‘ಮರ್ಡರ್​ನ ಆತುರದಲ್ಲಿ ಮಾಡಿರ್ತಾನೆ, ಆಮೇಲೆ ಕೊರಗುತ್ತಾನೆ’; ದರ್ಶನ್ ಹಳೆಯ ಸಂದರ್ಶನ ವೈರಲ್

| Updated By: ರಾಜೇಶ್ ದುಗ್ಗುಮನೆ

Updated on: Jun 17, 2024 | 7:08 AM

ನಟ ದರ್ಶನ್ ಅವರು ಚಿತ್ರರಂಗದಲ್ಲಿ ಹಲವು  ವರ್ಷ ಕಳೆದಿದ್ದಾರೆ. ಅವರು ಕಷ್ಟದಿಂದ ಮೇಲೆ ಬಂದವರು. ಸಾಕಷ್ಟು ಜೀವನದ ಪಾಠವನ್ನು ಅವರು ಕಲಿತಿದ್ದಾರೆ. ಇದನ್ನು ಅವರುಗಳು ಅಭಿಮಾನಿಗಳ ಜೊತೆ, ಮಾಧ್ಯಮಗಳ ಜೊತೆ ಈ ಮೊದಲು ಹಂಚಿಕೊಂಡಿದ್ದರು. ಕೋಪದ ಕೈಗೊಂಬೆ ಆಗಬಾರದು ಎಂದು ಅವರು ಈ ಮೊದಲು ಹೇಳಿಕೊಂಡಿದ್ದರು.

‘ಮರ್ಡರ್​ನ ಆತುರದಲ್ಲಿ ಮಾಡಿರ್ತಾನೆ, ಆಮೇಲೆ ಕೊರಗುತ್ತಾನೆ’; ದರ್ಶನ್ ಹಳೆಯ ಸಂದರ್ಶನ ವೈರಲ್
ದರ್ಶನ್
Follow us on

ನಟ ದರ್ಶನ್ (Darshan) ಅವರು ಸದ್ಯ ಜೈಲಿನಲ್ಲಿದ್ದಾರೆ. ಚಿತ್ರದುರ್ಗದ ರೇಣುಕಾ ಸ್ವಾಮಿ ಕೊಲೆ ಕೇಸ್​ನಲ್ಲಿ ಅವರು ಅರೆಸ್ಟ್ ಆಗಿದ್ದಾರೆ. ದರ್ಶನ್ ಜೊತೆ ಪವಿತ್ರಾ ಗೌಡ ಸೇರಿ 19 ಮಂದಿ ಬಂಧನಕ್ಕೆ ಒಳಗಾಗಿದ್ದಾರೆ. ಈ ಮೊದಲು ಅವರನ್ನು ಆರು ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ನೀಡಲಾಗಿತ್ತು. ಹೆಚ್ಚಿನ ತನಿಖೆಯ ಅಗತ್ಯ ಇರುವುದರಿಂದ ಹೆಚ್ಚುವರಿಯಾಗಿ 5 ದಿನಗಳ ಕಾಲ ಅವರನ್ನು ಪೊಲೀಸರ ವಶಕ್ಕೆ ನೀಡಿ ಕೋರ್ಟ್ ಆದೇಶ ನೀಡಿದೆ. ಈ ಮಧ್ಯೆ ದರ್ಶನ್ ಅವರ ಹಳೆಯ ವಿಡಿಯೋ ಒಂದು ವೈರಲ್ ಆಗಿದೆ. ಈ ವಿಡಿಯೋದಲ್ಲಿ ಅವರು ಮರ್ಡರ್ ವಿಚಾರದ ಬಗ್ಗೆ ಮಾತನಾಡಿದ್ದರು.

ನಟ ದರ್ಶನ್ ಅವರು ಚಿತ್ರರಂಗದಲ್ಲಿ ಹಲವು  ವರ್ಷ ಕಳೆದಿದ್ದಾರೆ. ಅವರು ಕಷ್ಟದಿಂದ ಮೇಲೆ ಬಂದವರು. ಸಾಕಷ್ಟು ಜೀವನದ ಪಾಠವನ್ನು ಅವರು ಕಲಿತಿದ್ದಾರೆ. ಇದನ್ನು ಅವರುಗಳು ಅಭಿಮಾನಿಗಳ ಜೊತೆ, ಮಾಧ್ಯಮಗಳ ಜೊತೆ ಈ ಮೊದಲು ಹಂಚಿಕೊಂಡಿದ್ದರು. ಕೋಪದ ಕೈಗೊಂಬೆ ಆಗಬಾರದು ಎಂದು ಅವರು ಈ ಮೊದಲು ಹೇಳಿಕೊಂಡಿದ್ದರು. ಈ ವಿಡಿಯೋ ಈಗ ವೈರಲ್ ಆಗುತ್ತಿದೆ.

‘ಕೊಲೆ ಮಾಡುವವನು ಆತುರದಲ್ಲಿ ಮಾಡಿರುತ್ತಾನೆ. ಈಗ ಆ ಬಗ್ಗೆ ಕೊರಗುತ್ತಾ ಇರುತ್ತಾನೆ. ಸ್ವಲ್ಪ ಸಮಯ ಕೊಡಬೇಕಿತ್ತು, ಏನೋ ಪರಿಹಾರ ಕಂಡು ಹಿಡಿಯಬಹುದಿತ್ತಲ್ಲ ಅನಿಸುತ್ತಿರುತ್ತದೆ. ಇದೆಲ್ಲ ನಾನು ಜೀವನದಲ್ಲಿ ಕಲಿತುಕೊಂಡು ಬಂದ ಪಾಠ’ ಎಂದಿದ್ದರು ದರ್ಶನ್. ದರ್ಶನ್ ತಾವು ಕಲಿತ ಪಾಠವನ್ನೇ ಮರೆತರಾ ಎನ್ನುವ ಪ್ರಶ್ನೆ ಅನೇಕರಿಗೆ ಮೂಡಿದೆ.

ದರ್ಶನ್ ಅವರ ಈ ಹಿಂದಿನ ಹಲವು ವಿಡಿಯೋಗಳು ವೈರಲ್ ಆಗಿವೆ. ಅದರಲ್ಲಿ ದರ್ಶನ್ ನಾನು ಸರಿ ಇಲ್ಲ ಎಂದೆಲ್ಲ ಹೇಳಿಕೊಂಡಿದ್ದರು. ಈ ವಿಡಿಯೋಗಳನ್ನು ಇಟ್ಟುಕೊಂಡು ದರ್ಶನ್ ಅವರನ್ನು ಟ್ರೋಲ್ ಮಾಡಲಾಗುತ್ತಿದೆ. ಈ ಮೊದಲು ಅವರು ನಿರ್ಮಾಪಕ ಉಮಾಪತಿ ಶ್ರೀನಿವಾಸ್​ಗೆ ತಗಡು ಎನ್ನುವ ಶಬ್ದ ಬಳಕೆ ಮಾಡಿದ್ದರು. ಆಗ ಉತ್ತರಿಸಿದ್ದ ಉಮಾತಿ, ‘ನಾನು ಈಗ ತಗಡು ಇರಬಹುದು. ಮುಂದೊಂದು ದಿನ ಚಿನ್ನದ ತಗಡಾಗುತ್ತೇನೆ. ಸಮಯ ಹೀಗೆಯೇ ಇರುವುದಿಲ್ಲ’ ಎಂದು ಅವರು ಹೇಳಿದ್ದರು. ಈ ವಿಡಿಯೋ ಕೂಡ ವೈರಲ್ ಆಗುತ್ತಿದೆ.

ಇದನ್ನೂ ಓದಿ: ಚಿತ್ರರಂಗದಿಂದ ದರ್ಶನ್​ ಬ್ಯಾನ್​ ಆಗಬೇಕಾ? ಕಿಚ್ಚ ಸುದೀಪ್​ ಹೇಳಿದ್ದಿಷ್ಟು..

ಚಿತ್ರದುರ್ಗದ ರೇಣುಕಾ ಸ್ವಾಮಿ ಅವರು ನಟಿ ಹಾಗೂ ದರ್ಶನ್ ಗೆಳತಿ ಪವಿತ್ರಾ ಗೌಡಗೆ ಅಶ್ಲೀಲ ಸಂದೇಶ ಕಳುಹಿಸಿದ್ದರು. ಈ ಕಾರಣಕ್ಕೆ ದರ್ಶನ್ ಹಾಗೂ ಅವರ ಗ್ಯಾಂಗ್ ಈ ಕೊಲೆ ಮಾಡಿದ್ದಾರೆ ಎಂದು ಹೇಳಲಾಗಿದೆ. ಬಗೆದಷ್ಟು ಹೊಸ ಹೊಸ ವಿಚಾರಗಳು ಈ ಕೇಸ್​ನಲ್ಲಿ ಹೊರಗೆ ಬರುತ್ತಿವೆ. ಪವಿತ್ರಾ ಎ1 ಆರೋಪಿ ಆದರೆ, ದರ್ಶನ್ ಅವರು ಎ2 ಆರೋಪಿ ಎನಿಸಿಕೊಂಡಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.