AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಮರ್ಡರ್​ನ ಆತುರದಲ್ಲಿ ಮಾಡಿರ್ತಾನೆ, ಆಮೇಲೆ ಕೊರಗುತ್ತಾನೆ’; ದರ್ಶನ್ ಹಳೆಯ ಸಂದರ್ಶನ ವೈರಲ್

ನಟ ದರ್ಶನ್ ಅವರು ಚಿತ್ರರಂಗದಲ್ಲಿ ಹಲವು  ವರ್ಷ ಕಳೆದಿದ್ದಾರೆ. ಅವರು ಕಷ್ಟದಿಂದ ಮೇಲೆ ಬಂದವರು. ಸಾಕಷ್ಟು ಜೀವನದ ಪಾಠವನ್ನು ಅವರು ಕಲಿತಿದ್ದಾರೆ. ಇದನ್ನು ಅವರುಗಳು ಅಭಿಮಾನಿಗಳ ಜೊತೆ, ಮಾಧ್ಯಮಗಳ ಜೊತೆ ಈ ಮೊದಲು ಹಂಚಿಕೊಂಡಿದ್ದರು. ಕೋಪದ ಕೈಗೊಂಬೆ ಆಗಬಾರದು ಎಂದು ಅವರು ಈ ಮೊದಲು ಹೇಳಿಕೊಂಡಿದ್ದರು.

‘ಮರ್ಡರ್​ನ ಆತುರದಲ್ಲಿ ಮಾಡಿರ್ತಾನೆ, ಆಮೇಲೆ ಕೊರಗುತ್ತಾನೆ’; ದರ್ಶನ್ ಹಳೆಯ ಸಂದರ್ಶನ ವೈರಲ್
ದರ್ಶನ್
 ಶ್ರೀಲಕ್ಷ್ಮೀ ಎಚ್
| Edited By: |

Updated on: Jun 17, 2024 | 7:08 AM

Share

ನಟ ದರ್ಶನ್ (Darshan) ಅವರು ಸದ್ಯ ಜೈಲಿನಲ್ಲಿದ್ದಾರೆ. ಚಿತ್ರದುರ್ಗದ ರೇಣುಕಾ ಸ್ವಾಮಿ ಕೊಲೆ ಕೇಸ್​ನಲ್ಲಿ ಅವರು ಅರೆಸ್ಟ್ ಆಗಿದ್ದಾರೆ. ದರ್ಶನ್ ಜೊತೆ ಪವಿತ್ರಾ ಗೌಡ ಸೇರಿ 19 ಮಂದಿ ಬಂಧನಕ್ಕೆ ಒಳಗಾಗಿದ್ದಾರೆ. ಈ ಮೊದಲು ಅವರನ್ನು ಆರು ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ನೀಡಲಾಗಿತ್ತು. ಹೆಚ್ಚಿನ ತನಿಖೆಯ ಅಗತ್ಯ ಇರುವುದರಿಂದ ಹೆಚ್ಚುವರಿಯಾಗಿ 5 ದಿನಗಳ ಕಾಲ ಅವರನ್ನು ಪೊಲೀಸರ ವಶಕ್ಕೆ ನೀಡಿ ಕೋರ್ಟ್ ಆದೇಶ ನೀಡಿದೆ. ಈ ಮಧ್ಯೆ ದರ್ಶನ್ ಅವರ ಹಳೆಯ ವಿಡಿಯೋ ಒಂದು ವೈರಲ್ ಆಗಿದೆ. ಈ ವಿಡಿಯೋದಲ್ಲಿ ಅವರು ಮರ್ಡರ್ ವಿಚಾರದ ಬಗ್ಗೆ ಮಾತನಾಡಿದ್ದರು.

ನಟ ದರ್ಶನ್ ಅವರು ಚಿತ್ರರಂಗದಲ್ಲಿ ಹಲವು  ವರ್ಷ ಕಳೆದಿದ್ದಾರೆ. ಅವರು ಕಷ್ಟದಿಂದ ಮೇಲೆ ಬಂದವರು. ಸಾಕಷ್ಟು ಜೀವನದ ಪಾಠವನ್ನು ಅವರು ಕಲಿತಿದ್ದಾರೆ. ಇದನ್ನು ಅವರುಗಳು ಅಭಿಮಾನಿಗಳ ಜೊತೆ, ಮಾಧ್ಯಮಗಳ ಜೊತೆ ಈ ಮೊದಲು ಹಂಚಿಕೊಂಡಿದ್ದರು. ಕೋಪದ ಕೈಗೊಂಬೆ ಆಗಬಾರದು ಎಂದು ಅವರು ಈ ಮೊದಲು ಹೇಳಿಕೊಂಡಿದ್ದರು. ಈ ವಿಡಿಯೋ ಈಗ ವೈರಲ್ ಆಗುತ್ತಿದೆ.

‘ಕೊಲೆ ಮಾಡುವವನು ಆತುರದಲ್ಲಿ ಮಾಡಿರುತ್ತಾನೆ. ಈಗ ಆ ಬಗ್ಗೆ ಕೊರಗುತ್ತಾ ಇರುತ್ತಾನೆ. ಸ್ವಲ್ಪ ಸಮಯ ಕೊಡಬೇಕಿತ್ತು, ಏನೋ ಪರಿಹಾರ ಕಂಡು ಹಿಡಿಯಬಹುದಿತ್ತಲ್ಲ ಅನಿಸುತ್ತಿರುತ್ತದೆ. ಇದೆಲ್ಲ ನಾನು ಜೀವನದಲ್ಲಿ ಕಲಿತುಕೊಂಡು ಬಂದ ಪಾಠ’ ಎಂದಿದ್ದರು ದರ್ಶನ್. ದರ್ಶನ್ ತಾವು ಕಲಿತ ಪಾಠವನ್ನೇ ಮರೆತರಾ ಎನ್ನುವ ಪ್ರಶ್ನೆ ಅನೇಕರಿಗೆ ಮೂಡಿದೆ.

ದರ್ಶನ್ ಅವರ ಈ ಹಿಂದಿನ ಹಲವು ವಿಡಿಯೋಗಳು ವೈರಲ್ ಆಗಿವೆ. ಅದರಲ್ಲಿ ದರ್ಶನ್ ನಾನು ಸರಿ ಇಲ್ಲ ಎಂದೆಲ್ಲ ಹೇಳಿಕೊಂಡಿದ್ದರು. ಈ ವಿಡಿಯೋಗಳನ್ನು ಇಟ್ಟುಕೊಂಡು ದರ್ಶನ್ ಅವರನ್ನು ಟ್ರೋಲ್ ಮಾಡಲಾಗುತ್ತಿದೆ. ಈ ಮೊದಲು ಅವರು ನಿರ್ಮಾಪಕ ಉಮಾಪತಿ ಶ್ರೀನಿವಾಸ್​ಗೆ ತಗಡು ಎನ್ನುವ ಶಬ್ದ ಬಳಕೆ ಮಾಡಿದ್ದರು. ಆಗ ಉತ್ತರಿಸಿದ್ದ ಉಮಾತಿ, ‘ನಾನು ಈಗ ತಗಡು ಇರಬಹುದು. ಮುಂದೊಂದು ದಿನ ಚಿನ್ನದ ತಗಡಾಗುತ್ತೇನೆ. ಸಮಯ ಹೀಗೆಯೇ ಇರುವುದಿಲ್ಲ’ ಎಂದು ಅವರು ಹೇಳಿದ್ದರು. ಈ ವಿಡಿಯೋ ಕೂಡ ವೈರಲ್ ಆಗುತ್ತಿದೆ.

ಇದನ್ನೂ ಓದಿ: ಚಿತ್ರರಂಗದಿಂದ ದರ್ಶನ್​ ಬ್ಯಾನ್​ ಆಗಬೇಕಾ? ಕಿಚ್ಚ ಸುದೀಪ್​ ಹೇಳಿದ್ದಿಷ್ಟು..

ಚಿತ್ರದುರ್ಗದ ರೇಣುಕಾ ಸ್ವಾಮಿ ಅವರು ನಟಿ ಹಾಗೂ ದರ್ಶನ್ ಗೆಳತಿ ಪವಿತ್ರಾ ಗೌಡಗೆ ಅಶ್ಲೀಲ ಸಂದೇಶ ಕಳುಹಿಸಿದ್ದರು. ಈ ಕಾರಣಕ್ಕೆ ದರ್ಶನ್ ಹಾಗೂ ಅವರ ಗ್ಯಾಂಗ್ ಈ ಕೊಲೆ ಮಾಡಿದ್ದಾರೆ ಎಂದು ಹೇಳಲಾಗಿದೆ. ಬಗೆದಷ್ಟು ಹೊಸ ಹೊಸ ವಿಚಾರಗಳು ಈ ಕೇಸ್​ನಲ್ಲಿ ಹೊರಗೆ ಬರುತ್ತಿವೆ. ಪವಿತ್ರಾ ಎ1 ಆರೋಪಿ ಆದರೆ, ದರ್ಶನ್ ಅವರು ಎ2 ಆರೋಪಿ ಎನಿಸಿಕೊಂಡಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್