ಬಾಲಿವುಡ್​ನ ಈ ಸಿನಿಮಾಗಳನ್ನು ರಿಜೆಕ್ಟ್ ಮಾಡಿದ್ದ ದಕ್ಷಿಣ ಭಾರತದ ಸ್ಟಾರ್​ ಕಲಾವಿದರಿವರು

ವಿಜಯ್ ದೇವರಕೊಂಡ, ರಶ್ಮಿಕಾ ಮಂದಣ್ಣ, ಪ್ರಭಾಸ್ ಸೇರಿದಂತೆ ಅನೇಕರು ಬಾಲಿವುಡ್​ಗೆ ಕಾಲಿಟ್ಟಿದ್ದಾರೆ. ಕೆಲವರು ಯಶಸ್ಸು ಕಂಡರೆ, ಇನ್ನೂ ಕೆಲವರು ಸೋಲು ಅನುಭವಿಸಿದ್ದಾರೆ. ಆದರೆ, ಕೆಲ ಕಲಾವಿದರು ಬಾಲಿವುಡ್​ಗೆ ಕಾಲಿಡೋಕೆ ನಿರಾಕರಿಸಿದ್ದಾರೆ.

ಬಾಲಿವುಡ್​ನ ಈ ಸಿನಿಮಾಗಳನ್ನು ರಿಜೆಕ್ಟ್ ಮಾಡಿದ್ದ ದಕ್ಷಿಣ ಭಾರತದ ಸ್ಟಾರ್​ ಕಲಾವಿದರಿವರು
ಪುನೀತ್​, ಯಶ್, ಅನುಷ್ಕಾ, ವಿಜಯ್, ರಶ್ಮಿಕಾ
Follow us
| Updated By: ರಾಜೇಶ್ ದುಗ್ಗುಮನೆ

Updated on: Sep 05, 2023 | 8:19 AM

ದಕ್ಷಿಣ ಭಾರತದಲ್ಲಿ ಫೇಮಸ್ ಆದ ಬಳಿಕ ಬಾಲಿವುಡ್​ನಿಂದ ಆಫರ್ ಬರೋದು ಸಾಮಾನ್ಯ. ಕನ್ನಡ, ತೆಲುಗು, ತಮಿಳು ಸಿನಿಮಾಗಳು ಹಿಟ್ ಆದ ಬಳಿಕ ಆ ಚಿತ್ರದಲ್ಲಿ ನಟಿಸಿದ ಕಲಾವಿದರಿಗೆ ಹಿಂದಿಯಿಂದ ಭರ್ಜರಿ ಆಫರ್ ಸಿಗುತ್ತದೆ. ವಿಜಯ್ ದೇವರಕೊಂಡ, ರಶ್ಮಿಕಾ ಮಂದಣ್ಣ (Rashmika Mandanna), ಪ್ರಭಾಸ್ ಸೇರಿದಂತೆ ಅನೇಕರು ಬಾಲಿವುಡ್​ಗೆ ಕಾಲಿಟ್ಟಿದ್ದಾರೆ. ಕೆಲವರು ಯಶಸ್ಸು ಕಂಡರೆ, ಇನ್ನೂ ಕೆಲವರು ಸೋಲು ಅನುಭವಿಸಿದ್ದಾರೆ. ಆದರೆ, ಕೆಲ ಕಲಾವಿದರು ಬಾಲಿವುಡ್​ಗೆ ಕಾಲಿಡೋಕೆ ನಿರಾಕರಿಸಿದ್ದಾರೆ. ಇನ್ನೂ ಕೆಲವರು ಮೊದಲು ನಿರಾಕರಿಸಿ ನಂತರ ಒಳ್ಳೆಯ ಆಫರ್ ಸಿಕ್ಕಾಗ ಒಪ್ಪಿದ್ದಾರೆ. ಇದಕ್ಕೆ ಕೆಲವರು ಕಾರಣ ಕೂಡ ನೀಡಿದ್ದಾರೆ. ಆ ಬಗ್ಗೆ ಇಲ್ಲಿದೆ ಮಾಹಿತಿ.

ಪುನೀತ್ ರಾಜ್​ಕುಮಾರ್

ಪುನೀತ್ ರಾಜ್​ಕುಮಾರ್ ಅವರು ಸ್ಟಾರ್ ಹೀರೋಗಳಲ್ಲಿ ಒಬ್ಬರಾಗಿದ್ದರು. ಅವರು ಕನ್ನಡದ ಸಿನಿಮಾಗಳಲ್ಲಿ ನಟಿಸಿದ್ದಾರೆ. ಅವರಿಗೆ ಇರೋ ಕನ್ನಡ ಪ್ರೇಮ ಅತೀವವಾದದ್ದು. ಅವರು ಹಿಂದಿ ಸಿನಿಮಾ ಆಫರ್ ರಿಜೆಕ್ಟ್ ಮಾಡಿದ್ದರಂತೆ! ಹೌದು, ಸಲ್ಮಾನ್ ಖಾನ್ ನಟನೆಯ ‘ಬಜರಂಗಿ ಭಾಯಿಜಾನ್’ ಸಿನಿಮಾದಲ್ಲಿ ನಟಿಸೋಕೆ ಪುನೀತ್​ಗೆ ಮೊದಲು ಆಫರ್ ನೀಡಲಾಗಿತ್ತು. ಆದರೆ, ಇದನ್ನು ಅವರು ನಿರಕಾರಿಸಿದ್ದರು. ರಾಕ್​ಲೈನ್ ವೆಂಕಟೇಶ್, ಸಲ್ಮಾನ್ ಖಾನ್ ಒಟ್ಟಾಗಿ ಸಿನಿಮಾ ನಿರ್ಮಾಣ ಮಾಡಿದ್ದರು.

ಯಶ್

‘ಕೆಜಿಎಫ್ 2’ ಚಿತ್ರದ ಮೂಲಕ ಯಶ್ ಅವರು ದೊಡ್ಡ ಮಟ್ಟದ ಜನಪ್ರಿಯತೆ ಪಡೆದರು. ಈ ಚಿತ್ರ ಪ್ಯಾನ್ ಇಂಡಿಯಾ ಮಟ್ಟದಲ್ಲಿ ರಿಲೀಸ್ ಆಗಿ ಸಾವಿರಾರು ಕೋಟಿ ರೂಪಾಯಿ ಬಾಚಿಕೊಂಡಿತು. ಇದರಿಂದ ಸಹಜವಾಗಿಯೇ ಯಶ್ ಖ್ಯಾತಿ ಹೆಚ್ಚಿತು. ಅವರಿಗೆ ಬೇರೆ ಬೇರೆ ಭಾಷೆಗಳಿಂದ ಆಫರ್ ಬರೋಕೆ ಆರಂಭವಾದವು. ಬಾಲಿವುಡ್​ನಲ್ಲಿ ಸಿದ್ಧವಾಗುತ್ತಿರುವ ‘ರಾಮಾಯಣ’ ಚಿತ್ರದಲ್ಲಿ ಯಶ್​ಗೆ ರಾವಣನ ಪಾತ್ರದಲ್ಲಿ ನಟಿಸೋಕೆ ಆಫರ್ ನೀಡಲಾಗಿತ್ತು ಎನ್ನಲಾಗಿತ್ತು. ಆದರೆ, ಇದನ್ನು ಅವರು ರಿಜೆಕ್ಟ್ ಮಾಡಿದ್ದರು.

ಅನುಷ್ಕಾ ಶೆಟ್ಟಿ

ನಟಿ ಅನುಷ್ಕಾ ಶೆಟ್ಟಿ ಅವರಿಗೆ ದಕ್ಷಿಣ ಭಾರತದಲ್ಲಿ ಸಖತ್ ಬೇಡಿಕೆ ಇದೆ. ‘ಬಾಹುಬಲಿ’, ‘ಭಾಗಮತಿ’ ಅಂಥ ಹಿಟ್ ಚಿತ್ರಗಳನ್ನು ನೀಡಿದ ಖ್ಯಾತಿ ಅವರಿಗೆ ಇದೆ. ಅವರು ಈವರೆಗೆ ಬಾಲಿವುಡ್ ಸಿನಿಮಾ ಮಾಡಿಲ್ಲ. 2011ರಲ್ಲಿ ರಿಲೀಸ್ ಆದ ಹಿಂದಿಯ ‘ಸಿಂಗಂ’ ಚಿತ್ರದಲ್ಲಿ ನಟಿಸೋಕೆ ಅವಕಾಶ ನೀಡಲಾಗಿತ್ತು. ಆದರೆ, ಅವರು ಆಫರ್ ರಿಜೆಕ್ಟ್ ಮಾಡಿದರು. ಅಜಯ್ ದೇವಗನ್ ಈ ಚಿತ್ರದ ಹೀರೋ.

ಮಹೇಶ್ ಬಾಬು

ಮಹೇಶ್ ಬಾಬು ಅವರ ಸಿನಿಮಾಗಳು ಈವರೆಗೆ ಪ್ಯಾನ್ ಇಂಡಿಯಾ ಮಟ್ಟದಲ್ಲಿ ರಿಲೀಸ್ ಆಗಿಲ್ಲ. ಆದಾಗ್ಯೂ ಅವರ ಜನಪ್ರಿಯತೆ ವಿಶ್ವಾದ್ಯಂತ ಹಬ್ಬಿದೆ. ಅವರು ಬಾಲಿವುಡ್ ಸಿನಿಮಾದಲ್ಲಿ ನಟಿಸೋಕೆ ನೋ ಎಂದಿದ್ದಾರೆ. ‘ನನಗೆ ಇಲ್ಲಿ ಕಂಫರ್ಟೆಬಲ್ ಅನಿಸುತ್ತದೆ’ ಎಂದು ಅವರು ಹೇಳಿದ್ದರು. ಅವರ ಹೇಳಿಕೆ ಚರ್ಚೆ ಹುಟ್ಟುಹಾಕಿತ್ತು.

ಅಲ್ಲು ಅರ್ಜುನ್

‘ಪುಷ್ಪ 2’ ಕೆಲಸಗಳಲ್ಲಿ ಬ್ಯುಸಿ ಇರುವ ಅಲ್ಲು ಅರ್ಜುನ್ ಅವರು ಈ ಮೊದಲು ಬಾಲಿವುಡ್ ಆಫರ್ ರಿಜೆಕ್ಟ್ ಮಾಡಿದ್ದರು. ಕಬೀರ್ ಖಾನ್ ನಿರ್ದೇಶನದ ‘ಬಜರಂಗಿ ಭಾಯಿಜಾನ್’ ಚಿತ್ರದಲ್ಲಿ ನಟಿಸೋಕೆ ಅವರಿಗೆ ಆಫರ್ ನೀಡಲಾಗಿತ್ತು. ಆದರೆ, ಅದನ್ನು ನಿರಾಕರಿಸಿದ್ದರು.

ನಿವೀನ್ ಪೌಳಿ

ಮಲಯಾಳಂನ ಟ್ಯಾಲೆಂಟೆಡ್ ಹೀರೋಗಳಲ್ಲಿ ನಿವೀನ್ ಪೌಳಿ ಕೂಡ ಒಬ್ಬರು. ಅವರು ‘ಪ್ರೇಮಂ’ ‘ಬೆಂಗಳೂರು ಡೇಸ್​’ ಮೊದಲಾದ ಚಿತ್ರಗಳ ಮೂಲಕ ಫೇಮಸ್ ಆಗಿದ್ದಾರೆ. ಸುಶಾಂತ್ ಸಿಂಗ್ ರಜಪೂತ್ ನಟಿಸಿದ್ದ ‘ಚಿಚೋರೆ’ ಸಿನಿಮಾನ ಮೊದಲು ನಿವೀನ್ ಪೌಳಿಗೆ ಆಫರ್ ಮಾಡಲಾಗಿತ್ತು. ಆದರೆ, ಇದನ್ನು ಅವರು ರಿಜೆಕ್ಟ್ ಮಾಡಿದ್ದರು. ಆ ಬಳಿಕ ಸುಶಾಂತ್ ಸಿಂಗ್ ರಜಪೂತ್ ನಟಿಸಿದರು.

ರಶ್ಮಿಕಾ ಮಂದಣ್ಣ

ರಶ್ಮಿಕಾ ಮಂದಣ್ಣ ಅವರು ‘ಗುಡ್​ಬೈ’ ಚಿತ್ರದ ಮೂಲಕ ಹಿಂದಿ ಚಿತ್ರರಂಗಕ್ಕೆ ಕಾಲಿಟ್ಟರು. ಅದಕ್ಕೂ ಮೊದಲೇ ಅವರಿಗೆ ಹಿಂದಿಯಲ್ಲಿ ನಟಿಸೋಕೆ ಆಫರ್ ನೀಡಲಾಗಿತ್ತು. ಹೌದು, ಹಿಂದಿಯ ‘ಜೆರ್ಸಿ’ ಸಿನಿಮಾದಲ್ಲಿ ನಟಿಸೋಕೆ ರಶ್ಮಿಕಾಗೆ ಅವಕಾಶ ನೀಡಲಾಗಿತ್ತು. ಆದರೆ, ಅವರು ಇದನ್ನು ರಿಜೆಕ್ಟ್ ಮಾಡಿದ್ದರು. ಬಾಲಿವುಡ್​ನಲ್ಲಿ ಈ ಸಿನಿಮಾ ಸೋತಿತ್ತು. ಶಾಹಿದ್ ಕಪೂರ್ ಈ ಚಿತ್ರದ ಹೀರೋ ಆಗಿದ್ದರು. ಇದು ತೆಲುಗು ‘ಜೆರ್ಸಿ’ ಸಿನಿಮಾದ ರಿಮೇಕ್.

ಇದನ್ನೂ ಓದಿ: ‘ದರ್ಶನ್ ​ಮೇಲೆ ಕೋಪ ಇಲ್ಲ, ನಾವು ಕಿತ್ತಾಡಿಕೊಂಡಿಲ್ಲ’; ಬರ್ತ್​ಡೇ ದಿನ ಖುಷಿ ಖುಷಿಯಿಂದ ಮಾತನಾಡಿದ ಸುದೀಪ್

ದರ್ಶನ್

‘ದಬಂಗ್ 3’ ಸಿನಿಮಾದಲ್ಲಿ ವಿಲನ್ ಪಾತ್ರ ಮಾಡೋಕೆ ದರ್ಶನ್​ಗೆ ಈ ಮೊದಲು ಆಫರ್ ನೀಡಲಾಗಿತ್ತು ಎನ್ನಲಾಗಿದೆ. ಆದರೆ, ಅವರು ಅವಕಾಶವನ್ನು ನಿರಾಕರಿಸಿದ್ದರು. ದರ್ಶನ್ ಅವರು ಕನ್ನಡ ಚಿತ್ರಗಳಲ್ಲಿ ಮಾತ್ರ ನಟಿಸಿದ್ದಾರೆ. ಅವರಿಗೆ ಬಾಲಿವುಡ್ ಸಿನಿಮಾಗಳ ಮೇಲೆ ಯಾವುದೇ ಒಲವು ಇಲ್ಲ.

ವಿಜಯ್ ಸೇತುಪತಿ

‘ಲಾಲ್ ಸಿಂಗ್ ಚಡ್ಡಾ’ ಸಿನಿಮಾದಲ್ಲಿ ಅತಿಥಿ ಪಾತ್ರ ಮಾಡೋಕೆ ವಿಜಯ್​​ ಸೇತುಪತಿಗೆ ಆಫರ್ ನೀಡಲಾಗಿತ್ತು. ಆದರೆ, ಇದನ್ನು ಅವರು ತಿರಸ್ಕರಿಸಿದ್ದರು. ಆ ಬಳಿಕ ಅವರು ‘ಜವಾನ್​’, ‘ಮೇರಿ ಕ್ರಿಸ್​ಮಸ್’ ಸಿನಿಮಾಗಳನ್ನು ಒಪ್ಪಿಕೊಂಡರು. ಸದ್ಯ ಹಲವು ಸಿನಿಮಾಗಳಲ್ಲಿ ನಟಿಸುತ್ತಿದ್ದಾರೆ. ‘ಜವಾನ್’ ಚಿತ್ರ ಸೆಪ್ಟೆಂಬರ್ 7ರಂದು ರಿಲೀಸ್ ಆಗುತ್ತಿದೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ
ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ
ನಕ್ಸಲರ ದಾಳಿಗೆ ತುತ್ತಾದ ಜನರ ಸಂಕಟ ತೆರೆದಿಡುವ ಸಾಕ್ಷ್ಯಚಿತ್ರವಿದು
ನಕ್ಸಲರ ದಾಳಿಗೆ ತುತ್ತಾದ ಜನರ ಸಂಕಟ ತೆರೆದಿಡುವ ಸಾಕ್ಷ್ಯಚಿತ್ರವಿದು
ಅಡ್ಡಲಾಗಿ ಬಿದ್ದ 10 ಚಕ್ರದ ಲಾರಿ, ರಿಂಗ್‌ ರೋಡಲ್ಲಿ ಫುಲ್ ಟ್ರಾಫಿಕ್ ಜಾಮ್
ಅಡ್ಡಲಾಗಿ ಬಿದ್ದ 10 ಚಕ್ರದ ಲಾರಿ, ರಿಂಗ್‌ ರೋಡಲ್ಲಿ ಫುಲ್ ಟ್ರಾಫಿಕ್ ಜಾಮ್
ಹೊಸ ಹಾನರ್ ಸ್ಮಾರ್ಟ್​ಫೋನ್​ನಲ್ಲಿದೆ 108 ಮೆಗಾಪಿಕ್ಸೆಲ್ ಸಖತ್ ಎಐ ಕ್ಯಾಮೆರಾ
ಹೊಸ ಹಾನರ್ ಸ್ಮಾರ್ಟ್​ಫೋನ್​ನಲ್ಲಿದೆ 108 ಮೆಗಾಪಿಕ್ಸೆಲ್ ಸಖತ್ ಎಐ ಕ್ಯಾಮೆರಾ
ಮುನಿರತ್ನ ವಿರುದ್ಧದ ಪ್ರಕರಣಗಳ ತನಿಖೆಗೆ SIT ರಚಿಸಿ: ಸಿಎಂಗೆ ಮನವಿ
ಮುನಿರತ್ನ ವಿರುದ್ಧದ ಪ್ರಕರಣಗಳ ತನಿಖೆಗೆ SIT ರಚಿಸಿ: ಸಿಎಂಗೆ ಮನವಿ
ಕಾಡಿಗೆ ಹೋಗುವ ದಾರಿ ಗೊತ್ತು ಅಂತ ಅರಣ್ಯ ಸಿಬ್ಬಂದಿ ಮೇಲೆ ತಿರುಗಿ ಬಿದ್ದ ಆನೆ
ಕಾಡಿಗೆ ಹೋಗುವ ದಾರಿ ಗೊತ್ತು ಅಂತ ಅರಣ್ಯ ಸಿಬ್ಬಂದಿ ಮೇಲೆ ತಿರುಗಿ ಬಿದ್ದ ಆನೆ
ರೈಲಿನಡಿ ಬೀಳಲಿದ್ದ ಮಹಿಳೆ ಸ್ವಲ್ಪದರಲ್ಲೇ ಬಚಾವ್
ರೈಲಿನಡಿ ಬೀಳಲಿದ್ದ ಮಹಿಳೆ ಸ್ವಲ್ಪದರಲ್ಲೇ ಬಚಾವ್
‘ಉಪೇಂದ್ರ’ ಸಿನಿಮಾ ನೋಡಿ ಉಪ್ಪಿ ಭಾವುಕ; ಏನು ಹೇಳಿದ್ರು?
‘ಉಪೇಂದ್ರ’ ಸಿನಿಮಾ ನೋಡಿ ಉಪ್ಪಿ ಭಾವುಕ; ಏನು ಹೇಳಿದ್ರು?