AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರೇಣುಕಾಸ್ವಾಮಿ ಮೇಲೆ ದರ್ಶನ್ ಎಷ್ಟು ಬಾರಿ ಹಲ್ಲೆ ಮಾಡಿದ್ರು? ಚಾರ್ಜ್​ಶೀಟ್​ನಲ್ಲಿರೋ ವಿವರಣೆ ಏನು?

ಚಿತ್ರದುರ್ಗದ ರೇಣುಕಾ ಸ್ವಾಮಿಯನ್ನು ಪಟ್ಟಣಗೆರೆಯಲ್ಲಿರುವ ಶೆಡ್​ಗೆ ಕರೆದುಕೊಂಡು ಹೋಗಲಾಗಿತ್ತು. ಇದೆಲ್ಲ ಪ್ಲ್ಯಾನ್ ಮಾಡಿದ್ದು ದರ್ಶನ್ ಎನ್ನುವ ಆರೋಪ ಇದೆ. ಇದರಲ್ಲಿ ದರ್ಶನ್ ಪಾತ್ರ ಸಾಕಷ್ಟು ಇದೆ ಎಂದು ಚಾರ್ಜ್​ಶೀಟ್​ನಲ್ಲಿ ಉಲ್ಲೇಖ ಆಗಿದೆ. ಆ ಬಗ್ಗೆ ಇಲ್ಲಿದೆ ವಿವರ.

ರೇಣುಕಾಸ್ವಾಮಿ ಮೇಲೆ ದರ್ಶನ್ ಎಷ್ಟು ಬಾರಿ ಹಲ್ಲೆ ಮಾಡಿದ್ರು? ಚಾರ್ಜ್​ಶೀಟ್​ನಲ್ಲಿರೋ ವಿವರಣೆ ಏನು?
ರೇಣುಕಾಸ್ವಾಮಿ-ದರ್ಶನ್
ರಾಚಪ್ಪಾಜಿ ನಾಯ್ಕ್
| Edited By: |

Updated on: Sep 05, 2024 | 2:41 PM

Share

ರೇಣುಕಾ ಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿ ಬೆಂಗಳೂರು ಪೊಲೀಸರು ತನಿಖೆ ನಡೆಸಿ, ಚಾರ್ಜ್​ಶೀಟ್ ಸಲ್ಲಿಕೆ ಮಾಡಿದ್ದಾರೆ. ಈ ಚಾರ್ಜ್​ಶೀಟ್​ನಲ್ಲಿ ಇರೋ ಮಾಹಿತಿಯ ವಿಚಾರಗಳು ಈಗ ಒಂದೊಂದಾಗಿಯೇ ಹೊರಬರುತ್ತಾ ಇವೆ. ಕೊಲೆ ಪ್ರಕರಣದಲ್ಲಿ ದರ್ಶನ್ ಪಾತ್ರ ಏನು? ಅವರು ಎಷ್ಟು ಬಾರಿ ಹಲ್ಲೆ ಮಾಡಿದ್ದರು ಎನ್ನುವ ವಿಚಾರ ಕೂಡ ರಿವೀಲ್ ಆಗಿದೆ.

ರೇಣುಕಾ ಸ್ವಾಮಿ ಕಳುಹಿಸಿದ ಅಶ್ಲೀಲ ಸಂದೇಶದ ಬಗ್ಗೆ ಪವನ್​ ಬಳಿ ಪವಿತ್ರಾ ಹೇಳಿಕೊಂಡಿದ್ದರು. ಮೆಸೇಜ್​ ಬಗ್ಗೆ ದರ್ಶನ್​ಗೆ ತೋರಿಸಿದ್ದಾಗ ಅವರನ್ನು ಎತ್ತಿಕೊಂಡು ಬರಲು ದರ್ಶನ್ ಸೂಚನೆ ನೀಡಿದ್ದರು. ದರ್ಶನ್ ಆಣತಿಯಂತೆ ರೇಣುಕಾ ಸ್ವಾಮಿಯನ್ನು ಎತ್ತಿಕೊಂಡು ಬಂದು ಪಟ್ಟಣಗೆರೆ ಶೆಡ್​​ನಲ್ಲಿ ಇಡಲಾಯಿತು. ಶೆಡ್​​ನಲ್ಲಿ ಇಟ್ಟ ಬಗ್ಗೆ ದರ್ಶನ್​ಗೆ ಮಾಹಿತಿ ರವಾನೆ ಆಗಿತ್ತು. ನೇರವಾಗಿ ಪವಿತ್ರಾ ಮನೆಗೆ ತೆರಳಿದ ದರ್ಶನ್ ಅವರನ್ನು ಪಿಕ್ ಮಾಡಿಕೊಂಡು ಶೆಡ್​ಗೆ ಬಂದರು.

ದರ್ಶನ್ ಬಂದು ರೇಣುಕಾ ಸ್ವಾಮಿ ಮೇಲೆ ಹಲ್ಲೆ ಮಾಡುತ್ತಾರೆ. ರಿಬ್ ಮುರಿದು ಹಾಕುವ ಅವರು, ಮರ್ಮಾಂಗಕ್ಕೆ ಹೊಡೆಯುತ್ತಾರೆ. ಲಾಠಿನಲ್ಲಿಯೂ ದರ್ಶನ್ ಹಲ್ಲೆ ಮಾಡಿದ್ದಾರೆ. ಪವಿತ್ರಾ ಚಪ್ಪಲಿಯಿಂದ ಹಲ್ಲೆ ಮಾಡುತ್ತಾರೆ. ಆ ಬಳಿಕ ದರ್ಶನ್​ ಮತ್ತೆ ಹಲ್ಲೆ ಮಾಡುತ್ತಾರೆ ಎಂದು ಚಾರ್ಜ್​ಶೀಟ್​ನಲ್ಲಿ ಉಲ್ಲೇಖ ಇದೆ.

ಇದನ್ನೂ ಓದಿ: ದರ್ಶನ್ ಅನ್ನು ಮದುವೆ ಆಗಲು ರೆಡಿ: ಬಳ್ಳಾರಿ ಜೈಲಿನ ಬಳಿ ಮಹಿಳೆ ಹೈಡ್ರಾಮಾ

ಹಲ್ಲೆ ಬಳಿಕ ಶೆಡ್​ನಲ್ಲಿರುವ ವಾಚ್​ಮೆನ್ ರೂಮ್​ನಲ್ಲಿ ರೇಣುಕಾ ಸ್ವಾಮಿಯನ್ನು ಹಾಕಿರಲಾಗುತ್ತದೆ. ಅಲ್ಲಿ ಚೆಕ್ ಮಾಡಿದಾಗ ರೇಣುಕಾ ಸ್ವಾಮಿಗೆ ಪಲ್ಸ್ ಇಲ್ಲ ಎನ್ನುವ ವಿಚಾರ ಗೊತ್ತಾಗುತ್ತದೆ. ಆ ಬಳಿಕ ಪ್ರದೋಶ್ ಮುಂದಿನ ಎಲ್ಲಾ ಜವಾಬ್ದಾರಿ ವಹಿಸಿಕೊಳ್ಳುತ್ತಾರೆ. ಮರುದಿನ ದರ್ಶನ್ ಮನೆಯಲ್ಲಿ ನಡೆದ ಪೂಜೆಯಲ್ಲಿ ಭಾಗಿ ಆಗುತ್ತಾರೆ. ಆದರೆ, ದರ್ಶನ್​ಗೆ ಚಿಂತೆ ಕಾಡುತ್ತಾ ಇರುತ್ತದೆ. ಅಂದು ರಾತ್ರಿಯೇ ದರ್ಶನ್ ಮೈಸೂರಿಗೆ ಪ್ರಯಾಣ ಬೆಳೆಸುತ್ತಾರೆ.

ಹಣ ಪಡೆದು ಸರೆಂಡರ್

ಇತ್ತ ಪೊಲೀಸರು ರೇಣುಕಾ ಸ್ವಾಮಿ ಅವರದ್ದನ್ನು ಅಸಹಜ ಸಾವು ಎಂದು ದೂರು ದಾಖಲಿಸಲು ಮುಂದಾಗಿದ್ದರು. ಆದರೆ, ಗಾಯ ನೋಡಿ ಇದು ಕೊಲೆ ಅನ್ನೋದು ಗೊತ್ತಾಗುತ್ತದೆ. ಈ ಮಧ್ಯೆ ಮೂವರು ಸರೆಂಡರ್ ಆಗಿದ್ದು ಪೊಲೀಸರಿಗೆ ಅನುಮಾನ ಬರುತ್ತದೆ. ಸರೆಂಡರ್ ಆದವರನ್ನು ಬಾಯಿಬಿಡಿಸಿದಾಗ ಅಸಲಿ ವಿಚಾರ ಗೊತ್ತಾಗುತ್ತದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
Rachappaji Naik S
Rachappaji Naik S

ರಾಚಪ್ಪಾಜಿ ನಾಯ್ಕ್ ಆದ ನಾನು ಮೂಲತಃ ಚಾಮರಾಜನಗರ ಜಿಲ್ಲೆ ಹನೂರು ತಾಲೂಕಿನ ಗೊಲ್ಲರದಿಂಬ ಗ್ರಾಮದವನು ಕಳೆದ 2 ವರ್ಷ 11 ತಿಂಗಳಿನಿಂದ ಟಿವಿ9 ಬೆಂಗಳೂರು ಕ್ರೈಂ ಬ್ಯೂರೊ ವರದಿಗಾರನಾಗಿ ಕೆಲಸ ಮಾಡುತ್ತಿದ್ದು.ರಾಜ್ಯದಲ್ಲಿ ನಡೆದ ಪ್ರಮುಖ ಅಪಾರಧ ವಿಷಯಗಳ ಮೇಲಿನ ವರದಿ ಮಾಡಿದ್ದೇನೆ.ಬೆಂಗಳೂರು ಮಾತ್ರವಲ್ಲದೆ ರಾಜ್ಯದ ಬೇರೆ ಬೇರೆ ಭಾಗಗಳಲ್ಲಿ ನಡೆದ ಪ್ರಮುಖ ಬೆಳವಣಿಗೆಯ ವರದಿ ಮಾಡಿದ್ದೇನೆ.

Read More
ಕಬಿನಿ ಹಿನ್ನೀರಿನಲ್ಲಿ ಆಹಾರ ಸಿಗದೆ ಆನೆಗಳ ಪರದಾಟ: ಮಳೆ ಕೊರತೆಯಿಂದ ಸಮಸ್ಯೆ
ಕಬಿನಿ ಹಿನ್ನೀರಿನಲ್ಲಿ ಆಹಾರ ಸಿಗದೆ ಆನೆಗಳ ಪರದಾಟ: ಮಳೆ ಕೊರತೆಯಿಂದ ಸಮಸ್ಯೆ
ಹೊಸಕೋಟೆ: ಕಣ್ಣೂರಹಳ್ಳಿ ರಸ್ತೆಯಲ್ಲಿ 23 ನಾಗರಹಾವು ಮರಿಗಳ ಪತ್ತೆ!
ಹೊಸಕೋಟೆ: ಕಣ್ಣೂರಹಳ್ಳಿ ರಸ್ತೆಯಲ್ಲಿ 23 ನಾಗರಹಾವು ಮರಿಗಳ ಪತ್ತೆ!
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್