ರೇಣುಕಾಸ್ವಾಮಿ ಮೇಲೆ ದರ್ಶನ್ ಎಷ್ಟು ಬಾರಿ ಹಲ್ಲೆ ಮಾಡಿದ್ರು? ಚಾರ್ಜ್​ಶೀಟ್​ನಲ್ಲಿರೋ ವಿವರಣೆ ಏನು?

ಚಿತ್ರದುರ್ಗದ ರೇಣುಕಾ ಸ್ವಾಮಿಯನ್ನು ಪಟ್ಟಣಗೆರೆಯಲ್ಲಿರುವ ಶೆಡ್​ಗೆ ಕರೆದುಕೊಂಡು ಹೋಗಲಾಗಿತ್ತು. ಇದೆಲ್ಲ ಪ್ಲ್ಯಾನ್ ಮಾಡಿದ್ದು ದರ್ಶನ್ ಎನ್ನುವ ಆರೋಪ ಇದೆ. ಇದರಲ್ಲಿ ದರ್ಶನ್ ಪಾತ್ರ ಸಾಕಷ್ಟು ಇದೆ ಎಂದು ಚಾರ್ಜ್​ಶೀಟ್​ನಲ್ಲಿ ಉಲ್ಲೇಖ ಆಗಿದೆ. ಆ ಬಗ್ಗೆ ಇಲ್ಲಿದೆ ವಿವರ.

ರೇಣುಕಾಸ್ವಾಮಿ ಮೇಲೆ ದರ್ಶನ್ ಎಷ್ಟು ಬಾರಿ ಹಲ್ಲೆ ಮಾಡಿದ್ರು? ಚಾರ್ಜ್​ಶೀಟ್​ನಲ್ಲಿರೋ ವಿವರಣೆ ಏನು?
ರೇಣುಕಾಸ್ವಾಮಿ-ದರ್ಶನ್
Follow us
| Updated By: ರಾಜೇಶ್ ದುಗ್ಗುಮನೆ

Updated on: Sep 05, 2024 | 2:41 PM

ರೇಣುಕಾ ಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿ ಬೆಂಗಳೂರು ಪೊಲೀಸರು ತನಿಖೆ ನಡೆಸಿ, ಚಾರ್ಜ್​ಶೀಟ್ ಸಲ್ಲಿಕೆ ಮಾಡಿದ್ದಾರೆ. ಈ ಚಾರ್ಜ್​ಶೀಟ್​ನಲ್ಲಿ ಇರೋ ಮಾಹಿತಿಯ ವಿಚಾರಗಳು ಈಗ ಒಂದೊಂದಾಗಿಯೇ ಹೊರಬರುತ್ತಾ ಇವೆ. ಕೊಲೆ ಪ್ರಕರಣದಲ್ಲಿ ದರ್ಶನ್ ಪಾತ್ರ ಏನು? ಅವರು ಎಷ್ಟು ಬಾರಿ ಹಲ್ಲೆ ಮಾಡಿದ್ದರು ಎನ್ನುವ ವಿಚಾರ ಕೂಡ ರಿವೀಲ್ ಆಗಿದೆ.

ರೇಣುಕಾ ಸ್ವಾಮಿ ಕಳುಹಿಸಿದ ಅಶ್ಲೀಲ ಸಂದೇಶದ ಬಗ್ಗೆ ಪವನ್​ ಬಳಿ ಪವಿತ್ರಾ ಹೇಳಿಕೊಂಡಿದ್ದರು. ಮೆಸೇಜ್​ ಬಗ್ಗೆ ದರ್ಶನ್​ಗೆ ತೋರಿಸಿದ್ದಾಗ ಅವರನ್ನು ಎತ್ತಿಕೊಂಡು ಬರಲು ದರ್ಶನ್ ಸೂಚನೆ ನೀಡಿದ್ದರು. ದರ್ಶನ್ ಆಣತಿಯಂತೆ ರೇಣುಕಾ ಸ್ವಾಮಿಯನ್ನು ಎತ್ತಿಕೊಂಡು ಬಂದು ಪಟ್ಟಣಗೆರೆ ಶೆಡ್​​ನಲ್ಲಿ ಇಡಲಾಯಿತು. ಶೆಡ್​​ನಲ್ಲಿ ಇಟ್ಟ ಬಗ್ಗೆ ದರ್ಶನ್​ಗೆ ಮಾಹಿತಿ ರವಾನೆ ಆಗಿತ್ತು. ನೇರವಾಗಿ ಪವಿತ್ರಾ ಮನೆಗೆ ತೆರಳಿದ ದರ್ಶನ್ ಅವರನ್ನು ಪಿಕ್ ಮಾಡಿಕೊಂಡು ಶೆಡ್​ಗೆ ಬಂದರು.

ದರ್ಶನ್ ಬಂದು ರೇಣುಕಾ ಸ್ವಾಮಿ ಮೇಲೆ ಹಲ್ಲೆ ಮಾಡುತ್ತಾರೆ. ರಿಬ್ ಮುರಿದು ಹಾಕುವ ಅವರು, ಮರ್ಮಾಂಗಕ್ಕೆ ಹೊಡೆಯುತ್ತಾರೆ. ಲಾಠಿನಲ್ಲಿಯೂ ದರ್ಶನ್ ಹಲ್ಲೆ ಮಾಡಿದ್ದಾರೆ. ಪವಿತ್ರಾ ಚಪ್ಪಲಿಯಿಂದ ಹಲ್ಲೆ ಮಾಡುತ್ತಾರೆ. ಆ ಬಳಿಕ ದರ್ಶನ್​ ಮತ್ತೆ ಹಲ್ಲೆ ಮಾಡುತ್ತಾರೆ ಎಂದು ಚಾರ್ಜ್​ಶೀಟ್​ನಲ್ಲಿ ಉಲ್ಲೇಖ ಇದೆ.

ಇದನ್ನೂ ಓದಿ: ದರ್ಶನ್ ಅನ್ನು ಮದುವೆ ಆಗಲು ರೆಡಿ: ಬಳ್ಳಾರಿ ಜೈಲಿನ ಬಳಿ ಮಹಿಳೆ ಹೈಡ್ರಾಮಾ

ಹಲ್ಲೆ ಬಳಿಕ ಶೆಡ್​ನಲ್ಲಿರುವ ವಾಚ್​ಮೆನ್ ರೂಮ್​ನಲ್ಲಿ ರೇಣುಕಾ ಸ್ವಾಮಿಯನ್ನು ಹಾಕಿರಲಾಗುತ್ತದೆ. ಅಲ್ಲಿ ಚೆಕ್ ಮಾಡಿದಾಗ ರೇಣುಕಾ ಸ್ವಾಮಿಗೆ ಪಲ್ಸ್ ಇಲ್ಲ ಎನ್ನುವ ವಿಚಾರ ಗೊತ್ತಾಗುತ್ತದೆ. ಆ ಬಳಿಕ ಪ್ರದೋಶ್ ಮುಂದಿನ ಎಲ್ಲಾ ಜವಾಬ್ದಾರಿ ವಹಿಸಿಕೊಳ್ಳುತ್ತಾರೆ. ಮರುದಿನ ದರ್ಶನ್ ಮನೆಯಲ್ಲಿ ನಡೆದ ಪೂಜೆಯಲ್ಲಿ ಭಾಗಿ ಆಗುತ್ತಾರೆ. ಆದರೆ, ದರ್ಶನ್​ಗೆ ಚಿಂತೆ ಕಾಡುತ್ತಾ ಇರುತ್ತದೆ. ಅಂದು ರಾತ್ರಿಯೇ ದರ್ಶನ್ ಮೈಸೂರಿಗೆ ಪ್ರಯಾಣ ಬೆಳೆಸುತ್ತಾರೆ.

ಹಣ ಪಡೆದು ಸರೆಂಡರ್

ಇತ್ತ ಪೊಲೀಸರು ರೇಣುಕಾ ಸ್ವಾಮಿ ಅವರದ್ದನ್ನು ಅಸಹಜ ಸಾವು ಎಂದು ದೂರು ದಾಖಲಿಸಲು ಮುಂದಾಗಿದ್ದರು. ಆದರೆ, ಗಾಯ ನೋಡಿ ಇದು ಕೊಲೆ ಅನ್ನೋದು ಗೊತ್ತಾಗುತ್ತದೆ. ಈ ಮಧ್ಯೆ ಮೂವರು ಸರೆಂಡರ್ ಆಗಿದ್ದು ಪೊಲೀಸರಿಗೆ ಅನುಮಾನ ಬರುತ್ತದೆ. ಸರೆಂಡರ್ ಆದವರನ್ನು ಬಾಯಿಬಿಡಿಸಿದಾಗ ಅಸಲಿ ವಿಚಾರ ಗೊತ್ತಾಗುತ್ತದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.