‘ಮರ್ಡರ್​ನ ಆತುರದಲ್ಲಿ ಮಾಡಿರ್ತಾನೆ, ಆಮೇಲೆ ಕೊರಗುತ್ತಾನೆ’; ದರ್ಶನ್ ಹಳೆಯ ಸಂದರ್ಶನ ವೈರಲ್

ನಟ ದರ್ಶನ್ ಅವರು ಚಿತ್ರರಂಗದಲ್ಲಿ ಹಲವು  ವರ್ಷ ಕಳೆದಿದ್ದಾರೆ. ಅವರು ಕಷ್ಟದಿಂದ ಮೇಲೆ ಬಂದವರು. ಸಾಕಷ್ಟು ಜೀವನದ ಪಾಠವನ್ನು ಅವರು ಕಲಿತಿದ್ದಾರೆ. ಇದನ್ನು ಅವರುಗಳು ಅಭಿಮಾನಿಗಳ ಜೊತೆ, ಮಾಧ್ಯಮಗಳ ಜೊತೆ ಈ ಮೊದಲು ಹಂಚಿಕೊಂಡಿದ್ದರು. ಕೋಪದ ಕೈಗೊಂಬೆ ಆಗಬಾರದು ಎಂದು ಅವರು ಈ ಮೊದಲು ಹೇಳಿಕೊಂಡಿದ್ದರು.

‘ಮರ್ಡರ್​ನ ಆತುರದಲ್ಲಿ ಮಾಡಿರ್ತಾನೆ, ಆಮೇಲೆ ಕೊರಗುತ್ತಾನೆ’; ದರ್ಶನ್ ಹಳೆಯ ಸಂದರ್ಶನ ವೈರಲ್
ದರ್ಶನ್
Follow us
| Updated By: ರಾಜೇಶ್ ದುಗ್ಗುಮನೆ

Updated on: Jun 17, 2024 | 7:08 AM

ನಟ ದರ್ಶನ್ (Darshan) ಅವರು ಸದ್ಯ ಜೈಲಿನಲ್ಲಿದ್ದಾರೆ. ಚಿತ್ರದುರ್ಗದ ರೇಣುಕಾ ಸ್ವಾಮಿ ಕೊಲೆ ಕೇಸ್​ನಲ್ಲಿ ಅವರು ಅರೆಸ್ಟ್ ಆಗಿದ್ದಾರೆ. ದರ್ಶನ್ ಜೊತೆ ಪವಿತ್ರಾ ಗೌಡ ಸೇರಿ 19 ಮಂದಿ ಬಂಧನಕ್ಕೆ ಒಳಗಾಗಿದ್ದಾರೆ. ಈ ಮೊದಲು ಅವರನ್ನು ಆರು ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ನೀಡಲಾಗಿತ್ತು. ಹೆಚ್ಚಿನ ತನಿಖೆಯ ಅಗತ್ಯ ಇರುವುದರಿಂದ ಹೆಚ್ಚುವರಿಯಾಗಿ 5 ದಿನಗಳ ಕಾಲ ಅವರನ್ನು ಪೊಲೀಸರ ವಶಕ್ಕೆ ನೀಡಿ ಕೋರ್ಟ್ ಆದೇಶ ನೀಡಿದೆ. ಈ ಮಧ್ಯೆ ದರ್ಶನ್ ಅವರ ಹಳೆಯ ವಿಡಿಯೋ ಒಂದು ವೈರಲ್ ಆಗಿದೆ. ಈ ವಿಡಿಯೋದಲ್ಲಿ ಅವರು ಮರ್ಡರ್ ವಿಚಾರದ ಬಗ್ಗೆ ಮಾತನಾಡಿದ್ದರು.

ನಟ ದರ್ಶನ್ ಅವರು ಚಿತ್ರರಂಗದಲ್ಲಿ ಹಲವು  ವರ್ಷ ಕಳೆದಿದ್ದಾರೆ. ಅವರು ಕಷ್ಟದಿಂದ ಮೇಲೆ ಬಂದವರು. ಸಾಕಷ್ಟು ಜೀವನದ ಪಾಠವನ್ನು ಅವರು ಕಲಿತಿದ್ದಾರೆ. ಇದನ್ನು ಅವರುಗಳು ಅಭಿಮಾನಿಗಳ ಜೊತೆ, ಮಾಧ್ಯಮಗಳ ಜೊತೆ ಈ ಮೊದಲು ಹಂಚಿಕೊಂಡಿದ್ದರು. ಕೋಪದ ಕೈಗೊಂಬೆ ಆಗಬಾರದು ಎಂದು ಅವರು ಈ ಮೊದಲು ಹೇಳಿಕೊಂಡಿದ್ದರು. ಈ ವಿಡಿಯೋ ಈಗ ವೈರಲ್ ಆಗುತ್ತಿದೆ.

‘ಕೊಲೆ ಮಾಡುವವನು ಆತುರದಲ್ಲಿ ಮಾಡಿರುತ್ತಾನೆ. ಈಗ ಆ ಬಗ್ಗೆ ಕೊರಗುತ್ತಾ ಇರುತ್ತಾನೆ. ಸ್ವಲ್ಪ ಸಮಯ ಕೊಡಬೇಕಿತ್ತು, ಏನೋ ಪರಿಹಾರ ಕಂಡು ಹಿಡಿಯಬಹುದಿತ್ತಲ್ಲ ಅನಿಸುತ್ತಿರುತ್ತದೆ. ಇದೆಲ್ಲ ನಾನು ಜೀವನದಲ್ಲಿ ಕಲಿತುಕೊಂಡು ಬಂದ ಪಾಠ’ ಎಂದಿದ್ದರು ದರ್ಶನ್. ದರ್ಶನ್ ತಾವು ಕಲಿತ ಪಾಠವನ್ನೇ ಮರೆತರಾ ಎನ್ನುವ ಪ್ರಶ್ನೆ ಅನೇಕರಿಗೆ ಮೂಡಿದೆ.

ದರ್ಶನ್ ಅವರ ಈ ಹಿಂದಿನ ಹಲವು ವಿಡಿಯೋಗಳು ವೈರಲ್ ಆಗಿವೆ. ಅದರಲ್ಲಿ ದರ್ಶನ್ ನಾನು ಸರಿ ಇಲ್ಲ ಎಂದೆಲ್ಲ ಹೇಳಿಕೊಂಡಿದ್ದರು. ಈ ವಿಡಿಯೋಗಳನ್ನು ಇಟ್ಟುಕೊಂಡು ದರ್ಶನ್ ಅವರನ್ನು ಟ್ರೋಲ್ ಮಾಡಲಾಗುತ್ತಿದೆ. ಈ ಮೊದಲು ಅವರು ನಿರ್ಮಾಪಕ ಉಮಾಪತಿ ಶ್ರೀನಿವಾಸ್​ಗೆ ತಗಡು ಎನ್ನುವ ಶಬ್ದ ಬಳಕೆ ಮಾಡಿದ್ದರು. ಆಗ ಉತ್ತರಿಸಿದ್ದ ಉಮಾತಿ, ‘ನಾನು ಈಗ ತಗಡು ಇರಬಹುದು. ಮುಂದೊಂದು ದಿನ ಚಿನ್ನದ ತಗಡಾಗುತ್ತೇನೆ. ಸಮಯ ಹೀಗೆಯೇ ಇರುವುದಿಲ್ಲ’ ಎಂದು ಅವರು ಹೇಳಿದ್ದರು. ಈ ವಿಡಿಯೋ ಕೂಡ ವೈರಲ್ ಆಗುತ್ತಿದೆ.

ಇದನ್ನೂ ಓದಿ: ಚಿತ್ರರಂಗದಿಂದ ದರ್ಶನ್​ ಬ್ಯಾನ್​ ಆಗಬೇಕಾ? ಕಿಚ್ಚ ಸುದೀಪ್​ ಹೇಳಿದ್ದಿಷ್ಟು..

ಚಿತ್ರದುರ್ಗದ ರೇಣುಕಾ ಸ್ವಾಮಿ ಅವರು ನಟಿ ಹಾಗೂ ದರ್ಶನ್ ಗೆಳತಿ ಪವಿತ್ರಾ ಗೌಡಗೆ ಅಶ್ಲೀಲ ಸಂದೇಶ ಕಳುಹಿಸಿದ್ದರು. ಈ ಕಾರಣಕ್ಕೆ ದರ್ಶನ್ ಹಾಗೂ ಅವರ ಗ್ಯಾಂಗ್ ಈ ಕೊಲೆ ಮಾಡಿದ್ದಾರೆ ಎಂದು ಹೇಳಲಾಗಿದೆ. ಬಗೆದಷ್ಟು ಹೊಸ ಹೊಸ ವಿಚಾರಗಳು ಈ ಕೇಸ್​ನಲ್ಲಿ ಹೊರಗೆ ಬರುತ್ತಿವೆ. ಪವಿತ್ರಾ ಎ1 ಆರೋಪಿ ಆದರೆ, ದರ್ಶನ್ ಅವರು ಎ2 ಆರೋಪಿ ಎನಿಸಿಕೊಂಡಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ತಾಜಾ ಸುದ್ದಿ
ರಿಲಯನ್ಸ್​​ ಜಿಯೋ ರೀಚಾರ್ಜ್ ಪ್ಲ್ಯಾನ್ ಆಯ್ತು ದುಬಾರಿ | ಶೇ 22ರಷ್ಟು ಬೆಲೆ
ರಿಲಯನ್ಸ್​​ ಜಿಯೋ ರೀಚಾರ್ಜ್ ಪ್ಲ್ಯಾನ್ ಆಯ್ತು ದುಬಾರಿ | ಶೇ 22ರಷ್ಟು ಬೆಲೆ
ಚಾರ್ಮಾಡಿ ಘಾಟ್ ಇಳುಕಲು ಪ್ರದೇಶದ ಜಲಪಾತಗಳಲ್ಲಿ ಯುವಕರ ಅಪಾಯಕಾರಿ ಹುಚ್ಚಾಟ
ಚಾರ್ಮಾಡಿ ಘಾಟ್ ಇಳುಕಲು ಪ್ರದೇಶದ ಜಲಪಾತಗಳಲ್ಲಿ ಯುವಕರ ಅಪಾಯಕಾರಿ ಹುಚ್ಚಾಟ
ವಿಧಾನಸಭೆಯಲ್ಲಿ ಮೆಜಾರಿಟಿಯ ಕಾರಣ ಸಿದ್ದರಾಮಯ್ಯ ಸೇಫ್ ಆಗಿದ್ದಾರೆ: ಸಿಟಿ ರವಿ
ವಿಧಾನಸಭೆಯಲ್ಲಿ ಮೆಜಾರಿಟಿಯ ಕಾರಣ ಸಿದ್ದರಾಮಯ್ಯ ಸೇಫ್ ಆಗಿದ್ದಾರೆ: ಸಿಟಿ ರವಿ
ದೇವರಮನೆ, ಚಾರ್ಮಾಡಿಯಲ್ಲಿ ರಸ್ತೆ ಮಧ್ಯೆ ವಾಹನ ನಿಲ್ಸಿ ಪ್ರವಾಸಿಗರ ಹುಚ್ಚಾಟ
ದೇವರಮನೆ, ಚಾರ್ಮಾಡಿಯಲ್ಲಿ ರಸ್ತೆ ಮಧ್ಯೆ ವಾಹನ ನಿಲ್ಸಿ ಪ್ರವಾಸಿಗರ ಹುಚ್ಚಾಟ
ಕೊರಗಜ್ಜ ಸನ್ನಿಧಾನಕ್ಕೆ ಭೇಟಿ ನೀಡಿ ಪ್ರಾರ್ಥನೆ ಸಲ್ಲಿಸಿದ ರಕ್ಷಿತ್ ಶೆಟ್ಟಿ
ಕೊರಗಜ್ಜ ಸನ್ನಿಧಾನಕ್ಕೆ ಭೇಟಿ ನೀಡಿ ಪ್ರಾರ್ಥನೆ ಸಲ್ಲಿಸಿದ ರಕ್ಷಿತ್ ಶೆಟ್ಟಿ
ಕಾರಲ್ಲಿ ಬಂದು ಪಾಟ್ ಕದಿಯುವ ಕಪಲ್ಸ್; ಸಿಸಿ ಟಿವಿಯಲ್ಲಿ ಸೆರೆ
ಕಾರಲ್ಲಿ ಬಂದು ಪಾಟ್ ಕದಿಯುವ ಕಪಲ್ಸ್; ಸಿಸಿ ಟಿವಿಯಲ್ಲಿ ಸೆರೆ
Daily Devotional: ತಥಾಸ್ತು ದೇವತೆಗಳ ಬಗ್ಗೆ ತಿಳಿಯಲು ಈ ವಿಡಿಯೋ ನೋಡಿ
Daily Devotional: ತಥಾಸ್ತು ದೇವತೆಗಳ ಬಗ್ಗೆ ತಿಳಿಯಲು ಈ ವಿಡಿಯೋ ನೋಡಿ
Daily Horoscope: ವಾಹನದಿಂದ ಅಪಘಾತ, ಸಣ್ಣ ಅಂತರದಿಂದ ಬಚಾವ್
Daily Horoscope: ವಾಹನದಿಂದ ಅಪಘಾತ, ಸಣ್ಣ ಅಂತರದಿಂದ ಬಚಾವ್
‘ನಿಜ ಜೀವನದಲ್ಲಿ ಆ ರೀತಿ ಪಾತ್ರ ಆಗಬಾರದು’: ದರ್ಶನ್​ ಬಗ್ಗೆ ಹಂಸಲೇಖ ಮಾತು
‘ನಿಜ ಜೀವನದಲ್ಲಿ ಆ ರೀತಿ ಪಾತ್ರ ಆಗಬಾರದು’: ದರ್ಶನ್​ ಬಗ್ಗೆ ಹಂಸಲೇಖ ಮಾತು
‘ದರ್ಶನ್ ನೋಡಿದ್ರೆ ಧರ್ಮಸ್ಥಳ ಮಂಜುನಾಥ ಸ್ವಾಮಿ ನೋಡಿದಂತೆ’: ಅಭಿಮಾನಿ
‘ದರ್ಶನ್ ನೋಡಿದ್ರೆ ಧರ್ಮಸ್ಥಳ ಮಂಜುನಾಥ ಸ್ವಾಮಿ ನೋಡಿದಂತೆ’: ಅಭಿಮಾನಿ