AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರೇಣುಕಾ ಸ್ವಾಮಿ ಶವ ಎಸೆಯಲು 30 ಲಕ್ಷ ಹಣ ಕೊಟ್ಟಿದ್ದ ದರ್ಶನ್

ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್ ತೂಗುದೀಪ್ ಬಂಧನವಾಗಿದೆ. ರೇಣುಕಾ ಸ್ವಾಮಿಯನ್ನು ಕೊಂದ ಬಳಿಕ ಆತನ ಶವವನ್ನು ಎಸೆಯಲು ಹಾಗಲು ಕೊಲೆ ಆರೋಪ ಹೊತ್ತುಕೊಳ್ಳಲು ಗ್ಯಾಂಗ್ ಒಂದಕ್ಕೆ 30 ಲಕ್ಷ ಹಣವನ್ನು ದರ್ಶನ್ ನೀಡಿದ್ದರು ಎನ್ನಲಾಗುತ್ತಿದೆ.

ರೇಣುಕಾ ಸ್ವಾಮಿ ಶವ ಎಸೆಯಲು 30 ಲಕ್ಷ ಹಣ ಕೊಟ್ಟಿದ್ದ ದರ್ಶನ್
ಮಂಜುನಾಥ ಸಿ.
|

Updated on: Jun 12, 2024 | 9:38 AM

Share

ರೇಣುಕಾ ಸ್ವಾಮಿ (Renuka Swamy) ಕೊಲೆ ಆರೋಪದಲ್ಲಿ ನಟ ದರ್ಶನ್ (Darshan), ಪವಿತ್ರಾ ಗೌಡ (Pavitra Gowda) ಸೇರಿ 13 ಜನರ ಬಂಧನವಾಗಿದೆ. ನಿನ್ನೆ ರಾತ್ರಿಪೂರ ದರ್ಶನ್ ಮತ್ತು ಗ್ಯಾಂಗ್ ಜೈಲಿನಲ್ಲಿ ಸಮಯ ಕಳೆದಿದೆ. ಇದರ ನಡುವೆ ರೇಣುಕಾ ಸ್ವಾಮಿ ಕೊಲೆ ಪ್ರಕರಣದ ಬಗ್ಗೆ ಹಲವು ಆಘಾತಕಾರಿ ವಿಷಯಗಳು ಹೊರಬರುತ್ತಿವೆ. ರೇಣುಕಾ ಸ್ವಾಮಿಯ ಶವವನ್ನು ಎಸೆದು, ಕೊಲೆ ಆರೋಪವನ್ನು ಹೊತ್ತುಕೊಳ್ಳಲು ಮೂವರಿಗೆ 30 ಲಕ್ಷ ರೂಪಾಯಿ ಹಣವನ್ನು ದರ್ಶನ್ ನೀಡಿದ್ದರು ಎನ್ನಲಾಗುತ್ತಿದೆ.

ರೇಣುಕಾ ಸ್ವಾಮಿಯನ್ನು ಚಿತ್ರದುರ್ಗದಿಂದ ಅಪಹರಣ ಮಾಡಿ ಕರೆದುಕೊಂಡು ಬಂದು ಶೆಡ್​ನಲ್ಲಿ ಇರಿಸಿಕೊಂಡು ಹಲ್ಲೆ ಮಾಡಿದ್ದ ದರ್ಶನ್ ಮತ್ತು ಗ್ಯಾಂಗ್​, ಹಲ್ಲೆಯಿಂದ ರೇಣುಕಾ ಸ್ವಾಮಿ ನಿಧನ ಹೊಂದಿದ ಬಳಿಕ ಆತಂಕಗೊಂಡು, ಶವವನ್ನು ಸಾಗಿಸುವ ದಾರಿ ಹುಡುಕಿದೆ. ಆಗ ಬೇರೆ ಗ್ಯಾಂಗ್ ಒಂದನ್ನು ಕರೆಸಿ ಅವರಿಗೆ ಶವ ಒಪ್ಪಿಸಿ, ಅದನ್ನು ವಿಲೇವಾರಿ ಮಾಡುವಂತೆ ಹೇಳಿ ಅವರಿಗೆ ಮೂವತ್ತು ಲಕ್ಷ ರೂಪಾಯಿ ಹಣ ನೀಡಿದ್ದಾರೆ. ಈ ಹಣವನ್ನು ದರ್ಶನ್ ಅವರೇ ನೀಡಿದ್ದಾರೆ ಎನ್ನಲಾಗುತ್ತಿದೆ.

ಹಣ ಪಡೆದ ಮತ್ತೊಂದು ಗ್ಯಾಂಗ್ ರೇಣುಕಾ ಸ್ವಾಮಿಯ ಶವವನ್ನು ಕಾಮಾಕ್ಷಿಪಾಳ್ಯ ಪೊಲೀಸ್ ಠಾಣಾ ವ್ಯಾಪ್ತಿಯ ಸುಮನಹಳ್ಳಿ ಮೋರಿಗೆ ಬಿಸಾಡಿ ಹೋಗಿದ್ದಾರೆ. ಶವ ದೊರೆತ ಬಳಿಕ ತಾವೇ ಕೊಲೆ ಮಾಡಿರುವುದಾಗಿ ಹೇಳಿ ಠಾಣೆಗೆ ಒಪ್ಪಿಕೊಂಡಿದ್ದಾರೆ. ಕೊಲೆ ಮಾಡಲು ಹಣಕಾಸಿನ ವಿಚಾರವೇ ಕಾರಣ ಎಂದು ಹೇಳಿದ್ದಾರೆ. ಆದರೆ ಒಬ್ಬೊಬ್ಬರನ್ನೂ ಪ್ರತ್ಯೇಕವಾಗಿ ವಿಚಾರಣೆ ಮಾಡಿದಾಗ ಅವರ ಹೇಳಿಕೆಯಲ್ಲಿ ವ್ಯತ್ಯಾಸ ಕಂಡುಬಂದಿದೆ. ಬಳಿಕ ಪೊಲೀಸರು ತಮ್ಮದೇ ಶೈಲಿಯಲ್ಲಿ ವಿಚಾರಣೆ ಮಾಡಿದಾಗ ನಿಜಾಂಶ ಬಯಲಾಗಿದೆ.

ಇದನ್ನೂ ಓದಿ:ದರ್ಶನ್ ಆದ್ರೂ ಆಗಲಿ, ಯಾರಾದ್ರೂ ಆಗಲಿ, ನನಗೆ ನ್ಯಾಯ ಬೇಕು: ರೇಣುಕಾ ಸ್ವಾಮಿ ಪತ್ನಿ ಕಣ್ಣೀರು

ಪೊಲೀಸರು ತನಿಖೆ ಚುರುಕು ಗೊಳಿಸಿದಂತೆ ಹಣ ಪಡೆದಿದ್ದ ಗ್ಯಾಂಗ್​ನವರು ರಾತ್ರಿ ಯಿಡೀ ದರ್ಶನ್ ಗ್ಯಾಂಗ್​ ಜೊತೆ ಮೊಬೈಲ್ ಮೂಲಕ ಸಂಭಾಷಣೆ ಮಾಡಿರುವ ವಿಚಾರವೂ ಬಹಿರಂಗಗೊಂಡಿದೆ. ಹಣ ಪಡೆದು ಶವ ವಿಲೇವಾರಿ ಜವಾಬ್ದಾರಿ ಹೊತ್ತಿದ್ದ ಗ್ಯಾಂಗ್, ದರ್ಶನ್​ರ ಆಪ್ತನೊಟ್ಟಿಗೆ ಸಂಪರ್ಕದಲ್ಲಿತ್ತಂತೆ. ಶವ ವಿಲೇವಾರಿ ಹಾಗೂ ಕೊಲೆಯ ಆರೋಪ ಹೊರಲೆಂದು ಮುಂಚಿತವಾಗಿಯೇ 30 ಲಕ್ಷ ರೂಪಾಯಿ ಹಣವನ್ನು ದರ್ಶನ್ ಅವರಿಂದ ಈ ಗ್ಯಾಂಗ್ ಪಡೆದಿತ್ತು ಎನ್ನಲಾಗಿದೆ.

ಈಗ ಆ ಶವ ವಿಲೇವಾರಿ ಗ್ಯಾಂಗ್ ಸಹ ದರ್ಶನ್ ಜೊತೆಗೆ ಜೈಲಿನಲ್ಲಿದೆ. ಶೆಡ್​ನಲ್ಲಿ ರೇಣುಕಾ ಸ್ವಾಮಿ ಮೇಲೆ ಹಲ್ಲೆ ಮಾಡಿದವರು, ದರ್ಶನ್​ಗೆ ಗ್ಯಾಂಗ್​ ಅನ್ನು ಪರಿಚಯಿಸಿದವರು, ರೇಣುಕಾ ಸ್ವಾಮಿಯನ್ನು ಅಪಹರಿಸಿಕೊಂಡು ಬಂದವರು ಎಲ್ಲವರನ್ನೂ ಪೊಲೀಸರು ಬಂಧಿಸಿದ್ದಾರೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಬಿಗ್​​ಬಾಸ್ 12: ರಕ್ಷಿತಾ ಶೆಟ್ಟಿಗೆ ಯೋಗ್ಯತೆ ಇಲ್ಲ, ರಿಯಾಕ್ಷನ್ ಹೇಗಿತ್ತು?
ಬಿಗ್​​ಬಾಸ್ 12: ರಕ್ಷಿತಾ ಶೆಟ್ಟಿಗೆ ಯೋಗ್ಯತೆ ಇಲ್ಲ, ರಿಯಾಕ್ಷನ್ ಹೇಗಿತ್ತು?
ಸುಳ್ಳು ಹೇಳಿದ್ರೆ ರಿಸೈನ್: ಡಿಕೆಶಿ ರಾಜೀನಾಮೆ ಸವಾಲ್ ಹಾಕಿದ್ಯಾರಿಗೆ?
ಸುಳ್ಳು ಹೇಳಿದ್ರೆ ರಿಸೈನ್: ಡಿಕೆಶಿ ರಾಜೀನಾಮೆ ಸವಾಲ್ ಹಾಕಿದ್ಯಾರಿಗೆ?
ಸುಳ್ಳು ಹೇಳಿದ್ರೆ ಒದ್ದು ಒಳಗೆ ಹಾಕ್ತೀನಿ: ಸಚಿವ ಎಂಬಿ ಪಾಟೀಲ್
ಸುಳ್ಳು ಹೇಳಿದ್ರೆ ಒದ್ದು ಒಳಗೆ ಹಾಕ್ತೀನಿ: ಸಚಿವ ಎಂಬಿ ಪಾಟೀಲ್
ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು
ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ