಟ, ತಿಂಡಿ ತಂದು ಕೊಡುತ್ತಿದ್ದರು. ಈಗ ಅದನ್ನು ಬಂದ್ ಮಾಡಲಾಗಿದೆ. ಈ ರೀತಿಯ ನಿಯಮಗಳಿಂದ ದರ್ಶನ್ ಅವರಿಗೆ ಜೈಲುವಾಸ ಕಷ್ಟ ಆಗಲಿದೆ.

ಇದನ್ನೂ ಓದಿ: ನಟ ದರ್ಶನ್ 2ನೇ ಬಾರಿ ಜೈಲು ಸೇರಿ ಪರಪ್ಪನ ಅಗ್ರಹಾರದಲ್ಲಿ ಕಳೆಯಿತು 100 ದಿನ

ದರ್ಶನ್ ಅವರು ಈಗ ಬಟ್ಟೆ ಒಗೆಯಲು ಮತ್ತು ಒಣಗಿಸಲು ಮಾತ್ರ ಹೊರಗೆ ಬರಬೇಕು. ಅಲ್ಲದೇ ದರ್ಶನ್ ಕೊಠಡಿ ಹೊರಭಾಗದಲ್ಲಿ ಸಿಸಿಟಿವಿ ಅಳವಡಿಕೆ ಮಾಡಲಾಗಿದೆ. ದರ್ಶನ್ ಕೊಠಡಿಗೆ ಹೋಗುವ ವಾರ್ಡರ್​ಗೆ ಬಾಡಿ ವೋರ್ನ್ ಕ್ಯಾಮೆರಾ ಕಡ್ಡಾಯ ಮಾಡಲಾಗಿದೆ. ರೇಣುಕಾಸ್ವಾಮಿ ಕೇಸ್​​ನ ದೋಷಾರೋಪಣೆ ಈಗಾಗಲೇ ನಿಗದಿ ಆಗಿದೆ. ಸಾಕ್ಷಿಗಳ ವಿಚಾರಣೆ ನಡೆಯುವುದು ಬಾಕಿ ಇದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಮುಳುಗುತ್ತಿದ್ದ ಇಬ್ಬರು ಯುವಕರನ್ನು ಕಾಪಾಡಿದ ಮಹಿಳಾ ಟ್ರಾಫಿಕ್ ಪೊಲೀಸ್
ಮುಳುಗುತ್ತಿದ್ದ ಇಬ್ಬರು ಯುವಕರನ್ನು ಕಾಪಾಡಿದ ಮಹಿಳಾ ಟ್ರಾಫಿಕ್ ಪೊಲೀಸ್
ಆ ಮಾತಿಗೆ ರೊಚ್ಚಿಗೆದ್ದು ವಿಪಕ್ಷ ಶಾಸಕರಿಗೆ ಏಕವಚನದಲ್ಲಿ ಬೈದ ಕೈ ಶಾಸಕ
ಆ ಮಾತಿಗೆ ರೊಚ್ಚಿಗೆದ್ದು ವಿಪಕ್ಷ ಶಾಸಕರಿಗೆ ಏಕವಚನದಲ್ಲಿ ಬೈದ ಕೈ ಶಾಸಕ
ತಮ್ಮ‌ ರಕ್ಷಣೆಗೆ ಬೋಟ್ ಆಂಬ್ಯುಲೆನ್ಸ್ ನಿರ್ಮಾಣ, ಮೀನುಗಾರರ ಮಾದರಿ ಹೆಜ್ಜೆ
ತಮ್ಮ‌ ರಕ್ಷಣೆಗೆ ಬೋಟ್ ಆಂಬ್ಯುಲೆನ್ಸ್ ನಿರ್ಮಾಣ, ಮೀನುಗಾರರ ಮಾದರಿ ಹೆಜ್ಜೆ
ಸಿಖ್ಖರನ್ನು ಕೊಂದ ಕುಟುಂಬದ ಕುಡಿಯೊಂದಿಗೆ ಕೈಕುಲುಕುವುದಿಲ್ಲ;ರವನೀತ್ ಬಿಟ್ಟು
ಸಿಖ್ಖರನ್ನು ಕೊಂದ ಕುಟುಂಬದ ಕುಡಿಯೊಂದಿಗೆ ಕೈಕುಲುಕುವುದಿಲ್ಲ;ರವನೀತ್ ಬಿಟ್ಟು
ಮನಸೋ ಇಚ್ಛೆ ಲೈಸೆನ್ಸ್: ಅಬಕಾರಿ ಇಲಾಖೆಯ ಮತ್ತಷ್ಟು ಕಳ್ಳಾಟ ಬಯಲು
ಮನಸೋ ಇಚ್ಛೆ ಲೈಸೆನ್ಸ್: ಅಬಕಾರಿ ಇಲಾಖೆಯ ಮತ್ತಷ್ಟು ಕಳ್ಳಾಟ ಬಯಲು
ಬೆಳಗಾವಿ: ಸಿಗರೇಟ್ ಹಣ ಕೇಳಿದ್ದಕ್ಕೆ ಬಿತ್ತು ಪಾನ್ ಶಾಪ್ ಮಾಲೀಕನ ಹೆಣ
ಬೆಳಗಾವಿ: ಸಿಗರೇಟ್ ಹಣ ಕೇಳಿದ್ದಕ್ಕೆ ಬಿತ್ತು ಪಾನ್ ಶಾಪ್ ಮಾಲೀಕನ ಹೆಣ
ಲವ್​​ ಹೆಸರಲ್ಲಿ ಮೋಸ ಮಾಡಿದವನ ಕಾಮುಕತೆ ಬಿಚ್ಚಿಟ್ಟ ಸಂತ್ರಸ್ತೆ
ಲವ್​​ ಹೆಸರಲ್ಲಿ ಮೋಸ ಮಾಡಿದವನ ಕಾಮುಕತೆ ಬಿಚ್ಚಿಟ್ಟ ಸಂತ್ರಸ್ತೆ
ಬಿಎಂಟಿಸಿ ಬಸ್ ಬಳಿಕ ವಿಕ್ಟೋರಿಯಾ ಆಸ್ಪತ್ರೆಯಲ್ಲೂ UPI ಸ್ಕ್ಯಾನರ್ ಸ್ಕ್ಯಾಮ್
ಬಿಎಂಟಿಸಿ ಬಸ್ ಬಳಿಕ ವಿಕ್ಟೋರಿಯಾ ಆಸ್ಪತ್ರೆಯಲ್ಲೂ UPI ಸ್ಕ್ಯಾನರ್ ಸ್ಕ್ಯಾಮ್
ಲಕ್ಕುಂಡಿಯ ಜೈನ ಬಸದಿಗಳಲ್ಲೂ ನಿಧಿ ಇದ್ಯಾ? ಸರ್ಪಗಳು ಕಾವಲು ಕಾಯ್ತಿದ್ಯಾ?
ಲಕ್ಕುಂಡಿಯ ಜೈನ ಬಸದಿಗಳಲ್ಲೂ ನಿಧಿ ಇದ್ಯಾ? ಸರ್ಪಗಳು ಕಾವಲು ಕಾಯ್ತಿದ್ಯಾ?
ಸದನದಲ್ಲಿ ವೈಯಕ್ತಿಕವಾಗಿ ಬೈದಾಡಿಕೊಂಡ ಶಾಸಕ ಶರಣು ಸಲಗಾರ್- ಶಿವಲಿಂಗೇಗೌಡ
ಸದನದಲ್ಲಿ ವೈಯಕ್ತಿಕವಾಗಿ ಬೈದಾಡಿಕೊಂಡ ಶಾಸಕ ಶರಣು ಸಲಗಾರ್- ಶಿವಲಿಂಗೇಗೌಡ