ತಾಯಿ ಬಂದು ಹೋದ ಮೇಲೆ ಬದಲಾದರೇ ದರ್ಶನ್, ಸಿಬ್ಬಂದಿ ಮುಂದೆ ಕಣ್ಣೀರು

Darshan Thoogudeepa: ದರ್ಶನ್ ತೂಗುದೀಪ ಬಂಧನವಾಗಿ 110 ದಿನಕ್ಕೂ ಹೆಚ್ಚಾಗಿದೆ. ಅವರ ತಾಯಿ ಇತ್ತೀಚೆಗಷ್ಟೆ ಬಳ್ಳಾರಿ ಜೈಲಿಗೆ ಭೇಟಿ ನೀಡಿ ಹೋದರು. ತಾಯಿ ಬಂದು ಹೋದ ಮೇಲೆ ದರ್ಶನ್ ವರ್ತನೆಯಲ್ಲಿ ಬದಲಾವಣೆ ಆಗಿದೆ ಎನ್ನಲಾಗುತ್ತಿದೆ. ಜೈಲು ಸಿಬ್ಬಂದಿ ಮುಂದೆ ಕಣ್ಣೀರು ಸಹ ಹಾಕಿದ್ದಾರಂತೆ.

ತಾಯಿ ಬಂದು ಹೋದ ಮೇಲೆ ಬದಲಾದರೇ ದರ್ಶನ್, ಸಿಬ್ಬಂದಿ ಮುಂದೆ ಕಣ್ಣೀರು
Follow us
|

Updated on: Sep 22, 2024 | 2:17 PM

ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಬಂಧನವಾಗಿ 110 ಕ್ಕೂ ಹೆಚ್ಚು ದಿನಗಳಾಗಿವೆ. ಹೊರಗೆ ಇರುವಾಗ ಸದಾ ಗೆಳೆಯರಿಂದ ಸುತ್ತವರಿದುಕೊಂಡು, ಪಾರ್ಟಿಗಳನ್ನು ಮಾಡಿಕೊಂಡು ಬಿಂದಾಸ್ ಆಗಿರುತ್ತಿದ್ದ ದರ್ಶನ್ ಈಗ ಜೈಲಿನಲ್ಲಿ ಒಂಟಿ ಹಕ್ಕಿ ಆಗಿದ್ದಾರೆ. ಅವರು ಮಾಡಿದ ಕೆಲಸದಿಂದ ಅವರ ಹತ್ತಿರದವರಿಗೂ ನೆಮ್ಮದಿ ಇಲ್ಲದಂತಾಗಿದೆ. ಮಗನ ಆರೈಕೆಯಲ್ಲಿ ನಿರತರಾಗಿದ್ದ ಅವರ ಪತ್ನಿ, ದರ್ಶನ್ ದೆಸೆಯಿಂದ ಬಳ್ಳಾರಿ ಜೈಲಿಗೆ, ಪೊಲೀಸ್ ಠಾಣೆಗೆ, ವಕೀಲರ ಮನೆಗೆ ಅಲೆವಂತಾಗಿದೆ. ನೆಮ್ಮದಿಯಾಗಿ ಮನೆಯಲ್ಲಿರಬೇಕಿದ್ದ ಅವರ ತಾಯಿ ಸಹ ಈ ವಯಸ್ಸಿನಲ್ಲಿ ಬಳ್ಳಾರಿ ಜೈಲಿಗೆ ಆಗಮಿಸಿ ಮಗನನ್ನು ನೋಡುವಂತಾಗಿದೆ.

ಇತ್ತೀಚೆಗಷ್ಟೆ ದರ್ಶನ್​ರ ತಾಯಿ ಮೀನಮ್ಮನವರು ಬಳ್ಳಾರಿ ಜೈಲಿಗೆ ಆಗಮಿಸಿ ದರ್ಶನ್​ ಅನ್ನು ಕಂಡು ಹೋದರು. ದರ್ಶನ್ ಪರಪ್ಪನ ಅಗ್ರಹಾರ ಜೈಲು ಸೇರಿದ್ದಾಗಲೂ ಸಹ ಒಮ್ಮೆ ಮೀನಾ ಕುಮಾರಿ ಅವರು ಜೈಲಿಗೆ ಆಗಮಿಸಿದ್ದರು. ಇದೀಗ ಬಳ್ಳಾರಿಗೆ ಬಂದು ದರ್ಶನ್ ಅನ್ನು ನೋಡಿ ಹೋಗಿದ್ದಾರೆ. ತಾಯಿ ಬಂದು ಹೋದಮೇಲೆ ದರ್ಶನ್​ ವರ್ತನೆ ಹಾಗೂ ಮಾತುಗಳಲ್ಲಿ ಬದಲಾವಣೆ ಆಗಿದೆ ಎನ್ನಲಾಗುತ್ತಿದೆ. ಇತ್ತೀಚೆಗಷ್ಟೆ ಮಾಧ್ಯಮಗಳಿಗೆ ಅಸಹ್ಯಕರವಾಗಿ ಸಂಜ್ಞೆ ಮಾಡಿದ್ದ ದರ್ಶನ್, ಈಗ ಜೈಲು ಸಿಬ್ಬಂದಿಯ ಮುಂದೆ ಕಣ್ಣೀರು ಸಹ ಹಾಕಿದ್ದಾರಂತೆ.

ಇದನ್ನೂ ಓದಿ:ದರ್ಶನ್ ತೂಗುದೀಪ ಬಂಧನವಾಗಿ ಇಂದಿಗೆ 100 ದಿನ; ಜೂನ್​ 11ರಿಂದ ಇಲ್ಲಿಯವರೆಗೆ ಏನೆಲ್ಲ ಆಯ್ತು?

ತಾಯಿ ಭೇಟಿಯ ವಿಚಾರವನ್ನು ಸಿಬ್ಬಂದಿ ಮುಂದೆ ಮಾತನಾಡಿದ ದರ್ಶನ್ ಭಾವುಕಗೊಂಡರಂತೆ. ‘ನಾನು ಮಾಡಿದ ತಪ್ಪಿಗೆ ನನ್ನ ತಾಯಿ ಇಲ್ಲಿಗೆ ಬಂದು ನೋಡುವ ಸ್ಥಿತಿ ಅವರಿಗೆ ಬಂತಲ್ಲಾ, ಮಗನನ್ನ ಜೈಲಿನಲ್ಲಿ ನನ್ನ ತಾಯಿ ಭೇಟಿ ಮಾಡುವ ಪರಿಸ್ಥಿತಿ ಬಂತಲ್ಲಾ’ ಎಂದು ಕಣ್ಣೀರು ಹಾಕಿದರಂತೆ. ‘ಕಷ್ಟದ ಪರಿಸ್ಥಿತಿ ಬಂದಿದೆ ನನ್ನ ತಪ್ಪಿನಿಂದ ಕುಟುಂಬ ನೋವು ಅನುಭವಿಸುವಂತಾಗಿದೆ. ನಾನು ನಂಬಿದ ತಾಯಿ ಚಾಮುಂಡೇಶ್ವರಿ ನನ್ನ ಕೈ ಬಿಡಲ್ಲ’ ಎಂದು ಹೇಳಿಕೊಂಡು ಕಣ್ಣೀರು ಹಾಕಿದ್ದಾರೆ ದರ್ಶನ್, ಕೊನೆಗೆ ಕಾವಲು ಸಿಬ್ಬಂದಿ ದರ್ಶನ್​ಗೆ ಸಮಾಧಾನ ಮಾಡಿದ್ದಾಗಿ ಹೇಳಲಾಗಿದೆ.

ಇನ್ನು ಜಾಮೀನು ಅರ್ಜಿ ಸಲ್ಲಿಸಿದ ಬಳಿಕ ನಟ ದರ್ಶನ್ ತುಸು ನಿರಾಳರಾಗಿದ್ದಾರೆ ಎನ್ನಲಾಗುತ್ತಿದೆ. ಭಾನುವಾರದಂದು ಮಧ್ಯಾಹ್ನ ಎರಡು ಚಪಾತಿ, ಪಲ್ಯಾ, ಮಜ್ಜಿಗೆ ಮಾತ್ರ ಸೇವಿಸಿದ ದರ್ಶನ್, ತಾಯಿ-ಪತ್ನಿ ತಂದುಕೊಂಟ್ಟಿದ್ದ ಹಣ್ಣು, ಡ್ರೈ ಫ್ರೂಟ್ಸ್​ಗಳನ್ನು ಸೇವಿಸುತ್ತಿದ್ದಾರೆ. ಒಟ್ಟಾರೆಯಾಗಿ ಆರಾಮವಾಗಿದ್ದು ಬ್ಯಾರಕ್​ನಲ್ಲಿ ವಾಕಿಂಗ್ ಮಾಡುತ್ತಾ ಆರಾಮವಾಗಿದ್ದಾರಂತೆ. ದರ್ಶನ್​ರ ಜಾಮೀನು ಅರ್ಜಿ ನಿನ್ನೆ ನ್ಯಾಯಾಧೀಶರ ಮುಂದೆ ಬಂದಿದ್ದು, ವಿಚಾರಣೆನ್ನು ಸೋಮವಾರಕ್ಕೆ ಮುಂದೂಡಲಾಗಿದೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಹಿಂದೂ ಮೆರವಣಿಗೆಯಲ್ಲಿ ರಕ್ಷಣೆಗೆ ಶಸ್ತ್ರ ಸಮೇತ ನಾವು ಸಜ್ಜು: ಶ್ರೀರಾಮ ಸೇನೆ
ಹಿಂದೂ ಮೆರವಣಿಗೆಯಲ್ಲಿ ರಕ್ಷಣೆಗೆ ಶಸ್ತ್ರ ಸಮೇತ ನಾವು ಸಜ್ಜು: ಶ್ರೀರಾಮ ಸೇನೆ
ವಾರಣಾಸಿಯಲ್ಲಿ ಗಂಗಾ ಆರತಿ ವೀಕ್ಷಿಸಿದ ಕಾಂಗ್ರೆಸ್ ನಿಯೋಗ
ವಾರಣಾಸಿಯಲ್ಲಿ ಗಂಗಾ ಆರತಿ ವೀಕ್ಷಿಸಿದ ಕಾಂಗ್ರೆಸ್ ನಿಯೋಗ
Daily Devotional: ಹನುಮಾನ್ ಕಾರ್ಯಫಲ ಮಂತ್ರ ಬಗ್ಗೆ ತಿಳಿಯಿರಿ
Daily Devotional: ಹನುಮಾನ್ ಕಾರ್ಯಫಲ ಮಂತ್ರ ಬಗ್ಗೆ ತಿಳಿಯಿರಿ
Weekly Horoscope: ಸೆಪ್ಟೆಂಬರ್​​ 23 ರಿಂದ 29ರ ವಾರ ಭವಿಷ್ಯ ತಿಳಿಯಿರಿ
Weekly Horoscope: ಸೆಪ್ಟೆಂಬರ್​​ 23 ರಿಂದ 29ರ ವಾರ ಭವಿಷ್ಯ ತಿಳಿಯಿರಿ
Nithya Bhavishya: ಈ ರಾಶಿಯವರು ವ್ಯಾವಹಾರದಲ್ಲಿ ಇಂದು ಬದಲಾವಣೆಯನ್ನು ತರು
Nithya Bhavishya: ಈ ರಾಶಿಯವರು ವ್ಯಾವಹಾರದಲ್ಲಿ ಇಂದು ಬದಲಾವಣೆಯನ್ನು ತರು
ನಾಗವಲ್ಲಿ ಮಿಂಚು ರಾಧಿಕಾ ಕಣ್ಣಲ್ಲಿ ಕಾಣಿಸಿತು: ರಮೇಶ್ ಅರವಿಂದ್
ನಾಗವಲ್ಲಿ ಮಿಂಚು ರಾಧಿಕಾ ಕಣ್ಣಲ್ಲಿ ಕಾಣಿಸಿತು: ರಮೇಶ್ ಅರವಿಂದ್
ಇಲ್ಲಿ ನಾನೇ ಅಭ್ಯರ್ಥಿ: ಅಚ್ಚರಿ ಹೇಳಿಕೆ ನೀಡಿದ ಡಿಸಿಎಂ ಡಿಕೆ ಶಿವಕುಮಾರ್​
ಇಲ್ಲಿ ನಾನೇ ಅಭ್ಯರ್ಥಿ: ಅಚ್ಚರಿ ಹೇಳಿಕೆ ನೀಡಿದ ಡಿಸಿಎಂ ಡಿಕೆ ಶಿವಕುಮಾರ್​
ಬಿಹಾರದಲ್ಲಿ ಪ್ರವಾಹ ಭೀತಿ; ನೂರಾರು ಹಳ್ಳಿಗಳಿಗೆ ನುಗ್ಗಿದ ಗಂಗಾ ನದಿ ನೀರು
ಬಿಹಾರದಲ್ಲಿ ಪ್ರವಾಹ ಭೀತಿ; ನೂರಾರು ಹಳ್ಳಿಗಳಿಗೆ ನುಗ್ಗಿದ ಗಂಗಾ ನದಿ ನೀರು
ಹಾಡಹಗಲೇ ಮೆಡಿಕಲ್ ಶಾಪ್​ಗೆ ನುಗ್ಗಿ ದರೋಡೆ ಮಾಡಿದ ಕಳ್ಳರು; ವಿಡಿಯೋ ವೈರಲ್
ಹಾಡಹಗಲೇ ಮೆಡಿಕಲ್ ಶಾಪ್​ಗೆ ನುಗ್ಗಿ ದರೋಡೆ ಮಾಡಿದ ಕಳ್ಳರು; ವಿಡಿಯೋ ವೈರಲ್
ಇದ್ದಕ್ಕಿದ್ದಂತೆ ರೈಲ್ವೆ ಪ್ಲಾಟ್​ಫಾರ್ಮ್​ ಮೇಲೆ 6 ಅಡಿ ಉದ್ದದ ಹಾವು ಪ್ರತ್ಯ
ಇದ್ದಕ್ಕಿದ್ದಂತೆ ರೈಲ್ವೆ ಪ್ಲಾಟ್​ಫಾರ್ಮ್​ ಮೇಲೆ 6 ಅಡಿ ಉದ್ದದ ಹಾವು ಪ್ರತ್ಯ