AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೋರ್ಟ್ ಆದೇಶ ಕೊಟ್ಟರೂ ದರ್ಶನ್​​ಗೆ ಜೈಲಲ್ಲಿ ಸಿಗುತ್ತಿಲ್ಲ ಸೌಲಭ್ಯ; ಅಳಲು ತೋಡಿಕೊಂಡ ದಾಸ

ಹೆಚ್ಚುವರಿ ದಿಂಬು ಹಾಗೂ ಬೇಡ್​​ಶೀಟ್​ಗಾಗಿ ಬೆಂಗಳೂರಿನ 57ನೇ ಸಿಸಿಹೆಚ್ ನ್ಯಾಯಾಲಯದಲ್ಲಿ ದರ್ಶನ್ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿ ವಿಚಾರಣೆ ನಡೆಸಿದ ಕೋರ್ಟ್, ಇದಕ್ಕೆ ಅವಕಾಶ ಕೊಟ್ಟಿತ್ತು. ಆದರೆ, ಈಗ ಕೋರ್ಟ್​ ಆದೇಶದ ಮಧ್ಯೆಯೂ ಅವರಿಗೆ ವ್ಯವಸ್ಥೆ ಸಿಗುತ್ತಿಲ್ಲ. ಈ ಬಗ್ಗೆ ಅವರಿಗೆ ಬೇಸರ ಇದೆ.

ಕೋರ್ಟ್ ಆದೇಶ ಕೊಟ್ಟರೂ ದರ್ಶನ್​​ಗೆ ಜೈಲಲ್ಲಿ ಸಿಗುತ್ತಿಲ್ಲ ಸೌಲಭ್ಯ; ಅಳಲು ತೋಡಿಕೊಂಡ ದಾಸ
ದರ್ಶನ್
ರಾಜೇಶ್ ದುಗ್ಗುಮನೆ
|

Updated on:Sep 15, 2025 | 2:21 PM

Share

ನಟ ದರ್ಶನ್ (Darshan) ಅವರಿಗೆ ಜೈಲಿನಲ್ಲಿ ಹಾಸಿಗೆ, ದಿಂಬು, ಬೆಡ್​ಶೀಟ್ ನೀಡುವಂತೆ  ಬೆಂಗಳೂರಿನ ಕೆಳ ಹಂತದ ಕೋರ್ಟ್ ಆದೇಶ ಕೊಟ್ಟಿತ್ತು. ಆದರೆ, ಇದಕ್ಕೆ ಅವಕಾಶ ಸಿಗುತ್ತಿಲ್ಲ ಎಂದು ದರ್ಶನ್ ಅವರು ಮತ್ತೆ ಕೋರ್ಟ್ ಮೊರೆ ಹೋಗಿದ್ದಾರೆ. ಹಿಂದಿನ ಸ್ಥಿತಿಯೇ ಮುಂದುವರಿದಿದೆ ಎಂದು ಅವರು ಅಳಲು ತೋಡಿಕೊಂಡಿದ್ದಾರೆ. ಸದ್ಯ ಇದಕ್ಕೆ ಸಂಬಂಧಿಸಿದಂತೆ ಕೆಳ ಹಂತದ ಕೋರ್ಟ್​ನಲ್ಲಿ ಅರ್ಜಿ ಸಲ್ಲಿಕೆ ಆಗಿದೆ.

ರೇಣುಕಾ ಸ್ವಾಮಿ ಕೊಲೆ ಕೇಸ್​ನಲ್ಲಿ ದರ್ಶನ್ ಅರೆಸ್ಟ್ ಆದರು. ಆರಂಭದಲ್ಲಿ ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಲ್ಲಿ ಅವರನ್ನು ಇಡಲಾಯಿತು. ಈ ವೇಳೆ ಅವರು ಸಾಕಷ್ಟು ಸೌಲಭ್ಯ ಪಡೆಯುತ್ತಿದ್ದರು ಎನ್ನಲಾಗಿದೆ. ನಂತರ ಅವರನ್ನು ಬಳ್ಳಾರಿ ಜೈಲಿಗೆ ಶಿಫ್ಟ್ ಮಾಡಲಾಯಿತು. ಅಲ್ಲಿರುವಾಗ ಜಾಮೀನು ದೊರೆತಿತ್ತು. ಇತ್ತೀಚೆಗೆ ಸುಪ್ರೀಂ ಕೋರ್ಟ್ ಅವರ ಜಾಮೀನನ್ನು ರದ್ದು ಮಾಡಿತ್ತು. ಈ ವೇಳೆ ಹೆಚ್ಚುವರಿ ಸೌಲಭ್ಯ ನೀಡದಂತೆ ಎಚ್ಚರಿಸಿತ್ತು.

ಕೋರ್ಟ್ ಮೊರೆ ಹೋಗಿದ್ದ ದರ್ಶನ್ ಅವರು, ಹೆಚ್ಚುವರಿ ದಿಂಬು, ಹಾಸಿಗೆ ಹಾಗೂ ಬೆಡ್​​ಶೀಟ್​ಗೆ ಮನವಿ ಮಾಡಿದ್ದರು. ಜೊತೆಗೆ ಕೋರ್ಟ್ ಆವರಣದಲ್ಲಿ ವಾಕಿಂಗ್​ಗೂ ಅವಕಾಶ ಕೋರಿದ್ದರು. ಆದರೆ, ಕೋರ್ಟ್ ಆದೇಶವನ್ನು ಅಧಿಕಾರಿಗಳು ಕಡೆಗಣಿಸಿದ್ದಾರೆ ಎಂದು ದರ್ಶನ್ ಪರ ವಕೀಲರು ಹೇಳಿದ್ದಾರೆ.

ಇದನ್ನೂ ಓದಿ
Image
ರೇಣುಕಾಸ್ವಾಮಿ ಪತ್ನಿ ಸಹನಾಗೆ ಸಿಗಲಿದೆ ಸರ್ಕಾರಿ ಕೆಲಸ; ಶಾಸಕನ ಭರವಸೆ
Image
ಕಿರುತೆರೆ ನಟಿಯ ಪತಿ​ಗೆ ಕಾರು ಅಪಘಾತ; ಪ್ರಾಣಾಪಾಯದಿಂದ ಜಸ್ಟ್ ಮಿಸ್
Image
ಶರಣ್-ತರುಣ್ ಸುಧೀರ್ ಗೆಳೆತನ ಎಂಥದ್ದು? ಯಾರೂ ಊಹಿಸಲೂ ಸಾಧ್ಯವಿಲ್ಲ
Image
ರಿಯಾಲಿಟಿ ಶೋಗೆ ಬರಲ್ಲ, ಬರಲ್ಲ ಅಂತ ಬಂದೇ ಬಿಟ್ರು ನಟಿ ಸುಧಾರಾಣಿ

ಇದನ್ನೂ ಓದಿ: ದರ್ಶನ್ ಜೈಲಿನಲ್ಲಿರುವಾಗ ವಿಜಯಲಕ್ಷ್ಮೀ ಮನೆಯಲ್ಲಿ ಕಳ್ಳತನ; ಕಳುವಾಗಿದ್ದೇನು?

‘ಬೆಳಿಗ್ಗೆ ಮತ್ತು ಸಂಜೆ ಅರ್ಧ ಗಂಟೆ ವಾಕಿಂಗ್​ಗೆ ಅವಕಾಶ ನೀಡಲಾಗಿದೆ. ದು ಬಿಟ್ಟರೆ ಬೇರೆ ಯಾವುದೇ ಸೌಲಭ್ಯ ನೀಡಿಲ್ಲ. ಹಾಸಿಗೆ, ದಿಂಬು, ಬೆಡ್​ಶೀಟ್ ಕೇಳಿದರೂ ನೀಡಿಲ್ಲ.  ಹಿಂದಿನ ಸ್ಥಿತಿಯೇ ಮುಂದುವರಿದಿದೆ. ‌ಕೋರ್ಟ್ ಆದೇಶ ಉಲ್ಲಂಘಿಸಿದ ಅಧಿಕಾರಿಗಳ ವಿರುದ್ಧ ಕ್ರಮ ತೆಗೆದುಕೊಳ್ಳಬೇಕು’ ಎಂದು ದರ್ಶನ್ ಪರ ವಕೀಲರು ಕೋರ್ಟ್​ನಲ್ಲಿ ಹೇಳಿದ್ದಾರೆ.

ವಿಷ ಕೇಳಿದ್ದ ದಾಸ

ಜೈಲಿನ ಕಠಿಣ ನಿಯಮಗಳು ದರ್ಶನ್ ಅವರನ್ನು ಧೃತಿಗೆಡವವುಂತೆ ಮಾಡಿತ್ತು. ಅವರು ಇದರಿಂದ ಸಾಕಷ್ಟು ಸಮಸ್ಯೆ ಎದುರಿಸಿದ್ದರು. ಹೀಗಾಗಿ, ಬೆಡ್​ಶೀಟ್​, ತಲೆದಿಂಬಿಗೆ ಅವರು ಕೋರ್ಟ್ ಮೊರೆ ಹೋಗುವ ಪರಿಸ್ಥಿತಿ ಬಂದಿತ್ತು. ಈ ವೇಳೆ ದರ್ಶನ್ ಜಡ್ಜ್ ಎದುರೇ ವಿಷ ಕೇಳಿದ್ದರು. ಈ ವಿಚಾರ ಸಾಕಷ್ಟು ಚರ್ಚೆಗಳನ್ನು ಹುಟ್ಟುಹಾಕಿತ್ತು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 1:35 pm, Mon, 15 September 25